ಮಂಡ್ಯ: ವಾರಾಂತ್ಯದ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಇಬ್ಬರು ಯುವಕರು ಜಲಪಾತದಲ್ಲಿ ಬಿದ್ದು ಮೃತಪಟ್ಟ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಗಾಣಾಳು ಜಲಪಾತದಲ್ಲಿ ನಡೆದಿದೆ.
ಬೆಂಗಳೂರಿನ ಎಂಎಸ್ ಪಾಳ್ಯದ ಶಾಮ್ವೆಲ್(21), ಸಿಬಿಲ್(21) ಮೃತಪಟ್ಟವರು. ಇವರಿಬ್ಬರು ಸ್ನೇಹಿತರು ಬೈಕ್ನಲ್ಲಿ ಪ್ರವಾಸಕ್ಕೆಂದು ಗಾಣಾಳು ಫಾಲ್ಸ್ಗೆ ಬಂದಿದ್ದಾರೆ. ಈ ವೇಳೆ ಇವರು ಕಾಲು ಜಾರಿ ಫಾಲ್ಸ್ನಿಂದ ಕೆಳಗೆ ಬಿದ್ದು, ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತಿಗೆ ಬಂದಾಗ ಈ ಇಬ್ಬರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಬಳಿಕ ಯುವಕರ ಶವವನ್ನು ನೀರಿನಿಂದ ಮೇಲೆ ಎತ್ತಲು ಯಾರೂ ಇಲ್ಲದ ಕಾರಣ ಸಬ್ ಇನ್ಸ್ಪೆಕ್ಟರ್ ಮಾರುತಿ ತಮ್ಮಣ್ಣನವರ್ ಯೂನಿಫಾರ್ಮ್ ಬಿಚ್ಚಿ ನೀರಿಗೆ ಧುಮುಕಿ ನೀರಿನಲ್ಲಿ ಇದ್ದ ಶವ ಮೇಲಕ್ಕೆತ್ತಿದ್ದಾರೆ.
ಘಟನೆ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ನಂತರ ಹಲಗೂರು ಪೊಲೀಸರು ಸ್ಥಳಕ್ಕೆ ಬಂದು ಶವಗಳನ್ನು ತೆಗೆದು ಮೃತಪಟ್ಟವರ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನಿಮ್ಮ ಕಾಮೆಂಟ್ ಬರೆಯಿರಿ