ಕೆಂಪುಕೋಟೆ ಹಿಂಸಾಕೃತ್ಯವು ಸಹ ಕ್ಯಾಪಿಟಲ್‌ ಹಿಂಸಾಕೃತ್ಯದ ಘಟನೆಯಿಂದಾದ ಭಾವನೆಯನ್ನೇ ಸೃಷ್ಟಿಸಿದೆ: ಭಾರತ

ನವ ದೆಹಲಿ: ಕೃಷಿ ಸುಧಾರಣೆಗಳತ್ತ ಭಾರತ ಕೈಗೊಳ್ಳುತ್ತಿರುವ ಕ್ರಮಗಳನ್ನು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ “ಒಪ್ಪಿಕೊಂಡಿದೆ” ಎಂದು ಗುರುವಾರ ಹೇಳಿರುವ ಭಾರತದ ವಿದೇಶಾಂಗ ಸಚಿವಾಲಯವು ಭಾರತದಲ್ಲಿ ರೈತ ಪ್ರತಿಭಟನೆಗಳಿಗೆ ಅಮೆರಿಕಾದ ವಿದೇಶಾಂಗ ಸಚಿವಾಲಯವು ನೀಡಿದ ಪ್ರತಿಕ್ರಿಯೆಗೆ ಯಾವುದೇ ಪ್ರತಿಭಟನೆಯನ್ನು “ಭಾರತದ ಪ್ರಜಾಪ್ರಭುತ್ವದ ನೀತಿಗಳು ಮತ್ತು ರಾಜಕೀಯದ ಸನ್ನಿವೇಶದಲ್ಲಿ ನೋಡಬೇಕು ಎಂದು ಹೇಳಿದೆ. ಭಾರತ ಮತ್ತು ಅಮೆರಿಕ ಎರಡೂ … Continued

ತಾಪಂ ವ್ಯವಸ್ಥೆ ರದ್ದತಿಗೆ ರಾಜ್ಯ ಸರ್ಕಾರ ಚಿಂತನೆ: ಈಶ್ವರಪ್ಪ

ಬೆಂಗಳೂರು: ರಾಜ್ಯದಲ್ಲಿ ೩ ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಬದಲಾಯಿಸಿ ೨ ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೊಳಿಸುವ ಸಂಬಂಧ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಂಡು ಸಂವಿಧಾನ ತಿದ್ದುಪಡಿಯ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್   ಖಾತೆ ಸಚಿವ ಕೆ. ಎಸ್. ಈಶ್ವರಪ್ಪ ವಿಧಾನಸಭೆಗೆ ತಿಳಿಸಿದರು. ಶೂನ್ಯ ವೇಳೆಯಲ್ಲಿ … Continued

ಮಳೆ ನೀರು ಸಂಗ್ರಹಕ್ಕೆ ಸರ್ಕಾರಿ ಕಟ್ಟಡಗಳ ಛಾವಣಿ ಸ್ವರೂಪ ಬದಲಾವಣೆ

ಬೆಂಗಳೂರು: ಮಳೆ ನೀರು ಸಂಗ್ರಹಿಸಲು ಸರ್ಕಾರಿ ಕಟ್ಟಡಗಳ ಛಾವಣಿ ಸ್ವರೂಪ ಬದಲಾವಣೆ ಮಾಡಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಹರತಾಳ್ ಹಾಲಪ್ಪ ಮಲೆನಾಡಿನ ಭಾಗಗಳಲ್ಲಿ ಮಳೆಗಾಲ ಬಂದರೆ ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಸರ್ಕಾರಿ ಕಟ್ಟಡಗಳು ಸೋರುತ್ತವೆ. ಇದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ … Continued

ಬ್ಯಾಂಕ್‌ ಹಗರಣ: ಚೋಕ್ಸಿ, ಗೀತಾಂಜಲಿ ಗ್ರುಪ್‌ನ ೧೪.೪೫ ಕೋಟಿ ರೂ. ಅಟ್ಯಾಚ್‌

ಮುಂಬೈ: ಬ್ಯಾಂಕ್‌ ಹಗರಣಕ್ಕೆ ಸಂಬಂಧಿಸಿದಂತೆ ಮೆಹುಲ್‌ ಚೋಕ್ಸಿಗೆ ಸೇರಿದ ಗೀತಾಂಜಲಿ ಗ್ರೂಪ್‌ನ 14.45 ಕೋಟಿ ರೂ.ಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ತಾತ್ಕಾಲಿಕವಾಗಿ ಅಟ್ಯಾಚ್‌ ಮಾಡಿದೆ. ದೇಶದಿಂದ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಸೋದರಳಿಯ ನೀರವ್ ಮೋದಿಯವರೊಂದಿಗೆ ಸೇರಿ 15,600 ಕೋಟಿ ರೂ.ಗಳ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಂಬೈನ ಚೋಕ್ಸಿಯ ಸ್ಥಿರಾಸ್ತಿ … Continued

ರೈತರ ಪ್ರತಿಭಟನೆ ನಿಭಾಯಿಸಿದ ರೀತಿಗೆ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ

ನವ ದೆಹಲಿ: ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ನಿಭಾಯಿಸಿದ ರೀತಿಯ ಬಗ್ಗೆ ಪ್ರತಿಪಕ್ಷಗಳು ಗುರುವಾರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದು ಬಿಜೆಪಿ ಮಂತ್ರಿಗಳು ಕೇವಲ ಸ್ವಗತವನ್ನು ನಂಬುತ್ತಾರೆ ಎಂದು ಕೇಂದ್ರದ ವಿರುದ್ಧ ಹರಿಹಾಯ್ದರು. ರೈತರ ಪ್ರತಿಭಟನೆ ನಿಭಾಯಿಸಲು ಕಂದಕಗಳನ್ನು ತೆಗೆಯಲಾಗಿದೆ, ಮುಳ್ಳುತಂತಿಗಳನ್ನು ಹಾಕಲಾಗಿದೆ ಮತ್ತು ರೈತರನ್ನು ಗೆಲ್ಲಲು ಸೇತುವೆಗಳನ್ನು … Continued

ಬೇರೆ ಪಕ್ಷದಿಂದ ಬಂದು ಸಿಎಂ ಆಗಬಹುದು, ನಾವು ಮಂತ್ರಿಯಾಗೋದು ತಪ್ಪಾ..?

ಬೆಂಗಳೂರು: ಬೇರೆ ಬೇರೆ ಪಕ್ಷದಿಂದ ಬಂದು ಮುಖ್ಯಮಂತ್ರಿಗಳೇ ಆಗಿರುವಾಗ, ನಾವು ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದು ಮಂತ್ರಿ ಆದರೆ ತಪ್ಪೇನು ಎಂದು ಗುರುವಾರ ಸಚಿವ ಎಂಟಿಬಿ ನಾಗರಾಜು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಸಂದರ್ಭದಲ್ಲಿ ಜೆಡಿಎಸ್‌ನ ಬಂಡೆಪ್ಪಕಾಶಂಪುರ ಮಾತನಾಡುತ್ತ ಕಾಂಗ್ರೆಸ್-ಜೆಡಿಎಸ್‌ನಿಂದ ಬಂದವರಿಂದ ಈ ಸರ್ಕಾರ ಆಗಿದೆ ಎಂದು ತಿವಿದರು. … Continued

ಶಾಲಾ ಸಮಯದಲ್ಲಿ ಹೆಚ್ಚಿನ ಬಸ್‌ ಬಿಡಲು ಮನವಿ

ಬೆಂಗಳೂರು: ರಾಜ್ಯದಲ್ಲಿ ಶಾಲಾ ಕಾಲೇಜುಗಳು ಪೂರ್ಣಪ್ರಮಾಣದಲ್ಲಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಕ್ಕಳ ಶಾಲಾ ಸಮಯಕ್ಕೆ ಅನುಕೂಲವಾಗುವಂತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಸಾರಿಗೆ ಸಚಿವರಿಗೆ ಆ ಪತ್ರ ಬರೆದಿರುವ … Continued

ಬರಹಗಾರ ಪ್ರೊ. ಭಗವಾನ್‌ ಮುಖಕ್ಕೆ ಕಪ್ಪು ಮಸಿ ಬಳಿದ ವಕೀಲೆ

ಬೆಂಗಳೂರು: ಬರಹಗಾರ ಪ್ರೊ. ಕೆ. ಎಸ್. ಭಗವಾನ್ ಅವರ ಮುಖಕ್ಕೆ ವಕೀಲೆಯೊಬ್ಬರು ಕಪ್ಪು ಮಸಿ ಬಳಿದ ಘಟನೆ ಬೆಂಗಳೂರಿನ ನ್ಯಾಯಾಲಯದ ಆವರಣದಲ್ಲಿ ಗುರುವಾರ ನಡೆದಿದೆ. ವಕೀಲಾರದ ಮೀರಾ ರಾಘವೇಂದ್ರ ಎಂಬುವವರು ಭಗವಾನ್‌ ಅವರು ಹಿಂದೂ ದೇವರನ್ನು ಅವಮಾನಿಸುತ್ತಿರುವುದನ್ನು ಖಂಡಿಸಿ ಕೋರ್ಟ್‌ ಆವರಣದಲ್ಲಿಯೇ ಭಗವಾನ್‌ ಅವರ ಮುಖಕ್ಕೆ ಕಪ್ಪು ಮಸಿ ಬಳಿದಿದ್ದಾರೆ. ಹಿಂದೂ ಧರ್ಮದ ಕಟು ಟೀಕಾಕಾರರಾಗಿರುವ … Continued

ಅಯೋಧ್ಯ ರಾಮಂದಿರ ಕಾಮಗಾರಿ ವೀಕ್ಷಣೆಗೆ ಅವಕಾಶವಿಲ್ಲ

ಅಯೋಧ್ಯ: ಸುರಕ್ಷತಾ ಕಾರಣಗಳಿಗಾಗಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯವನ್ನು ವೀಕ್ಷಿಸಲು ರಾಮ ಭಕ್ತರಿಗೆ ಅವಕಾಶ ನೀಡುವುದಿಲ್ಲ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಚಂಪತ್‌ ರಾಯ್‌ ಹೇಳಿದ್ದಾರೆ. ರಾಮ ಮಂದಿರ ನಿರ್ಮಾಣ ಕಾರ್ಯದಲ್ಲಿ ದೊಡ್ಡ ಕ್ರೇನ್‌ಗಳು ಹಾಗೂ ದೊಡ್ಡ ಕಲ್ಲು ಪುಡಿ ಮಾಡುವ ಯಂತ್ರಗಳನ್ನು ಬಳಕೆ ಮಾಡಲಾಗುತ್ತಿದೆ. ಇದರಿಂದ … Continued

ಕೊವಿಡ್‌ ರೋಗಿಗಳಲ್ಲಿ ಮಾರಣಾಂತಿಕ ಶಿಲೀಂಧ್ರ ಸೋಂಕು ಪತ್ತೆ..!

ಭಾರತದ ಹಲವಾರು ಕೊವಿಡ್‌-೧೯ ರೋಗಿಗಳಲ್ಲಿ ಮಾರಣಾಂತಿಕ ಶಿಲೀಂಧ್ರ ಸೋಂಕು ತಗುಲಿರುವುದು ವರದಿಯಾಗಿದೆ ಭಾರತದ COVID-19 ರೋಗಿಗಳಲ್ಲಿ ಮುಕೋರ್ಮೈಕೋಸಿಸ್ ಎಂಬ ಅಪರೂಪದ ಕಪ್ಪು ಶಿಲೀಂಧ್ರ ಸೋಂಕಿನ ಪ್ರಕರಣಗಳ ಹೆಚ್ಚಳವನ್ನು ವೈದ್ಯರು ವರದಿ ಮಾಡುತ್ತಿದ್ದಾರೆ. ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಜನರಲ್ಲಿ ತೀವ್ರವಾದ ಮಧುಮೇಹದಂತಹ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ. ಚಿಕಿತ್ಸೆ ನೀಡದೆ ಬಿಟ್ಟರೆ ಅದು ಜೀವಕ್ಕೆ ಮಾರಕವಾಗಬಹುದಾಗಿದೆ. ಚಿಕಿತ್ಸೆಗಾಗಿ … Continued