ಬೆಂಗಳೂರು : ಬಿಜೆಪಿ ನಾಯಕರು ನ. 19ರಿಂದ ರಾಜ್ಯದಲ್ಲಿ ‘ಜನ ಸ್ವರಾಜ್’ ಯಾತ್ರೆ ನಡೆಸಲಿದ್ದಾರೆ.
ನವೆಂಬರ್ 19ರಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರ ತಂಡ ರಾಜ್ಯ ಪ್ರವಾಸ ನಡೆಸಲಿದ್ದು, ಒಟ್ಟು 6 ನಾಯಕರ ತಂಡ ಪ್ರವಾಸ ಕೈಗೊಳ್ಳಲಿದೆ. ಯಡಿಯೂರಪ್ಪ ನೇತೃತ್ವದ ತಂಡ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ನೇತೃತ್ವದಲ್ಲಿ 9 ನಾಯಕರ ತಂಡ ಹಾಗೂ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ 8 ನಾಯಕರ ತಂಡ ಪ್ರವಾಸ ಕೈಗೊಳ್ಳಲಿದೆ. ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಬಿಜೆಪಿಯ 7 ನಾಯಕರ ತಂಡ ಪ್ರವಾಸ ಕೈಗೊಳ್ಳಲಿದೆ. ನ.19ರಿಂದ 22ರ ವರೆಗೆ ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ, ಬೆಳಗಾವಿಯಲ್ಲಿ ಪ್ರವಾಸ ಕೈಗೊಳ್ಳಲಿದೆ. ಕಟೀಲು ತಂಡ ನ.19ರಿಂದ ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಪ್ರವಾಸ ನಡೆಸಲಿದೆ.
ಹಾಗೂ ಜಗದೀಶ್ ಶೆಟ್ಟರ್ ತಂಡ ದಾವಣಗೆರೆ, ಚಿತ್ರದುರ್ಗ, ತುಮಕೂರು , ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರವಾಸ ನಡೆಸಲಿದ್ದು, ಕೆ.ಎಸ್. ಈಶ್ವರಪ್ಪ ತಂಡ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನದಲ್ಲಿ ಪ್ರವಾಸ ಕೈಗೊಳ್ಳಲಿದೆ.
ನಿಮ್ಮ ಕಾಮೆಂಟ್ ಬರೆಯಿರಿ