ತಾಯಿ ಮೊಬೈಲ್‌ ಚಾರ್ಜರ್ ಕೊಟ್ಟಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಮಗ

ತುಮಕೂರು : ತಾಯಿ ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಮಗ ಆತ್ಮಹತ್ಯೆ ಮಾಡಿಕೊಂಡ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿಹಳ್ಳಿ ಎಂಬಲ್ಲಿ ನಡೆದಿದೆ.
ಪಾವಗಡದ ಶಾಂತಿ ಎಸ್ಎಸ್ ಕೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ನಿಖಿಲ್ ಗೌಡ (18) ನೇಣಿಗೆ ಶರಣಾಗಿರುವ ಹುಡುಗ. ಈತ ಆಶಾ ಕಾರ್ಯಕರ್ತೆ ವರಲಕ್ಷಮ್ಮ ಎಂಬವರ ಮಗ. ಭಾನುವಾರ ರಜೆ ಇದ್ದ ಕಾರಣ ಮನೆಯಲ್ಲಿಯೇ ಇದ್ದ ನಿಖಿಲ್ ಈ ವೇಳೆ ತನಗೆ ನೀನು ಅದನ್ನು ಕೊಡಿಸಿಲ್ಲ, ಇದನ್ನು ಕೊಡಿಸಿಲ್ಲ ಎಂದು ತಾಯಿ ಜತೆಗೆ ಗಲಾಟೆ ಮಾಡಿದ್ದ ಎನ್ನಲಾಗಿದೆ. ನಂತರ ಮೊಬೈಲ್ ಚಾರ್ಜರ್ ಕೊಡು ಎಂದು ತಾಯಿ ಬಳಿ ಕೇಳಿದ್ದಾನೆ. ಆದರೆ ತಾಯಿ ನನ್ನ ಬಳಿ ಮೊಬೈಲ್‌ ಚಾರ್ಜರ್ ಇಲ್ಲ ಎಂದು ಹೇಳಿ ಹತ್ತಿರದ ಮನೆಯೊಂದರಲ್ಲಿ ಹೂ ಕಟ್ಟಲು ಹೋಗಿದ್ದಾಳೆ. ತಾಯಿ ಮನೆಗೆ ವಾಪಸ್ ಬಂದು ಬಾಗಿಲು ತೆರೆಯಲು ನೋಡಿದಾಗ ಒಳಗಡೆಯಿಂದ ಮನೆ ಬಾಗಿಲು ಲಾಕ್‌ ಮಾಡಲಾಗಿತ್ತು. ನಂತರ ಜೋರಾಗಿ ಬಾಗಿಲು ಬಡಿದಿದ್ದಾಳೆ. ಆದರೂ ಬಾಗಿಲು ತೆಗೆಯದ ಕಾರಣ ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಮಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಎಂಟು ವರ್ಷದ ಹಿಂದೆಯೇ ನಿಖಿಲ್ ಗೌಡ ತಂದೆ ಮೃತಪಟ್ಟಿದ್ದರು. ವರಲಕ್ಷ್ಮಮ್ಮಗೆ ಮತ್ತೊಬ್ಬಳು ಮಗಳಿದ್ದಾಳೆ. ಚಾರ್ಜರ್ ಇಲ್ಲವೆಂದ ಕ್ಷುಲ್ಲಕ ಕಾರಣಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ತಾಯಿ ಕುಸಿದುಹೋಗಿದ್ದಾಳೆ.
ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ವೈ.ಎನ್.ಹೊಸಕೋಟೆ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ಕಾಂಗ್ರೆಸ್‌ ಆಡಳಿತ ಬಂದ ನಂತರ ಅಪರಾಧಗಳು ಹೆಚ್ಚಳ, ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ.. ಕಾಂಗ್ರೆಸ್‌ ಅನ್ನು ತಿರಸ್ಕರಿಸಬೇಡವೇ : ಶಿರಸಿಯಲ್ಲಿ ಮತದಾರರಿಗೆ ಮೋದಿ ಪ್ರಶ್ನೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement