ಮಂಗಳೂರು ಹೋರಿಯೊಂದು ತಿವಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮುರುಳ್ಯದ ಕೋಡಿಯಡ್ಕದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮೃತರನ್ನು ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ (55ವರ್ಷ) ಎಂದು ಗುರುತಿಸಲಾಗಿದೆ.
ಆ ದಾರಿಯಲ್ಲಿ ಬರುತ್ತಿದ್ದ ವ್ಯಕ್ತಿಯೋರ್ವರಿಗೆ ಕಿಟ್ಟಣ್ಣ ಗೌಡರು ಬಿದ್ದುಕೊಂಡಿರುವುದು ಕಂಡುಬಂದಿದ್ದು, ಅಲ್ಲೇ ಪಕ್ಕದಲ್ಲಿ ಹೋರಿ ಕಟ್ಟಿ ಹಾಕಿರುವುದನ್ನು ನೋಡಿದ್ದಾರೆ. ಈ ವ್ಯಕ್ತಿ ಹತ್ತಿರ ಹೋಗಿ ನೋಡುವಾಗ ಕಿಟ್ಟಣ್ಣ ಅವರು ಮೃತಪಟ್ಟಿದ್ದರು. ಮೃತರು ಅವಿವಾಹಿತರು ಎಂದು ಹೇಳಲಾಗಿದೆ.
ತಾನು ಸಾಕಿರುವ ಹೋರಿಯನ್ನು ತೋಟದಲ್ಲಿ ಮೇಯಲು ಕಟ್ಟಿದ್ದು ಸಂಜೆ ವೇಳೆಗೆ ಹೋರಿಯನ್ನು ವಾಪಸ್ ಕರೆತರಲು ಅವರು ತೆರಳಿದ್ದರು ಎನ್ನಲಾಗಿದೆ. ಅಲ್ಲಿ ಹೋರಿ ತಿವಿದು ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಬೆಳ್ಳಾರೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಬಂದು ತನಿಖೆ ನಡೆಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ