ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಣೆ

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆಗೆ ಚುನಾವಣಾ ಆಯೋಗ ಶುಕ್ರವಾರ ದಿನಾಂಕ ನಿಗದಿ ಮಾಡಿದೆ. ಜಗದೀಪ ಧನಕರ ಅವರ ಹಠಾತ್ ರಾಜೀನಾಮೆಯ ನಂತರ ತೆರವಾದ ಸ್ಥಾನಕ್ಕೆ ಆಯ್ಕೆ ಮಾಡಲು ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ. ಆಗಸ್ಟ್ 7 ರಂದು ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಮತ್ತು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 21 ಆಗಿದೆ. … Continued

ಬೆಂಗಳೂರು | ಬಾಲಕನ ಅಪಹರಿಸಿ ಬರ್ಬರ ಹತ್ಯೆ : ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧನ

ಬೆಂಗಳೂರು: ಟ್ಯೂಷನ್​ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕನನ್ನು ಅಪಹರಿಸಿ, ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಕಗ್ಗಲಿಪುರ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗುರುವಾರ ತಡರಾತ್ರಿ ಕಗ್ಗಲೀಪುರ ರಸ್ತೆಯ ಬಳಿಯಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲು ಹುಳಿಮಾವು ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಮಾರಕಾಸ್ತ್ರಗಳನ್ನು ಬಳಸಿ ಆರೋಪಿಗಳು … Continued

ನಟ ಪ್ರಥಮ್ ಮುಖಕ್ಕೆ ಮಸಿ ಬಳಿಯಲು ಯತ್ನ

ದೊಡ್ಡಬಳ್ಳಾಪುರ: ಸ್ಯಾಂಡಲ್‌ವುಡ್‌ ನಟ, ಬಿಗ್‌ ಬಾಸ್‌ ಖ್ಯಾತಿಯ ಪ್ರಥಮ್‌ ಅವರ ಮುಖಕ್ಕೆ ಮುಖಕ್ಕೆ ಮಸಿ ಬಳಿಯಲು ಯತ್ನಿಸಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ದೊಡ್ಡಬಳ್ಳಾಪುರ ಎಲ್ಲಮ್ಮ ದೇವಸ್ಥಾನಕ್ಕೆ ಆಗಮಿಸಿದ್ದಾಗ ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದರ್ಶನ್‌ ಫ್ಯಾನ್ಸ್‌ ಎನ್ನಲಾಗಿದ್ದ ಕೆಲವರ ವಿರುದ್ಧ ಪ್ರಥಮ್ ಪೊಲೀಸರಿಗೆ ದೂರು ನೀಡಿದ್ದರು. ಈ … Continued

ಜಾಗತಿಕ ನಾಯಕರ ಪಟ್ಟಿ : ಶೇ.75 ಅನುಮೋದನೆಯೊಂದಿಗೆ ಪ್ರಧಾನಿ ಮೋದಿಗೆ ಅಗ್ರಸ್ಥಾನ ; 8ನೇ ಸ್ಥಾನದಲ್ಲಿ ಟ್ರಂಪ್ : ಸಮೀಕ್ಷೆಯ ಟಾಪ್ 10 ನಾಯಕರು

ನವದೆಹಲಿ: ಅಮೆರಿಕ ಮೂಲದ ಡೇಟಾ ವಿಶ್ಲೇಷಣಾ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ಇತ್ತೀಚೆಗೆ ನಡೆಸಿದ ಜಾಗತಿಕ ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಶೇ. 75 ರಷ್ಟು ಅನುಮೋದನೆ ರೇಟಿಂಗ್‌ನೊಂದಿಗೆ ಪ್ರಜಾಪ್ರಭುತ್ವದ ವಿಶ್ವ ನಾಯಕರಾಗಿ ಹೊರಹೊಮ್ಮಿದ್ದಾರೆ. ಅವರು ವಿಶ್ವ ನಾಯಕರ ‘ಡೆಮಾಕ್ರಟಿಕ್ ಲೀಡರ್ ಅಪ್ರೂವಲ್ ರೇಟಿಂಗ್ಸ್’ ಪಟ್ಟಿಯಲ್ಲಿ ಶೇ. 75 ರಷ್ಟು ಅನುಮೋದನೆ ರೇಟಿಂಗ್‌ನೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. … Continued

ಮುಡಾ ಹಗರಣ : ಸರ್ಕಾರಕ್ಕೆ ವರದಿ ಸಲ್ಲಿಸಿದ ನ್ಯಾ. ದೇಸಾಯಿ ಆಯೋಗ

ಬೆಂಗಳೂರು : ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮವಾಗಿ ಸೈಟುಗಳನ್ನು ಹಂಚಿಕೆ ಆರೋಪದ ಬಗ್ಗೆ ತನಿಖೆಗಾಗಿ ನೇಮಕ ಮಾಡಿದ್ದ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಪಿ.ಎನ್‌. ದೇಸಾಯಿ ಅವರ ನೇತೃತ್ವದ ವಿಚಾರಣಾ ಆಯೋಗವು ಒಂದು ವರ್ಷದ ಬಳಿಕ ರಾಜ್ಯ ಸರ್ಕಾರಕ್ಕೆ ಆರು ಸಂಪುಟಗಳ ವರದಿಯನ್ನು ಗುರುವಾರ ಸಲ್ಲಿಸಿದೆ. ತಮ್ಮ ತಂಡದೊಂದಿಗೆ ಆಗಮಿಸಿದ ನ್ಯಾಯಮೂರ್ತಿ … Continued

ಸ್ಟಾಲಿನ್ ಜೊತೆ ಬೆಳಗಿನ ವಾಕಿಂಗ್‌ ನಂತರ ಎನ್‌ ಡಿಎ ಜೊತೆ ಮೈತ್ರಿ ಕೊನೆಗೊಳಿಸಿದ ತಮಿಳುನಾಡು ಮಾಜಿ ಸಿಎಂ ಪನ್ನೀರಸೆಲ್ವಂ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆಯಿಂದ ಹೊರಹಾಕಲ್ಪಟ್ಟ ನಾಯಕ ಓ ಪನ್ನೀರಸೆಲ್ವಂ (ಒಪಿಎಸ್) ಅವರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆಗಿನ ಸಂಬಂಧ ಕಡಿದುಕೊಳ್ಳುವ ತಮ್ಮ ಬಣದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಬೆಳಗಿನ ವಾಕಿಂಗ್‌ ಸಮಯದಲ್ಲಿ ಭೇಟಿಯಾದ ಸ್ವಲ್ಪ ಸಮಯದ ನಂತರ ಅವರಿಂದ ಈ ನಿರ್ಧಾರ ಹೊರಬಿದ್ದಿದೆ. … Continued

8ನೇ ತರಗತಿಯ ಹುಡುಗಿ ಮದುವೆಯಾದ 40 ವರ್ಷದ ವ್ಯಕ್ತಿ…! ಹುಡುಗಿಯ ಶಿಕ್ಷಕರಿಂದ ಪ್ರಕರಣ ಬೆಳಕಿಗೆ

ತೆಲಂಗಾಣದಲ್ಲಿ ರಂಗಾ ರೆಡ್ಡಿ ಜಿಲ್ಲೆಯಲ್ಲಿ ನಿಜ ಜೀವನದ ‘ಬಾಲಿಕಾ ವಧು’ ಪ್ರಕರಣ ವರದಿಯಾಗಿದೆ. ಆಕೆಯ ಶಿಕ್ಷಕರು ಜಿಲ್ಲಾ ಮಕ್ಕಳ ರಕ್ಷಣೆ ಸೇವೆಗಳ ಸಿಬ್ಬಂದಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಆಕೆಯನ್ನು ರಕ್ಷಿಸಲಾಗಿದೆ. ಮೇ 28 ರಂದು 8 ನೇ ತರಗತಿಯ ವಿದ್ಯಾರ್ಥಿನಿಯನ್ನು ರಂಗಾರೆಡ್ಡಿ ಜಿಲ್ಲೆಯ ಕಂಡಿವಾಡಾದ 40 ವರ್ಷದ ಶ್ರೀನಿವಾಸ್ ಗೌಡ್‌ ಎಂಬ ವ್ಯಕ್ತಿಗೆ … Continued

ಭಾರತದಿಂದ ಆಮದಿಗೆ ಸುಂಕ-ದಂಡ ; ಪಾಕಿಸ್ತಾನದ ಜೊತೆ ತೈಲ ಒಪ್ಪಂದಕ್ಕೆ ಸಹಿ ಹಾಕಿದ ಡೊನಾಲ್ಡ್ ಟ್ರಂಪ್ ; ಇದರ ಅರ್ಥವೇನು?

ವಾಷಿಂಗ್ಟನ್‌ : ತನ್ನ “ಸ್ನೇಹಿತ” ಭಾರತದ ಮೇಲೆ ಶೇಕಡಾ 25 ರಷ್ಟು ‘ಪ್ರತಿ ಸುಂಕ’ ಮತ್ತು ರಷ್ಯಾದಿಂದ ಶಸ್ತ್ರಾಸ್ತ್ರಗಳು ಮತ್ತು ತೈಲವನ್ನು ಖರೀದಿಸಿದ್ದಕ್ಕಾಗಿ ದಂಡವನ್ನು ಘೋಷಿಸಿದ ನಂತರ, ಡೊನಾಲ್ಡ್ ಟ್ರಂಪ್ ಗುರುವಾರ ಅಮೆರಿಕವು ಪಾಕಿಸ್ತಾನದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ ಎಂದು ಪ್ರಕಟಿಸಿದ್ದಾರೆ. ಇದರಲ್ಲಿ “ಬೃಹತ್” ತೈಲ ನಿಕ್ಷೇಪಗಳನ್ನು ಅಭಿವೃದ್ಧಿಪಡಿಸುವ ಯೋಜನೆಗಳೂ ಸೇರಿವೆ. ಉಕ್ರೇನ್ ವಿರುದ್ಧ ಯುದ್ಧ … Continued

ಕೆಎಸ್​ಆರ್​ಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ; ಆಗಸ್ಟ್ 5ರಿಂದ ಸ್ತಬ್ಧವಾಗುತ್ತಾ ಬಸ್ಸುಗಳ ಓಡಾಟ..?

ಬೆಂಗಳೂರು : 38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5 ರಿಂದ ಮುಷ್ಕರ ನಡೆಸಲು ನಿರ್ಧರಿಸಿದೆ. ನಾಲ್ಕು ಸಾರಿಗೆ ನಿಗಮಗಳ ನೌಕರರು ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಿರ್ಧಾರ … Continued

ಧರ್ಮಸ್ಥಳ ಪ್ರಕರಣ : 6ನೇ ಸ್ಥಳದಲ್ಲಿ ಮಾನವ ಮೂಳೆ ರೀತಿಯ ಅವಶೇಷಗಳು ಪತ್ತೆ ; ವರದಿ

ಮಂಗಳೂರು : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಮೃತದೇಹಗಳ ಪತ್ತೆಗಾಗಿ ನಡೆಯುತ್ತಿರುವ 3ನೇ ದಿನ ಗುರುವಾರದ ಶೋಧ ಕಾರ್ಯದ ವೇಳೆ ಆರನೇ ಸ್ಥಳದಲ್ಲಿ ಅಗೆಯುವ ವೇಳೆ ಮೂಳೆ ರೀತಿಯ ಅವಶೇಷಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ. ದೂರುದಾರ ಗುರುತಿಸಿರುವ ನೇತ್ರಾವತಿ ಸ್ನಾನ ಘಟ್ಟದ ಸಮೀಪವಿರುವ … Continued