ಮಾಲೆಗಾಂವ್ ಸ್ಫೋಟ : ಪ್ರಜ್ಞಾ ಠಾಕೂರ್‌, ಕರ್ನಲ್ ಪುರೋಹಿತ ಸೇರಿ ಎಲ್ಲ ಆರೋಪಿಗಳು ಖುಲಾಸೆ

ಮುಂಬೈ: ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ಆರು ಜನರು ಸಾವಿಗೀಡಾದ ಮತ್ತು ನೂರಕ್ಕೂ ಹೆಚ್ಚು ಜನರಿಗೆ ಗಾಯಗೊಂಡ ಪ್ರಬಲ ಬಾಂಬ್ ಸ್ಫೋಟದ ಘಟನೆಯ ಸುಮಾರು 17 ವರ್ಷಗಳ ನಂತರ, ಮುಂಬೈನ ವಿಶೇಷ ನ್ಯಾಯಾಲಯವು ಇಂದು, ಗುರುವಾರ (ಜುಲೈ ೩೧) ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಮತ್ತು ಮಾಜಿ ಸೇನಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ ಶ್ರೀಕಾಂತ ಪುರೋಹಿತ್ ಸೇರಿದಂತೆ … Continued

‘ಹ್ಯಾಂಡ್‌ ರೈಟಿಂಗ್‌’ ಚೆನ್ನಾಗಿಲ್ಲವೆಂದು 8 ವರ್ಷದ ಬಾಲಕನ ಕೈ ಸುಟ್ಟ ಶಿಕ್ಷಕಿ…!

ಮುಂಬೈ: ಮಕ್ಕಳ ಮೇಲಿನ ದೌರ್ಜನ್ಯದ ಭಯಾನಕ ಪ್ರಕರಣವೊಂದರಲ್ಲಿ, ಮುಂಬೈನ ಮಲಾಡ್ ಪ್ರದೇಶದ ಖಾಸಗಿ ಟ್ಯೂಷನ್ ಶಿಕ್ಷಕಿಯೊಬ್ಬಳು ಕೈಬರಹ (handwriting) ಚೆನ್ನಾಗಿಲ್ಲವೆಂದು ಎಂಟು ವರ್ಷದ ಬಾಲಕನ ಕೈಯನ್ನು ಸುಟ್ಟ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದಾಳೆ. ರಾಜಶ್ರೀ ರಾಥೋಡ ಎಂದು ಗುರುತಿಸಲ್ಪಟ್ಟ ಆರೋಪಿ ಶಿಕ್ಷಕಿ ಶಿಕ್ಷೆಯ ಭಾಗವಾಗಿ ಉರಿಯುತ್ತಿರುವ ಮೇಣದಬತ್ತಿಯನ್ನು ಅಂಗೈ ಮೇಲೆ ಇಟ್ಟಿದ್ದರಿಂದ ಮಗುವಿನ ಕೈ ತೀವ್ರವಾಗಿ ಸುಟ್ಟುಹೋಗಿದೆ … Continued

6 ಭಾರತೀಯ ಕಂಪನಿಗಳ ಮೇಲೆ ನಿರ್ಬಂಧ ವಿಧಿಸಿದ ಅಮೆರಿಕ ; ಕಾರಣ..?

ವಾಷಿಂಗ್ಟನ್‌: ಕನಿಷ್ಠ ಆರು ಭಾರತೀಯ ಕಂಪನಿಗಳ ಮೇಲೆ ಅಮೆರಿಕ (America) ನಿರ್ಬಂಧ ಹೇರಿದೆ. ಇರಾನಿನ ಪೆಟ್ರೋಲಿಯಂ (Iranian Oil) ಮತ್ತು ಪೆಟ್ರೋಕೆಮಿಕಲ್ ಉತ್ಪನ್ನಗಳ ವ್ಯಾಪಾರದಲ್ಲಿ ತೊಡಗಿರುವ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಭಾರತದ ಆರು ಕಂಪನಿಗಳು “ಇರಾನಿನ ಪೆಟ್ರೋಲಿಯಂ, ಪೆಟ್ರೋಲಿಯಂ ಉತ್ಪನ್ನಗಳು ಅಥವಾ ಪೆಟ್ರೋಕೆಮಿಕಲ್ ವ್ಯಾಪಾರದಲ್ಲಿ ತೊಡಗಿಸಿಕೊಂಡಿದೆ ಎಂಬ ಕಾರಣಕ್ಕೆ ಕಾರ್ಯನಿರ್ವಾಹಕ ಆದೇಶ 13846 … Continued

ಇಸ್ರೋದಿಂದ ವಿಶ್ವದ ಅತ್ಯಂತ ದುಬಾರಿ ಭೂ ಚಿತ್ರಣ ಉಪಗ್ರಹ ನಿಸಾರ್ ಯಶಸ್ವಿಯಾಗಿ ಉಡಾವಣೆ

ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಾಸಾ-ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ (ನಿಸಾರ್) ಉಪಗ್ರಹವನ್ನು ಬುಧವಾರ ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಭಾರತ ತನ್ನ ಬಾಹ್ಯಾಕಾಶ ಮತ್ತು ಹವಾಮಾನ ಮಹತ್ವಾಕಾಂಕ್ಷೆಗಳಲ್ಲಿ ಮಹತ್ವದ ಮೈಲಿಗಲ್ಲನ್ನು ದಾಟಿದೆ. 2393 ಕಿಲೋಗ್ರಾಂಗಳಷ್ಟು ತೂಕದ ಉಪಗ್ರಹವನ್ನು ಭಾರತೀಯ ಕಾಲಮಾನ ಸಂಜೆ 5:40 ಕ್ಕೆ ಇಸ್ರೋದ ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಜಿಎಸ್ಎಲ್ವಿ) … Continued

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಗದ್ದಲ: ಕಾಂಗ್ರೆಸ್‌ ಸದಸ್ಯೆ ಅಸ್ವಸ್ಥ

ಹುಬ್ಬಳ್ಳಿ: ಬುಧವಾರ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಗದ್ದಲ ನಡೆದು ಸದಸ್ಯೆಯೊಬ್ಬರು ಅಸ್ವಸ್ಥಗೊಂಡಿದ್ದಾರೆ. ಸಭೆಗೆ ಅಗೌರವ ತೋರಲಾಗಿದೆ ಎಂದು ಪಾಲಿಕೆ ಮೇಯರ್ ಮೂವರು ಕಾಂಗ್ರೆಸ್ ಸದಸ್ಯರನ್ನು ಅಮಾನತುಗೊಳಿಸಿ ಆದೇಶ ಮಾಡಿದ್ದಾರೆ. ಪಾಲಿಕೆಯ ಸಾಮಾನ್ಯ ಸಭೆಯ ವೇಳೆ ಅಭಿವೃದ್ಧಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷದ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ತಾರಕಕ್ಕೆ ಹೋಗುತ್ತಿದ್ದಂತೆಯೇ ಅಲ್ಲಿದ್ದ ಸದಸ್ಯರನ್ನು … Continued

ಔಷಧಗಳಿಂದ ಹಿಡಿದು ರತ್ನಗಳವರೆಗೆ : ಭಾರತದ ಆಮದಿಗೆ ಟ್ರಂಪ್ ಸುಂಕಗಳ ಘೋಷಣೆ ನಂತರ ಅಮೆರಿಕನ್ನರಿಗೆ ಯಾವುದು ದುಬಾರಿ…?

ನವದೆಹಲಿ : ಆಗಸ್ಟ್ 1 ರಿಂದ ಭಾರತದಿಂದ ಆಮದಾಗುವ ವಸ್ತುಗಳ ಮೇಲೆ ಶೇ. 25 ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಘೋಷಿಸಿದ್ದಾರೆ. ಈ ಕ್ರಮವು ಸ್ಮಾರ್ಟ್‌ಫೋನ್‌ಗಳು, ಜವಳಿ, ಆಟೋ ಬಿಡಿಭಾಗಗಳು ಮತ್ತು ಆಭರಣಗಳಂತಹ ಪ್ರಮುಖ ವಲಯಗಳಲ್ಲಿ ಅಮೆರಿಕದ ಗ್ರಾಹಕರಿಗೆ ಬೆಲೆಗಳನ್ನು ಹೆಚ್ಚಿಸುವ ನಿರೀಕ್ಷೆಯಿದೆ. ತಮ್ಮ ಟ್ರೂತ್ ಸೋಷಿಯಲ್‌ನಲ್ಲಿ ಮಾಡಿದ ಈ … Continued

ಬೆಂಗಳೂರಿನ ಕಂಪನಿಯ ಸರ್ವರ್‌ ಹ್ಯಾಕ್‌ ಮಾಡಿ 378 ಕೋಟಿ ಕಳ್ಳತನ ; ಕರ್ನಾಟಕದ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ ವಂಚನೆ

ಬೆಂಗಳೂರು : ಬೆಂಗಳೂರು ಮೂಲದ ಕ್ರಿಪ್ಟೋಕರೆನ್ಸಿ ವಿನಿಮಯ ಕೇಂದ್ರವಾದ ನೆಬ್ಲಿಯೊ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನಿಂದ 378 ಕೋಟಿ ರೂ.ಗಳಿಗೂ ಹೆಚ್ಚು ಹಣ ಕಳ್ಳತನವಾಗಿರುವ ಬೃಹತ್ ಸೈಬರ್ ಅಪರಾಧವನ್ನು ಬೆಂಗಳೂರು ಪೊಲೀಸರು ಬಯಲು ಮಾಡಿದ್ದಾರೆ. ಒಂದೇ ಪ್ರಕರಣದಲ್ಲಿ 378 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಕ್ರಿಪ್ಟೋ ಕರೆನ್ಸಿ ಕಳ್ಳತನ ಮಾಡಿರುವ ಘಟನೆ, ಕರ್ನಾಟಕದ ಇತಿಹಾಸದಲ್ಲೇ ಅತಿದೊಡ್ಡ ಸೈಬರ್ … Continued

ಭಾರತ ನಮ್ಮ ಸ್ನೇಹಿತ, ಆದ್ರೆ..: ಭಾರತದ ಮೇಲೆ ಶೇ. 25 ಸುಂಕ, ರಷ್ಯಾದ ಜೊತೆ ವ್ಯಾಪಾರಕ್ಕೆ ದಂಡ ವಿಧಿಸುವುದಾಗಿ ಘೋಷಿಸಿದ ಟ್ರಂಪ್‌ ; ಆ.1ರಿಂದ ಜಾರಿಗೆ

ನವದೆಹಲಿ: ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ಭಾರತೀಯ ಆಮದುಗಳ ಮೇಲೆ 25% ಸುಂಕ ಮತ್ತು ಹೆಚ್ಚುವರಿ ದಂಡ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಘೋಷಿಸಿದ್ದಾರೆ. ರಷ್ಯಾದಿಂದ ಭಾರತದ ನಿರಂತರ ತೈಲ ಆಮದು ಮತ್ತು ದೀರ್ಘಕಾಲದ ವ್ಯಾಪಾರ ಅಡೆತಡೆಗಳು ಈ ಕ್ರಮದ ಹಿಂದಿನ ಪ್ರಮುಖ ಕಾರ ಎಂದು ಅವರು ಉಲ್ಲೇಖಿಸಿದ್ದಾರೆ. ತಮ್ಮ ಟ್ರೂತ್ … Continued

ಶಿರಸಿಯಲ್ಲಿ ಬೃಹತ್ ಸೈಬರ್ ವಂಚನೆ : ಮುಂಬೈ ಪೊಲೀಸರ ಸೋಗಿನಲ್ಲಿ ವ್ಯಕ್ತಿಯಿಂದ 89.90 ಲಕ್ಷ ರೂ. ಲಪಟಾಯಿಸಿದ ವಂಚಕರು…!

ಶಿರಸಿ: ಸೈಬರ್ ವಂಚಕರ ಜಾಲಕ್ಕೆ ಸಿಕ್ಕಿಹಾಕಿಕೊಂಡು ವ್ಯಕ್ತಿಯೊಬ್ಬರು ಬರೋಬ್ಬರಿ 89.90 ಲಕ್ಷ ರೂ. ಕಳೆದುಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಸಂಬಂಧ ಶಿರಸಿಯ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿರಸಿಯ ಪ್ರಗತಿ ನಗರದ ರವೀಂದ್ರ ಕೃಷ್ಣ ಹೆಗಡೆ ಎಂಬವರು ಈ ಸಂಬಂಧ ದೂರು ದಾಖಲಿಸಿದ್ದಾರೆ. ಅವರಿಗೆ ಅಪರಿಚಿತ … Continued

‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ : ಇದರ ಅರ್ಥವೇನು..?

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ಶ್ರಾವಣ ಮಾಸದ ನಾಗರ ಪಂಚಮಿಯಂದು ನಡೆದ ಹನುಮಂತ ದೇವರ ಕಾರ್ಣಿಕೋತ್ಸವದಲ್ಲಿ “ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ, ಎಚ್ಚರ” ಎಂದು ಕಾರ್ಣಿಕ ನುಡಿಯಲಾಗಿದೆ. ಮಂಗಳವಾರ ಸಂಜೆ ಗೋಧೂಳಿ ಲಗ್ನದಲ್ಲಿ ಗಂಗೆ ಪೂಜೆ ನೆರವೇರಿಸಿದ ನಂತರ ಹನುಮಂತ ದೇವರನ್ನು ಮೈಮೇಲೆ ಆಹ್ವಾನ ಮಾಡಿಕೊಂಡ ಗಣಮಗ ಪಿಳ್ಳೆಮಟ್ಟಿ ಗುಡ್ಡದಲ್ಲಿ … Continued