ತಾನು ಮಾಡಿದ ತಪ್ಪಿಗೆ ಭಾರತದ ಕ್ಷಮೆಯಾಚಿಸಿದ ಇಸ್ರೇಲ್‌

ನವದೆಹಲಿ: ಮೊದಲ ಬಾರಿಗೆ, ಇಸ್ರೇಲ್ ರಕ್ಷಣಾ ಪಡೆಗಳು ಭಾರತದ ಅಂತಾರಾಷ್ಟ್ರೀಯ ಗಡಿಗಳ ತಪ್ಪಾದ ನಕ್ಷೆಯನ್ನು ಪ್ರಕಟಿಸಿದ ನಂತರ ಇಸ್ರೇಲ್‌ ಭಾರತದ ಕ್ಷಮೆ ಕೋರಿದೆ. ಜಮ್ಮು ಮತ್ತು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿದೆ ಎಂದು ತಪ್ಪಾಗಿ ತೋರಿಸಲಾಗಿದೆ. X ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕ್ಷಮೆಯಾಚಿಸಿದೆ. ಐಡಿಎಫ್ ನಕ್ಷೆಯು “ಗಡಿಗಳನ್ನು ನಿಖರವಾಗಿ ಚಿತ್ರಿಸಲು ವಿಫಲವಾಗಿದೆ” ಎಂದು ಒಪ್ಪಿಕೊಂಡಿದೆ. ಆದರೆ ಅದು … Continued

ಇಸ್ರೇಲ್‌-ಇರಾನ್‌ ಸಂಘರ್ಷ | ಇಸ್ರೇಲಿ ವಾಯುದಾಳಿಯಲ್ಲಿ ಇರಾನಿನ 4 ಸೇನಾ ಮೇಜರ್‌ ಜನರಲ್‌ ಗಳು, 6 ಪರಮಾಣು ವಿಜ್ಞಾನಿಗಳು ಸಾವು

ನವದೆಹಲಿ : ತೆಹ್ರಾನ್ ಮೇಲೆ ಇಸ್ರೇಲ್ ನಡೆಸಿದ ವಾಯು ದಾಳಿಯಲ್ಲಿ ಇರಾನಿನ ಹಲವಾರು ಮಿಲಿಟರಿ ಪ್ರಮುಖರು ಮತ್ತು ಪರಮಾಣು ವಿಜ್ಞಾನಿಗಳು “ಹುತಾತ್ಮರಾಗಿದ್ದಾರೆ” ಎಂದು ಇರಾನ್‌ನ ಸರ್ವೋಚ್ಚ ನಾಯಕ ಖಮೇನಿ ದೃಢಪಡಿಸಿದ್ದಾರೆ. ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಇರಾನಿನ 78 ಜನರು ಮೃತಪಟ್ಟಿದ್ದು, 329 ಮಂದಿ ಗಾಯಗೊಂಡಿದ್ದಾರೆ. ದಾಳಿಯ ಸಮಯದಲ್ಲಿ, ಇರಾನ್​ನ ಕ್ರಾಂತಿಕಾರಿ ಗಾರ್ಡ್‌ನ ಕ್ಷಿಪಣಿ ಕಾರ್ಯಕ್ರಮದ ಮುಖ್ಯಸ್ಥ … Continued

ವೀಡಿಯೊ…| ಅಹಮದಾಬಾದ್‌ ವಿಮಾನ ದುರಂತ ; ಇಡೀ ವಿಮಾನವೇ ಸುಟ್ಟು ಕರಕಲಾದ್ರೂ ಭಗವದ್ಗೀತೆ ಪುಸ್ತಕಕ್ಕೆ ಏನೂ ಆಗಿಲ್ಲ…!

ಅಹಮದಾಬಾದ್‌ : ಗುಜರಾತಿನ ಅಹಮದಾಬಾದ್‌ನಲ್ಲಿ 265 ಜನರ ಸಾವಿಗೆ ಕಾರಣವಾದ ಏರ್ ಇಂಡಿಯಾ ಫ್ಲೈಟ್ 171 ವಿಮಾನ ಅಪಘಾತದಲ್ಲಿ ಉಂಟಾದ ಬೆಂಕಿಯಲ್ಲಿ ಧಗಧಗಿಸಿ ಹೋದ ವಿಮಾನದ ಅವಶೇಷಗಳಲ್ಲಿ ಭಗವದ್ಗೀತೆಯ ಪುಸ್ತಕ ಸುಡದೆ ಹಾಗೆಯೇ ಇರುವುದು ಕಂಡುಬಂದಿದೆ. ತೀವ್ರ ತೆರನಾದ ಬೆಂಕಿಯ ಜ್ವಾಲೆಯ ಹೊರತಾಗಿಯೂ, ಪವಿತ್ರ ಗ್ರಂಥವು ಹಾನಿಗೊಳಗಾಗದೆ ಉಳಿದಿದೆ. ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ಹೋಗುತ್ತಿದ್ದ ಏರ್‌ … Continued

24 ಗಂಟೆಗಳ ಒಳಗೆ ಇರಾನ್‌ ಮೇಲೆ 2ನೇ ವಾಯುದಾಳಿ ನಡೆಸಿದ ಇಸ್ರೇಲ್‌ : ಇರಾನಿನ 200 ತಾಣಗಳ ಮೇಲೆ ವೈಮಾನಿಕ ದಾಳಿ

ಇರಾನ್‌ನ ಪರಮಾಣು ಘಟಕಗಳು ಮತ್ತು ಮಿಲಿಟರಿ ನೆಲೆಗಳ ಮೇಲೆ ವಾಯು ದಾಳಿ ನಡೆಸಿದ 24 ಗಂಟೆಗಳ ಒಳಗೆ ಇಸ್ರೇಲ್‌ ಇರಾನ್‌ ರಾಜಧಾನಿ ತೆಹ್ರಾನ್‌ ಮೇಲೆ ಮತ್ತೆ ದಾಳಿ ಪ್ರಾರಂಭಿಸಿದೆ. ಇಸ್ಫಹಾನ್‌ನಲ್ಲಿರುವ ಪರಮಾಣು ಘಟಕ ಸೇರಿದಂತೆ ಇರಾನ್‌ನಲ್ಲಿರುವ 200 ಕ್ಕೂ ಹೆಚ್ಚು ಟಾರ್ಗೆಟ್‌ಗಳನ್ನು ಹೊಡೆದುರುಳಿಸಿರುವುದಾಗಿ ಇಸ್ರೇಲಿ ಸೇನೆ ತಿಳಿಸಿದೆ. ಫೋರ್ಡೋ ಪರಮಾಣು ತಾಣದ ಬಳಿ ಎರಡು ಸ್ಫೋಟಗಳು … Continued

ಜೂನ್‌ 17ರ ವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಗಾಳಿಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನ ಜೋರಾದ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್‌ 14ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ … Continued

ಪೈಲಟ್‌ ಗೆ ಸೆಲ್ಯೂಟ್….ಇಲ್ದಿದ್ರೆ ಸುಮಾರು 1500 ಜನರು ಸಾಯುತ್ತಿದ್ದರೇನೋ..? ಅಹಮದಾಬಾದ್‌ ವಿಮಾನ ಅಪಘಾತದ ಬಗ್ಗೆ ಪ್ರತ್ಯಕ್ಷದರ್ಶಿ ಹೇಳಿಕೆ

ಅಹಮದಾಬಾದ್‌ : ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಏರ್ ಇಂಡಿಯಾ ವಿಮಾನ AI 171 ಅಪಘಾತಕ್ಕೀಡಾದ ದೃಶ್ಯವನ್ನು ವೀಕ್ಷಿಸಿದ ಸ್ಥಳೀಯ ನಿವಾಸಿಯೊಬ್ಬರು, ವಿಮಾನವೇನಾದರೂ ವಸತಿ ಪ್ರದೇಶಕ್ಕೆ ಡಿಕ್ಕಿ ಹೊಡೆದಿದ್ದರೆ 1,500 ರಿಂದ 2,000 ಜನರು ಸಾಯಬಹದಿತ್ತು ಎಂದು ಹೇಳಿದ್ದಾರೆ. ದೊಡ್ಡ ದುರಂತವನ್ನು ಸ್ವಲ್ಪದರಲ್ಲೇ ತಪ್ಪಿಸಲಾಯಿತು … Continued

ಅಪಘಾತಕ್ಕೀಡಾದ ವಿಮಾನದ ಸೀಟ್ 11A ನಿಗೂಢತೆ : ವಿಮಾನ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಸಾವನ್ನೇ ಗೆದ್ದಿದ್ದು ಹೇಗೆ..?

ಅಹಮದಾಬಾದ್‌ : ಅಪಘಾತಕ್ಕೀಡಾದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದಲ್ಲಿದ್ದ ಕೇವಲ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ. ಅಹಮದಾಬಾದ್‌ನ ಸರ್ದಾರ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನ AI-171 ರಲ್ಲಿ 11A ಸೀಟಿನಲ್ಲಿ ಕುಳಿತಿದ್ದ ಭಾರತೀಯ ಮೂಲದ ಬ್ರಿಟೀಷ್‌ ಪ್ರಜೆ ವಿಶ್ವಾಸಕುಮಾರ ರಮೇಶ ಎಂಬವರು … Continued

ಅಹಮದಾಬಾದ್‌ ವಿಮಾನ ಅಪಘಾತ : ಪತನಗೊಂಡ ವಿಮಾನದ ಬ್ಲ್ಯಾಕ್‌ ಬಾಕ್ಸ್‌ ಪತ್ತೆ

ಅಹಮದಾಬಾದ್‌: ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ಪತನಗೊಂಡ ವಿಮಾನದ ಬ್ಲ್ಯಾಕ್‌ ಬಾಕ್ಸ್‌ (Black Box) ಮತ್ತು ಡಿವಿಆರ್​ ಪತ್ತೆಯಾಗಿವೆ. ಗುಜರಾತ್ ಸರ್ಕಾರದ 40 ಸಿಬ್ಬಂದಿಯ ಸಹಾಯದಿಂದ ವಿಮಾನ ಅಪಘಾತ ತನಿಖಾ ಬ್ಯೂರೋ(AAIB)ದ ದೊಡ್ಡ ತಂಡವು ಬ್ಲ್ಯಾಕ್‌ ಬಾಕ್ಸ್‌ ಎಂದು ಕರೆಯಲಾಗುವ ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್ (DFDR)ಪತ್ತೆ ಮಾಡಿದೆ. ಈ ಬ್ಲ್ಯಾಕ್‌ಬಾಕ್ಸ್‌ನಲ್ಲಿನ ಡಾಟಾದ ಸಹಾಯದಿಂದ ವಿಮಾನ ಅಪಘಾತಕ್ಕೆ ನಿಖರ … Continued

ವಿಮಾನ ಅಪಘಾತ | ಮೃತ ಪತ್ನಿ ಚಿತಾಭಸ್ಮ ವಿಸರ್ಜನೆಗೆ ಬಂದಿದ್ದ ಲಂಡನ್ ವ್ಯಕ್ತಿ ಸಾವು ; ಅಲ್ಲಿ ತಂದೆಗಾಗಿ ಕಾಯುತ್ತಿದ್ದಾರೆ ಇಬ್ಬರು ಕಂದಮ್ಮಗಳು

ಅಹಮದಾಬಾದ್: ಅಹಮದಾಬಾದ್‌ನಲ್ಲಿ ನಡೆದ ವಿನಾಶಕಾರಿ ಏರ್ ಇಂಡಿಯಾ ವಿಮಾನ ಅಪಘಾತದ ನಂತರ ದುಃಖಕರವಾದ ವೈಯಕ್ತಿಕ ಕಥೆಗಳು ಹೊರಬರುತ್ತಿವೆ. ಪ್ರತಿಯೊಂದೂ ಹೃದಯವಿದ್ರಾವಕವಾಗಿದೆ. ಅವುಗಳಲ್ಲಿ ಒಂದು ದುರಂತವು ವಿಧಿಯ ಕ್ರೂರ ತಿರುವುಗಳಂತೆ ಕಂಡುಬರುತ್ತಿದೆ; ಮೃತಪಟ್ಟ ಪತ್ನಿಯ ಕೊನೆಯ ಆಸೆಯನ್ನು ಪೂರೈಸಲು ಲಂಡನ್‌ನಿಂದ ಅಹಮದಾಬಾದ್‌ಗೆ ಬಂದಿದ್ದ ವ್ಯಕ್ತಿಯೊಬ್ಬರು ಆಕೆಯ ಚಿತಾ ಭಸ್ಮವನ್ನು ವಿಸಜರ್ಜಿಸಿ ಲಂಡನ್‌ಗೆ ಹಿಂದಿರುಗುವಾಗ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ … Continued

ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ

ಬೆಂಗಳೂರು : ಧಾರಾಡದ ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌‍ ಶಾಸಕ ವಿನಯ … Continued