ಬೆಂಗಳೂರಿನಲ್ಲಿ ಮಳೆ ಅವಾಂತರಕ್ಕೆ ಮೂವರು ಸಾವು

ಬೆಂಗಳೂರು: ಬೆಂಗಳೂರಿನ ಅಪಾರ್ಟ್‌ಮೆಂಟ್ ಸಂಕೀರ್ಣವೊಂದರಲ್ಲಿ ನೀರು ತುಂಬಿದ್ದ ನೆಲಮಾಳಿಗೆಯಲ್ಲಿ ವೃದ್ಧ ಮತ್ತು ಬಾಲಕ ವಿದ್ಯುತ್ ಆಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
63 ವರ್ಷದ ಮನಮೋಹನ ಕಾಮತ್ ಅವರು ನೆಲಮಾಳಿಗೆಯಿಂದ ನೀರನ್ನು ಹೊರಹಾಕಲು ಬಾಹ್ಯ ಮೋಟಾರ್ ಬಳಸುತ್ತಿದ್ದಾಗ ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ. ಈ ವೇಳೆ ವಿದ್ಯುತ್‌ ಪ್ರವಾಹಕ್ಕೆ ಸಿಲುಕಿದ ನೆಲಮಾಳಿಗೆಯೊಳಗೆ ನಿಂತಿದ್ದ ದಿನೇಶ (12) ಎಂಬ ಬಾಲಕ ಕೂಡ ವಿದ್ಯುತ್ ಸ್ಪರ್ಶಿಸಿ ಸಾವಗೀಡಾಗಿದ್ದಾನೆ ಎಂದು ಹೇಳಲಾಗಿದೆ. ಬಿಟಿಎಂ 2 ನೇ ಹಂತದ ಮಧುವನ್ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಸಂಜೆ 6.15 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಮಳೆಗೆ ಸಂಬಂಧಿಸಿದ ಮತ್ತೊಂದು ಘಟನೆಯಲ್ಲಿ, ಗೋಡೆ ಕುಸಿದು 35 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಸುಮಾರು 10.4 ಸೆಂ.ಮೀ. ಮಳೆಯಾಗಿದ್ದು, ಅನೇಕ ತಗ್ಗು ಪ್ರದೇಶಗಳು ಜಲಾವೃತಗೊಂಡು ಸಂಚಾರ ದಟ್ಟಣೆಗೆ ಕಾರಣವಾಯಿತು. ನಗರದಲ್ಲಿನ ಈ ಭೀಕರ ದೃಶ್ಯವು ಹೊಸದಲ್ಲ, ಆದರೆ ಪ್ರತಿ ವರ್ಷ ಮಳೆ ಬಂದಾಗ ಐಟಿ ರಾಜಧಾನಿ ಎಂಬ ಹೆಗ್ಗಳಿಕೆಯ ಬೆಂಗಳೂರಿಗೆ ಈ ಸಮಸ್ಯೆ ಮಾತ್ರ ತಪ್ಪುತ್ತಿಲ್ಲ.
ನಗರದ ಮೂಲಸೌಕರ್ಯವು ಭಾರೀ ಮಳೆಯನ್ನು ನಿಭಾಯಿಸಲು ಹೆಣಗಾಡುತ್ತಿದ್ದು, ಹಲವಾರು ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ನಿಂತಿವೆ.
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಹಲವಾರು ಪ್ರದೇಶಗಳಿಗೆ ಭಾರತ ಹವಾಮಾನ ಇಲಾಖೆ (ಐಎಂಡಿ) ಹಳದಿ ಎಚ್ಚರಿಕೆ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ.

ಪ್ರಮುಖ ಸುದ್ದಿ :-   ಜೈಲಿನಲ್ಲಿ ಸುಹಾಸ ಶೆಟ್ಟಿ ಕೊಲೆಯ ಪ್ರಮುಖ ಆರೋಪಿ ಮೇಲೆ ಸಹಕೈದಿಗಳಿಂದ ಹಲ್ಲೆ ಯತ್ನ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಉಂಟಾಗಿರುವ ತೀವ್ರ ಜಲಾವೃತವನ್ನು ನಿಭಾಯಿಸಲು ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಸೋಮವಾರ ಹೇಳಿದ್ದಾರೆ. ರಸ್ತೆ ಹಾಗೂ ಚರಂಡಿಗಳಲ್ಲಿ ಎಲೆಗಳು, ಕಾಗದ ಮತ್ತು ಇತರ ಕಸ ಸಂಗ್ರಹವಾಗಿದ್ದರಿಂದ ರಸ್ತೆ ಅಡಚಣೆ ಉಂಟಾಗಿದೆ ಎಂದು ಅವರು ಹೇಳಿದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement