ನವದೆಹಲಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ, ನವೆಂಬರ್ 30ರ ನಂತರ ಬಡವರಿಗೆ ಉಚಿತ ಪಡಿತರ ಸಿಗುವುದಿಲ್ಲ.
ಕೇಂದ್ರ ಸರ್ಕಾರದ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ಸುಧಾಂಶು ಪಾಂಡೆ ಅವರು, ಈ ಕುರಿತು ಸ್ಪಷ್ಟನೆ ನೀಡಿದ್ದಾರೆ. ನವೆಂಬರ್ ನಂತರ ಈ ಯೋಜನೆಯಡಿ ಉಚಿತ ಪಡಿತರ ವಿತರಣೆಯನ್ನ ವಿಸ್ತರಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ದೇಶದ ಆರ್ಥಿಕತೆ ಮತ್ತೆ ಹಳಿಗೆ ಪುನಃ ಮರಳುತ್ತಿದೆ, ಆದ್ದರಿಂದ ಉಚಿತ ಪಡಿತರ ಒದಗಿಸುವ ಯೋಜನೆಯನ್ನ ಮುಂದಕ್ಕೆ ಕೊಂಡೊಯ್ಯುವ ಯಾವುದೇ ಪ್ರಸ್ತಾಪವಿಲ್ಲ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ದೇಶದಲ್ಲಿ ಕೋವಿಡ್ ಉಲ್ಬಣಗೊಂಡ ನಂತರ ಕಳೆದ ವರ್ಷದಿಂದ ಈ ಯೋಜನೆಯಡಿ ಬಡ ಕುಟುಂಬಗಳಿಗೆ ಉಚಿತ ಪಡಿತರ ಒದಗಿಸುಸಲು ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನ ಕಳೆದ ವರ್ಷ ಮಾರ್ಚ್ನಲ್ಲಿ ಘೋಷಿಸಲಾಯಿತು. ಆರಂಭದಲ್ಲಿ ಈ ಯೋಜನೆಯನ್ನ ಏಪ್ರಿಲ್-ಜೂನ್ 2020ರ ಅವಧಿ ವರೆಗೆ ಆರಂಭಿಸಲಾಯಿತು. ನಂತರ ನವೆಂಬರ್ ೩೦ ೨೦೨೧ರ ವರೆಗೆ ವಿಸ್ತರಣೆ ಮಾಡಲಾಯಿತು.
ಆರ್ಥಿಕತೆಯು ಮತ್ತೆ ಹಳಿಗೆ ಮರಳುತ್ತಿರುವುದರಿಂದ ಮತ್ತು ನಮ್ಮ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ ಸಹ ಈ ವರ್ಷ ಉತ್ತಮವಾಗಿದೆ. ಆದ್ದರಿಂದ, ಪಿಎಂಜಿಕೆವೈ ವಿಸ್ತರಿಸುವ ಪ್ರಸ್ತಾಪ ಸದ್ಯಕ್ಕೆ ಇಲ್ಲ ಎಂದು ಪಾಂಡೆ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ