ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆ ; ಪರಾರಿಯಾಗಿದ್ದ ಚಾಲಕ, ಲಾರಿ ಪತ್ತೆ ಹಚ್ಚಿದ ಎಐ….!

ನಾಗ್ಪುರ : ತನ್ನ ಪತ್ನಿಗೆ ಡಿಕ್ಕಿ ಹೊಡೆದ ಟ್ರಕ್ ಯಾವುದೆಂದು ಆ ವ್ಯಕ್ತಿಗೆ ನಿರ್ದಿಷ್ಟವಾಗಿ ಮಾಹಿತಿ ಇರಲಿಲ್ಲ. ಆದರೆ ಅದರ ಮೇಲೆ ಕೆಂಪು ಗುರುತುಗಳಿದ್ದವು ಎಂಬುದು ಮಾತ್ರ ಆತನಿಗೆ ತಿಳಿದಿತ್ತು. ಟ್ರಕ್‌ ಹೇಗಿತ್ತು, ಅದರ ನಂಬರ್‌ ಪ್ಲೇಟ್‌ ಅಥವಾ ಯಾವ ಕಂಪನಿಯ ಟ್ರಕ್‌ ಎಂಬುದೂ ಆ ವ್ಯಕ್ತಿಗೆ ಗೊತ್ತಿರಲಿಲ್ಲ. ಹೆಚ್ಚಿನ ಯಾವ ಮಾಹಿತಿಯೂ ಇರಲಿಲ್ಲ. ಆದರೂ … Continued

ರೆಡ್ ಅಲರ್ಟ್ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಇಂದು ರಜೆ

ಮಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾರಣ ಸೋಮವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಪ್ರೌಢ ಶಾಲೆಗಳಿಗೆ ಆಗಸ್ಟ್‌ 18ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ರವರ ಮುನ್ಸೂಚನೆಯಂತೆ, ಬಂಗಾಳ … Continued

7 ದಿನದಲ್ಲಿ ಅಫಿಡವಿಟ್ ಕೊಡಿ ಇಲ್ಲವೇ ಕ್ಷಮೆಯಾಚಿಸಿ :’ಮತಗಳ್ಳತನ’ ಆರೋಪಕ್ಕೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗದ ಸೂಚನೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ “ಮತಗಳ್ಳತನ” ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗವು ಭಾನುವಾರ ಅವರಿಗೆ ಏಳು ದಿನಗಳ ಗಡುವು ನೀಡಿದ್ದು, ಅಫಿಡವಿಟ್‌ ನೀಡಬೇಕು ಇಲ್ಲದಿದ್ದರೆ ದೇಶದ ಕ್ಷಮೆಯಾಚಿಸಬೇಕು ಎಂದು ಹೇಳಿದೆ. ಅವರು “ಅಫಿಡವಿಟ್ ನೀಡಬೇಕು ಅಥವಾ ದೇಶಕ್ಕೆ ಕ್ಷಮೆಯಾಚಿಸಬೇಕು. ಮೂರನೇ ಆಯ್ಕೆ ಇಲ್ಲ. 7 ದಿನಗಳಲ್ಲಿ ಅಫಿಡವಿಟ್ ಸ್ವೀಕರಿಸದಿದ್ದರೆ, ಈ ಎಲ್ಲಾ ಆರೋಪಗಳು … Continued

ಒಡಿಶಾ ಮಾಜಿ ಸಿಎಂ ನವೀನ ಪಟ್ನಾಯಕ್ ಆಸ್ಪತ್ರೆಗೆ ದಾಖಲು

ಭುವನೇಶ್ವರ: ಒಡಿಶಾದ ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆಯ ವಿಪಕ್ಷದ ನಾಯಕ ನವೀನ ಪಟ್ನಾಯಕ್ ಅವರನ್ನು ಭಾನುವಾರ ಸಂಜೆ ‘ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, 78 ವರ್ಷದ ಬಿಜೆಡಿ ಅಧ್ಯಕ್ಷರಿಗೆ ದಿನದ ಆರಂಭದಲ್ಲಿ ಅಸ್ವಸ್ಥತೆ ಉಂಟಾಗಿದ್ದು, ಅವರನ್ನು ವೈದ್ಯಕೀಯ ಆರೈಕೆಗಾಗಿ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಪರೀಕ್ಷೆಗಳನ್ನು ನಡೆಸಿದ್ದಾರೆ ಮತ್ತು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ … Continued

ಕರ್ನಾಟಕದಲ್ಲಿ ಮಳೆ ಹೆಚ್ಚಳ : ಇಂದು 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 4 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆ ಜೋರಾಗಲಿದ್ದು, ಆಗಸ್ಟ್‌ 18ರಂದು ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ … Continued

ಎನ್‌ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಹೆಸರು ಘೋಷಣೆ

ನವದೆಹಲಿ : ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ ಮತ್ತು ತಮಿಳುನಾಡಿನ ಬಿಜೆಪಿಯ ಉನ್ನತ ನಾಯಕರಲ್ಲಿ ಒಬ್ಬರಾಗಿದ್ದ ಸಿ.ಪಿ. ರಾಧಾಕೃಷ್ಣನ್ ಅವರ ಹೆಸರನ್ನು ಭಾನುವಾರ ಘೋಷಿಸಲಾಗಿದೆ. ಉಪರಾಷ್ಟ್ರಪತಿ ಚುನಾವಣೆಗೆ ಪಕ್ಷದ ಆಯ್ಕೆಯನ್ನು ಅಂತಿಮಗೊಳಿಸಲು ಕರೆಯಲಾಗಿದ್ದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಅಕ್ಟೋಬರ್ 20, 1957 … Continued

ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಜಿಲ್ಲೆ 10 ತಾಲೂಕುಗಳ ಶಾಲೆ-ಪಿಯು ಕಾಲೇಜುಗಳಿಗೆ ಆ.18ರಂದು ರಜೆ ಘೋಷಣೆ

ಕಾರವಾರ: ಹವಾಮಾನ ಇಲಾಖೆ (IMD) ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್‌ 18ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯ ಕಾರವಾರ, ಅಂಕೋಲಾ ಕುಮಟಾ ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೊಯಿಡಾ, ದಾಂಡೇಲಿ ತಾಲೂಕುಗಳಲ್ಲಿ ವಿಪರೀತ ಮಳೆಯಾಗುವ ಮುನ್ಸೂಚನೆ … Continued

ಕಾಂಗ್ರೆಸ್‌ ಶಾಸಕ ಶಿವಗಂಗಾ ಬಸವರಾಜುಗೆ ಶೋಕಾಸ್ ನೋಟಿಸ್

ಬೆಂಗಳೂರು: ಪದೇ ಪದೇ ಮುಖ್ಯಮಂತ್ರಿ ಬದಲಾವಣೆಯ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ ಕಾರಣಕ್ಕೆ ಶಾಸಕ ಬಸವರಾಜು ಶಿವಗಂಗಾ (Basavaraj Shivaganga) ಅವರಿಗೆ ಕಾರಣ ಕೇಳಿ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ (KPCC) ನೀಡಿದೆ. ಇವರು ಚನ್ನಗಿರಿಯ ಕಾಂಗ್ರೆಸ್ ಶಾಸಕರಾಗಿದ್ದು, ಡಿಕೆ ಶಿವಕುಮಾರ ಅವರ ಆಪ್ತಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾ ಅವರಿಗೆ … Continued

ಆರ್‌ ಎಸ್‌ ಎಸ್‌ ಭಾರತದ ತಾಲಿಬಾನ್ : ವಿವಾದ ಸೃಷ್ಟಿಸಿದ ಕಾಂಗ್ರೆಸ್‌ ನಾಯಕ ಬಿ.ಕೆ. ಹರಿಪ್ರಸಾದ ಹೇಳಿಕೆ

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ ( (RSS)ವು ಭಾರತದ ತಾಲಿಬಾನ್‌ ಇದ್ದಂತೆ. ದೇಶದಲ್ಲಿ ಶಾಂತಿ ಕದಡುತ್ತಿದೆ ಎಂದು ಕಾಂಗ್ರೆಸ್ ವಿಧಾನ ಪರಿಷತ್‌ ಸದಸ್ಯ ಬಿಕೆ ಹರಿಪ್ರಸಾದ ಆರೋಪಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಿಂದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ವನ್ನು ಶ್ಲಾಘಿಸಿದ ಒಂದು ದಿನದ … Continued

ವಾಯುಭಾರ ಕುಸಿತ | ರಾಜ್ಯದ ಹಲವು ಜಿಲ್ಲೆಗಳಲ್ಲಿ ಆ.24ರ ವರೆಗೂ ವಿಪರೀತ ಮಳೆ ; ರೆಡ್-ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆ.17 ಮತ್ತು 18ರಂದು ಅತಿ ಭಾರಿ ಮಳೆಯಾಗಲಿದೆ ಎಂದು … Continued