ಆಘಾತಕಾರಿ ವೀಡಿಯೊ…| ಟ್ರಕ್ ಡಿಕ್ಕಿ ಹೊಡೆದು ಮೃತಪಟ್ಟ ಪತ್ನಿ ಶವವನ್ನು ಬೈಕಿಗೆ ಕಟ್ಟಿಕೊಂಡು ಒಯ್ದ ಪತಿ….!

ನಾಗ್ಪುರ: ದಾರಿಹೋಕರು ಯಾರೂ ಸಹಾಯಕ್ಕೆ ಬಾರದ ಕಾರಣ ವ್ಯಕ್ತಿಯೊಬ್ಬ ತನ್ನ ಮೃತ ಪತ್ನಿಯ ಶವವನ್ನು ಮೋಟಾರ್ ಸೈಕಲ್‌ಗೆ ಕಟ್ಟಿ ಒಯ್ಯುತ್ತಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿರುವುದು ವರದಿಯಾಗಿದೆ. ಭಾನುವಾರ ಮಧ್ಯಾಹ್ನದ ಸುಮಾರಿಗೆ ದಿಯೋಲಾಪರ್ ಪೊಲೀಸ್ ವ್ಯಾಪ್ತಿಯ ಮೊರ್ಫಾಟಾ ಬಳಿಯ ನಾಗ್ಪುರ-ಜಬಲ್‌ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಗಯಾರ್ಸಿ ಅಮಿತ ಯಾದವ್ ಎಂದು ಗುರುತಿಸಲಾದ ಮಹಿಳೆಗೆ … Continued

ಗಾಜಾ ಮೇಲೆ ಇಸ್ರೇಲ್‌ ದಾಳಿಯಲ್ಲಿ 5 ಅಲ್ ಜಜೀರಾ ಪತ್ರಕರ್ತರು ಸಾವು, ಓರ್ವ ಪತ್ರಕರ್ತ “ಹಮಾಸ್ ಭಯೋತ್ಪಾದಕ” ಎಂದ ಇಸ್ರೇಲ್

ಗಾಜಾ: ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯ ಬಳಿ ಇಸ್ರೇಲಿ ನಡೆಸಿದ ದಾಳಿಯಲ್ಲಿ ಕನಿಷ್ಠ ಐದು ಅಲ್ ಜಜೀರಾ ಪತ್ರಕರ್ತರು ಸಾವಿಗೀಡಾಗಿದ್ದಾರೆ. ಮೃತರಲ್ಲಿ ಅಲ್ ಜಜೀರಾ ವರದಿಗಾರರಾದ ಅನಾಸ್ ಅಲ್-ಶರೀಫ್ ಮತ್ತು ಮೊಹಮ್ಮದ್ ಕ್ರೈಖೆ, ಹಾಗೆಯೇ ಕ್ಯಾಮೆರಾಮೆನ್ ಇಬ್ರಾಹಿಂ ಜಹೀರ್, ಮೊವಾಮೆನ್ ಅಲಿವಾ ಮತ್ತು ಮೊಹಮ್ಮದ್ ನೌಫಲ್ ಸೇರಿದ್ದಾರೆ ಎಂದು ಅಲ್ ಜಜೀರಾ ತಿಳಿಸಿದೆ. ಅಲ್-ಶಿಫಾ ಆಸ್ಪತ್ರೆಯ … Continued

ಭಯಾನಕ ವೀಡಿಯೊ…| ಬಂಡೀಪುರ : ಫೋಟೋ ತೆಗೆಯಲು ಮುಂದಾದವನ ಅಟ್ಟಾಡಿಸಿಕೊಂಡು ಹೋಗಿ ಮೆಟ್ಟಿದ ಕಾಡಾನೆ

ಮೈಸೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕೇರಳದ ಪ್ರವಾಸಿಯೊಬ್ಬರ ಮೇಲೆ ಕಾಡು ಆನೆ ದಾಳಿ ನಡೆಸಿದೆ. ಪ್ರವಾಸಿಗನನ್ನು ನೆಲಕ್ಕೆ ತಳ್ಳಿದ ಆನೆ ಕಾಲಿನಿಂದ ತುಳಿದಿದೆ. ಆದರೆ ಉಳಿದ ಪ್ರವಾಸಿಗರು ಬೊಬ್ಬೆ ಹೊಡೆದ ನಂತರ ಆತನನ್ನು ಬಿಟ್ಟುಹೋಗಿದೆ. ಪ್ರವಾಸಿಗನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ವೈರಲ್ ಆಗಿರುವ ಘಟನೆಯ ವೀಡಿಯೊದಲ್ಲಿ, ವಾಹನಗಳು ಮತ್ತು ಜನರಿಂದ ತುಂಬಿದ್ದ ರಸ್ತೆಯಲ್ಲಿ … Continued

ಭಾರತ ನಮ್ಮ ಸುದ್ದಿಗೆ ಬಂದ್ರೆ ಪರಮಾಣು ಬಾಂಬ್‌ ಹಾಕ್ತೇವೆ ; ಅರ್ಧ ಜಗತ್ತನ್ನೇ ನಾಶ ಮಾಡ್ತೇವೆ ; ಅಮೆರಿಕದಲ್ಲಿ ನಿಂತು ಭಾರತಕ್ಕೆ ಬೆದರಿಕೆ ಹಾಕಿದ ಪಾಕ್‌ ಸೇನಾ ಮುಖ್ಯಸ್ಥ…!

ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಮತ್ತೊಮ್ಮೆ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ಈ ಬಾರಿ ಅಮೆರಿಕ ನೆಲದಿಂದ ಬಾರತಕ್ಕೆ ಬೆದರಿಕೆ ಹಾಕಿದ್ದಾರೆ. ಭವಿಷ್ಯದಲ್ಲಿ ಭಾರತದ ಜೊತೆ ಯುದ್ಧ ನಡೆದು ಪಾಕಿಸ್ತಾನಕ್ಕೆ ಅಸ್ತಿತ್ವದ ಬೆದರಿಕೆ ಎದುರಾದರೆ ಆಗ ಪಾಕಿಸ್ತಾನವು ಈ ಪ್ರದೇಶವನ್ನು ಪರಮಾಣು ಯುದ್ಧದಲ್ಲಿ ಮುಳುಗಿಸುತ್ತದೆ ಮತ್ತು “ಜಗತ್ತಿನ ಅರ್ಧದಷ್ಟನ್ನು” ನಾಶಪಡಿಸುತ್ತದೆ ಎಂದು ಬೆದರಿಕೆ ಹಾಕಿದ್ದಾರೆ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್‌ 16ರ ವರೆಗೆ ಭಾರಿ ಗಾಳಿಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 16ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡು, ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆಯನ್ನು ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಸಹ ಈ ಅವಧಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ. … Continued

ಕಾಂಗ್ರೆಸ್‌ ವಿದೇಶಾಂಗ ವ್ಯವಹಾರಗಳ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ನಾಯಕ ಆನಂದ ಶರ್ಮಾ ರಾಜೀನಾಮೆ

ನವದೆಹಲಿ: ಕೇಂದ್ರದ ಮಾಜಿ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಆನಂದ ಶರ್ಮಾ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ವಿದೇಶಾಂಗ ವ್ಯವಹಾರಗಳ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸುಮಾರು ಒಂದು ದಶಕದ ಕಾಲ ಅವರು ನಿರ್ವಹಿಸಿದ್ದ ಹುದ್ದೆಯಿಂದ ಕೆಳಗಿಳಿದಿದ್ದರೂ, ಶರ್ಮಾ ಅವರು ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ … Continued

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆಂಬ ಆರೋಪ ; ದಾಖಲೆ ನೀಡುವಂತೆ ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

ಬೆಂಗಳೂರು : ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ಆರೋಪಿಸಿರುವ ದಾಖಲೆಗಳನ್ನು ಸಲ್ಲಿಸುವಂತೆ ಕೋರಿದ್ದಾರೆ. ಈ ದಾಖಲೆಗಳು ವಿವರವಾದ ತನಿಖೆ ನಡೆಸಲು ಸಹಾಯ ಮಾಡುತ್ತದೆ ಎಂದು ರಾಹುಲ್‌ ಗಾಂಧಿಗೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ … Continued

ವೀಡಿಯೊ…| ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ಪೂಜಾ ಪಾತ್ರೆ ತೊಳೆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ಹೂವು ಕಟ್ಟಿದ ಸುಧಾಮೂರ್ತಿ

ಉಡುಪಿ: ಕರ್ನಾಟಕದ ಉಡುಪಿಗೆ ಭೇಟಿ ನೀಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪೂಜಾ ಪಾತ್ರೆ ತೊಳೆಯುವ ಮೂಲಕ ಸರಳತೆ ಮೆರೆದಿದ್ದಾರೆ. ಅವರಿಗೆ ರಾಜ್ಯಸಭೆ ಸದಸ್ಯೆ ಹಾಗೂ ಇನ್ಫೋಸಿಸ್‌ ಫೌಂಡೇಶನ್‌ ಮುಖ್ಯಸ್ಥೆ ಸುಧಾಮೂರ್ತಿ ಸಾಥ್ ನೀಡಿದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಶನಿವಾರ ಶ್ರೀಕೃಷ್ಣ ಮಠದಲ್ಲಿ ಸಾಂಪ್ರದಾಯಿಕ ಹೊಸ್ತಿಲು ಪೂಜೆ, ದೇವರ … Continued

ಬೆಂಗಳೂರಿಗೆ ಬಂದ ಪ್ರಧಾನಿ ಮೋದಿಗೆ 5 ವರ್ಷದ ಬಾಲಕಿ ಬರೆದ ಪತ್ರ ವೈರಲ್‌; ಪತ್ರದಲ್ಲೇನಿದೆ ಗೊತ್ತೆ..?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ, ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ಹಾಗೂ ಮೂರು ವಂದೇ ಭಾರತ ರೈಲುಗಳಿಗೆ ಇಂದು, (ಆಗಸ್ಟ್‌ 10) ಚಾಲನೆ ನೀಡಿದ್ದಾರೆ. ಬೆಂಗಳೂರಿಗೆ ಮೋದಿ ಆಗಮಿಸಿದ ಹಿನ್ನೆಲೆಯಲ್ಲಿ ನಗರದ 5 ವರ್ಷದ ಬಾಲಕಿ ಪ್ರಧಾನಿಗೆ ಪತ್ರ ಬರೆದಿದ್ದು, ಇದು ವೈರಲ್‌ ಆಗಿದೆ. ಬೆಂಗಳೂರಿನ ರಸ್ತೆಗಳ … Continued

ಕಾಲೇಜಿನ ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್ ; ಹಲ್ಲೆ ನಡೆಸಿ, ವಿದ್ಯುತ್ ಶಾಕ್ ನೀಡಿದ ಹಿರಿಯ ವಿದ್ಯಾರ್ಥಿಗಳು…!

ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಸರ್ಕಾರಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನಿಗೆ ಇತ್ತೀಚೆಗೆ ಹಿರಿಯ ವಿದ್ಯಾರ್ಥಿಗಳ ಗುಂಪೊಂದು ರ‍್ಯಾಕಿಂಗ್ ಮಾಡುವಾಗ ಹಲ್ಲೆ ನಡೆಸಿ, ನಂತರ ವಿದ್ಯುತ್ ಶಾಕ್ ನೀಡಿರುವ ಆರೋಪ ಕೇಳಿಬಂದಿದೆ. ಮೂಲಗಳ ಪ್ರಕಾರ, ದಾಚೆಪಲ್ಲಿ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಇದರ ವೀಡಿಯೊ ವೈರಲ್ ಆಗಿದೆ.ವಿದ್ಯಾರ್ಥಿಯನ್ನು ಹಾಸ್ಟೆಲ್‌ಗೆ ಕರೆದೊಯ್ದು ಹಲ್ಲೆ ನಡೆಸಿ ವಿದ್ಯುತ್ … Continued