ನಿಜ್ಜರ್‌ ಹತ್ಯೆಯಲ್ಲಿ ಭಾರತದ ವಿರುದ್ಧ ಬೊಬ್ಬೆ ಹೊಡೆದ ಕೆನಡಾ, ಟೊರೊಂಟೊದಲ್ಲಿ ಬಲೂಚ್ ಹೋರಾಟಗಾರ್ತಿ ಹತ್ಯೆ ಆರೋಪ ಪಾಕಿಸ್ತಾನದ ವಿರುದ್ಧ ಬಂದಾಗ ಪ್ರತಿಕ್ರಿಯಿಸಿದ್ದು ಹೀಗೆ..

ಕೆನಡಾದ ಪ್ರಜೆ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರ ಭಾಗಿಯಾಗಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದಾರೆ. ಈ ಘಟನೆಗೆ ಪ್ರತಿಕ್ರಿಯೆಯಾಗಿ ಕೆನಡಾ ಸರ್ಕಾರ ಭಾರತೀಯ ರಾಜತಾಂತ್ರಿಕ ಪವನಕುಮಾರ ರೈ ಅವರನ್ನು ದೇಶದಿಂದ ಹೊರಹಾಕಿದೆ. ಪ್ರಶ್ನೆಯಲ್ಲಿರುವ ಕೆನಡಾದ ಪ್ರಜೆ ಹರ್ದೀಪ್ ಸಿಂಗ್ ನಿಜ್ಜರ್ ನನ್ನು ಈ ವರ್ಷದ ಜೂನ್‌ನಲ್ಲಿ ಕೆನಡಾದ ಸರ್ರೆಯಲ್ಲಿ ಗುಂಡಿಕ್ಕಿ … Continued

ವಂಚನೆ ಪ್ರಕರಣ: ಆರೋಪಿ ಚೈತ್ರಾ ಹೆಸರಿನೊಂದಿಗೆ ʼಕುಂದಾಪುರʼ ಬಳಸದಂತೆ ಕೋರ್ಟ್‌ ನಿರ್ಬಂಧ

ಬೆಂಗಳೂರು : ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಐದು ಕೋಟಿ ರೂಪಾಯಿ ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಹಿಂದೂಪರ ಸಂಘಟನೆಯ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸಬಾರದು ಎಂದು ಮಾಧ್ಯಮಗಳಿಗೆ ನಿರ್ಬಂಧ ಹೇರಿ ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಶನಿವಾ ಮಧ್ಯಂತರ … Continued

ಭಾರತ ಸಂಬಂಧ ಕೊನೆಗೊಳಿಸಿದರೆ ಕೆನಡಾಕ್ಕೇ ಆರ್ಥಿಕ ಹೊಡೆತ..? : ಕೆನಡಾದಲ್ಲಿ ಪಂಜಾಬ್ ವಿದ್ಯಾರ್ಥಿಗಳ ವಾರ್ಷಿಕ ಶೈಕ್ಷಣಿಕ ಹೂಡಿಕೆಯೇ 68,000 ಕೋಟಿ ರೂ…!

ಚಂಡೀಗಢ (ಪಂಜಾಬ್) : ಭಾರತದ ವಿರುದ್ಧ ಪ್ರಧಾನಿ ಜಸ್ಟಿನ್ ಟ್ರುಡೊ ಅವರ “ಅಸಂಬದ್ಧ” ಆರೋಪದ ನಂತರ ಭಾರತ-ಕೆನಡಾ ಸಂಬಂಧಗಳು ಹಳಸಿದವು. ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಆರೋಪಿಸಿದ್ದಾರೆ. ಹೆಚ್ಚುತ್ತಿರುವ ರಾಜತಾಂತ್ರಿಕ ಉದ್ವಿಗ್ನತೆಯು ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರದ ಬಗ್ಗೆ ಕಳವಳಕ್ಕೆ ಕಾರಣವಾಗಿದೆ. ಭಾರತೀಯ ವಿದ್ಯಾರ್ಥಿಗಳು ಕೆನಡಾದಿಂದ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ಬರದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಮಾಧಾನದ ನೀಡಿದೆ. ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮತ್ತು ಮುಂದಿನ 5 ದಿನಗಳಲ್ಲಿ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿಯೂ ಒಳನಾಡಿನಲ್ಲೂ ಸಾಕಷ್ಟು ವ್ಯಾಪಕ ಮಳೆಯಾಗುವ … Continued

ಮನ್ ಕಿ ಬಾತ್: ಜರ್ಮನ್‌ ಯುವತಿಯ ಭಾರತೀಯ ಸಂಗೀತ-ಸಂಸ್ಕೃತಿ ಪ್ರೀತಿಗೆ ಪ್ರಧಾನಿ ಮೋದಿ ಶ್ಲಾಘನೆ ; ಆಕೆ ಹಾಡಿದ ಕನ್ನಡ ಗೀತೆ-ಸಂಸ್ಕೃತ ಶ್ಲೋಕದ ಉಲ್ಲೇಖ | ವೀಕ್ಷಿಸಿ

ಪ್ರಧಾನಿ ನರೇಂದ್ರ ಮೋದಿ ಭಾನುವಾರ ‘ಮನ್ ಕಿ ಬಾತ್‌’ನ 105ನೇ ಸಂಚಿಕೆಯಲ್ಲಿ ಭಾರತೀಯ ಸಂಗೀತ ಹಾಗೂ ಸಂಸ್ಕೃತಿ ಬಗ್ಗೆ ಅಪಾರ ಪ್ರೀತಿ ಇರುವ ವಿಶಿಷ್ಟ ವಿದೇಶಿ ಪ್ರತಿಭೆ ಬಗ್ಗೆ ಉಲ್ಲೇಖಿಸಿದ್ದಾರೆ. ಭಾರತೀಯ ಸಂಸ್ಕೃತಿ ಮತ್ತು ಸಂಗೀತವು ಜಾಗತಿಕಗೊಂಡಿವೆ. ಹೆಚ್ಚು ಹೆಚ್ಚು ಜನರು ಅದರತ್ತ ಒಲವು ತೋರುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಹಾಗೂ ಅದಕ್ಕೆ ಅವರು … Continued

ಚಂದ್ರಯಾನ-3 : ವಿಕ್ರಂ ಲ್ಯಾಂಡರ್-ಪ್ರಜ್ಞಾನ ರೋವರ್ ಪುನಶ್ಚೇತನದ ಬಗ್ಗೆ ಇಸ್ರೋ ಹೇಳುವುದೇನು..?

ಬೆಂಗಳೂರು : ಚಂದ್ರನ ದಕ್ಷಿಣ ಧ್ರುವದಲ್ಲಿರುವ ಚಂದ್ರಯಾನ-3 ಮಿಷನ್ ವಿಕ್ರಂ ಲ್ಯಾಂಡರ್ ಮತ್ತು ಪ್ರಜ್ಞಾನ ರೋವರ್ ಪುನಶ್ಚೇತನ ನೀಡುವ ಪ್ರಯತ್ನವನ್ನು ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಅಕ್ಟೋಬರ್ 6ರ ವರೆಗೂ ಮುಂದುವರಿಸಲಿದೆ. ಚಂದ್ರನ ಮೇಲ್ಮೈ ಮೇಲೆ ವಿಕ್ರಂ ಲ್ಯಾಂಡರ್‌ ಇಳಿದು ನಂತರ 14 ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಸದ್ಯ ಆಫ್‌ ಮೋಡ್‌ ನಲ್ಲಿರುವ … Continued

ಇದು ಜಗತ್ತಿನಲ್ಲೇ ಅತಿದೊಡ್ಡ ಸೌತೆಕಾಯಿ…ಇದರ ತೂಕ ಎಷ್ಟು ಗೊತ್ತಾ..?

ಬ್ರಿಟಿಷ್ ತೋಟಗಾರರೊಬ್ಬರು 30 ಪೌಂಡ್‌ (14 ಕೆಜಿ) ತೂಕವಿರುವ ವಿಶ್ವದ ಅತಿದೊಡ್ಡ ಸೌತೆಕಾಯಿಯನ್ನು ಬೆಳೆದಿದ್ದಾರೆ. ವಿನ್ಸ್ ಸ್ಜೋಡಿನ್ (50) ಎಂಬವರು ವೋರ್ಸೆಸ್ಟರ್‌ಶೈರ್‌ನ ಮಾಲ್ವೆರ್ನ್‌ನಲ್ಲಿ ನಡೆದ ಯುಕೆ ರಾಷ್ಟ್ರೀಯ ಜೈಂಟ್ ವೆಜಿಟೇಬಲ್ಸ್ ಚಾಂಪಿಯನ್‌ಶಿಪ್‌ನಲ್ಲಿ 4 ಅಡಿ ಉದ್ದದ ಸೌತೆಕಾಯಿಯನ್ನು ಪ್ರದರ್ಶಿಸಿದರು. ಅವರು 2015ರಲ್ಲಿ ಬ್ರಿಟ್‌ನ ಡೇವಿಡ್ ಥಾಮಸ್ ಬೆಳೆದ 23 ಪೌಂಡ್‌ಗಳ ಹಿಂದಿನ ಸೌತೆಕಾಯಿಯನ್ನು ಮುರಿದಿದ್ದಾರೆ. ‘ಇದು … Continued

ಕಮಲ-ಜೆಡಿಎಸ್‌ ಮೈತ್ರಿ ಬೆನ್ನಲ್ಲೇ ಯಡಿಯೂರಪ್ಪ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು : ಜೆಡಿಎಸ್ ಪಕ್ಷವು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿದ ಬೆನ್ನಲ್ಲೇ ನಿಖಿಲ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ನಗರದ ಡಾಲರ್ಸ್ ಕಾಲೋನಿ ನಿವಾಸಕ್ಕೆ ಆಗಮಿಸಿದ ಅವರು, ಯಡಿಯೂರಪ್ಪ ಅವರಿಗೆ ಹೂಗುಚ್ಛ ನೀಡಿ, ಶಾಲು ಹೊದಿಸಿ ಗೌರವಿಸಿದರು. ಆರ್.ಆರ್ ನಗರ ಶಾಸಕ ಮುನಿರತ್ನ ನಿಖಿಲಗೆ ಜೊತೆಗೆ ಆಗಮಿಸಿದ್ದರು. ಯಡಿಯೂರಪ್ಪ ಭೇಟಿ ಬಳಿಕ … Continued

ಏಷ್ಯನ್ ಗೇಮ್ಸ್ 2023: ಮೊದಲ ದಿನವೇ 5 ಪದಕ ಗೆದ್ದ ಭಾರತ

ಹ್ಯಾಂಗ್ ಝೂ (ಚೀನಾ) : 19ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಮೊದಲ ದಿನವಾದ ಇಂದು, ಭಾನುವಾರ ಭಾರತ ಐದು ಪದಕಗಳನ್ನು ಗೆದ್ದಿದೆ. ಮಹಿಳೆಯರ 10 ಮೀ ಏರ್ ರೈಫಲ್ ತಂಡ ವಿಭಾಗ, ಪುರುಷರ ಲೈಟ್ ವೈಟ್ ಡಬಲ್ ಸ್ಕಲ್ಸ್ ವಿಭಾಗ ಮತ್ತು ಪುರುಷರ-8 ಜೋಡಿ ರೋವಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಪುರುಷರ ಜೋಡಿ ರೋವಿಂಗ್ … Continued

ಬಿಜೆಪಿ ಜೊತೆ ಮೈತ್ರಿಯ ನಂತರ ಜೆಡಿಎಸ್ ತೊರೆದ ಹಿರಿಯ ಮುಸ್ಲಿಂ ನಾಯಕ

ಬೆಂಗಳೂರು : ಜನತಾದಳ ಸೆಕ್ಯುಲರ್ (ಜೆಡಿಎಸ್) ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಭಾಗವಾಗಲು ಪಕ್ಷದ ವರಿಷ್ಠ ಎಚ್‌ಡಿ ದೇವೇಗೌಡ ಅವರು ಶುಕ್ರವಾರ ನಿರ್ಧಾರ ತೆಗೆದುಕೊಂಡ ನಂತರ ಹಿರಿಯ ನಾಯಕರೊಬ್ಬರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬರುವ 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ನಿರ್ಧರಿಸಿದ ನಂತರ ರಾಜ್ಯದ ಜೆಡಿಎಸ್‌ನ ಹಿರಿಯ ಉಪಾಧ್ಯಕ್ಷ ಸೈಯದ್ … Continued