ನಕಲಿ ಎನ್‌ಸಿಐಬಿ ಅಧಿಕಾರಿ ಸೋಗಿನಲ್ಲಿ ವಂಚನೆ: 8 ರಾಜ್ಯಗಳಿಗೆ ಬೇಕಾಗಿದ್ದ ಕುಖ್ಯಾತ ಆರೋಪಿ ಕೇರಳದಲ್ಲಿ ಬಂಧನ

ಮಂಗಳೂರು: ಕೇಂದ್ರ ತನಿಖಾ ಸಂಸ್ಥೆಗಳ ಅಧಿಕಾರಿಯಂತೆ ನಕಲಿ ವೇಷ ಧರಿಸಿ ಜನರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದಾನೆ ಎಂಬ ಆರೋಪ ಎದುರಿಸುತ್ತಿದ್ದ ಕುಖ್ಯಾತ ವಂಚಕನನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಕೇರಳದ ಕಣ್ಣೂರಿನಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕ್ಕನ್ ಅಲಿಯಾಸ್ ಆಂಥೋನಿ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ನಡೆದ … Continued

ಅಯೋಧ್ಯೆ ರಾಮಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ನೇಮಕ

ಅಯೋಧ್ಯೆ: ರಾಮಮಂದಿರದ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿರುವ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಬುಧವಾರ (ಸೆಪ್ಟೆಂಬರ್‌ 2) ನಿವೃತ್ತ ಏರ್‌ ಮಾರ್ಷಲ್‌ ಜೀತೇಂದ್ರ ಮಿಶ್ರ ಅವರನ್ನು ಟ್ರಸ್ಟ್‌ನ ಮೊದಲ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ)ಯಾಗಿ ನೇಮಿಸಿದೆ. ಪಶ್ಚಿಮ ವಾಯು ಕಮಾಂಡ್‌ ಮುಖ್ಯಸ್ಥರಾಗಿ ‘ಆಪರೇಷನ್‌ ಸಿಂಧೂರ’ ವೇಳೆ ನೇತೃತ್ವ ವಹಿಸಿದ್ದ ಜೀತೇಂದ್ರ ಮಿಶ್ರ ಅವರಿಗೆ … Continued

200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗುವಿನ ಜನನ : ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ಮೂಲಕ ಮನೆಗೆ ಕರೆತಂದ ಕುಟುಂಬ !

ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಒಂದು ಹೆಣ್ಣು ಮಗುವಿನ ಜನನವು ಇಡೀ ಕುಟುಂಬಕ್ಕೆ ಐತಿಹಾಸಿಕ ಸಂಭ್ರಮದ ಕ್ಷಣವಾಗಿ ಪರಿಣಮಿಸಿದೆ. ಸುಮಾರು 200 ವರ್ಷಗಳ ಬಳಿಕ ಹಾಗೂ ನಾಲ್ಕು ತಲೆಮಾರುಗಳ ನಂತರ ದಹಿಫಾಲೆ ಕುಟುಂಬದಲ್ಲಿ ಹೆಣ್ಣು ಮಗು ಜನಿಸಿರುವ ಹಿನ್ನೆಲೆಯಲ್ಲಿ, ನವಜಾತ ಶಿಶುವನ್ನು ರಥದಲ್ಲಿ ಕೂಡ್ರಿಸಿಕೊಂಡುಅದ್ಧೂರಿ ಮೆರವಣಿ ಮೂಲಕ ಮನೆಗೆ ಸ್ವಾಗತಿಸಲಾಯಿತು. ಆಸ್ಪತ್ರೆಯಿಂದ ಬಿಡುಗಡೆಯಾದ ತಾಯಿ ಮತ್ತು ಮಗು … Continued

ಪುತ್ರಿಯರ ಶಿಕ್ಷಣಕ್ಕಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡಿ ʼಮ್ಯಾರಥಾನ್‌ʼನಲ್ಲಿ ಮೊದಲ ಸ್ಥಾನ ಪಡೆದ 47 ವರ್ಷದ ತಾಯಿ !

ಬೀಡ್‌: ಮಗಳ ಶಿಕ್ಷಣಕ್ಕಾಗಿ ಹಣ ಸಂಪಾದಿಸಬೇಕೆಂಬ ಸಂಕಲ್ಪದೊಂದಿಗೆ ಮ್ಯಾರಥಾನ್‌ಗೆ ಇಳಿದ ಮಹಾರಾಷ್ಟ್ರದ 47 ವರ್ಷದ ತಾಯಿಯೊಬ್ಬರು, ಸೀರೆ ಧರಿಸಿ ಬರಿಗಾಲಿನಲ್ಲೇ ಓಡಿ ಮೊದಲ ಸ್ಥಾನ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಂಬಾಜೋಗೈನಲ್ಲಿ ನಡೆದ ‘ಅಮೃತ ದೌಡ್’ ಮ್ಯಾರಥಾನ್‌ ಸ್ಪರ್ಧೆಯಲ್ಲಿ ಸೀರೆ ಧರಿಸಿ ಓಡಿದ 47 ವರ್ಷದ ರಮಾಬಾಯಿ ರಣವೀರ ಅವರು, ಕ್ರೀಡಾ … Continued

ರಷ್ಯಾ ಅತಿಹೆಚ್ಚು ತೈಲ ಉತ್ಪಾದನೆ ಮಾಡುತ್ತಿದ್ರೂ ಈಗ ಅದಕ್ಕೇ ದಾಖಲೆ ಪ್ರಮಾಣದಲ್ಲಿ ಪೆಟ್ರೋಲ್ ಪೂರೈಸುತ್ತಿರುವ ಭಾರತ ! ಕಾರಣ ?

ನವದೆಹಲಿ: ರಷ್ಯಾದಲ್ಲಿ ತೀವ್ರಗೊಂಡಿರುವ ದೇಶೀಯ ಇಂಧನ ಕೊರತೆಯ ಹಿನ್ನೆಲೆಯಲ್ಲಿ, ಭಾರತವು ರಷ್ಯಾಕ್ಕೆ ಗ್ಯಾಸೋಲಿನ್(ಪೆಟ್ರೋಲ್)ನ ಪ್ರಮುಖ ಪೂರೈಕೆದಾರ ರಾಷ್ಟ್ರವಾಗಿ ಹೊರಹೊಮ್ಮಿದೆ. ಕಳೆದ ಎರಡು ತಿಂಗಳುಗಳಲ್ಲಿ ಭಾರತವು ಸುಮಾರು 1 ಮಿಲಿಯನ್ (10 ಲಕ್ಷ) ಬ್ಯಾರೆಲ್ ಇಂಧನವನ್ನು ರಷ್ಯಾಕ್ಕೆ ಕಳುಹಿಸಿದೆ. ಇಂಧನ ವಿಶ್ಲೇಷಣಾ ಸಂಸ್ಥೆ ‘ವೋರ್ಟೆಕ್ಸಾ’ (Vortexa) ವರದಿ ಪ್ರಕಾರ, ಆಗಸ್ಟ್ ತಿಂಗಳಲ್ಲಿ ರಷ್ಯಾದ ಸಾಗರೋತ್ತರ ಗ್ಯಾಸೋಲಿನ್ ಆಮದು … Continued

ತಾಯಿ ಗದರಿದ ಕೋಪಕ್ಕೆ ಕೆರೆಗೆ ಹಾರಿದ 14 ವರ್ಷದ ಮಗಳು ; ರಕ್ಷಿಸಲು ಹೋದ ತಾಯಿಯೂ ಮುಳುಗಿ ಸಾವು

ಮಡಿಕೇರಿ: ಮಗಳಿಗೆ ಗದರಿದ್ದಕ್ಕೆ ತಾಯಿ-ಮಗಳ ಜೀವನ ದುರಂತ ಅಂತ್ಯ ಕಂಡ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ತಲಕಾವೇರಿ ಸಮೀಪದ ಕೆಂಪರಾಜಮೊಟ್ಟೆ ಕಾಲೋನಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮನೆಗೆ ತಡವಾಗಿ ಬಂದಿದ್ದ ವಿಚಾರಕ್ಕೆ ತಾಯಿ ಗದರಿದ್ದರಿಂದ ಮನನೊಂದ ಮಗಳು ಕೆರೆಗೆ ಹಾರಿದ್ದು, ಆಕೆಯನ್ನು ರಕ್ಷಿಸಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು 45 ವರ್ಷದ … Continued

ಸಮುದ್ರ ಮಟ್ಟ ಏರಿಕೆಯಿಂದ ಮುಂಬೈ, ಕೋಲ್ಕತ್ತಾದ 1.4 ಕೋಟಿ ಜನರು ಮನೆ ಕಳೆದುಕೊಳ್ಳಬಹುದು : ವಿಶ್ವಸಂಸ್ಥೆ ವರದಿ

ಸಮುದ್ರ ಮಟ್ಟ ಏರಿಕೆ ಮತ್ತು ಶಾಶ್ವತ ಜಲಾವೃತದ ಪರಿಣಾಮವಾಗಿ ಕೋಲ್ಕತ್ತಾ ಮತ್ತು ಮುಂಬೈನ ಲಕ್ಷಾಂತರ ಜನರು ತಮ್ಮ ಮನೆಗಳನ್ನು ಕಳೆದುಕೊಳ್ಳುವ ತಕ್ಷಣದ ಅಪಾಯ ಎದುರಿಸುತ್ತಿದ್ದಾರೆ ಎಂದು ವಿಶ್ವಸಂಸ್ಥೆಯ ವರದಿಯೊಂದು ಎಚ್ಚರಿಸಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರ ಕಚೇರಿ ಬಿಡುಗಡೆ ಮಾಡಿರುವ ‘ಸಮುದ್ರ ಮಟ್ಟದ ಏರಿಕೆಗೆ ಸಂಬಂಧಿಸಿದ ಸವಾಲುಗಳು ಮತ್ತು ಅದನ್ನು ಎದುರಿಸುವ ಮಾರ್ಗಗಳು’ (‘Challenges Related to … Continued

ನೇಪಾಳದಲ್ಲಿ ದುರಂತ ; ಬಿಹಾರದಲ್ಲಿ ಆತಂಕ..! ಪ್ರವಾಹದಲ್ಲಿ ಬಂದ ಅಪರಿಚಿತ ಮೀನುಗಳು ಜೀವಕ್ಕೆ ಕಂಟಕ ? ಸರ್ಕಾರದ ಎಚ್ಚರಿಕೆ

ಪಾಟ್ನಾ: ನೇಪಾಳದಲ್ಲಿ ಸಂಭವಿಸಿದ ಭೀಕರ ಹಠಾತ್‌ ಪ್ರವಾಹದ ಪರಿಣಾಮ ಇದೀಗ ಬಿಹಾರದಲ್ಲಿ ಹೊಸ ಆತಂಕಕ್ಕೆ ಕಾರಣವಾಗಿದೆ. ಪ್ರವಾಹದ ನೀರಿನೊಂದಿಗೆ ನೇಪಾಳದಿಂದ ಹರಿದು ಬಂದಿರುವ ಅಪರಿಚಿತ ಮೀನುಗಳನ್ನು ಹಿಡಿಯುವುದು, ಮಾರಾಟ ಮಾಡುವುದು ಅಥವಾ ತಿನ್ನುವುದು ಅಪಾಯಕಾರಿ ಎಂದು ಬಿಹಾರ ಸರ್ಕಾರ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳುವವರೆಗೆ ಇಂತಹ ಮೀನುಗಳಿಂದ ದೂರವಿರುವಂತೆ ಅಧಿಕಾರಿಗಳು ಮನವಿ … Continued

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲ ಎಫ್‌ಐಆರ್‌ ರದ್ದು ಮಾಡಿದ ಸುಪ್ರೀಂ ಕೋರ್ಟ್‌ ; ಆದರೆ ಕೆಲವರಿಗೆ ವಿನಾಯಿತಿ ಇಲ್ಲ…

ನವದೆಹಲಿ: ಜುಲೈ 20ರಂದು ನಡೆದ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಗಳ ಬಳಿಕ ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ದೇಶದ ವಿವಿಧ ಭಾಗಗಳಲ್ಲಿ ದಾಖಲಿಸಲಾಗಿದ್ದ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶ ಮಾಡಿದ್ದು, ಜುಲೈ 20ರಿಂದ 25ರವರೆಗೆ ವಿದ್ಯಾರ್ಥಿಗಳ ವಿರುದ್ಧ ದಾಖಲಾದ ಎಲ್ಲಾ ಪ್ರಕರಣಗಳನ್ನು ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ನೇತೃತ್ವದ ಪೀಠವು, ದೇಶದ … Continued

ಎಸ್‌ಸಿಒ ಶೃಂಗಸಭೆಯ ಮುಖ್ಯಸ್ಥರ ಗ್ರುಪ್‌ ಫೋಟೊದಿಂದ ಪ್ರಧಾನಿ ಮೋದಿ ಫೋಟೊ ಕಟ್‌ ಮಾಡಿ ಪ್ರಕಟಿಸಿದ ಪಾಕಿಸ್ತಾನ ಪಿಎಂಒ !

ಬಿಶ್ಕೆಕ್ (ಕಿರ್ಗಿಸ್ತಾನ್): ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಯ ವೇಳೆ ತೆಗೆದ ಅಧಿಕೃತ ಗ್ರೂಪ್ ಫೋಟೋವನ್ನು ಪಾಕಿಸ್ತಾನದ ಪ್ರಧಾನಿ ಕಚೇರಿ (PMO) ಎಡಿಟ್‌ ಮಾಡಿ ಪ್ರಕಟಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಫೋಟೋದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಐವರು ನಾಯಕರನ್ನು ಕತ್ತರಿಸಿ ತೆಗೆದುಹಾಕಲಾಗಿದ್ದು, ಆ ಮೂಲಕ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಚಿತ್ರದ … Continued