ಪಾಕಿಸ್ತಾನಕ್ಕೆ ಸಂಕಷ್ಟ..?: ಅಫ್ಘಾನಿಸ್ತಾನದ ತಾಲಿಬಾನ್ ದಾಳಿಯಲ್ಲಿ ಪಾಕಿಸ್ತಾನದ ಪಾತ್ರದ ಮೌಲ್ಯಮಾಪನದ ಮಸೂದೆ ಅಮೆರಿಕದ ಸೆನೆಟ್ಟಿನಲ್ಲಿ ಮಂಡನೆ..!

ಕಾಬೂಲ್ ಪತನದ ಮೊದಲು ಮತ್ತು ನಂತರ ಅಫ್ಘಾನಿಸ್ತಾನದಲ್ಲಿ ಮತ್ತು ಪಂಜಶೀರ್ ಕಣಿವೆಯಲ್ಲಿ ತಾಲಿಬಾನ್ ದಾಳಿಯಲ್ಲಿ ಪಾಕಿಸ್ತಾನದ ಪಾತ್ರವನ್ನು ನಿರ್ಣಯಿಸಲು ಇಪ್ಪತ್ತೆರಡು ಅಮೆರಿಕ ಸೆನೆಟರ್‌ಗಳು ಮಸೂದೆಯೊಂದನ್ನು ಸೆನೆಟ್ ನಲ್ಲಿ ಮಂಡಿಸಿದ್ದಾರೆ. ಸೆನೆಟರ್ ವಿದೇಶಿ ಸಂಬಂಧಗಳ ಸಮಿತಿಯ ಶ್ರೇಯಾಂಕ ಸದಸ್ಯ ಸೆನೆಟರ್ ಜಿಮ್ ರಿಶ್ ಮತ್ತು ಇತರ ರಿಪಬ್ಲಿಕನ್ನರು ಸೋಮವಾರ ಅಫಘಾನಿಸ್ತಾನ ಭಯೋತ್ಪಾದನೆ ನಿಗ್ರಹ, ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆ … Continued

ಇನ್ನೂ ಮುಗಿದಿಲ್ಲ ಅಫ್ಘನ್‌ ಆಟ..:ಇಸ್ಲಾಮಿಕ್ ರಿಪಬ್ಲಿಕ್ ಆಫ್ ಅಫ್ಘಾನಿಸ್ತಾನದಿಂದ ಸಲೇಹ್ ನೇತೃತ್ವದ ಗಡಿಪಾರು ಸರ್ಕಾರ ರಚನೆಯ ಘೋಷಣೆ..!

ನವದೆಹಲಿ: ಇತ್ತೀಚಿನ ಬೆಳವಣಿಗೆಯಲ್ಲಿ, ಇಸ್ಲಾಮಿಕ್ ರಿಪಬ್ಲಿಕ್ ಆಫ್ ಅಫ್ಘಾನಿಸ್ತಾನದ ಮಾಜಿ ಅಧಿಕಾರಿಗಳು, ಅಫ್ಘಾನಿಸ್ತಾನದ ಇಸ್ಲಾಮಿಕ್ ಗಣರಾಜ್ಯದಿಂದ  ಅಮರುಲ್ಲಾ ಸಲೇಹ್ ನೇತೃತ್ವದ ಹೊಸ ಸರ್ಕಾರವನ್ನು ರಚಿಸುವುದಾಗಿ ಘೋಷಿಸಿದ್ದಾರೆ..! ಅಶ್ರಫ್ ಘನಿ ಆಡಳಿತದ ಮೊದಲ ಉಪಾಧ್ಯಕ್ಷ, ಸಲೇಹ್ ಘಾನಿಯ ಅನುಪಸ್ಥಿತಿಯಲ್ಲಿ ಅಫ್ಘಾನಿಸ್ತಾನದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿದ್ದರು. ಅಮ್ರುಲ್ಲಾ ಸಲೇಹ್ ನೇತೃತ್ವದ ಗಡಿಪಾರು ಸರ್ಕಾರವು ಅಫ್ಘಾನಿಸ್ತಾನದ ಏಕೈಕ “ಕಾನೂನುಬದ್ಧ … Continued

ಇಸಿಎಲ್‌ಜಿಎಸ್‌: ಎಂಎಸ್​ಎಂಇ ತುರ್ತು ಸಾಲ ಯೋಜನೆ ಅವಧಿ 2022ರ ಮಾರ್ಚ್ ತನಕ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ಹಣಕಾಸು ಸಚಿವಾಲಯವು ಸೆಪ್ಟೆಂಬರ್ 29ರಂದು ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ (ECLGS) ವ್ಯಾಪ್ತಿಯನ್ನು ಆರು ತಿಂಗಳವರೆಗೆ, ಅಂದರೆ ಮಾರ್ಚ್ 2022ರ ವರೆಗೆ ವಿಸ್ತರಿಸಿದೆ. ಕೊವಿಡ್ 19 ಸಾಂಕ್ರಾಮಿಕದ ಎರಡನೇ ಅಲೆಯಿಂದ ಪ್ರಭಾವಕ್ಕೆ ಒಳಗಾಗಿರುವ ವಿವಿಧ ವ್ಯವಹಾರಗಳನ್ನು ಬೆಂಬಲಿಸುವ ದೃಷ್ಟಿಯಿಂದ, ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಸ್ಕೀಮ್ (ECLGS) ಗಡುವನ್ನು 31.03.2022ರ ವರೆಗೆ ಅಥವಾ … Continued

ಮಧ್ಯಾಹ್ನದ ಬಿಸಿಯೂಟದ ಯೋಜನೆಗೆ ಪ್ರಧಾನ ಮಂತ್ರಿ ಪೋಷಣ್ ಯೋಜನೆ ಎಂದು ಮರುನಾಮಕರಣ: ಹೆಸರು ಬದಲಾವಣೆ ಮಾತ್ರ ವ್ಯತ್ಯಾಸವಲ್ಲ, ಇನ್ನೂ ಇದೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿಯು (ಸಿಸಿಇಎ) ಐದು ವರ್ಷಗಳ ಅವಧಿಗೆ ಶಾಲೆಗಳಲ್ಲಿ ಪ್ರಧಾನ ಮಂತ್ರಿ ಪೋಷಣ್ ರಾಷ್ಟ್ರೀಯ ಯೋಜನೆ ಮುಂದುವರಿಸಲು ನಿರ್ಧರಿಸಿದೆ. ಈ ಮೊದಲು ಮಧ್ಯಾಹ್ನದ ಬಿಸಿಯೂಟದ ಯೋಜನೆ ಎಂದು ಕರೆಯುತ್ತಿದ್ದು ಈ ಯೋಜನೆಗೆ ಈಗ ಪ್ರಧಾನ ಮಂತ್ರಿ ಪೋಷಣ್ ರಾಷ್ಟ್ರೀಯ ಯೋಜನೆ ಎಂಬ ಹೆಸರಿನಲ್ಲಿ … Continued

ಸೀರೆ ಧರಿಸಿದವರಿಗೆ ಪ್ರವೇಶವಿಲ್ಲ ಎಂದಿದ್ದ ದೆಹಲಿ ರೆಸ್ಟೋರೆಂಟಿಗೆ ಬಂದ್‌ ಮಾಡುವಂತೆ ಎಸ್‌ಡಿಎಂಸಿಯಿಂದ ನೊಟೀಸ್‌..!

ನವದೆಹಲಿ: ಸಾಂಪ್ರದಾಯಿಕವಾಗಿ ಸೀರೆ ಧರಿಸಿದ್ದ ಕಾರಣಕ್ಕೆ ಮಹಿಳೆಯೊಬ್ಬರಿಗೆ ಪ್ರವೇಶವನ್ನು ನಿರಾಕರಿಸಿದ್ದ ಆರೋಪದಲ್ಲಿ ಇತ್ತೀಚೆಗೆ ಭಾರೀ ಸುದ್ದಿಯಾಗಿದ್ದ ದೆಹಲಿಯ ಆಗಸ್ಟ್‌ ಕ್ರಾಂತಿ ಮಾರ್ಗದಲ್ಲಿದ್ದ ಅಕ್ವಿಲಾ ದೆಹಲಿ ರೆಸ್ಟೋರೆಂಟ್‌ ಪರವಾನಗಿ ಇಲ್ಲದ ಕಾರಣಕ್ಕೆ ಈಗ ಬಂದ್‌ ಆಗಿದೆ ಎಂದು ವರದಿಯಾಗಿದೆ. “ಸಾಂಪ್ರದಾಯಿಕವಾಗಿ ಸೀರೆ ಧರಿಸಿದ್ದ ಕಾರಣಕ್ಕೆ ತನಗೆ ದೆಹಲಿಯ ಅಕ್ವಿಲಾ ರೆಸ್ಟೋರೆಂಟಿನಲ್ಲಿ ಪ್ರವೇಶಕ್ಕೆ ಅವಕಾಶ ನೀಡಿಲ್ಲ,” ಎಂದು ಮಹಿಳೆಯೊಬ್ಬರು … Continued

ಸಿದ್ದಗಂಗಾ ಮಠ – ಮೀರಾಬಾಯಿ ಕೊಪ್ಪಿಕರಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ” 2020 ಮತ್ತು 2021 ನೇ ಸಾಲಿಗೆ ಎರಡು ವರ್ಷಗಳ ಪ್ರಶಸ್ತಿ ಪ್ರಕಟಿಸಿದೆ. ಕೋವಿಡ್- 19ರ ಹಿನ್ನಲೆಯಲ್ಲಿ ಕಳೆದ ವರ್ಷದ ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿರಲಿಲ್ಲ, ಈ ವರ್ಷ ಕೋವಿಡ್ ಪ್ರಕರಣ ಕಡಿಮೆಯಾಗುತ್ತಾ ಬಂದಿರುವ ಹಿನ್ನೆಲೆಯಲ್ಲಿ, ಸಕಾರವು ಈ … Continued

ಕೃಷಿ ಕಾನೂನುಗಳ ಬಗ್ಗೆ ಚರ್ಚೆ, ತುರ್ತಾಗಿ ಬಿಕ್ಕಟ್ಟು ಪರಿಹರಿಸುವಂತೆ ಒತ್ತಾಯ: ಅಮಿತ್ ಶಾ ಭೇಟಿ ನಂತರ ಅಮರಿಂದರ್ ಸಿಂಗ್ ಹೇಳಿಕೆ

ನವದೆಹಲಿ: ಬಿಜೆಪಿ ಸೇರುವ ಊಹಾಪೋಹಗಳ ನಡುವೆ, ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾದರು. ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ದೀರ್ಘಕಾಲದ ಆಂದೋಲನದ ಬಗ್ಗೆ ಚರ್ಚಿಸಿದರು ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಮಾಧ್ಯಮ ಸಲಹೆಗಾರ ಹೇಳಿದ್ದಾರೆ. “ಕೃಷಿ … Continued

ಕರ್ನಾಟಕದಲ್ಲಿ ಬುಧವಾರ ಕೊರೊನಾ ಹೊಸ ಸೋಂಕು ಇಳಿಕೆ, ಸಾವಿನ ಸಂಖ್ಯೆ ಸ್ಥಿರ

ಬೆಂಗಳೂರು: ರಾಜ್ಯದಲ್ಲಿ ಇಂದು (ಬುಧವಾರ) ಹೊಸದಾಗಿ 539 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು 17 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 591 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸ 12,634ರಷ್ಟು ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 29,75,067 ಕ್ಕೆ ಏರಿಕೆಯಾಗಿದೆ ಹಾಗೂ 29,24,693 … Continued

ಬೆಳಗಾವಿ ಎಸ್‌ಟಿಪಿ ನಿರ್ಮಾಣಕ್ಕೆ 2 ಕೋಟಿ ರೂ.ಗಳ ವೆಚ್ಚ ಮಾಡಿ ಕಾಮಗಾರಿ ಸ್ಥಳಾಂತರ: ಲೋಕಾಯುಕ್ತ ತನಿಖೆಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಅಲರವಾಡದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ (ಎಸ್‌ಟಿಪಿ) ರಾಜ್ಯ ಸರ್ಕಾರದ ಬೊಕ್ಕಸದಿಂದ 2 ಕೋಟಿ ರೂಪಾಯಿ ವೆಚ್ಚ ಮಾಡಿದ ನಂತರ ಘಟಕವನ್ನು ಬೇರೊಂದು ಪ್ರದೇಶಕ್ಕೆ ಸ್ಥಳಾಂತರಿಸಿ ಕಾಮಗಾರಿ ಕೈಗೊಂಡ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಈಚೆಗೆ ಲೋಕಾಯುಕ್ತಕ್ಕೆ ವಹಿಸಿದೆವೆಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ. … Continued

ಗಾಂಧಿಗಳನ್ನು ಟೀಕಿಸಿದ ನಂತರ ಕಪಿಲ್ ಸಿಬಲ್ ಮನೆ ಮುಂದೆ ಯುವ ಕಾಂಗ್ರೆಸ್‌ ಪ್ರತಿಭಟನೆ, ಕಾರಿಗೆ ಹಾನಿ

ನವದೆಹಲಿ: ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಗಾಂಧಿಯವರನ್ನು ಉದ್ದೇಶಿಸಿ ತಮ್ಮದು “ಜಿ -23, ಜಿ ಹುಜೂರ್ -23 ಅಲ್ಲ ಎಂದು ಟೀಕಿಸಿದ ತಕ್ಷಣ, ಕಾಂಗ್ರೆಸ್‌ ಕಾರ್ಯಕರ್ತರು ಅವರ ಮನೆಯ ಹೊರಗೆ “ಬೇಗ ಗುಣಮುಖರಾಗಿ” ಎಂಬ ಘೋಷಣಾ ಫಲಕಗಳೊಂದಿಗೆ ಪ್ರತಿಭಟಿಸಿದರು ಹಾಗೂ ಟೊಮೆಟೊಗಳನ್ನು ಎಸೆದು ಅವರ ಕಾರಿಗೆ ಹಾನಿ ಮಾಡಿದರು. ಯುವ ಕಾಂಗ್ರೆಸ್ ಕಾರ್ಯಕರ್ತರು “ಪಕ್ಷವನ್ನು ತೊರೆಯಿರಿ!” … Continued