ಇರಾನ್‌ ವಿರುದ್ಧ ಅಮೆರಿಕದ ಆರ್ಥಿಕ ಸಮರ ತೀವ್ರ ; ಹಣ ವರ್ಗಾವಣೆಗೆ ನೆರವಾಗುವ ದೇಶಗಳಿಗೆ ಡಾಲರ್‌ ವ್ಯವಸ್ಥೆ ನಿರ್ಬಂಧದ ಎಚ್ಚರಿಕೆ

ವಾಷಿಂಗ್ಟನ್‌ : ಅಮೆರಿಕವು ಇರಾನ್ ವಿರುದ್ಧ ಆರ್ಥಿಕ ಸಮರವನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಇರಾನ್‌ಗೆ ಹಣಕಾಸು ನೆರವು ನೀಡುವ ಅಥವಾ ಆರ್ಥಿಕ ಸಂಬಂಧ ಮುಂದುವರಿಸುವ ದೇಶಗಳು ಹಾಗೂ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಇರಾನ್‌ಗೆ “ಆರ್ಥಿಕ ಡಿ-ಡೇ” ಘೋಷಿಸಿದ ಬೆನ್ನಲ್ಲೇ ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇರಾನ್‌ಗೆ ಹಣವನ್ನು … Continued

ಕರ್ನಾಟಕದ ಪಶ್ಚಿಮ ಘಟ್ಟದ ಮಂಜಿನ ಮಧ್ಯೆ ಕಿತ್ತಳೆ ಹಾವಿನಂತೆ ಸಾಗಿದ ʼವಂದೇ ಭಾರತʼ ರೈಲು ; ಅದ್ಭುತ ವಿಡಿಯೊಕ್ಕೆ ಭಾರೀ ಮೆಚ್ಚುಗೆ

ಬೆಂಗಳೂರು : ಪಶ್ಚಿಮ ಘಟ್ಟದ ದಟ್ಟ ಹಸಿರು ಕಾಡುಗಳು, ಎತ್ತರದ ಪರ್ವತಗಳು ಹಾಗೂ ಮಳೆಗಾಲದ ಮಂಜಿನ ಹೊದಿಕೆಯ ನಡುವೆ ಕಿತ್ತಳೆ-ಬಿಳಿ ಬಣ್ಣದ ವಂದೇ ಭಾರತ ಎಕ್ಸ್‌ಪ್ರೆಸ್ ರೈಲು ಸಾಗುತ್ತಿರುವ ಮನಮೋಹಕ ವೈಮಾನಿಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿವೆ. ಎಫ್‌ಪಿವಿ (FPV) ಕ್ರಿಯೇಟರ್‌ @hemisphere.fpv ಸೆರೆಹಿಡಿದ ಈ ಸಿನೆಮಾಟಿಕ್ ಡ್ರೋನ್ ವಿಡಿಯೊವನ್ನು ಕೇಂದ್ರ ರೈಲ್ವೆ … Continued

2026ರ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟ ಮುಡಿಗೇರಿಸಿಕೊಂಡ ಕೇರಳದ 19ರ ಹರೆಯದ ಕಾಜಿಯಾ

ಜೈಪುರ: ರಾಜಸ್ಥಾನದ ಜೈಪುರದಲ್ಲಿರುವ ಜೀ ಸ್ಟುಡಿಯೋಸ್‌ನಲ್ಲಿ ಭಾನುವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ಕೇರಳದ 19 ವರ್ಷದ ಕಾಜಿಯಾ ಲಿಜ್ ಮೆಜೊ ಅವರು ಪ್ರತಿಷ್ಠಿತ ಮಿಸ್ ಯೂನಿವರ್ಸ್ ಇಂಡಿಯಾ 2026 ಕಿರೀಟವನ್ನು ತಮ್ಮದಾಗಿಸಿಕೊಂಡರು. ದೇಶದ ವಿವಿಧ ಭಾಗಗಳಿಂದ ಸ್ಪರ್ಧಿಸಿದ್ದ 52 ಫೈನಲಿಸ್ಟ್‌ಗಳನ್ನು ಹಿಂದಿಕ್ಕಿ ಕಾಜಿಯಾ ಈ ಗೌರವಕ್ಕೆ ಪಾತ್ರರಾದರು. ಸಮಾರಂಭದಲ್ಲಿ ಮಿಸ್ ಯೂನಿವರ್ಸ್ ಇಂಡಿಯಾ 2025ರ ವಿಜೇತೆ … Continued

ಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿಡಿಯೊಕ್ಕೆ ಪಾಕಿಸ್ತಾನ ಪರ ಹಾಡು ಬಳಕೆ; ಎಫ್‌ಐಆರ್‌ ದಾಖಲು

ಚಿಕ್ಕಮಗಳೂರು: ಈದ್ ಮಿಲಾದ್ ಹಬ್ಬದ ಅಂಗವಾಗಿ ಚಿಕ್ಕಮಗಳೂರು ನಗರದ ಟಿಪ್ಪು ನಗರದಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ 40 ಅಡಿ ಎತ್ತರದ ಕಟೌಟ್‌ ಸಂಬಂಧ ಹೊಸ ವಿವಾದವೊಂದು ಭುಗಿಲೆದ್ದಿದೆ. ಕಟೌಟ್‌ ಒಳಗೊಂಡ ವಿಡಿಯೋಗೆ ದೇಶವಿರೋಧಿ ಹಾಗೂ ಹಿಂಸಾಚಾರ ಪ್ರಚೋದಿಸುವ ಹಾಡನ್ನು ಹಿನ್ನೆಲೆಯಾಗಿ ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ಈ ಪ್ರಕರಣಕ್ಕೆ … Continued

ಕಾಡಿಗೆ ಬಿಟ್ಟು ಬಂದರೂ ಮತ್ತೆ ಅದೇ ಅರಳಿಮರದ ಜಾಗಕ್ಕೆ ಬಂದ ನಾಗಿಣಿ; ಅದನ್ನು ನೋಡಲು ಜನರ ದಂಡು

ಧಾರ: ಮಧ್ಯಪ್ರದೇಶದ ಧಾರ ಜಿಲ್ಲೆಯ ಗಂಧವಾನಿ ಪ್ರದೇಶದ ಸಣ್ಣ ಗ್ರಾಮವಾದ ಸಾಲಿ ಒಂದು ನಾಗಿಣಿ(ಹೆಣ್ಣು ನಾಗರ ಹಾವು)ಯ ಕಾರಣದಿಂದ ರಾಜ್ಯಾದ್ಯಂತ ಚರ್ಚೆಯ ಕೇಂದ್ರಬಿಂದುವಾಗಿದೆ. ಗ್ರಾಮದ ರಸ್ತೆ ಬದಿಯ ಒಂದೇ ಸ್ಥಳದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ನಾಗಿಣಿ ಗ್ರಾಮಸ್ಥರಲ್ಲಿ ಆಶ್ಚರ್ಯ, ಕುತೂಹಲ ಮತ್ತು ಭಕ್ತಿಭಾವ ಮೂಡಿಸಿದೆ. ಅಷ್ಟೇ ಅಲ್ಲದೆ, ಅರಣ್ಯ ಇಲಾಖೆ ರಕ್ಷಿಸಿ ಕಾಡಿಗೆ ಬಿಟ್ಟ … Continued

ಎಸ್‌ಐಆರ್‌ : ಕರ್ನಾಟಕದ ಕರಡು ಮತದಾರರ ಪಟ್ಟಿ ಪ್ರಕಟ ; 1.07 ಕೋಟಿ ಹೆಸರು ಪಟ್ಟಿಯಿಂದ ಹೊರಗೆ, ಬೆಂಗಳೂರಲ್ಲೇ ಹೆಚ್ಚು

ಬೆಂಗಳೂರು : ವಿಶೇಷ ಸಮಗ್ರಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಚುನಾವಣಾ ಆಯೋಗವು ಕರ್ನಾಟಕದ ಕರಡು ಮತದಾರರ ಪಟ್ಟಿಯನ್ನು ಭಾನುವಾರ ಪ್ರಕಟಿಸಿದ್ದು, ಜೂನ್ 16ರ ವೇಳೆಗೆ ರಾಜ್ಯದಲ್ಲಿ ದಾಖಲಾಗಿದ್ದ 5.54 ಕೋಟಿ ಮತದಾರರ ಪೈಕಿ 4.46 ಕೋಟಿ ಮತದಾರರ ಹೆಸರುಗಳು ಕರಡು ಪಟ್ಟಿಯಲ್ಲಿ ಸೇರಿವೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) … Continued

ಬ್ರಹ್ಮಾವರ : ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ !

ಉಡುಪಿ :  ಮಗನೊಬ್ಬ ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಬ್ರಹ್ಮಾವರದ ಗಾಂಧಿನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಾಂಧಿನಗರದ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟರು ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಶಾಹಿದ್ ಅಲಿ ಎಂಬಾತನನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. … Continued

ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಉಡುಪಿ : ಉದ್ಯಮಿ ಹಾಗೂ ಕಾಂಗ್ರೆಸ್‌ ನಾಯಕ ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಮುಂಬೈನ ಅನುಜ ಪಾಟೀಲ(35) ಪೊಲೀಸರು ಬಂಧಿಸಿದ್ದು, ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಪೊಲೀಸರು ಅನುಜ ಪಾಟೀಲ್‌ನನ್ನು ಬಂಧಿಸಿ ಹೆಬ್ರಿಗೆ ಕರೆದೊಯ್ಯುತ್ತಿದ್ದ … Continued

ದೊಡ್ಡಬಳ್ಳಾಪುರ : ಇನ್‌ಸ್ಟಾಗ್ರಾಂನಲ್ಲಿ ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಸಂಪರ್ಕ; ವ್ಯಕ್ತಿಯ ಬಂಧನ

ಬೆಂಗಳೂರು : ಬೆಂಗಳೂರು ಉತ್ತರ ಹೊರವಲಯದ ದೊಡ್ಡಬಳ್ಳಾಪುರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದನಾ ಸಂಪರ್ಕ ಹೊಂದಿರುವ ಗ್ಯಾಂಗ್‌ಸ್ಟರ್‌ಗಳ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ 28 ವರ್ಷದ ಏರ್‌ ಕಂಡೀಷನರ್‌ ಮೆಕ್ಯಾನಿಕ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಇಸ್ಲಾಂಪುರ ನಿವಾಸಿ ಎಸ್. ಸಯ್ಯದ್ ಅಬುಬಕರ್ ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ಆತ ಪಾಕಿಸ್ತಾನ ಮೂಲದ ಗ್ಯಾಂಗ್‌ಸ್ಟರ್‌ಗಳು ಹಾಗೂ … Continued

ಗಂಡನ ಕೊಂದು, ದೇಹ ಕತ್ತರಿಸಿ, ಕರುಳು ಹೊರತೆಗೆದು ಚೀಲದಲ್ಲಿ ತುಂಬುತ್ತಿದ್ದ ಪತ್ನಿ; ಮನೆ ಮಾಲೀಕ ಕಂಡಾಗ ಕಟ್ಟಡದಿಂದ ಜಿಗಿದಳು…

ಕುರುಕ್ಷೇತ್ರ  :  ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿಯೊಬ್ಬಳು ತನ್ನ ಪತಿಯನ್ನು ಕ್ರೂರವಾಗಿ ಹತ್ಯೆ ಮಾಡಿ, ಆತನ ಹೊಟ್ಟೆಯನ್ನು ಬಗೆದು ಕರುಳುಗಳನ್ನು ಹೊರತೆಗೆದಿರುವ ಆರೋಪಿತ ಘಟನೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆದಿದೆ. ಬಳಿಕ ಘಟನೆ ಬಹಿರಂಗವಾಗುತ್ತಿದ್ದಂತೆ ಆತಂಕಗೊಂಡ ಆಕೆ ಬಾಡಿಗೆ ಮನೆಯ ಮಹಡಿಯಿಂದ ಜಿಗಿದಿದ್ದು, ಗಾಯಗೊಂಡ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಮೃತ ವ್ಯಕ್ತಿಯನ್ನು … Continued