ಮಂಡ್ಯ: ಈಗ ಕನ್ನಡದ ಖ್ಯಾತ ನಟ ಅಂಬರೀಷ ಅವರ ಪುತ್ರ ತನ್ನ ತಾಯಿಯ ಹಾದಿಯಲ್ಲೇ ಸಾಗಲಿದ್ದಾರಾ ಎಂಬ ಪ್ರಶನೆ ಏಳುವಂತೆ ಮಾಡಿದೆ.
ಅಂಬರೀಷ ಅವರ ಪುತ್ರ ಅಭಿಷೇಕ ಅವರು ನೀಡಿದ ಹೇಳಿಕೆಯೇ ಇದಕ್ಕೆ ಕಾರಣ.
ಜನ ಬಯಸಿದರೆ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇಂಗಿತವನ್ನು ನಟ ಅಭಿಷೇಕ್ ಅಂಬರೀಷ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹುಳುಗನಹಳ್ಳಿ ಗ್ರಾಮದಲ್ಲಿ ಅಂಬರೀಷ ಅಭಿಮಾನಿಗಳು ವಿತರಿಸುತ್ತಿದ್ದ ಫುಡ್ಕಿಟ್ ಕಾರ್ಯಕ್ರಮಕ್ಕೆ ಬಂದಿದ್ದ ಅವರು, ಬಳಿಕ ಅಭಿಮಾನಿಯ ಮನೆಯಲ್ಲಿ ಮಾತನಾಡಿದರು. ಮುಂದೆ ರಾಜಕೀಯ ಪ್ರವೇಶ ಮಾಡುತ್ತೀರಾಎಂದು ಕೇಳಿದ ಪ್ರಶ್ನೆಗೆ ಭವಿಷ್ಯದಲ್ಲಿ ಏನು ಬೇಕಾದರೂ ಬದಲಾವಣೆಯಾಗಬಹುದು. ಜನ ಬಯಸಿದರೆ ಖಂಡಿತ ನಾನು ರಾಜಕೀಯಕ್ಕೆ ಬರುತ್ತೇನೆ. ಮದ್ದೂರಿಗಾಗಲಿ, ಮಂಡ್ಯಗಾಗಲಿ ಜಿಲ್ಲೆಯಲ್ಲಿರುವ ಏಳು ಕ್ಷೇತ್ರಗಳಿಗೂ ಒಳ್ಳೆಯ ಎಂಎಲ್ಎಗಳು ಸಿಗಬೇಕು. ಒಳ್ಳೆಯ ಜನಪ್ರತಿನಿಧಿಗಳು ಸಿಗಬೇಕು ಎಂದು ಹೇಳಿದರು.
ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆ ಎಂದು ಯಾರಿಗೂ ಗೊತ್ತಿರಲಿಲ್ಲ ಎಂದು ಅಭಿಷೇಕ್ ಹೇಳಿದರು. ನೋಡಿ ಭವಿಷ್ಯದಲ್ಲಿ ಏನು ಬೇಕಾದರೂ ಆಗಬಹದು, ಜನ ಬಯಸಿದರೆ ನಾನು ರಾಜಕೀಯಕ್ಕೆ ಬರುತ್ತೇನೆ ಎಂದುಹೇಳುವ ಮೂಲಕ ರಾಜಕೀಯಕ್ಕೆ ಪ್ರವೇಶ ಕೊಡುವ ಸೂಚನೆಯನ್ನು ನೀಡಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ