ಉದ್ಯಮಿ, ರಾಜಕೀಯ ಧುರೀಣ ಯಶೋಧರ ನಾಯ್ಕ ನಿಧನ

ಕಾರವಾರ: ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಯಶೋಧರ ನಾಯ್ಕ (69)  ಇಂದು, ಮಂಗಳವಾರ (ಆಗಸ್ಟ್‌ 19) ಮುಂಬೈನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಾಳ್ಕೋಡು ಮೂಲದವರಾದ ಯಶೋಧರ ನಾಯ್ಕ ಅವರು ನಾಲ್ಕು ದಶಕಗಳಿಗೂ … Continued

ಖ್ಯಾತ ಬಾಲಿವುಡ್‌ ನಟ ಅಚ್ಯುತ ಪೋತದಾರ ನಿಧನ

ಮುಂಬೈ : ಹಿರಿಯ ಬಾಲಿವುಡ್‌ ಮತ್ತು ಮರಾಠಿ ಸಿನೆಮಾ ನಟ ಅಚ್ಯುತ ಪೋತದಾರ ಅವರು ಸೋಮವಾರ ರಾತ್ರಿ (ಆಗಸ್ಟ್ 18) ಥಾಣೆಯ ಜುಪಿಟರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಅವರನ್ನು ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಅಂತ್ಯಕ್ರಿಯೆ ಇಂದು, ಮಂಗಳವಾರ ಥಾಣೆಯಲ್ಲಿ ನಡೆಯಲಿದೆ. ಹಿರಿಯ ನಟ 125 ಕ್ಕೂ ಹೆಚ್ಚು … Continued

ವೀಡಿಯೊ : ಜಾತ್ರೆಯಲ್ಲಿ 50 ಅಡಿ ಎತ್ತರದ ಡ್ರಾಪ್ ಟವರ್ ಕೆಳಕ್ಕೆ ಬಿದ್ದು 5 ಮಂದಿಗೆ ಗಾಯ

ನವಸಾರಿ : ಎತ್ತರದ ನೂಲುವ ಸವಾರಿ (ಡ್ರಾಪ್ ಟವರ್) ಅಪಘಾತಕ್ಕೀಡಾಗಿ ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ ಐವರು ಗಾಯಗೊಂಡ ಘಟನೆ ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ದೇವಾಲಯದ ಜಾತ್ರೆಯ ಜನದಟ್ಟಣೆಯಲ್ಲಿ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ರಾವಣ ಹಬ್ಬದ ಅಂಗವಾಗಿ ಬಿಲಿಮೋರಾ ಪಟ್ಟಣದ ಸೋಮನಾಥ ಮಹಾದೇವ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ಜಾತ್ರೆಯಲ್ಲಿ ಭಾನುವಾರ ರಾತ್ರಿ 10:45 ರ … Continued

ಕೇರಳ ಲಾಟರಿಯಲ್ಲಿ 1 ಕೋಟಿ ರೂ. ಗೆದ್ದ ಸುಳ್ಯದ ನಿವಾಸಿ…!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನಿವಾಸಿಯೊಬ್ಬರಿಗೆ ಕೇರಳ ಕೇರಳ ರಾಜ್ಯ ಲಾಟರಿಯಲ್ಲಿ 1 ಕೋಟಿ ರೂಪಾಯಿ ಬಂಪರ್ ಬಹುಮಾನ ಗೆದ್ದಿದ್ದಾರೆ. ಶನಿವಾರ ನಡೆದ ಡ್ರಾದಲ್ಲಿ, OG 445643 ಸಂಖ್ಯೆಯ ಟಿಕೆಟ್ ಸುಳ್ಯ ತಾಲೂಕಿನ ಉಬರಡ್ಕದ ವಿನಯ ಕ್ಯಾಟರರ್ಸ್ ಮಾಲೀಕ ವಿನಯ ಯಾವಟೆ ಅವರಿಗೆ ಅದೃಷ್ಟ ತಂದುಕೊಟ್ಟಿತು. ವಿನಯ ಯಾವಟೆ ಕೇರಳ ಲಾಟರಿಯ 1 … Continued

ಶೀಘ್ರದಲ್ಲೇ ಮಗುವಿಗೆ ಜನ್ಮ ನೀಡಲಿದೆ ಮಾನವರೂಪಿ ರೋಬೋಟ್…! ಗರ್ಭಧರಿಸುವ ರೋಬೋಟ್ ಅಭಿವೃದ್ಧಿಪಡಿಸುತ್ತಿದೆ ಚೀನಾ..!!

ವಿಶ್ವದ ಮೊದಲ ಮಾನವರೂಪಿ (humanoid) ರೋಬೋಟ್ ಬಾಡಿಗೆ ತಾಯಿಯು ಶೀಘ್ರವೇ ಜೀವಂತ ಮಗುವಿಗೆ ಜನ್ಮ ನೀಡಲು ಸಾಧ್ಯವಾಗುತ್ತದೆ ಎಂದು ಚೀನಾದ ವಿಜ್ಞಾನಿಗಳು ಹೇಳಿದ್ದಾರೆ. ಗುವಾಂಗ್‌ಝೌದಲ್ಲಿನ ಕೈವಾ ಟೆಕ್ನಾಲಜಿಯ ಡಾ. ಜಾಂಗ್ ಕಿಫೆಂಗ್ ನೇತೃತ್ವದ ಈ ಯೋಜನೆಯು ಕೃತಕ ಗರ್ಭದೊಳಗೆ ಗರ್ಭಧಾರಣೆಯನ್ನು ಮಾಡಲು ಪ್ರಯತ್ನಿಸುತ್ತದೆ. ಮಗುವು ರೋಬೋಟ್‌ನ ದೇಹದೊಳಗೆ ಕೃತಕ ಆಮ್ನಿಯೋಟಿಕ್ ದ್ರವದಿಂದ ತುಂಬಿದ ಗರ್ಭದಂತಹ ಜಾಗದಲ್ಲಿ … Continued

ಧರ್ಮಸ್ಥಳದಲ್ಲಿ ಶವ ಶೋಧ ಕಾರ್ಯ ತಾತ್ಕಾಲಿಕ ಸ್ಥಗಿತ : ಗೃಹ ಸಚಿವ ಡಾ. ಪರಮೇಶ್ವರ

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಶವ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಪ್ರಕಟಿಸಿದ್ದಾರೆ. ಧರ್ಮಸ್ಥಳದಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಾತನಾಡಿದ ಅವರು, ದೂರುದಾರನ ಮನವಿಯಂತೆ ಧರ್ಮಸ್ಥಳದ 13 ಸ್ಥಳಗಳಲ್ಲಿ ಗುಂಡಿ ತಗೆದು ಶೋಧ ನಡೆಸಲಾಗಿದೆ. ಅವುಗಳಲ್ಲಿ ಎರಡು ಕಡೆ ಮಾನವನ ಮೂಳೆಗಳು ಸಿಕ್ಕಿವೆ. ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ … Continued

ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ ಮುನ್ಸೂಚನೆ : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

ಕಾರವಾರ : ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಆಗಸ್ಟ್‌ 20 ಬೆಳಗ್ಗೆ ವರೆಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ಗಣನೀಯವಾಗಿ ಏರುತ್ತಿದೆ. ಜಲಾಶಯದಿಂದ ಆಗಸ್ಟ್‌ 19 … Continued

ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಜಿಲ್ಲೆ ಬಹುತೇಕ ತಾಲೂಕುಗಳ ಶಾಲೆಗಳಿಗೆ ನಾಳೆ (ಆ.19) ರಜೆ ಘೋಷಣೆ

ಕಾರವಾರ: ಹವಾಮಾನ ಇಲಾಖೆ (IMD) ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 11 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್‌ 19ರಂದು ರಜೆ ಘೋಷಿಸಲಾಗಿದೆ. ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ರೆಡ್ ಅಲರ್ಟ್ ಘೋಷಣೆಯ ಹಿನ್ನೆಲೆಯಲ್ಲಿ, ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, … Continued

ವೀಡಿಯೊ..| ಕಾರವಾರ : ಸಮುದ್ರದ ಅಲೆಗಳ ಅಬ್ಬರಕ್ಕೆ ತೀರಕ್ಕೆ ಬಂದುಬಿದ್ದ ಡಾಲ್ಫಿನ್ ಮೀನು : ರಕ್ಷಿಸಿ ಪುನಃ ನೀರಿಗೆ ಬಿಟ್ಟ ಜನ

ಕಾರವಾರ : ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯ ಪರಿಣಾಮದಿಂದ ಉಂಟಾದ ಅಲೆಗಳ ಅಬ್ಬರಕ್ಕೆ ಕಡಲತೀರಕ್ಕೆ ಬಂದು ಸಿಲುಕ್ಕಿದ್ದ ಇಂಡೋ-ಪೆಸಿಫಿಕ್ ಹಂಪ್‌ಬ್ಯಾಕ್‌ ತಳಿಯ ಡಾಲ್ಫಿನ್ ಮೀನನ್ನು ಕಾರವಾರ ತಾಲೂಕಿನ ದೇವಬಾಗ ಕಡಲತೀರದಲ್ಲಿ ರಕ್ಷಣೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಡಾಲ್ಫಿನ್‌ ಮೀನಿನ ಮರಿಯನ್ನು ರಕ್ಷಿಸಲಾಗಿದೆ. ಸಮುದ್ರಕ್ಕೆ ಹಿಂತಿರುಗಲು ಡಾಲ್ಫಿನ್ ಒದ್ದಾಡುತ್ತಿರುವುದು ಕಂಡು ಬಂದ ನಂತರ ಅಲ್ಲಿದ್ದ ಜಂಗಲ್ … Continued

ವೀಡಿಯೊ…| ಶ್ರೀನಗರಕ್ಕೆ ತೆರಳುತ್ತಿದ್ದ ಸೈನಿಕನನ್ನು ಕಂಬಕ್ಕೆ ಕಟ್ಟಿ ದೊಣ್ಣೆಯಿಂದ ಹೊಡೆದ ಟೋಲ್ ಬೂತ್ ಸಿಬ್ಬಂದಿ…!

ನವದೆಹಲಿ: ಉತ್ತರ ಪ್ರದೇಶದ ಮೀರತ್‌ನ ಟೋಲ್ ಬೂತ್‌ನಲ್ಲಿ ನಡೆದ ಘರ್ಷಣೆಯಲ್ಲಿ ಸೈನಿಕನೊಬಬ್ಬನನ್ನು ಕಂಬಕ್ಕೆ ಕಟ್ಟಿಹಾಕಿ ಥಳಿಸಲಾಗಿದೆ. ನಾಲ್ವರು ಟೋಲ್ ಬೂತ್ ಸಿಬ್ಬಂದಿ ಸೈನಿಕನ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ವೈರಲ್ ಆದ ನಂತರ ಅವರನ್ನು ಬಂಧಿಸಲಾಗಿದೆ. ಸೈನಿಕ ಕಪಿಲ್ ಕವದ್ ಎಂಬವರು ಭಾರತೀಯ ಸೇನೆಯ ರಜಪೂತ್ ರೆಜಿಮೆಂಟ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ರಜೆಯ ನಿಮಿತ್ತ ಮನೆಗೆ … Continued