ಆಪರೇಷನ್ ಸಿಂಧೂರ | ಭಾರತದ ದಾಳಿಯಲ್ಲಿ ಪಾಕಿಸ್ತಾನದ 150ಕ್ಕೂ ಹೆಚ್ಚು ಸೈನಿಕರು ಸತ್ತರೇ ? ಅಳಿಸಲಾದ ಪಾಕ್‌ ವರದಿಯಲ್ಲಿ ಉಲ್ಲೇಖ..!

ನವದೆಹಲಿ: ಈಗ ಅಳಿಸಲಾದ ವರದಿಯ ಪ್ರಕಾರ, ಭಾರತದ ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನವು 150 ಕ್ಕೂ ಹೆಚ್ಚು ಸೈನಿಕರನ್ನು ಕಳೆದುಕೊಂಡಿದೆ…! ಪಾಕಿಸ್ತಾನದ ಸಮಾ ಟಿವಿಯಲ್ಲಿ ಸಂಕ್ಷಿಪ್ತವಾಗಿ ಪ್ರಕಟವಾದ ಮತ್ತು ತ್ವರಿತವಾಗಿ ಅಳಿಸಲಾದ ವರದಿಯು ಮೇ 2025 ರಲ್ಲಿ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ಸಮಯದಲ್ಲಿ ಭಾರತೀಯ ದಾಳಿಗಳು ಪಾಕಿಸ್ತಾನ ಒಪ್ಪಿಕೊಂಡಿದ್ದಕ್ಕಿಂತ ಹೆಚ್ಚಿನ ಸಾವುನೋವುಗಳನ್ನು … Continued

ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ: ಇವರೇ ಬಿಜೆಪಿಯ ಸಂಭಾವ್ಯ ಅಭ್ಯರ್ಥಿಗಳು…

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಒಂದು ತಿಂಗಳಿಗಿಂತ ಕಡಿಮೆ ಸಮಯ ಇರುವಾಗ, ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಮತ್ತು ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸೇರಿದಂತೆ ಸಂಭಾವ್ಯ ಆಯ್ಕೆಗಳ ಕುರಿತು ಚರ್ಚೆಗಳು ಆರಂಭವಾಗಿದೆ. ಮೂಲಗಳ ಪ್ರಕಾರ, ಗುಜರಾತ್ ರಾಜ್ಯಪಾಲ ಆಚಾರ್ಯ … Continued

ಜಿನ್ನಾ, ಕಾಂಗ್ರೆಸ್, ಮೌಂಟ್‌ಬ್ಯಾಟನ್ ದೇಶ ವಿಭಜನೆಗೆ ಕಾರಣ : ಎನ್‌ಸಿಇಆರ್‌ ಟಿ ಪಠ್ಯ

ನವದೆಹಲಿ: ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT)ಯ ಹೊಸ ವಿಶೇಷ ಮಾಡ್ಯೂಲ್, ಭಾರತದ ವಿಭಜನೆಗೆ ಮೂವರು ಕಾರಣ ಎಂದು ಹೇಳಿದೆ. ದೇಶ ವಿಭಜನೆಗೆ ಕಾಂಗ್ರೆಸ್ ನಾಯಕತ್ವ, ಮುಹಮ್ಮದ್ ಅಲಿ ಜಿನ್ನಾ ಮತ್ತು ಅಂದಿನ ವೈಸ್‌ರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಕಾರಣ ಎಂದು ಅದು ಹೇಳುತ್ತದೆ. ಪ್ರತಿ ವರ್ಷ ಆಗಸ್ಟ್ 14 ರಂದು ಆಚರಿಸಲಾಗುವ … Continued

ವಿವಾಹಿತರ ಪ್ರೇಮ್‌ ಕಹಾನಿ ಕೊಲೆಯಲ್ಲಿ ಅಂತ್ಯ ; ತನ್ನಿಂದ ದೂರವಾದ ಪ್ರೇಯಸಿ ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ಪ್ರಿಯಕರ

ಬೆಳಗಾವಿ : ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಾಹಿತ ವ್ಯಕ್ತಿಯೊಬ್ಬ ತನ್ನ ಪ್ರೇಯಸಿ ತನ್ನಿಂದ ದೂರವಾದ ಹಿನ್ನೆಲೆಯಲ್ಲಿ ಕೋಪದಿಂದ ಆ ವಿವಾಹಿತೆಯನ್ನು ಬರ್ಬರವಾಗಿ ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಖಾನಾಪುರ ತಾಲೂಕಿನ ಬೀಡಿ ಗ್ರಾಮದ ರೇಶ್ಮಾ ತಿರವೀರ (28) ಎಂಬ … Continued

ತಾಂತ್ರಿಕ ದೋಷ : ಬೆಳಗಾವಿಯಿಂದ ಮುಂಬೈಗೆ ಹೊರಟ ವಿಮಾನ ಪುನಃ ಬೆಳಗಾವಿಯಲ್ಲೇ ಲ್ಯಾಂಡಿಂಗ್‌…!

ಬೆಳಗಾವಿ : ಶನಿವಾರ ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವೇಸ್ ವಿಮಾನ ಪ್ರಯಾಣ ಆರಂಭಿಸಿದ ನಂತರ ತಾಂತ್ರಿಕ ದೋಷದಿಂದಾಗಿ ಮುಂಬೈನಲ್ಲಿ ಲ್ಯಾಂಡ್‌ ಆಗುವ ಬದಲು ಪುನಃ ಬೆಳಗಾವಿ ನಿಲ್ದಾಣಕ್ಕೆ ಬಂದು ಇಳಿದ ಘಟನೆ ನಡೆದಿರುವುದು ವರದಿಯಾಗಿದೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ … Continued

ಭಾರತದ ರಾಷ್ಟ್ರೀಯ ಪ್ರಾಣಿ-ರಾಷ್ಟ್ರೀಯ ಪಕ್ಷಿಯನ್ನು ಒಂದೇ ಫ್ರೇಮಿನಲ್ಲಿ ಸೆರೆ ಹಿಡಿದ ಅದ್ಭುತ ವೀಡಿಯೊ ವೈರಲ್

ನವದೆಹಲಿ: 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಾದ್ಯಂತ ಅದ್ಧೂರಿಯಾಗಿ ಆಚರಣೆ ಮಾಡಿದ ಸಂದರ್ಭದಲ್ಲಿ ವಿಶೇಷ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿವೆ. ವೈರಲ್ ಆಗಿರುವ ಈ ವೀಡಿಯೊವೊಂದರಲ್ಲಿ ಭಾರತದ ರಾಷ್ಟ್ರೀಯ ಪ್ರಾಣಿ (National Animal) ಹುಲಿ ಮತ್ತು ರಾಷ್ಟ್ರೀಯ ಪಕ್ಷಿ ನವಿಲು (National Bird) ಕಾಡಿನ ಹಾದಿಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಒಂದೇ ಫ್ರೇಮ್‍ನಲ್ಲಿ ಸೆರೆಹಿಡಿಯಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಐಎಫ್‌ಎಸ್ … Continued

ಹಿರಿಯ ಹಾರ್ಮೊನಿಯಂ ವಾದಕ, ಶತಾಯುಷಿ ಶ್ರೀಕೃಷ್ಣರಾವ್‌ ಕಲ್ಗುಂಡಿಕೊಪ್ಪ ನಿಧನ

ಶಿರಸಿ : ಉತ್ತರಕನ್ನಡ ಜಿಲ್ಲೆಯ ಹಿರಿಯ ಹಾರ್ಮೊನಿಯಂ ವಾದಕ, ಅತ್ಯುತ್ತಮ ಕೃಷಿಕ ಹಾಗೂ ಶತಾಯುಷಿ ಶ್ರೀಕೃಷ್ಣ ರಾವ್ ಕಲ್ಗೊಂಡಿಕೊಪ್ಪ (100) ಅವರು, ಶನಿವಾರ (ಆಗಸ್ಟ್‌ 16) ಬೆಳಗಿನ ಜಾವ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಶಿರಸಿ ತಾಲೂಕಿನ ಸುಗಾವಿ ಗ್ರಾಮದ ಕಲ್ಗೊಂಡಿಕೊಪ್ಪದ ನಿವಾಸಿಯಾಗಿದ್ದ ಮೃತ ಶ್ರೀಕೃಷ್ಣ ರಾವ್ ಕಲ್ಗೊಂಡಿಕೊಪ್ಪ ಅವರು ಪತ್ನಿ, ನಾಲ್ವರು ಪುತ್ರರು, ಮೂವರು ಪುತ್ರಿಯರು … Continued

ಯಲ್ಲಾಪುರ | ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ ; ಸ್ಥಳದಲ್ಲೇ ಮೂವರು ಸಾವು, 7 ಜನರಿಗೆ ಗಂಭೀರ ಗಾಯ

ಯಲ್ಲಾಪುರ : ನಿಂತಿದ್ದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್ (KSRTC bus) ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವಿಗೀಡಾಗಿ, 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್​ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ (ಆ.15) ಮಧ್ಯರಾತ್ರಿ ಈ ಅಪಘಾತ ನಡೆದಿದೆ ಎನ್ನಲಾಗಿದ್ದು, ಓವರ್​ಟೇಕ್​ ಮಾಡುವ ಸಂದರ್ಭದಲ್ಲಿ ಬಸ್ … Continued

ನಾಗಾಲ್ಯಾಂಡ್ ರಾಜ್ಯಪಾಲ ಎಲ್‌. ಗಣೇಶನ್ ನಿಧನ

ಕೊಹಿಮಾ/ಚೆನ್ನೈ : ನಾಗಾಲ್ಯಾಂಡ್ ರಾಜ್ಯಪಾಲ ಎಲ್‌. ಗಣೇಶನ್ ಶುಕ್ರವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು ಎಂದು ಕೊಹಿಮಾದ ರಾಜಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಆರೆಸ್ಸೆಸ್ ಮೂಲದವರಾದ ತಮಿಳುನಾಡಿನ ಖ್ಯಾತ ಬಿಜೆಪಿ ನಾಯಕ ಗಣೇಶನ್ ಅವರು 2021 ಮತ್ತು 2025 ರ ನಡುವೆ ಮಣಿಪುರ, ಪಶ್ಚಿಮ ಬಂಗಾಳ ಮತ್ತು ನಾಗಾಲ್ಯಾಂಡ್ … Continued

ಮೂವರು ದೆಹಲಿಯಲ್ಲಿ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ : ‘ಸ್ಫೋಟಕʼ ಹೇಳಿಕೆ ನೀಡಿದ ಕೆಎನ್ ರಾಜಣ್ಣ

ತುಮಕೂರು: ನನ್ನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಮೂವರು ದೆಹಲಿಯಲ್ಲಿ ನನ್ನ ವಿರುದ್ಧ ವ್ಯವಸ್ಥಿತ ಪಿತೂರಿ ಮಾಡಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್‌. ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಧುಗಿರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಪಿತೂರಿ ವಿದ್ಯೆ ನನಗೂ ಗೊತ್ತಿದೆ. ಈ ಸಂದರ್ಭದಲ್ಲಿ ಅದನ್ನು ಬಳಸುವುದಿಲ್ಲ, ಮುಂದೆ ಕಾಲ ಬಂದೇ ಬರುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಮುಖ್ಯಮಂತ್ರಿ … Continued