ತವರು ಮನೆಯಿಂದ ಪತ್ನಿ ಮರಳಿ ಕರೆತರಲು ಹೋದ ವ್ಯಕ್ತಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಬಾವ, ರಕ್ಷಿಸಲು ಹೋದ ಮಹಿಳೆಯೂ ಸಾವು

ತರಣ್ ತಾರಣ್: ಪತ್ನಿಯನ್ನು ಮರಳಿ ಮನೆಗೆ ಕರೆತರಲು ಅತ್ತೆ ಮನೆಗೆ ತೆರಳಿದ್ದ ವ್ಯಕ್ತಿಗೆ ಬಾವನೇ ಬೆಂಕಿ ಹಚ್ಚಿದ್ದರಿಂದ ಆತ ಮೃತಪಟ್ಟಿದ್ದಾರೆ ಹಾಗೂ ಆತನನ್ನು ರಕ್ಷಿಸಲು ಧಾವಿಸಿದ ಮಹಿಳೆಯೂ ತೀವ್ರ ಸುಟ್ಟ ಗಾಯಗಳಿಂದ ಚಿಕಿತ್ಸೆ ವೇಳೆ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ಪಂಜಾಬಿನ ತರಣ್ ತಾರಣ್ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಲವ್‌ಪ್ರೀತ್ ಸಿಂಗ್ ಮತ್ತು ಗುರ್ಜಿತ್ ಕೌರ್ ಎಂದು … Continued

ವಿಡಿಯೋ | ಚಿನ್ನ, ಹಣ ದೋಚಿ ಮಹಿಳೆಯನ್ನು ಬಾವಿಗೆ ತಳ್ಳಿದ ದುಷ್ಕರ್ಮಿ; 21 ಗಂಟೆಗಳ ಕಾಲ ಸಾವಿನೊಂದಿಗೆ ಹೋರಾಡಿ ಬದುಕುಳಿದ ಮಹಿಳೆ

ಕರೀಂನಗರ (ತೆಲಂಗಾಣ) :  ಕೃಷಿ ಬಾವಿಯೊಳಗೆ ಬಿದ್ದಿದ್ದ 55 ವರ್ಷದ ಮಹಿಳೆಯೊಬ್ಬರು ಜೀವ ಉಳಿಸಿಕೊಳ್ಳಲು ಸುಮಾರು 20–21 ಗಂಟೆಗಳ ಕಾಲ ಹರಸಾಹಸ ನಡೆಸಿ ಬದುಕುಳಿದಿರುವ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯ ನುಸ್ತುಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯನ್ನು ದರೋಡೆ ಮಾಡಿ ಆಕೆ ತನ್ನನ್ನು ಗುರುತಿಸಬಹುದು ಎಂಬ ಭಯದಿಂದ ಆಕೆಯನ್ನು ಬಾವಿಗೆ ತಳ್ಳಿದ ಆರೋಪದ ಮೇಲೆ 21 … Continued

ವಿಡಿಯೋ | ಪುಟ್ಟ ಮಕ್ಕಳು ಮಲಗಿದ್ದಾಗಲೇ ಹಾಸಿಗೆಯೊಳಗೆ ಸೇರಿಕೊಂಡಿದ್ದ ಬೃಹತ್‌ ಬೃಹತ್‌ ನಾಗರಹಾವು….!

ಬೆಂಗಳೂರು : ರಾತ್ರಿ ವೇಳೆ ಮನೆಯಲ್ಲಿ ಮಕ್ಕಳು ಮಲಗಿದ್ದಾಗ ಯಾರಿಗೂ ಗೊತ್ತಾಗದಂತೆ ಅವರ ಹಾಸಿಗೆಯೊಳಗೆ ಸೇರಿಕೊಂಡಿದ್ದ 5 ಅಡಿ ಉದ್ದದ ಅಪಾಯಕಾರಿ ನಾಗರಹಾವನ್ನು ಉರಗ ತಜ್ಞರು ಸುರಕ್ಷಿತವಾಗಿ ಹಿಡಿದಿದ್ದು, ಈ ಘಟನೆ ಯಲಹಂಕ ತಾಲೂಕಿನ ಹೆಸರಘಟ್ಟದ ತೋಟಗೆರೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಯಲಹಂಕ ತಾಲೂಕಿನ ಹೆಸರಘಟ್ಟದ ತೋಟಗೆರೆ ಗ್ರಾಮದಲ್ಲಿ ಜುಲೈ 2 ರಾತ್ರಿ 10:50ರ … Continued

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ; ನೂತನ ಮೇಯರ್‌ ಆಗಿ ದುರ್ಗಮ್ಮ ಬಿಜವಾಡ, ಉಪಮೇಯರ್ ಆಗಿ ರತ್ನಾಭಾಯಿ ಆಯ್ಕೆ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್‌ ಆಗಿ ಬಿಜೆಪಿಯ ದುರ್ಗಮ್ಮ ಬಿಜವಾಡ ಹಾಗೂ ಉಪಮೇಯರ್ ಆಗಿ  ರತ್ನಾಬಾಯಿ ನಾಝರೆ ಆಯ್ಕೆಯಾಗಿದ್ದಾರೆ. ಶನಿವಾರ ಪಾಲಿಕೆಯ ಸಭಾಭವನದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಕೈ ಎತ್ತುವ ಮೂಲಕ ಮತದಾನ ನಡೆದು ಇಬ್ಬರೂ ಆಯ್ಕೆಯಾದರು.  ಬಿಜೆಪಿ ಅಭ್ಯರ್ಥಿಗಳ ಪರವಾಗಿ ಸಂಸದರಾದ ಪ್ರಲ್ಹಾದ ಜೋಶಿ, ಎಂ. ನಾಗರಾಜ್, ಶಾಸಕರಾದ ಅರವಿಂದ್ … Continued

ಮಮತಾಗೆ ಮತ್ತೊಂದು ಭಾರಿ ಆಘಾತ ; ತಿಂಗಳ ಹಿಂದಷ್ಟೇ ರಾಜ್ಯಾಧ್ಯಕ್ಷೆಯಾಗಿ ನೇಮಕವಾಗಿದ್ದ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ !

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನುಭವಿಸಿದ ಹಿನ್ನಡೆಯ ನಂತರ ಪಕ್ಷದ ಸಂಘಟನೆಯನ್ನು ಪುನರ್ರಚಿಸಿದ್ದ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಇದೀಗ ಮತ್ತೊಂದು ಭಾರೀ ಆಘಾತ ಎದುರಾಗಿದೆ. ಜೂನ್ 3ರಂದು ಟಿಎಂಸಿಯ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷೆಯಾಗಿ ನೇಮಕಗೊಂಡಿದ್ದ ಚಂದ್ರಿಮಾ ಭಟ್ಟಾಚಾರ್ಯ, ಕೇವಲ ಒಂದು ತಿಂಗಳಲ್ಲೇ ಪಕ್ಷದ ಎಲ್ಲ ಹುದ್ದೆಗಳಿಗೆ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಜೋರು ; 4 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಜುಲೈ 5 ರಿಂದ 8ರ ವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಾರಿ ಮಳೆಯಾಗಲಿದೆ ಎಂದು ತಿಳಿಸಿದ್ದು,  ಕೆಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯದ ಒಂದೆರಡು ಸ್ಥಳಗಳಲ್ಲಿ … Continued

ವಿಡಿಯೋ | ಕಾಲ್ನಡಿಗೆಯಲ್ಲೇ ತಿರುಪತಿಯ ತಿರುಮಲ ಬೆಟ್ಟದ 3550 ಮೆಟ್ಟಿಲು ಏರಿದ ಕರ್ನಾಟಕದ 116 ವರ್ಷದ ವೃದ್ಧೆ !

ತಿರುಪತಿಯ ತಿರುಮಲ ಶ್ರೀ ವೆಂಕಟೇಶ್ವರ ದೇವರ ಮೇಲಿನ ಅಚಲ ಭಕ್ತಿಯಿಂದ ಕರ್ನಾಟಕದ 116 ವರ್ಷದ ವೃದ್ಧೆಯೊಬ್ಬರು ಕಾಲ್ನಡಿಗೆಯಲ್ಲೇ ತಿರುಮಲ ಬೆಟ್ಟ ಏರಿರುವ ವಿದ್ಯಮಾನ ಈಗ ವ್ಯಾಪಕ ಗಮನ ಸೆಳೆದಿದೆ. ಯಾವುದೇ ಆಯಾಸವಿಲ್ಲದೆ, ಯಾರ ಸಹಾಯವನ್ನೂ ಪಡೆಯದೆ, ಕೈಯಲ್ಲಿ ಕೇವಲ ಒಂದು ಕೋಲನ್ನು ಆಧಾರವಾಗಿಸಿಕೊಂಡು, ಸುಮಾರು 3,550 ಮೆಟ್ಟಿಲುಗಳನ್ನು ಏರಿ ತಿರುಮಲ ತಲುಪಿರುವುದು ಆಶ್ಚರ್ಯಚಕಿತರನ್ನಾಗಿಸಿದೆ. ಈ ವೃದ್ಧೆಯ … Continued

ಜುಲೈ 20ರಿಂದ ಸಂಸತ್ತಿನ ಮಳೆಗಾಲ ಅಧಿವೇಶನ; ಮಹತ್ವದ ಮಸೂದೆಗಳನ್ನು ಮಂಡಿಸಲಿದೆಯೇ ಸರ್ಕಾರ ?

ನವದೆಹಲಿ: ಸಂಸತ್ತಿನ ಮಳೆಗಾಲ (ಮಾನ್ಸೂನ್) ಅಧಿವೇಶನವು 2026ರ ಜುಲೈ 20ರಿಂದ ಆರಂಭವಾಗಿ ಆಗಸ್ಟ್ 13ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಶನಿವಾರ ಪ್ರಕಟಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ರಿಜಿಜು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರ ಸರ್ಕಾರದ ಶಿಫಾರಸಿನ ಮೇರೆಗೆ … Continued

ತೃಣಮೂಲ Vs ತೃಣಮೂಲ ಕದನ ತೀವ್ರ : ಪಕ್ಷದ ಪ್ರಧಾನ ಕಚೇರಿಯನ್ನೇ ತಮ್ಮ ವಶಕ್ಕೆ ತೆಗೆದುಕೊಂಡ ಬಂಡಾಯ ಬಣ

ಕೊಲ್ಕತ್ತಾ: ರಿತಬ್ರತ ಬ್ಯಾನರ್ಜಿ ನೇತೃತ್ವದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಬಂಡಾಯ ಬಣವು ಕೊಲ್ಕತ್ತಾದ ಮೆಟ್ರೋಪಾಲಿಟನ್ ಪ್ರದೇಶದಲ್ಲಿರುವ ಪಕ್ಷದ ಮುಖ್ಯ ಕಚೇರಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಫಿರ್ಹಾದ್ ಹಕೀಮ್, ಸಂದೀಪನ್ ಸಹಾ, ಜಾವೇದ್ ಖಾನ್ ಹಾಗೂ ಪಕ್ಷದ ಖಜಾಂಚಿ ಅಕ್ರುಜ್ಜಮಾನ ಸೇರಿದಂತೆ ಹಲವು ಶಾಸಕರೊಂದಿಗೆ ಕಚೇರಿಗೆ ಆಗಮಿಸಿದ ಬಂಡಾಯ ಬಣದ ನಾಯಕರು, ಕಚೇರಿಯ … Continued

ಇ-ರಿಕ್ಷಾ ಬ್ಯಾಟರಿ ಸ್ಥಗಿತಗೊಳಿಸಬಲ್ಲ ಆ್ಯಪ್‌ಗಳ ತೆರವಿಗೆ ಗೂಗಲ್‌, ಆಪಲ್‌ಗೆ ಕೇಂದ್ರ ಸರ್ಕಾರದ ಸೂಚನೆ

ನವದೆಹಲಿ: ಪ್ರಯಾಣಿಕರ ಸುರಕ್ಷತೆ, ದುರುಪಯೋಗ ಹಾಗೂ ವಿದ್ಯುತ್ ವಾಹನಗಳ (ಇವಿ) ಬ್ಯಾಟರಿ ನಿರ್ವಹಣಾ ವ್ಯವಸ್ಥೆಗಳಿಗೆ (Battery Management System–BMS) ಅನಧಿಕೃತ ಪ್ರವೇಶದ ಬಗ್ಗೆ ವ್ಯಕ್ತವಾಗಿರುವ ಗಂಭೀರ ಆತಂಕದ ಹಿನ್ನೆಲೆಯಲ್ಲಿ, ಇ-ರಿಕ್ಷಾ ಹಾಗೂ ಇತರ ವಿದ್ಯುತ್ ವಾಹನಗಳ ಬ್ಯಾಟರಿಗಳನ್ನು ದೂರದಿಂದಲೇ (ರಿಮೋಟ್ ಮೂಲಕ) ಸ್ಥಗಿತಗೊಳಿಸುವ ಸಾಮರ್ಥ್ಯ ಹೊಂದಿರುವುದಾಗಿ ಆರೋಪಿಸಲಾದ ಏಳು ಮೊಬೈಲ್ ಅಪ್ಲಿಕೇಶನ್‌ಗಳನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರ … Continued