ಕರ್ನಾಟಕದಲ್ಲಿ ಮಂಗಳವಾರ ಹೊಸ ಸೋಂಕು ಏರಿಕೆ, ಸಾವಿನ‌ ಸಂಖ್ಯೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಕೋರೊನಾ ಸೋಂಕು ಸಂಖ್ಯೆ ಏರಿಕೆಯಾಗಿದ್ದು ಸಾವಿನ ಸಂಖ್ಯೆ ‌ ಇಳಿಕೆಯಾಗಿದೆ.
ರಾಜ್ಯದಲ್ಲಿ ಇಂದು (ಮಂಗಳವಾರ) ಹೊಸದಾಗಿ 629 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು ಇದೇವೇಳೆ 17 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ 782 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಬೀದರ್, ಗದಗ, ಕಲಬುರಗಿ, ಕೊಪ್ಪಳ , ರಾಯಚೂರು ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಇಂದು ಯಾವುದೇ ಸೋಂಕು ದೃಢಪಟ್ಟಿಲ್ಲ.
ರಾಜ್ಯದಲ್ಲಿ 12,634 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,74,528 ಕ್ಕೆ ಏರಿಕೆಯಾಗಿದೆ ಜೊತೆಗೆ ಚೇತರಿಸಿಕೊಂಡವರ ಸಂಖ್ಯೆ 29, 24,102 ಕ್ಕೆ ಹೆಚ್ಚಳವಾಗಿದೆ. ಸೋಂಕಿನಿಂದ ಒಟ್ಟು ಮೃತಪಟ್ಟವರ ಸಂಖ್ಯೆ 37,763 ಕ್ಕೆ ಹೆಚ್ಚಳವಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಶೇಕಡವಾರು ಪ್ರಮಾಣ ಶೇ.0.67 ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶೇ. 2.70 ಕ್ಕೆ ಇಳಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ 229 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಇಂದು 6 ಮಂದಿ ಮೃತಪಟ್ಡಿದ್ದಾರೆ. 199 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲಾವಾರು ಸೋಂಕಿತರ ಸಂಖ್ಯೆ..:
ಬಾಗಲಕೋಟೆ – 1, ಬಳ್ಳಾರಿ – 2, ಬೆಳಗಾವಿ -12, ಬೆಂಗಳೂರು ಗ್ರಾಮಾಂತರ- 16, ಬೆಂಗಳೂರು ನಗರ – 229, ಬೀದರ್ -0, ಚಾಮರಾಜನಗರ – 5, ಚಿಕ್ಕಬಳ್ಳಾಪುರ – 1, ಚಿಕ್ಕಮಗಳೂರು- 17, ಚಿತ್ರದುರ್ಗ – 5, ದಕ್ಷಿಣ ಕನ್ನಡ -96, ದಾವಣಗೆರೆ -1, ಧಾರವಾಡ -7, ಗದಗ – 0, ಹಾಸನ – 27,
ಹಾವೇರಿ – 2, ಕಲಬುರಗಿ- 0, ಕೊಡಗು – 30, ಕೋಲಾರ -5, ಕೊಪ್ಪಳ -0, ಮಂಡ್ಯ – 22, ಮೈಸೂರು -58, ರಾಯಚೂರು -0, ರಾಮನಗರ -2,
ಶಿವಮೊಗ್ಗ – 14, ತುಮಕೂರು -22, ಉಡುಪಿ – 39, ಉತ್ತರ ಕನ್ನಡ – 16, ವಿಜಯಪುರ – 0, ಯಾದಗಿರಿ- 0

ಪ್ರಮುಖ ಸುದ್ದಿ :-   ಚಿನ್ನ ಕಳ್ಳಸಾಗಣೆ ಪ್ರಕರಣ : ರನ್ಯಾ ರಾವ್‌ ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement