ಇ-ರಿಕ್ಷಾ ಬ್ಯಾಟರಿ ಸ್ಥಗಿತಗೊಳಿಸಬಲ್ಲ ಆ್ಯಪ್‌ಗಳ ತೆರವಿಗೆ ಗೂಗಲ್‌, ಆಪಲ್‌ಗೆ ಕೇಂದ್ರ ಸರ್ಕಾರದ ಸೂಚನೆ

ನವದೆಹಲಿ: ಪ್ರಯಾಣಿಕರ ಸುರಕ್ಷತೆ, ದುರುಪಯೋಗ ಹಾಗೂ ವಿದ್ಯುತ್ ವಾಹನಗಳ (ಇವಿ) ಬ್ಯಾಟರಿ ನಿರ್ವಹಣಾ ವ್ಯವಸ್ಥೆಗಳಿಗೆ (Battery Management System–BMS) ಅನಧಿಕೃತ ಪ್ರವೇಶದ ಬಗ್ಗೆ ವ್ಯಕ್ತವಾಗಿರುವ ಗಂಭೀರ ಆತಂಕದ ಹಿನ್ನೆಲೆಯಲ್ಲಿ, ಇ-ರಿಕ್ಷಾ ಹಾಗೂ ಇತರ ವಿದ್ಯುತ್ ವಾಹನಗಳ ಬ್ಯಾಟರಿಗಳನ್ನು ದೂರದಿಂದಲೇ (ರಿಮೋಟ್ ಮೂಲಕ) ಸ್ಥಗಿತಗೊಳಿಸುವ ಸಾಮರ್ಥ್ಯ ಹೊಂದಿರುವುದಾಗಿ ಆರೋಪಿಸಲಾದ ಏಳು ಮೊಬೈಲ್ ಅಪ್ಲಿಕೇಶನ್‌ಗಳನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರ … Continued

ವಿಡಿಯೋ | ಅದೇ ಮಾತ್ರೆ ; ಅಮೆರಿಕದಲ್ಲಿ ₹85 ಸಾವಿರ…ಭಾರತದಲ್ಲಿ ₹35 ! ‘ನಮ್ಮನ್ನು ದರೋಡೆ ಮಾಡಲಾಗ್ತಿದೆ ಎಂದ ಅಮೆರಿಕ ಮಹಿಳೆ

ನವದೆಹಲಿ: ಭಾರತ ಮತ್ತು ಅಮೆರಿಕದ ಆರೋಗ್ಯ ಸೇವೆಗಳ ವೆಚ್ಚದ ನಡುವಿನ ಭಾರೀ ವ್ಯತ್ಯಾಸವನ್ನು ತೋರಿಸಿದ ಅಮೆರಿಕದ ಮಹಿಳೆಯೊಬ್ಬರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಗಮನ ಸೆಳೆದಿದೆ. ಇನ್‌ಸ್ಟಾಗ್ರಾಂನಲ್ಲಿ “Indian vs American Healthcare” ಎಂಬ ಶೀರ್ಷಿಕೆಯಲ್ಲಿ ವಿಡಿಯೊ ಹಂಚಿಕೊಂಡಿರುವ ಲಿಜ್ (Liz) ಎಂಬ ಮಹಿಳೆ, ಅಮೆರಿಕದಲ್ಲಿ ಆರೋಗ್ಯ ಸೇವೆಗಳ ಹೆಸರಿನಲ್ಲಿ ಜನರನ್ನು “ದರೋಡೆ” ಮಾಡಲಾಗುತ್ತಿದೆ ಎಂದು … Continued

ಪಂಜಾಬ್ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು : ಸಮಸ್ಯೆ ಬಗೆಹರಿಸಲು ಹೈಕಮಾಂಡ್‌ಗೆ ಚನ್ನಿ ಬಣದ ಗಡುವು; ಅಮಿತ್ ಶಾ ಭೇಟಿಯಾದ ರಾಂಧವಾ

ಚಂಡೀಗಢ: 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷಕ್ಕಿಂತ ಕಡಿಮೆ ಅವಧಿ ಉಳಿದಿರುವ ಸಂದರ್ಭದಲ್ಲಿ ಪಂಜಾಬ್ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಬಹಿರಂಗವಾಗಿದೆ. ಮಾಜಿ ಮುಖ್ಯಮಂತ್ರಿ ಚರಣಜೀತ ಸಿಂಗ್ ಚನ್ನಿ ಅವರ ಬೆಂಬಲಿಗರ ಬಣವು ತಾವು ಮುಂದಿಟ್ಟಿರುವ ಬೇಡಿಕೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಕಾಂಗ್ರೆಸ್ ಹೈಕಮಾಂಡ್‌ಗೆ ಒಂದು ವಾರದ ಗಡುವು ನೀಡಿದೆ. ರಾಜ್ಯದ … Continued

ಎಸ್‌ಐಆರ್ : ಚುನಾವಣಾ ಆಯೋಗದ ಬಗ್ಗೆ ಕಳವಳ ವ್ಯಕ್ತಪಡಿಸಿ ಸಿಜೆಐಗೆ ಪತ್ರ ಬರೆದ 23 ರಾಜಕೀಯ ಪಕ್ಷಗಳು

ನವದೆಹಲಿ: ದೇಶದ ಚುನಾವಣಾ ಪ್ರಕ್ರಿಯೆಯಲ್ಲಿ ವ್ಯಾಪಕ ಹಸ್ತಕ್ಷೇಪ ನಡೆಯುತ್ತಿದ್ದು, ಅನೇಕ ಸಂದರ್ಭಗಳಲ್ಲಿ ಚುನಾವಣಾ ಫಲಿತಾಂಶಗಳು ಜನರ ನೈಜ ಜನಾದೇಶವನ್ನು ಪ್ರತಿಬಿಂಬಿಸುತ್ತಿಲ್ಲ ಎಂದು ಆರೋಪಿಸಿ ವಿಪಕ್ಷಗಳ ಒಕ್ಕೂಟವು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ಅವರಿಗೆ ಪತ್ರ ಬರೆದಿವೆ. ಈ ಜಂಟಿ ಪತ್ರಕ್ಕೆ 23 ರಾಜಕೀಯ ಪಕ್ಷಗಳು ಮತ್ತು ಒಬ್ಬ ಸ್ವತಂತ್ರ ಸಂಸದರು ಸಹಿ ಹಾಕಿದ್ದಾರೆ ಎಂದು … Continued

ಉಗ್ರರಿಗೆ ಬೆಂಬಲ ನೀಡೋದು ನಿಲ್ಲುವವರೆಗೂ ಸಿಂಧು ಜಲ ಒಪ್ಪಂದ ಅಮಾನತಿನಲ್ಲೇ ಇರಲಿದೆ : ಪಾಕ್‌ಗೆ ಭಾರತದ ಖಡಕ್ ಸಂದೇಶ

ನವದೆಹಲಿ: ಪಾಕಿಸ್ತಾನದ ತೀವ್ರ ಆಕ್ಷೇಪಗಳ ನಡುವೆಯೂ ಸಿಂಧು ಜಲ ಒಪ್ಪಂದ (Indus Waters Treaty – IWT) ಕುರಿತಂತೆ ಭಾರತದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಭಾರತ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಗಡಿ ದಾಟಿ ಉಗ್ರ ಚಟುವಟಿಕೆಗಳಿಗೆ ಪಾಕಿಸ್ತಾನ ನೀಡುತ್ತಿರುವ ನಿರಂತರ ಬೆಂಬಲವೇ ಈ ನಿರ್ಧಾರಕ್ಕೆ ಕಾರಣವಾಗಿದ್ದು, ಆ ಬೆಂಬಲವನ್ನು ವಿಶ್ವಾಸಾರ್ಹವಾಗಿ ಮತ್ತು ಶಾಶ್ವತವಾಗಿ … Continued

ರಾಮ ಮಂದಿರ ಕಾಣಿಕೆ ಕಳವು ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಆರ್‌ಎಸ್‌ಎಸ್ ಒತ್ತಾಯ, ಎಸ್‌ಐಟಿ ತನಿಖೆಗೆ ಬೆಂಬಲ

ಅಯೋಧ್ಯೆ: ಅಯೋಧ್ಯೆಯ ಶ್ರೀ ರಾಮಲಲ್ಲಾ ಮಂದಿರದ ಕಾಣಿಕೆ ಹುಂಡಿಗಳಿಂದ ಹಣ ಕಳವು ನಡೆದಿರುವ ಆರೋಪದ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರು ಯಾರೆಂದು ತನಿಖೆಯಲ್ಲಿ ಸಾಬೀತಾದರೆ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಗ್ರಹಿಸಿದೆ. ಇದೇ ವೇಳೆ, ಈ ವಿವಾದವನ್ನು “ಹಿಂದೂ ವಿರೋಧಿ ಹಾಗೂ ರಾಷ್ಟ್ರವಿರೋಧಿ ಶಕ್ತಿಗಳು” ದುರುಪಯೋಗಪಡಿಸಿಕೊಳ್ಳಲು ಯತ್ನಿಸುತ್ತಿವೆ … Continued

ವಿಡಿಯೋ…| ಟೋಲ್ ಪ್ಲಾಜಾಕ್ಕೆ ಡಿಕ್ಕಿ ಹೊಡೆದು ಎಲ್‌ಪಿಜಿ ಟ್ಯಾಂಕರ್ ಸ್ಫೋಟ : ಐವರು ಸಾವು ; 2 ಕಿಮೀ ವರೆಗೆ ಗೋಚರಿಸಿದ ಬೆಂಕಿಯ ಜ್ವಾಲೆ

ನವದೆಹಲಿ: ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದಬ ಎಲ್‌ಪಿಜಿ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಐವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಜೂನ್ 26ರಂದು ಬೆಳಿಗ್ಗೆ ಸುಮಾರು 6:40ರ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು,  ಘಟನೆಯ ಸಿಸಿಟಿವಿ ದೃಶ್ಯ ಈಗ ಹೊರಹೊಮ್ಮಿದೆ. ಕಾನ್ಪುರದಿಂದ ವಾರಣಾಸಿಗೆ ಹೋಗುತ್ತಿದ್ದ … Continued

ಭಾರತಕ್ಕೆ ಕಚ್ಚಾ ತೈಲ ನೀಡಿ ಮತ್ತೆ ಭಾರತದಿಂದಲೇ ಪೆಟ್ರೋಲ್‌ ಖರೀದಿಸುತ್ತಿರುವ ರಷ್ಯಾ…! ಇದಕ್ಕೆ ಕಾರಣ…?

ನವದೆಹಲಿ : ಉಕ್ರೇನ್ ನಡೆಸುತ್ತಿರುವ ಡ್ರೋನ್ ದಾಳಿಗಳಿಂದ ತನ್ನ ಇಂಧನ ಉತ್ಪಾದನಾ ಘಟಕಕ್ಕೆ ಉಂಟಾದ ಹಾನಿಯ   ಪರಿಣಾಮವಾಗಿ ಎದುರಾಗಿರುವ ಪೆಟ್ರೋಲ್ ಕೊರತೆಯನ್ನು ನಿವಾರಿಸಲು ರಷ್ಯಾವು ಸಮುದ್ರ ಮಾರ್ಗದ ಮೂಲಕ ಭಾರತದಿಂದ ಪೆಟ್ರೋಲ್ (ಗ್ಯಾಸೋಲಿನ್) ಆಮದು ಮಾಡಿಕೊಳ್ಳಲು ಆರಂಭಿಸಿದೆ ಎಂದು ಕೈಗಾರಿಕಾ ವಲಯದ ಮೂಲಗಳನ್ನು ಉಲ್ಲೇಖಿಸಿಹಲವಾರು ವರದಿಗಳು ತಿಳಿಸಿವೆ. ರಷ್ಯಾದ ಹಲವು ಪ್ರದೇಶಗಳಲ್ಲಿ ಇತ್ತೀಚೆಗೆ ಪೆಟ್ರೋಲ್ ಕೊರತೆ … Continued

ಮುಂಗಾರು ಕೊರತೆ : ಡ್ಯಾಂನಲ್ಲಿ ನೀರಿಲ್ಲ ; ಇದರ ನೀರು ನಂಬಿಕೊಂಡು ಬೆಳೆ ಬೆಳೆಯಬೇಡಿ; ಸಿಎಂ ಶಿವಕುಮಾರ

ಬೆಂಗಳೂರು: ಈ ವರ್ಷ ದೇಶದಲ್ಲಿ ತೀವ್ರ ಮಳೆ ಕೊರತೆ ಎದುರಾಗುವ ಮುನ್ಸೂಚನೆ ಇದೆ. ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರನ್ನೇ ನಂಬಿಕೊಂಡು ಬೆಳೆ ಬೆಳೆಯುವುದುಬೇಡ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಗುರುವಾರ ರೈತರಿಗೆ ಸಲಹೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Continued

ಹೊನ್ನಾವರ : ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದ ರಾಮತೀರ್ಥ ತಿರುವಿನ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ತಾಲೂಕಿನಾದ್ಯಂತ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಹೆದ್ದಾರಿ ಪಕ್ಕದಲ್ಲಿದ್ದ ಗುಡ್ಡದ ಮಣ್ಣು ಸಡಿಲಗೊಂಡು ಗುರುವಾರ ರಸ್ತೆಯ ಮೇಲೆ ಕುಸಿದು ಬಿದ್ದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಆ ಸಂದರ್ಭದಲ್ಲಿ ಯಾವುದೇ ವಾಹನ ಸಂಚಾರ … Continued