ಬಿಬಿಎಂಪಿ ಸಹಾಯಕ ನಿರ್ದೇಶಕರ ಮನೆಯಲ್ಲಿ ಬಿಬಿಎಂಪಿ ಕಡತ ಪತ್ತೆ

ಬೆಂಗಳೂರು: ಬಿಬಿಎಂಪಿ ಸಹಾಯಕ ನಿರ್ದೇಶಕ ದೇವೇಂದ್ರಪ್ಪ ಅವರ ಮನೆಯಲ್ಲಿ ಬಿಬಿಎಂಪಿ ನಗರಯೋಜನೆ ವಿಭಾಗಕ್ಕೆ ಸೇರಿದ 430ಕ್ಕೂ ಹೆಚ್ಚು ಕಡತಗಳು ಪತ್ತೆಯಾಗಿವೆ. ರಾಜ್ಯ ಭ್ರಷ್ಟಾಚಾರ ನಿಗ್ರಹದ ಬಲೆಗೆ ಬಿದ್ದಿರುವ ಅವರ ಮನೆಯಲ್ಲಿ ಇದಲ್ಲದೆ, 120 ಲೀಟರ್ ಮದ್ಯದ ಬಾಟಲ್‍ಗಳು ಸಹ ಪತ್ತೆಯಾಗಿವೆ. ಪ್ರಕರಣದ ತನಿಖೆಯನ್ನು ಮುಂದುವರೆಸಿರುವ ಎಸಿಬಿ ಅಧಿಕಾರಿಗಳು ದೇವೇಂದ್ರಪ್ಪ ಅವರ ಮನೆಯನ್ನು ಶೋಧಿಸಿದಾಗ ವಿವಿಧ ಬ್ಯಾಂಕ್ … Continued

ಹೈಕೋರ್ಟಿನಲ್ಲಿ‌ ಗೌತಮ್‌ ನವಲಖಾ ಮೇಲ್ಮನವಿ ಅರ್ಜಿ ವಜಾ

ಮುಂಬೈ: ಕೋರೆಗಾಂವ ಹಿಂಸಾಚಾರ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯ ತನ್ನ ಶಾಸನಬದ್ಧ ಜಾಮೀನು ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಗೌತಮ್‌ ನವಲಖಾ ಸಲ್ಲಿಸಿದ್ದ ಮೇಲ್ಮನವಿಯನ್ನು ಬಾಂಬೆ ಉಚ್ಚ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಮೂಲಕ ಸೆಪ್ಟೆಂಬರ್ 9 ರಂದು ಸಲ್ಲಿಸಲಾದ ಮೇಲ್ಮನವಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ನವಲಖಾ ಅವರ ಗೃಹಬಂಧನದ … Continued

ಮೃತ ರೈತರ ಕುಟುಂಬಸ್ಥರಿಗೆ ನೆರವು: ಐವರು ಶಿಕ್ಷಣತಜ್ಞರಿಂದ ಪೋರ್ಟಲ್‌

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಆಂದೋಲನದಲ್ಲಿ ಮೃತಪಟ್ಟ ರೈತರ ನೋಂದಣಿ ಹಾಗೂ ಅವರ ಕುಟುಂಬಸ್ಥರಿಗೆ ನೆರವು ನೀಡಲು ಐವರು ಶಿಕ್ಷಣತಜ್ಞರು ಪೋರ್ಟಲ್‌‌ ಆರಂಭಿಸಿದ್ದಾರೆ. ವಿಶ್ವವಿದ್ಯಾಲಯಗಳ ಪ್ರಸ್ತುತ ಮತ್ತು ಮಾಜಿ ಉಪಕುಲಪತಿಗಳು ಸೇರಿದಂತೆ ಐದು ಪ್ರಮುಖ ಶಿಕ್ಷಣ ತಜ್ಞರು ಭಾನುವಾರ ಪಂಜಾಬ್ ಕೃಷಿ ವಿಶ್ವವಿದ್ಯಾಲಯದಲ್ಲಿ (ಪಿಎಯು) ಪೋರ್ಟಲ್‌ಗೆ ಚಾಲನೆ ನೀಡಿದರು. ಪ್ರತಿಭಟನೆಯ ಸಮಯದಲ್ಲಿ ಸಾವನ್ನಪ್ಪಿದ … Continued

ಮಾತುಕತೆಗೆ ಸರ್ಕಾರವೇ ದಿನಾಂಕ ನಿಗದಿ ಮಾಡಲಿ: ಪಿಎಂ ಹೇಳಿಕೆಗೆ ರೈತ ಸಂಘಟನೆಗಳ ಉತ್ತರ

ಹೊಸ ಕೃಷಿ ಕಾನೂನುಗಳ ರದ್ದತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ರೈತ ಹೋರಾಟಗಾರರು ಮುಂದಿನ ಸುತ್ತಿನ ಮಾತುಕತೆಗೆ ನಾವು ಸಿದ್ಧರಾಗಿದ್ದಾರೆ. ಅದಕ್ಕೆ ಸರ್ಕಾರ ದಿನಾಂಕ ನಿಗದಿ ಪಡಿಸಲಿ ಎಂದು  ಸಂಯುಕ್ತ ಕಿಸಾನ್‌ ಮೋರ್ಚಾದ ಹಿರಿಯ ಸದಸ್ಯ ಶಿವಕುಮಾರ ಕಕ್ಕಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರೈತರ ಹೋರಾಟವನ್ನು ಕೊನೆಗೊಳಿಸಿ, ಮಾತುಕತೆಗೆ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.  ಹಿಂದೆ ಮಾತುಕತೆಗೆ … Continued

ಕೇಂದ್ರಕ್ಕೆ ರೈತರ ಪಟ್ಟಿ ಕಳುಹಿಸಲಾಗಿದೆ:ಮಮತಾ ಸ್ಪಷ್ಟನೆ

ಕೋಲ್ಕತ್ತ: ಪ್ರಧಾನಮಂತ್ರಿ ಕಿಸಾನ ಸಮ್ಮಾನ್‌ ಯೋಜನೆಗೆ ಪಶ್ಚಿಮ ಬಂಗಾಳ ೨.೫ ಲಕ್ಷ ರೈತರ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರಕಾರದ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಮರುದಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ. … Continued

ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿ ಮಾಡಿ: ಪ್ರಧಾನಿಗೆ ಟಿಕಾಯಿತ್‌ ಆಗ್ರಹ

ನವ ದೆಹಲಿ: ಹೊಸ ವಿವಾದಾತ್ಮಕ ಕೃಷಿ-ಮಾರುಕಟ್ಟೆ ಕಾನೂನುಗಳನ್ನು ರದ್ದುಪಡಿಸುವುದರ ಜೊತೆಗೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೆ ತರಬೇಕು ಎಂಬ ರೈತರ ಬೇಡಿಕೆಯನ್ನುರಾಕೇಶ ಟಿಕಾಯಿತ್‌ ಪುನರುಚ್ಚರಿಸಿದ್ದಾರೆ ಸೋಮವಾರ ರಾಜ್ಯಸಭೆಯಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮುಂದುವರಿಯಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ  ಘೋಷಣೆಗೆ ಪ್ರತಿಕ್ರಿಯಿಸಿದ ರೈತ ಮುಖಂಡ ರಾಕೇಶ್ ಟಿಕಾಯಿತ್‌ ಎಂಎಸ್‌ಪಿ ಕಾನೂನಿಗೆ ಒತ್ತಾಯಿಸಿದರು … Continued

ಗಾಜಿಪುರ ರೈತ ಹೋರಾಟಕ್ಕೆ ಕರ್ನಾಟಕದ ೫೦ ರೈತರು

ಗಾಜಿಪುರ: ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಭಾರತೀಯ ಕಿಸಾನ್‌ ಯೂನಿಯನ್‌ ನಡೆಸುತ್ತಿರುವ ಚಳವಳಿಯಲ್ಲಿ ಪಾಲ್ಗೊಳ್ಳಲು ಕರ್ನಾಟಕದ ೫೦ ಜನ ರೈತರ ಗುಂಪು ಸೋಮವಾರ ಆಗಮಿಸಿತು. ಗಾಜಿಪುರ ಗಡಿಯಲ್ಲಿ ನಡೆಯುತ್ತಿರುವ ಹೋರಾಟಗಾರರ ಡೇರೆಗಳನ್ನು ಕರ್ನಾಟಕದ ಕೃಷಿಕರು ಸೇರಿಕೊಂಡರು. ನಾವು ಬೆಂಗಳೂರು ಹಾಗೂ ಮೈಸೂರಿನಲ್ಲಿ ರೈತ ಪರ ಹೋರಾಟದಲ್ಲಿ ಪಾಲ್ಗೊಂಡಿದ್ದೇವೆ. ಅಲ್ಲದೇ ಉತ್ತರ ಪ್ರದೇಶದಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಭಾಗವಹಿಸಿದ್ದೆವೆ. … Continued

ಸಿಖ್ಖರ ದೂಷಣೆ ನಿಲ್ಲಿಸಿ: ಪ್ರಧಾನಿ ಮೋದಿ

ನವ ದೆಹಲಿ: ಸಿಖ್ಖರ ಬಗ್ಗೆ ದೂಷಣೆ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ರೈತರು ಹೋರಾಟ ಹಿಂಪಡೆದು ನೀತನ ಕೃಷಿ ಕಾನೂನು ಜಾರಿಯಗಲು ಒಂದು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು. ಸೋಮವಾರ ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಕೃಷಿ ಕಾನೂನ ಜಾರಿ ವಿಚಾರದಲ್ಲಿ ನಡೆಯುತ್ತಿರುವ ರಾಜಕಾರಣದ … Continued

ವಿಪಕ್ಷಗಳ ಸಭಾತ್ಯಾಗದ ಮಧ್ಯೆ ಆಸ್ತಿ ತೆರಿಗೆ ವಿಧೇಯಕಕ್ಕೆ ಅಂಗೀಕಾರ

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದಲ್ಲಿ ಆಸ್ತಿ ತೆರಿಗೆ ಪಾವತಿ ಮಾಡುವವರಿಗೆ ಶೇ. ೫ ರಷ್ಟು ರಿಯಾಯ್ತಿ ನೀಡುವ ವಿಧಾನಸಭೆಯಿಂದ ಅಂಗೀಕೃತವಾಗಿದ್ದ ಕರ್ನಾಟಕ ಪುರಸಭೆಗಳು ಮತ್ತು ಕೆಲವು ಇತರೆ ಕಾನೂನು ತಿದ್ದುಪಡಿಗಳ ವಿಧೇಯಕ-೨೦೨೧ಕ್ಕೆ ಕಾಂಗ್ರೆಸ್-ಜೆಡಿಎಸ್ ಸದಸ್ಯರು ಪರಿಷತ್‌ನಲ್ಲಿ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ನಡೆಸಿದರು. ಎರಡೂ ಪಕ್ಷಗಳ ಸಭಾತ್ಯಾಗದ ನಡುವೆ ಯಾವುದೇ ಚರ್ಚೆ ಇಲ್ಲದೆ ಕರ್ನಾಟಕ ಪುರಸಭೆಗಳು ಮತ್ತು … Continued

ನೂತನ ವಿಜಯನಗರ ಜಿಲ್ಲೆಗೆ ಅಧಿಕೃತ ಮುದ್ರೆ

ಬಳ್ಳಾರಿ : ಜಿಲ್ಲೆಯ ಹಲವರ ವಿರೋಧದ ನಡುವೆಯೂ ಅಖಂಡ ಬಳ್ಳಾರಿ‌ ಜಿಲ್ಲೆಯ‌ನ್ನು ವಿಭಜನೆ ಮಾಡಿ ರಾಜ್ಯ ಸರ್ಕಾರ ಅಂತಿಮವಾಗಿ ವಿಜಯನಗರ ಜಿಲ್ಲೆ ರಚನೆಗೆ ರಾಜ್ಯ ಸರ್ಕಾರ ಸೋಮವಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ನೂತನ ಜಿಲ್ಲೆಯಲ್ಲಿ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ, ಹರಪನಹಳ್ಳಿಗಳನ್ನು ತಾಲೂಕುಗಳಾಗಿ ಸೇರ್ಪಡೆ ಮಾಡಲಾಗಿದ್ದು, ಹೊಸಪೇಟೆ ಜಿಲ್ಲಾ ಕೇಂದ್ರವಾಗಲಿದೆ. ವಿಜಯನಗರ ಜಿಲ್ಲೆ ಘೋಷಣೆ … Continued