ಉಪವಾಸ ಸತ್ಯಾಗ್ರಹದ 21ನೇ ದಿನ : ಜಂತರ್ ಮಂತರ್‌ನಿಂದ ಸೋನಂ ವಾಂಗ್ಚುಕ್‌ರನ್ನು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ನವದೆಹಲಿ: ದೆಹಲಿ ಜಂತರ್ ಮಂತರ್‌ನಲ್ಲಿ ಕಳೆದ 20 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಶನಿವಾರ ಮುಂಜಾನೆ ಪೊಲೀಸರು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೋನಂ ವಾಂಗ್ಚುಕ್ ಅವರು ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ … Continued

8 ವರ್ಷಗಳ ಪ್ರೇಮದಲ್ಲಿ ಬಿರುಕು ; ಯುವತಿ ಆತ್ಮಹತ್ಯೆ, ಮೃತದೇಹಕ್ಕೆ ಪ್ರಿಯಕರ ಮಂಗಳಸೂತ್ರ ಕಟ್ಟಬೇಕು ಎಂದು ಕುಟುಂಬಸ್ಥರ ಪಟ್ಟು…

ಅಮರಾವತಿ:  ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ಪ್ರೇಮಕಥೆಯೊಂದು ಎಂಟು ವರ್ಷಗಳ ಬಳಿಕ ದುರಂತ ಅಂತ್ಯ ಕಂಡ ಘಟನೆ ಆಂಧ್ರ ಪ್ರದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಗುಂಟೂರು ಜಿಲ್ಲೆಯ ಕೊಂಡ್ರುಪಾಡು ಗ್ರಾಮದ 26 ವರ್ಷದ ಯುವತಿ ಇತ್ತೀಚೆಗೆ ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ಮುನ್ನ ಬರೆದಿದ್ದ ಕೊನೆಯ ಪತ್ರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.  ಆತ್ಮಹತ್ಯೆ ಮಾಡಿಕೊಂಡ 24 … Continued

ಅಪ್ರಾಪ್ತೆಯ ಮೇಲೆ ಅತ್ಯಾಚಾರ; ಜನಿಸಿದ ಮಗು ಮಾರಾಟ ಆರೋಪ, ಆಕೆ ಮತ್ತೆ ಗರ್ಭಿಣಿ

 ಹುಬ್ಬಳ್ಳಿ: ನಗರದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದ್ದು, ಅತ್ಯಾಚಾರದಿಂದ ಜನಿಸಿದ ನವಜಾತ ಶಿಶುವನ್ನು ಬಾಲಕಿಯ ಪೋಷಕರು ಮತ್ತೊಂದು ಕುಟುಂಬಕ್ಕೆ ಮಾರಾಟ ಮಾಡಿರುವ ಆರೋಪ ಕೇಳಿಬಂದಿದೆ. ಇದರ ನಡುವೆಯೇ ಬಾಲಕಿ ಇದೀಗ ಮತ್ತೊಮ್ಮೆ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಅತ್ಯಾಚಾರದ ಆರೋಪಿ, ಬಾಲಕಿಯ ಪೋಷಕರು ಹಾಗೂ ಇಬ್ಬರು ಖಾಸಗಿ … Continued

ಕ್ರಿಕೆಟ್ ದಂತಕತೆ ಸರ್ ಗ್ಯಾರಿ ಸೋಬರ್ಸ್ ನಿಧನ

ಬಾರ್ಬಡೋಸ್: ವಿಶ್ವ ಕ್ರಿಕೆಟ್ ಇತಿಹಾಸದ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆಂದು ಪರಿಗಣಿಸಲ್ಪಡುವ ವೆಸ್ಟ್ ಇಂಡೀಸ್‌ನ ದಂತಕಥೆ, ಸರ್ ಗಾರ್ಫೀಲ್ಡ್ ಸೋಬರ್ಸ್ ಅವರು 89ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ತಮ್ಮ 90ನೇ ಜನ್ಮದಿನಕ್ಕೆ ಇನ್ನೆರಡು ವಾರಗಳು ಬಾಕಿ ಇರುವಾಗ ಬಾರ್ಬಡೋಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು. ಅವರು ಪುತ್ರರಾದ ಡೇನಿಯಲ್ ಮತ್ತು ಮ್ಯಾಥ್ಯೂ ಹಾಗೂ ದತ್ತು ಪುತ್ರಿ ಜಿನೀವೀವ್ … Continued

ಕುಮಟಾ: ಭಾರಿ ಮಳೆಗೆ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ

ಕಾರವಾರ : ಗುರುವಾರ ಸಂಜೆಯಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ–ತದಡಿ ರಸ್ತೆಯ ಬದಿಯ ಗುಡ್ಡ ಕುಸಿದಿದ್ದು, ರಸ್ತೆ ಸಂಚಾ ಸದ್ಯಕ್ಕೆ ಸ್ಥಗಿತಗೊಂಡಿದೆ. ಗುಡ್ಡ ಕುಸಿತದಿಂದ ರಸ್ತೆಯ ಮೇಲೆ ಅಪಾರ ಪ್ರಮಾಣದ ಮಣ್ಣು ಹಾಗೂ ಬೃಹತ್ ಕಲ್ಲುಗಳು ಬಿದ್ದಿದ್ದರಿಂದ ಸುರಕ್ಷತಾ ಕ್ರಮವಾಗಿ ಈ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ … Continued

ಕುಮಟಾ : ಶಾಲೆಯ ಪಕ್ಕವೇ ಭೂ ಕುಸಿತ ; ಕಟ್ಟಡಕ್ಕೆ ಬಂದು ಅಪ್ಪಳಿಸಿದ ಬೃಹತ್‌ ಬಂಡೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ನೆಲ್ಲೇರಿಯ ಕರ್ನಾಟಕ ಸರ್ಕಾರಿ ಶಾಲೆಯ ಪಕ್ಕದಲ್ಲಿ ಶುಕ್ರವಾರ ಸಂಭವಿಸಿದ ಭೂಕುಸಿತದಿಂದಾಗಿ ಬೃಹತ್ ಬಂಡೆಯೊಂದು ಉರುಳಿ ಶಾಲಾ ಕಟ್ಟಡದಕ್ಕೆ ಬಂದು ಅಪ್ಪಳಿಸಿದ ಘಟನೆ ವರದಿಯಾಗಿದೆ. ಆದರೆ, ಶಾಲಾ ಆಡಳಿತ ಮಂಡಳಿ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳನ್ನು ಅಪಾಯದ ಪ್ರದೇಶದಲ್ಲಿದ್ದ ತರಗತಿ ಕೊಠಡಿಗಳಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರಿಂದ ಯಾವುದೇ ವಿದ್ಯಾರ್ಥಿ … Continued

ಮತದಾರರ ಪಟ್ಟಿಯಿಂದ ಹೆಸರು ತೆಗೆದ ಮಾತ್ರಕ್ಕೆ ಪೌರತ್ವ ರದ್ದಾಗುವುದಿಲ್ಲ : ಸುಪ್ರೀಂ ಕೋರ್ಟ್

ನವದೆಹಲಿ: ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision–SIR) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಮಾತ್ರಕ್ಕೆ ವ್ಯಕ್ತಿಯ ಭಾರತೀಯ ಪೌರತ್ವ ಸ್ವಯಂಚಾಲಿತವಾಗಿ ರದ್ದಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮತ್ತೊಮ್ಮೆ ಮೌಖಿಕವಾಗಿ ಸ್ಪಷ್ಟಪಡಿಸಿದೆ. ಬಿಹಾರ ಎಸ್‌ಐಆರ್ ಪ್ರಕರಣದಲ್ಲಿ ಈಗಾಗಲೇ ನೀಡಿದ್ದ ತೀರ್ಪಿನಲ್ಲಿಯೇ ಚುನಾವಣಾ ಆಯೋಗ (ECI) ಪೌರತ್ವ ನಿರ್ಧರಿಸುವ ಅಂತಿಮ ಸಾಂವಿಧಾನಿಕ ಪ್ರಾಧಿಕಾರವಲ್ಲ ಎಂದು … Continued

ಮತ್ತೆ ಮಳೆ ಚುರುಕು ; ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಜುಲೈ 21ರ ವರೆಗೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಕಳೆದ ಕೆಲ ದಿನಗಳಿಂದ ಸ್ಥಗಿತಗೊಂಡಿದ್ದ ಮಳೆ ಗುರುವಾರ(ಜುಲೈ 16)ದಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಮತ್ತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ (ಜುಲೈ 17 ಹಾಗೂ 18) ಕರಾವಳಿಯ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಜುಲೈ 21ರ ವರೆಗೂ ಮುಂದುವರಿಯುವ ಸಾಧ್ಯತೆಯಿದೆ. ಜುಲೈ 18, ಶನಿವಾರ … Continued

ವಿಡಿಯೊ | ಕಾಶಿ : ವಿದೇಶಿ ಪ್ರಜೆಯ ದಾಂಧಲೆ ; ಮನೆಗಳಿಗೆ ನುಗ್ಗಿ ಜನರನ್ನು ಕಚ್ಚಿದ ವ್ಯಕ್ತಿ….!

ವಾರಾಣಸಿ: ವಾರಾಣಸಿಯ ಕೋತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸಪ್ತಸಾಗರ ಮೆಡಿಸಿನ್ ಮಾರ್ಕೆಟ್ ಪ್ರದೇಶದಲ್ಲಿ ಗುರುವಾರ ವಿದೇಶಿ ಪ್ರಜೆಯೊಬ್ಬ ಅರೆಬೆತ್ತಲೆ ಸ್ಥಿತಿಯಲ್ಲಿ ಹಲವು ಮನೆಗಳಿಗೆ ನುಗ್ಗಿ, ಮನೆಯಲ್ಲಿದ್ದ ವಸ್ತುಗಳನ್ನು ಎಸೆದು ನಿವಾಸಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಭಾರೀ ಆತಂಕಕ್ಕೆ ಕಾರಣವಾಯಿತು. ಅಲ್ಲದೆ, ಸ್ಥಳೀಯ ನಿವಾಸಿಯೊಬ್ಬರ ಕೈಗೆ ಕಚ್ಚಿ ಗಾಯಗೊಳಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಘಟನೆಯ ಹಿನ್ನೆಲೆಯಲ್ಲಿ … Continued

19 ವರ್ಷದ ಹಿಂದೆ ಮಗುವಿಗೆ ಸ್ನಾನ ಮಾಡಿಸಿ ಮಡಿಲಲ್ಲಿ ಮಲಗಿಸಿಕೊಂಡಿದ್ದ ಮೆಸ್ಸಿ ; ಈಗ ಆ ಮಗುವೇ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಎದುರಾಳಿ !

19 ವರ್ಷಗಳ ಹಿಂದೆ ಲಿಯೊನೆಲ್ ಮೆಸ್ಸಿ ಅರಿವಿಲ್ಲದೆ ಒಂದು ಅಪರೂಪದ ಕಥೆಯ ಭಾಗವಾಗಿದ್ದರು. ಇಂದು ಅದೇ ಕಥೆ ವಿಶ್ವ ಫುಟ್ಬಾಲ್‌ನ ಅತ್ಯಂತ ಭಾವನಾತ್ಮಕ ಹಾಗೂ ಐತಿಹಾಸಿಕ ಕ್ಷಣಗಳಲ್ಲಿ ಒಂದಾಗಿ ರೂಪುಗೊಂಡಿದೆ. 2026ರ ಫಿಫಾ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಅರ್ಜೆಂಟಿನಾ ತಂಡವು 2–1 ಗೋಲುಗಳಿಂದ ಇಂಗ್ಲೆಂಡ್‌ ತಂಡವನ್ನು ಮಣಿಸಿ ಫೈನಲ್‌ಗೆ ಪ್ರವೇಶಿಸಿದೆ. ಅರ್ಜೆಂಟೀನಾ ತಂಡದ ನಾಯಕ 39 ವರ್ಷದ … Continued