ಬಿಜೆಪಿಯಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆಯೇ ನಡೆದಿಲ್ಲ, ಅಪಸ್ವರಗಳಿಲ್ಲ :ಕಟೀಲು

ಮಂಗಳೂರು: ಬಿಜೆಪಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಬಗ್ಗೆ ಯಾವುದೇ ಚರ್ಚೆ, ಗೊಂದಲ, ಅಪಸ್ವರಗಳಿಲ್ಲ. ನಮ್ಮೆಲ್ಲರ ಸರ್ವಸಮ್ಮತಿಯ ನಾಯಕ ಯಡಿಯೂರಪ್ಪನವರೇ. ಅವರೇ ಮುಖ್ಯಮಂತ್ರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನಕುಮಾರ್ ಕಟೀಲು ಸ್ಪಷ್ಟಪಡಿಸಿದ್ದಾರೆ.
ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಟೀಲು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೈಕಮಾಂಡ್ ಸೂಚನೆ ಅದಕ್ಕೆ ತಕ್ಕಂತೆ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಇದು ಬಿಜೆಪಿ ವಿಶೇಷತೆಯಾಗಿದ್ದು, ಇಲ್ಲಿ ಯಾರೂ ಅಧಿಕಾರಕ್ಕೆ ಅಂಟಿ ಕುಳಿತವರಿಲ್ಲ‌. ಇದು ನಮ್ಮ ಆದರ್ಶ ಎಂದು ವ್ಯಾಖ್ಯಾನಿಸಿದರು.
ಆದರೂ ಪಕ್ಷದ ಕಾರ್ಯಕರ್ತ ಹೈಕಮಾಂಡ್ ಹೇಳಿದ್ದನ್ನು ಕೇಳಬೇಕು ಎಂಬ ಸ್ಪಷ್ಟ ಸಂದೇಶವನ್ನು ಯಡಿಯೂರಪ್ಪ ನೀಡಿದ್ದಾರೆ. ಆದರೆ, ಪಕ್ಷದ ಮುಂದೆ ಮಾತ್ರ ಮುಖ್ಯಮಂತ್ರಿ ಬದಲಾವಣೆ’ ಬಗ್ಗೆ ಯಾವುದೇ ಪ್ರಶ್ನೆಗಳಿಲ್ಲ, ಚರ್ಚೆಯೂ ನಡೆದಿಲ್ಲ. ಪಕ್ಷದೊಳಗೂ ಭಿನ್ನಾಭಿಪ್ರಾಯಗಳಿಲ್ಲ. ಹಾಗೇನಾದರೂ ಯಾರಿಗಾದರೂ ನೋವು ಇದ್ದಲ್ಲಿ ನಮ್ಮಲ್ಲಿ ಬಂದು ಅವರು ಮಾತನಾಡಬಹುದು ಎಂದು‌ ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement