ವೀಡಿಯೊ..| 1000 ಕಿಮೀ ದೂರದಿಂದ ನಿಖರ ಡ್ರೋನ್‌ ದಾಳಿ ; ಕಾರಿನಲ್ಲಿ ಹೋಗುತ್ತಿದ್ದಾಗ ಇರಾನ್‌ ಸೇನಾ ನಾಯಕನ ಹತ್ಯೆ ಮಾಡಿದ ಇಸ್ರೇಲ್‌…!

ಪಶ್ಚಿಮ ಇರಾನ್‌ನಲ್ಲಿ ನಡೆದ ವಾಯುದಾಳಿಯಲ್ಲಿ, ಐಆರ್‌ಜಿಸಿ ಕುಡ್ಸ್ ಪಡೆಯ ಹಿರಿಯ ಅಧಿಕಾರಿ ಬೆಹ್ನಮ್ ಶಹ್ರಿಯಾರಿ ಕೊಲ್ಲಲ್ಪಟ್ಟರು ಎಂದು ಇಸ್ರೇಲ್‌ ಸೇನೆ ಶನಿವಾರ ತಿಳಿಸಿದೆ, ಇಸ್ರೇಲ್‌ನಿಂದ 1,000 ಕಿಲೋಮೀಟರ್‌ಗಿಂತಲೂ ಹೆಚ್ಚು ದೂರದ ಪ್ರದೇಶದಲ್ಲಿ ಕಾರಿನಲ್ಲಿ ಹೋಗುತ್ತಿರುವಾಗ ಇಸ್ರೇಲ್‌ ನಡೆಸಿದ ನಿಖರ ದಾಳಿಯಲ್ಲಿ ಸಾವಿಗೀಡಾಗಿದ್ದಾರೆ ಎಂದು ಹೇಳಿದೆ. ಬೆಹ್ನಮ್ ಶಹರಿಯಾರಿ ಪಶ್ಚಿಮ ಇರಾನ್‌ನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲೇ … Continued

ಬೆಂಗಳೂರು | ಮಚ್ಚಿನಿಂದ ಆಕಳಿನ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳು ; ಹಸು ಸಾವು

ಬೆಂಗಳೂರು: ಕಿಡಿಗೇಡಿಗಳು ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಸೂಲಿವಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಸ್ತ್ರಚಿಕಿತ್ಸೆ ನಡೆಸಿದರೂ ಫಲಕಾರಿಯಾಗದೆ ಹಸು ಮೃತಪಟ್ಟಿದೆ ಎಂದು ಹೇಳಲಾಗಿದೆ. ಸೂಲಿವಾರದ ಡೇರಿ ಅಧ್ಯಕ್ಷರಾದ ಮರಿಬಸವಯ್ಯ ಎಂಬವರಿಗೆ ಸೇರಿದ ಹಸುವಿನ ಕೆಚ್ಚಲು ಕೊಯ್ದಿದ್ದು, ಹಳೆಯ ವೈಷಮ್ಯಕ್ಕೆ ಹಸುವಿನ ಕೆಚ್ಚಲ ಕೊಯ್ದಿದ್ದಾರೆ ಎಂದು ಮಾಲೀಕರು ಆರೋಪಿಸಿದ್ದಾರೆ. ಸುಮಾರು … Continued

ಕನಸಿನಲ್ಲಿ ಕಾಣಿಸಿಕೊಂಡ ಆಂಜನೇಯ : ಕ್ರೈಸ್ತ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಇಡೀ ಕುಟುಂಬ

ಯಾದಗಿರಿ: ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಮರಳಿ ಬಂದಿರುವ ವಿದ್ಯಮಾನ ಯಾದಗಿರಿಯಲ್ಲಿ ನಡೆದಿದೆ. ಇಲ್ಲಿನ ಗಿರಿನಗರ ಕಾಲೊನಿಯಲ್ಲಿರುವ ಬುಡ್ಗ ಜಂಗಮ ಸಮಾಜದ ವೆಂಕಟೇಶ ಎಂಬುವರು ಕುಟುಂಬ ಸಮೇತ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಈಗ ಮತ್ತೆ ಹಿಂದೂ ಧರ್ಮಕ್ಕೆ ವಾಪಸ್‌ ಆಗಿದ್ದಾರೆ. ಇದಕ್ಕೆ ಕಾರಣ ಆಂಜನೇಯನಂತೆ. ಕನಸಿನಲ್ಲಿ ಆಂಜನೇಯ ಪದೇಪದೇ ಕಾಣಿಸಿಕೊಂಡಿದ್ದರಿಂದ ಹಿಂದೂ … Continued

ವೀಡಿಯೊ…| ಯೋಗ ದಿನಾಚರಣೆ : 51 ಪುಶ್‌-ಅಪ್‌ ಮಾಡಿ ಜನಸಮೂಹ ಬೆರಗುಗೊಳಿಸಿದ 73 ವರ್ಷದ ತಮಿಳುನಾಡು ರಾಜ್ಯಪಾಲರು…!

ಮಧುರೈ : ದೇಶಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗಿದೆ. ತಮಿಳುನಾಡಿನ ಮಧುರೈನಲ್ಲಿ ನಡೆದ ಕಾರ್ಯಕ್ರಮದಲ್ಲಿ 73 ವರ್ಷದ ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದ 10,000ಕ್ಕೂ ಹೆಚ್ಚು ಯೋಗಾಸಕ್ತರಿಗೆ ಅಚ್ಚರಿ ಮೂಡಿಸಿದರು. ಒಂದು ಭೂಮಿಗಾಗಿ ಯೋಗ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಥೀಮ್‌ನೊಂದಿಗೆ 11ನೇ ಅಂತಾರಾಷ್ಟ್ರೀಯ ಯೋಗ ದಿನದ ಜಾಗತಿಕ ಆಚರಣೆಯ … Continued

ಅಮೆರಿಕ ಅಧ್ಯಕ್ಷ ಟ್ರಂಪ್ ಹೆಸರನ್ನು ನೊಬೆಲ್ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ ಪಾಕಿಸ್ತಾನ…!

2025 ರ ಭಾರತ-ಪಾಕಿಸ್ತಾನ ಸಂಘರ್ಷದ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ನಿರ್ಣಾಯಕ ರಾಜತಾಂತ್ರಿಕ ತೊಡಗಿಕೊಳ್ಳುವಿಕೆ ಮತ್ತು ನಾಯಕತ್ವ”ವನ್ನು ಗುರುತಿಸಿ ಪಾಕಿಸ್ತಾನ ಸರ್ಕಾರ ಅಧಿಕೃತವಾಗಿ ಅವರನ್ನು 2026 ರ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ. ಎರಡು ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳ ನಡುವಿನ ಸಂಭಾವ್ಯ ವಿನಾಶಕಾರಿ ಸಂಘರ್ಷವನ್ನು ತಪ್ಪಿಸುವಲ್ಲಿ ಟ್ರಂಪ್ ಅವರ ಮಧ್ಯಸ್ಥಿಕೆಗೆ ಪಾಕಿಸ್ತಾನ … Continued

ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣ : ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆಗೆ ಹೈಕೋರ್ಟ್‌ ಸಮ್ಮತಿ

ಬೆಂಗಳೂರು : ಮನೆಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣಾಧೀನ ನ್ಯಾಯಾಲಯವು ಪ್ರಜ್ವಲ್‌ ರೇವಣ್ಣ ವಿರುದ್ಧ ವಿಚಾರಣೆ ಮುಂದುವರಿಸಬಹುದು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಹೇಳಿದೆ. ಮನೆಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಸಂಬಂಧ ದಾಖಲಾಗಿರುವ ಎಫ್‌ಐಆರ್‌, ಆನಂತರ ಸಲ್ಲಿಕೆಯಾಗಿರುವ ಆರೋಪ ಪಟ್ಟಿ ಹಾಗೂ ನ್ಯಾಯಾಂಗ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ಕೋರಿ ಜೆಡಿಎಸ್‌ ಶಾಸಕ … Continued

‘ಟ್ರಂಪ್ ನನ್ನನ್ನು ಭೋಜನಕ್ಕೆ ಆಹ್ವಾನಿಸಿದರು, ಆದರೆ…’: ಒಡಿಶಾದಲ್ಲಿ, ಅಮೆರಿಕಕ್ಕೆ ಭೇಟಿ ನೀಡದಿರುವುದಕ್ಕೆ ಕಾರಣ ನೀಡಿದ ಪ್ರಧಾನಿ ಮೋದಿ

ಭುವನೇಶ್ವರ: “ಜಗನ್ನಾಥ ಮಹಾಪ್ರಭುಗಳ ಭೂಮಿಗೆ ಬರಲು” ಬಯಸಿದ್ದರಿಂದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕಕ್ಕೆ ಭೇಟಿ ನೀಡುವ ಆಹ್ವಾನವನ್ನು ತಿರಸ್ಕರಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ಒಡಿಶಾದಲ್ಲಿ ಬಿಜೆಪಿ ಸರ್ಕಾರದ ಒಂದು ವರ್ಷದ ಸ್ಮರಣಾರ್ಥ ಭುವನೇಶ್ವರದಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, “ಕೇವಲ ಎರಡು ದಿನಗಳ ಹಿಂದೆ, ನಾನು ಜಿ … Continued

ಇಂದು ಯೋಗ ದಿನಾಚರಣೆ ; ಇದು ಆರೋಗ್ಯ -ಯೋಗಕ್ಷೇಮದ ಒಂದು ಸಮಗ್ರ ವಿಧಾನ

(೨೧.೦೬.೨೦೨೫ ರಂದು ೧೧ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಲೇಖನ) ಪ್ರತಿವರ್ಷ ಜೂನ್ ೨೧ ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ೨೦೦ಕ್ಕೂ ಹೆಚ್ಚಿನ ರಾಷ್ಟ್ರಗಳು ಆಚರಿಸುತ್ತಿವೆ. ಯೋಗದ ಕುರಿತಾದ ಮಾಹಿತಿ ಹಾಗೂ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕ ಕಾಯಿಲೆಗಳಿಗೆ ಯೋಗದ ಮೂಲಕ … Continued

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಜೂನ್‌ 21ರಿಂದ 4 ದಿನ ಜೋರಾದ ಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಜೂನ್‌ 21ರಂದು ಬಲವಾದ ಗಾಳಿಯೊಂದಿಗೆ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. … Continued

ರಾಷ್ಟ್ರಪತಿ ಮುರ್ಮು ಜನ್ಮದಿನ | ಅವರ ಮುಂದೆಯೇ ಹಾಡು ಹಾಡಿದ ದೃಷ್ಟಿ ವಿಕಲಚೇತನ ವಿದ್ಯಾರ್ಥಿಗಳು ; ರಾಷ್ಟ್ರಪತಿಗಳ ಕಣ್ಣಲ್ಲಿ ನೀರು-ವೀಕ್ಷಿಸಿ

ಡೆಹ್ರಾಡೂನ್: ಪ್ರಸ್ತುತ ಉತ್ತರಾಖಂಡಕ್ಕೆ ಮೂರು ದಿನಗಳ ಭೇಟಿಯಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ 67 ನೇ ಜನ್ಮದಿನಾಚರಣೆಗೆ ಡೆಹ್ರಾಡೂನ್‌ನಲ್ಲಿರುವ ರಾಷ್ಟ್ರೀಯ ದೃಷ್ಟಿ ವಿಕಲಚೇತನರ ಸಬಲೀಕರಣ ಸಂಸ್ಥೆಯ (NIEPVD) ವಿದ್ಯಾರ್ಥಿಗಳು ವಿಶೇಷ ಜನ್ಮದಿನದ ಹಾಡನ್ನು ಪ್ರದರ್ಶಿಸಿದಾಗ ಅವರು ಭಾವುಕರಾದರು. ವಿದ್ಯಾರ್ಥಿಗಳ ಹೃದಯಸ್ಪರ್ಶಿ ಪ್ರದರ್ಶನ ನೋಡುತ್ತ ತಮ್ಮ ಭಾವನೆಗಳನ್ನು ತಡೆದುಕೊಳ್ಳಲು ಕಷ್ಟಪಡುತ್ತಿದ್ದ ರಾಷ್ಟ್ರಪತಿಯವರ ಈ ಭಾವನಾತ್ಮಕ ಗೌರವವು ಅವರ … Continued