ಕರ್ನಾಟಕದಲ್ಲಿ ಮೂನ್ನೂರರ ಗಡಿದಾಟಿದ ಕೋವಿಡ್‌ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಇಂದು (ಬುಧವಾರ) ಒಟ್ಟು 328 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 9 ಜನರು ಮೃತಪಟ್ಟಿದ್ದಾರೆ ಹಾಗೂ ಸೋಂಕಿನಿಂದ ಚೇತರಿಸಿಕೊಂಡಿರುವ 247 ಮಂದಿ ಆಸ್ಪತ್ರೆಗಳಿಂದ ಡಿಸ್​ಚಾರ್ಜ್​ ಆಗಿದ್ದಾರೆ.
ಈವರೆಗೆ ಒಟ್ಟು 29,90,856 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 9 ಮಂದಿ ಮೃತಪಟ್ಟಿದ್ದಾರೆ. 29,44,669 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ 38,131 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಪ್ರಸ್ತುತ 8027 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ಪ್ರಮಾಣ ಶೇ 0.27 ಇದ್ದು, ಸಾವಿನ ಸರಾಸರಿ ಶೇ 2.74 ಇದೆ.
ಬೆಂಗಳೂರು ನಗರದಲ್ಲಿ 176 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಮೃತಪಟ್ಟಿದ್ದಾರೆ. 102 ಜನರು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ನಗರದಲ್ಲಿ ಪ್ರಸ್ತುತ 6567 ಸಕ್ರಿಯ ಪ್ರಕರಣಗಳಿವೆ. ನಗರದಲ್ಲಿ ಈವರೆಗೆ ಒಟ್ಟು 12,53,353 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,30,482 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 16,303 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಜಿಲ್ಲಾವಾರು ಸೋಂಕಿನ ಮಾಹಿತಿ:
ಬೆಂಗಳೂರು ನಗರ 176, ಹಾಸನ 29, ಮೈಸೂರು 15, ಚಿಕ್ಕಮಗಳೂರು 14, ದಕ್ಷಿಣ ಕನ್ನಡ 13, ಬೆಂಗಳೂರು ಗ್ರಾಮಾಂತರ 11, ಶಿವಮೊಗ್ಗ 11, ಉತ್ತರ ಕನ್ನಡ 10, ಮಂಡ್ಯ, ತುಮಕೂರು 8, ಕೊಡಗು 7, ಬೆಳಗಾವಿ 6, ಬಳ್ಳಾರಿ 5, ಕೋಲಾರ 4, ಚಾಮರಾಜನಗರ, ಕಲಬುರಗಿ, ಉಡುಪಿ 2, ಚಿತ್ರದುರ್ಗ, ರಾಮನಗರ, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ 1.

ಪ್ರಮುಖ ಸುದ್ದಿ :-   ಜಗತ್ತಿಗೆ ಹೇಳುವ ಮೊದಲೇ ಪಾಕಿಸ್ತಾನಕ್ಕೆ ತಿಳಿಸಿದ್ದೆ ; ಬಾಲಾಕೋಟ್ ಸ್ಟ್ರೈಕ್ ಬಗ್ಗೆ ಬಿಚ್ಚಿಟ್ಟ ಪ್ರಧಾನಿ ಮೋದಿ

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement