ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಜನರ ಎದುರೇ ಮಾರಕಾಸ್ತ್ರದಿಂದ ಯುವತಿಯ ಕಗ್ಗೊಲೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ನೂತನ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದ ಭೀಕರ ಘಟನೆಗೆ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಸಾರ್ವಜನಿಕರ ಮುಂದೆಯೇ ಯುವಕನೋರ್ವ ಯುವತಿ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಗುರುವಾರ (ಜುಲೈ 16) ಸಂಜೆ ನಡೆದಿದೆ. ಮೃತ ಯುವತಿಯನ್ನು ಬಂಟ್ವಾಳ ತಾಲೂಕಿನ ಕಕ್ಕೆಪದವು … Continued

ಬೆಂಗಳೂರು | ತರಗತಿಯಲ್ಲೇ ಕುಸಿದು ಬಿದ್ದು 12 ವರ್ಷದ ವಿದ್ಯಾರ್ಥಿ ಸಾವು : ಶಾಲಾ ಸಿಬ್ಬಂದಿ ನಿರ್ಲಕ್ಷ್ಯ ಕಾರಣ ಎಂದು ಕುಟುಂಬದ ಆರೋಪ

ಬೆಂಗಳೂರು: ನಗರದ ಬನ್ನೇರಘಟ್ಟ ರಸ್ತೆಯ ವೀವರ್ಸ್ ಕಾಲೋನಿಯ ಖಾಸಗಿ ಶಾಲೆಯೊಂದರಲ್ಲಿ 12 ವರ್ಷದ ವಿದ್ಯಾರ್ಥಿಯೊಬ್ಬ ತರಗತಿ ಕೊಠಡಿಯಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಶಾಲಾ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಅಮೂಲ್ಯ ಸಮಯ ವ್ಯರ್ಥವಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯದೆ ವಿಳಂಬ ಮಾಡಿದ ಕಾರಣ ಮಗನ ಜೀವ ಉಳಿಯಲಿಲ್ಲ ಎಂದು ಮೃತ ಬಾಲಕನ ಕುಟುಂಬ ಆರೋಪ ಮಾಡಿದೆ. … Continued

ಟಿಎಂಸಿಗೆ ಮತ್ತೊಂದು ಆಘಾತ : ರಾಜ್ಯಸಭೆ ಸ್ಥಾನಕ್ಕೆ ನಟಿ ಕೋಯೆಲ್ ಮಲ್ಲಿಕ್ ರಾಜೀನಾಮೆ ; ಬಿಜೆಪಿ ಸೇರ್ಪಡೆ ವದಂತಿಗೆ ಬಲ

ನವದೆಹಲಿ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಗುರುವಾರ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಬಂಗಾಳಿ ಚಿತ್ರರಂಗದ ಖ್ಯಾತ ನಟಿ ಹಾಗೂ ರಾಜಕಾರಣಿ ಕೋಯೆಲ್ ಮಲ್ಲಿಕ್ (ರುಕ್ಮಿಣಿ ಮಲ್ಲಿಕ್) ಅವರು ತಮ್ಮ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕೋಯೆಲ್ ಮಲ್ಲಿಕ್ ಅವರು ಈ ವರ್ಷದ ಏಪ್ರಿಲ್ 6ರಂದು ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, … Continued

ಸೋನಂ ವಾಂಗ್ಚುಕ್ ಆರೋಗ್ಯದ ಮೇಲೆ ಪ್ರತಿದಿನ ನಿಗಾ ವಹಿಸಿ ; ಕೇಂದ್ರ–ದೆಹಲಿ ಸರ್ಕಾರಗಳಿಗೆ ದೆಹಲಿ ಹೈಕೋರ್ಟ್‌ ನಿರ್ದೇಶನ

ನವದೆಹಲಿ: ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಆರೋಗ್ಯ ಹಾಗೂ ವೈದ್ಯಕೀಯ ಸ್ಥಿತಿಯನ್ನು ಪ್ರತಿದಿನ ಸರ್ಕಾರಿ ವೈದ್ಯರು ಪರಿಶೀಲಿಸಬೇಕು ಮತ್ತು ಅವರ ಜೀವ ರಕ್ಷಿಸಲು ಅಗತ್ಯವಿರುವ ಎಲ್ಲ ವೈದ್ಯಕೀಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರ ಹಾಗೂ ದೆಹಲಿ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ದೇವೇಂದ್ರಕುಮಾರ ಉಪಾಧ್ಯಾಯ … Continued

ಇಸ್ರೋ ತೊರೆದ 100ಕ್ಕೂ ಹೆಚ್ಚು ವಿಜ್ಞಾನಿಗಳು ; ಭಾರತದ ಬಾಹ್ಯಾಕಾಶ ಯೋಜನೆಗಳಿಗೆ ಸಂಕಷ್ಟ : ಕೇಂದ್ರದಿಂದ ಹೊಸ ಆದೇಶ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯಲ್ಲಿ ಇತ್ತೀಚಿನ ದಿನಗಳಲ್ಲಿ ವಿಜ್ಞಾನಿಗಳು ಮತ್ತು ತಾಂತ್ರಿಕ ಸಿಬ್ಬಂದಿ ದೊಡ್ಡ ಪ್ರಮಾಣದಲ್ಲಿ ರಾಜೀನಾಮೆ ಹಾಗೂ ಸ್ವಯಂ ನಿವೃತ್ತಿ ಪಡೆಯುತ್ತಿರುವ ಹಿನ್ನೆಲೆಯಲ್ಲಿ, ಬಾಹ್ಯಾಕಾಶ ಇಲಾಖೆ (Department of Space – DoS) ಮಹತ್ವದ ನಿರ್ದೇಶನವನ್ನು ಹೊರಡಿಸಿದೆ. ಗಗನಯಾನ ಸೇರಿದಂತೆ ರಾಷ್ಟ್ರೀಯ ಮಹತ್ವದ ಯೋಜನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿಗಳ ರಾಜೀನಾಮೆ ಅಥವಾ ಸ್ವಯಂ … Continued

ಪ್ರಧಾನಿ ಮೋದಿ-ಬಿಜೆಪಿ ಉನ್ನತ ನಾಯಕರ ಮಹತ್ವದ ಸಭೆ ; ಶೀಘ್ರವೇ ಕೇಂದ್ರ ಸಂಪುಟ-ಪಕ್ಷದ ಸಂಘಟನೆಯ ಪುನರ್ರಚನೆ ?

ನವದೆಹಲಿ: ಬಹುನಿರೀಕ್ಷಿತ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕೇಂದ್ರ ಸಂಘಟನೆಯ ಪುನರ್ರಚನೆಗೆ ಶೀಘ್ರದಲ್ಲೇ ಅಂತಿಮ ರೂಪ ಸಿಗುವ ಸಾಧ್ಯತೆಗಳು ದಟ್ಟವಾಗಿವೆ. ಈ ಸಂಬಂಧ ಬುಧವಾರ ತಡರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್. … Continued

ಕರ್ನಾಟಕ ಸೇರಿ 4 ರಾಜ್ಯಗಳ ಎಸ್‌ಐಆರ್‌ ಅವಧಿ ವಿಸ್ತರಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ : ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯ ಅವಧಿಯನ್ನು ಚುನಾವಣಾ ಆಯೋಗವು ಬುಧವಾರ ವಿಸ್ತರಿಸಿದೆ. ಕರ್ನಾಟಕ, ಪಂಜಾಬ್, ತೆಲಂಗಾಣ ಹಾಗೂ ದೆಹಲಿಯಲ್ಲಿ ಮನೆ-ಮನೆಗೆ ಭೇಟಿ, ಕರಡು ಮತದಾರರ ಪಟ್ಟಿ ಪ್ರಕಟಣೆ ಹಾಗೂ ಅಂತಿಮ ಮತದಾರರ ಪಟ್ಟಿ ಪ್ರಕಟಣೆಯ … Continued

ಅಮೆರಿಕದಲ್ಲಿ ಧರ್ಮ ಕೇಳಿ ಭಾರತೀಯ ಉದ್ಯೋಗಿಗೆ 15 ಬಾರಿ ಚಾಕುವಿನಿಂದ ಇರಿದ ವ್ಯಕ್ತಿ

ಉತಾಹ್‌ (ಅಮೆರಿಕ): ಅಮೆರಿಕದ ಉತಾಹ್‌ ರಾಜ್ಯದ ಶಾಪಿಂಗ್ ಮಾಲ್‌ನಲ್ಲಿ ಭಾರತೀಯ ಮೂಲದ ಕಿಯೋಸ್ಕ್ (Kiosk) ಉದ್ಯೋಗಿಯೊಬ್ಬರಿಗೆ ಅವರ ಧರ್ಮವನ್ನು ಕೇಳಿದ ನಂತರ ಚಾಕುವಿನಿಂದ ಇರಿದಿರುವ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಆರೋಪಿಯು ಮೊದಲು ವ್ಯಕ್ತಿ ಮುಸ್ಲಿಮ್‌ ಎಂಬುದನ್ನು ಖಚಿತಪಡಿಸಿಕೊಂಡ ಬಳಿಕವೇ ಚಾಕುವಿನಿಂದ ಇರಿದಿದ್ದಾನೆ. ನ್ಯಾಯಾಲಯದ ದಾಖಲೆಗಳ ಪ್ರಕಾರ, 48 ವರ್ಷದ ಪೀಟರ್ … Continued

ಧಾರವಾಡ : ಅಪಾರ್ಟ್‌ಮೆಂಟ್‌ನಲ್ಲಿ ವೈದ್ಯನ ಹತ್ಯೆ: 8 ವರ್ಷದ ಮಗನಿಗೆ ಗಾಯ ; ಪತ್ನಿ ವಶಕ್ಕೆ

ಧಾರವಾಡ: ನಗರದಲ್ಲಿ ವೈದ್ಯರೊಬ್ಬರು ತಮ್ಮ ಅಪಾರ್ಟ್‌ಮೆಂಟ್‌ನಲ್ಲೇ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಎಂಟು ವರ್ಷದ ಮಗ ಚಾಕು ಇರಿತದಿಂದ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹತ್ಯೆಯಾದ ವೈದ್ಯರನ್ನು ಡಾ. ಕಿರಣ ಹೊನ್ನಣ್ಣವರ (45) ಎಂದು ಗುರುತಿಸಲಾಗಿದೆ. ಅವರು ಚಿರಾಯು ಆಸ್ಪತ್ರೆಯಲ್ಲಿ ಅನಸ್ತೇಶಿಯಾಲಜಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ … Continued

ಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?

ನವದೆಹಲಿ: ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ (ಬ್ರಿಟನ್) ನಡುವಿನ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (Comprehensive Economic and Trade Agreement – CETA) ಬುಧವಾರ(ಜುಲೈ ೧೫)ದಿಂದ ಜಾರಿಗೆ ಬಂದಿದೆ. ಒಪ್ಪಂದದಡಿ ಭಾರತವು ಬ್ರಿಟನ್‌ನಿಂದ ಆಮದು ಆಗುವ ಹಲವು ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಹಂತ ಹಂತವಾಗಿ ಕಡಿಮೆ ಮಾಡಲಿದೆ. ಅದೇ ವೇಳೆ, ಬ್ರಿಟನ್ … Continued