ಕರ್ನಾಟಕದಲ್ಲಿ ಆಗಸ್ಟ್ 30ರ ವರೆಗೆ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಮುಂದಿನ ಆರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 25ರವರೆಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಒಳನಾಡಿನ … Continued

ಬೆಳಗಾವಿ | ಮನವೊಲಿಕೆ ಸಫಲ ; ದೇಹತ್ಯಾಗದ ನಿರ್ಧಾರದಿಂದ ಹಿಂದೆ ಸರಿದರು…

ಬೆಳಗಾವಿ : ದೇಹ ತ್ಯಾಗ ಮಾಡುತ್ತಾರೆ ಎಂಬ ವದಂತಿ ಕೊನೆಗೂ ಸುಖಾಂತ್ಯಗೊಂಡಿದೆ. ಅಧ್ಯಾತ್ಮಿಕ ಪಂಥವೊಂದಕ್ಕೆ ಮಾರು ಹೋಗಿ ಸೆಪ್ಟೆಂಬರ್ 8 ರಂದು ದೇಹತ್ಯಾಗ ಮಾಡಲು ಮುಂದಾಗಿದ್ದ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಕೆಲವರು ಕೊನೆಗೂ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ. ಅನಂತಪುರ ಗ್ರಾಮದ ತುಕಾರಾಮ ಇರಕರ ಕುಟುಂಬದ ನಾಲ್ವರು ಮತ್ತು … Continued

ಭಾರತದ ಟಾಪ್ 3 ಶ್ರೀಮಂತ- ಬಡ ಸಿಎಂಗಳು : ಸಿಎಂ ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ ಗೊತ್ತೆ..?

ನವದೆಹಲಿ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ದೇಶದ ಮುಖ್ಯಮಂತ್ರಿಗಳ ಸಂಪತ್ತನ್ನು ಒಳಗೊಂಡ ಪಟ್ಟಿಯನ್ನು ತನ್ನ ಇತ್ತೀಚಿನ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು ಮತ್ತು ಅತ್ಯಂತ ಬಡವ ಮುಖ್ಯಮಂತ್ರಿ ಯಾರು ಎಂಬುದನ್ನು ಬಹಿರಂಗಪಡಿಸಿದೆ. ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ದೇಶದ ಅತ್ಯಂತ … Continued

ಭಾರತದ ಆಮದುಗಳ ಮೇಲೆ ಟ್ರಂಪ್‌ ಸುಂಕ; ಅಮೆರಿಕಕ್ಕೆ ಅಂಚೆ ಇಲಾಖೆಯ ಪಾರ್ಸೆಲ್‌ ಸೇವೆ ಆಗಸ್ಟ್ 25 ರಿಂದ ಸ್ಥಗಿತ

ನವದೆಹಲಿ: ಅಮೆರಿಕದ ಇತ್ತೀಚಿನ ಸುಂಕದ ಕ್ರಮಗಳ ನಂತರ, ಅಂಚೆ ಇಲಾಖೆಯು ಅಮೆರಿಕಕ್ಕೆ ಅಂಚೆ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿ ಸುವುದಾಗಿ ಪ್ರಕಟಿಸಿದೆ. ಆಗಸ್ಟ್ 25 ರಿಂದ ಜಾರಿಗೆ ಬರುವ ಎಲ್ಲಾ ಅಮೆರಿಕಕ್ಕೆ ಹೋಗುವ ಅಂಚೆ ವಸ್ತುಗಳ ಬುಕಿಂಗ್ ಸೇವೆ ಸ್ಥಗಿತಗೊಳಿಸುವುದಾಗಿ ತಿಳಿಸಿದೆ. ಜುಲೈ 30 ರಂದು, ಅಮೆರಿಕ ಅಧ್ಯಕ್ಷ ಟ್ರಂಪ್ ಸುಂಕ ಹೆಚ್ಚಳದ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ … Continued

ಉಡುಪಿ : ಮಹೇಶ ಶೆಟ್ಟಿ ತಿಮರೋಡಿಗೆ ಜಾಮೀನು

ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿದ್ದ ಮಹೇಶ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬಿ.ಎಲ್.ಸಂತೋಷ ವಿರುದ್ಧ ತಿಮರೋಡಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಉಡುಪಿ ಗ್ರಾಮಾಂತರ ಘಟಕದ ಅಧ್ಯಕ್ಷ ರಾಜೀವ … Continued

ಬಹುಕೋಟಿ ಬೆಟ್ಟಿಂಗ್ ದಂಧೆ ; ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧನ : ದಾಳಿ ವೇಳೆ ಕಂತೆ ಕಂತೆ ಹಣ, ಚಿನ್ನಾಭರಣಗಳು ವಶಕ್ಕೆ

ಬೆಂಗಳೂರು : ಜಾರಿ ನಿರ್ದೇಶನಾಲಯವು ಶನಿವಾರ ಭಾರತದಾದ್ಯಂತ ಎರಡು ದಿನಗಳ ಶೋಧ ಕಾರ್ಯಾಚರಣೆ ನಡೆಸಿದ ನಂತರ ಅಕ್ರಮ ಬೆಟ್ಟಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ‘ಪಪ್ಪಿ’ ಅವರನ್ನು ಸಿಕ್ಕಿಂನಲ್ಲಿ ಬಂಧಿಸಿದೆ ಎಂದು ವರದಿಯಾಗಿದೆ. ಈಗಾಗಲೇ ವೀರೇಂದ್ರ ಪಪ್ಪಿಯವರನ್ನು ಅರೆಸ್ಟ್ ಮಾಡಿ ಕೋರ್ಟ್ಗೆ ಹಾಜರುಪಡಿಸಿರುವ ಇ.ಡಿ ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರು … Continued

ಧರ್ಮಸ್ಥಳ ಶವ ಹೂತ ಪ್ರಕರಣ : ದೂರುದಾರ(ಮಾಸ್ಕ್‌ಮ್ಯಾನ್‌)ನನ್ನು 10 ದಿನ ಎಸ್‌ಐಟಿ ಕಸ್ಟಡಿಗೆ ನೀಡಿದ ನ್ಯಾಯಾಲಯ

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂಳಿರುವುದಾಗಿ ಹೇಳಿಕೆ ನೀಡಿದ್ದ ಹಾಗೂ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಗೆ ಕಾರಣನಾಗಿದ್ದ ಸಾಕ್ಷಿ ದೂರುದಾರನಾದ ಸಿ.ಎನ್‌. ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯವು 10 ದಿನ ವಿಶೇಷ ತನಿಖಾ ದಳ(ಎಸ್‌ಐಟಿ)ದ ವಶಕ್ಕೆ ನೀಡಿದೆ. ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾಗ ಅನೇಕ ಶವಗಳನ್ನು … Continued

2,000 ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣ : ಅನಿಲ ಅಂಬಾನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಸಿಬಿಐ ದಾಳಿ ; ಮೂಲಗಳು

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ)ಗೆ 2,000 ಕೋಟಿ ರೂ.ಗಳಿಗೂ ಹೆಚ್ಚು ನಷ್ಟ ಉಂಟುಮಾಡಿದ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಕಮ್ಯುನಿಕೇಷನ್ಸ್ (ಆರ್‌ಸಿಒಎಂ) ಮತ್ತು ಅದರ ಪ್ರವರ್ತಕ ನಿರ್ದೇಶಕ ಅನಿಲ ಅಂಬಾನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ಶನಿವಾರ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಆರ್‌ಕಾಮ್ ಮತ್ತು … Continued

ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣ : ಎಸ್‌ಐಟಿ ಅಧಿಕಾರಿಗಳಿಂದ ಮಾಸ್ಕ್ ಮ್ಯಾನ್ ಬಂಧನ

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಹೊಸ ತಿರುವು ಸಿಗುತ್ತಿದೆ. ಹಲವು ವರ್ಷಗಳ ಹಿಂದೆ ಅನೇಕ ಶವಗಳನ್ನು ಶವಗಳನ್ನು ತಾನು ಹೂತಿದ್ದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿ ಎಸ್ ಐಟಿ ಅಧಿಕಾರಿಗಳ ಮುಂದೆ ಶೋಧಕಾರ್ಯಕ್ಕೆ ಹೋಗುತ್ತಿದ್ದ ಮುಖವಾಡ ತೊಟ್ಟ ಅನಾಮಿಕನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುಳ್ಳು ಮಾಹಿತಿ ನೀಡಿದ್ದ … Continued

ಶಾಲೆಗೆ ಬೀಗ ಹಾಕಿಹೋದ ಸಿಬ್ಬಂದಿ ; ಹೊರಬರಲು ಯತ್ನಿಸಿ ಕಿಟಕಿಯಲ್ಲಿ ಸಿಲುಕಿದ 2ನೇ ತರಗತಿ ಹುಡುಗಿಯ ತಲೆ : ರಾತ್ರಿಯಿಡೀ ಹಾಗೆಯೇ ಕಳೆದ ಬಾಲಕಿ..!

ಕಿಯೋಂಝಾರ್ : ಗುರುವಾರ ಒಡಿಶಾದ ಪುಟ್ಟ ಬಾಲಕಿ ಮತ್ತು ಆಕೆಯ ಕುಟುಂಬಕ್ಕೆ ದುಃಸ್ವಪ್ನವೊಂದು ಸಂಭವಿಸಿದೆ. 2ನೇ ತರಗತಿಯ ಬಾಲಕಿ ಗುರುವಾರ ಬೆಳಿಗ್ಗೆ ಶಾಲೆಗೆ ಹೋಗಿದ್ದಳು, ಆದರೆ ಸಂಜೆ 4 ಗಂಟೆಗೆ ತರಗತಿಗಳು ಮುಗಿದ ನಂತರವೂ ಮನೆಗೆ ಹಿಂತಿರುಗಲಿಲ್ಲ. ಆಗಿದ್ದೇನೆಂದರೆ ಸರ್ಕಾರಿ ಶಾಲೆಯ ಸಿಬ್ಬಂದಿ ತರಗತಿಗೆ ಬೀಗ ಹಾಕಿ ದಿನದ ರಜೆಗಾಗಿ ಹೋದರು, ಏಳು ವರ್ಷದ ಬಾಲಕಿ … Continued