ರಾಜ್ಯಪಾಲರ ಕಚೇರಿ ಖಚಿತ ಪಡಿಸದ ಕಾರಣ ಗೊಂದಲ

ಮುಂಬೈ: ಸರಕಾರಿ ವಿಮಾನ ಬಳಕೆಯನ್ನು ರಾಜಭವನ ಸಚಿವಾಲಯ ಖಚಿತಪಡಿಸದ ಕಾರಣದಿಂದಾಗಿಯೇ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಅವರ ಉತ್ತರಾಖಂಡ ಪ್ರಯಾಣಕ್ಕೆ ವಿಳಂಬವಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.. ಉತ್ತರಾಖಂಡದ ಡೆಹ್ರಾಡೂನ್‌ಗೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ ಸಂವಹನ ಕೊರತೆಯಿಂದಾಗಿ ರಾಜ್ಯಪಾಲರು ಸರಕಾರಿ ವಿಮಾನದಲ್ಲಿ ತೆರಳಲು ಸಾಧ್ಯವಾಗಲಿಲ್ಲ. ರಾಜ್ಯಪಾಲರು ವಿಮಾನ ಹತ್ತುವ ಮುನ್ನ ಅನುಮತಿಗಾಗಿ ಕೋರಲಾಗಿತ್ತು. … Continued

ರಾಜ ಭವನ ಚಲೋ ವೇಳೆ ಕೊಲ್ಕತ್ತಾದಲ್ಲಿ ಹಿಂಸಾಚಾರ

ಕೊಲ್ಕತ್ತ: ಎಡ ಪಕ್ಷಗಳ ವಿದ್ಯಾರ್ಥಿಗಳ ಸಂಘಟನೆ ಆಯೋಜಿಸಿದ್ದ ರಾಜಭವನ ಚಲೋ ಮೆರವಣಿಗೆಯಲ್ಲಿ  ಕೊಲ್ಕತ್ತಾದಲ್ಲಿ ಹಿಂಸಾಚಾರ ನಡೆದಿದೆ. ತೃಣಮೂಲ ಕಾಂಗ್ರೆಸ್ ಸರ್ಕಾರದ ನೀತಿಗಳನ್ನು ವಿರೋಧಿಸಿ ಯುವಕರಿಗೆ “ಉದ್ಯೋಗ” ನೀಡುವಂತೆ ಒತ್ತಾಯಿಸಲು ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು.ಅಲ್ಲದೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎದುರು ಕೆಂಪು ಕಾರ್ಡ್‌ ಪ್ರದರ್ಶಿಸುವುದು ಅವರ ಉದ್ದೇಶವಾಗಿತ್ತು. ಕೋಲ್ಕತ್ತದಡೊರಿನಾ ಕ್ರಾಸಿಂಗ್‌ನಲ್ಲಿ ಹಿಂಸಾಚಾರ ಆರಂಭಗೊಂಡ ನಂತರ ಪ್ರತಿಭಟನಾ ನಿರತರನ್ನು … Continued

ಸಿರಿವಂತರಿಂದ ಸಿರಿವಂತರಿಗಾಗಿ ಸಿರಿವಂತರು ಮಂಡಿಸಿದ ಬಜೆಟ್‌

ನವದೆಹಲಿ: ಇತ್ತೀಚಿಗೆ ಮಂಡಿಸಲಾದ ಆಯವ್ಯಯ ಕುರಿತು ನಿರಾಸೆ ವ್ಯಕ್ತಪಡಿಸಿದ ಮಾಜಿ ವಿತ್ತ ಸಚಿವ ಪಿ.ಚಿದಂಬರಂ, ಪ್ರಸ್ತುತ ಬಜೆಟ್‌ ಸಿರಿವಂತರಿಂದ ಸಿರಿವಂತರಿಗಾಗಿ ಸಿರಿವಂತರು ಮಂಡಿಸಿದ್ದಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅವರು ರಾಜ್ಯಸಭೆಯಲ್ಲಿ ಬಜೆಟ್‌ ಕುರಿತ ಚರ್ಚೆಯಲ್ಲಿ ಮಾತನಾಡಿ, ಪ್ರಸ್ತುತ ಬಜೆಟ್‌ ಆರ್ಥಿಕತೆಯನ್ನು ಸ್ಪರ್ಧಾತ್ಮಕವಾಗಿ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ ಎಂದು ದೂಷಿಸಿದರು. ಬಜೆಟ್‌ನಲ್ಲಿ ಬಡವರಿಗಾಗಿ ಏನೂ ಇಲ್ಲ. ಬಡವರು ಬಡತನದಲ್ಲಿಯೇ … Continued

ಕೊರೋನಾ ಲಸಿಕೆ ಪಡೆದವರಲ್ಲಿ ಕರ್ನಾಟಕದಲ್ಲಿ ಮಹಿಳೆಯರೇ ಹೆಚ್ಚು

ಬೆಂಗಳೂರು: ರಾಜ್ಯದಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಮೊದಲ ಹಂತದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿನ ಸಿಬ್ಬಂದಿಗೆ ಲಸಿಕೆ ಹಾಕಲಾಗಿದ್ದು, ಈವರೆಗೆ ೨,೮೯,೭೮೭ ಮಹಿಳೆಯರು ಲಸಿಕೆ ಪಡೆದರೆ ೧,೭೪,೫೪೫ ಪುರುಷರು ಲಸಿಕೆ ಹಾಕಿಸಿಕೊಂಡಿದ್ದಾರೆ. ಆಶಾ ಕಾರ್ಯಕರ್ತೆಯರು, ಎಎನ್‌ಎಂ ಶುಶ್ರೂಷಕಿಯರ ಸಂಖ್ಯೆ ಹೆಚ್ಚಾಗಿದ್ದರಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಂಡಿದ್ದಾರೆ. ಪುರುಷರು ಲಸಿಕೆ ಪಡೆದುಕೊಳ್ಳಲು ಆಸಕ್ತಿ … Continued

ಸರ್ಕಾರಿ ವಿಮಾನದಲ್ಲಿ ರಾಜ್ಯಪಾಲರ ಪ್ರಯಾಣಕ್ಕೆ ಅನುಮತಿ ಕೊಡದ ಮಹಾ ಸರ್ಕಾರ

ಮುಂಬೈ: ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರಿಗೆ ಸರ್ಕಾರಿ ವಿಮಾನದಲ್ಲಿ ತೆರಳುವುದಕ್ಕೆ ಮಹಾರಾಷ್ಟ್ರ ಸರ್ಕಾರ ಅನುಮತಿ ನಿರಾಕರಿಸಿದೆ. ಫೆ.11ರಂದು ರಾಜ್ಯಪಾಲ ಕೋಶಿಯಾರಿಯವರು ಉತ್ತರಾಖಂಡ್ ನ ಡೆಹ್ರಾಡೂನ್ ಗೆ ಪ್ರಯಾಣ ಮಾಡಬೇಕಿತ್ತು, ಇದಕ್ಕಾಗಿ ಸರ್ಕಾರಿ ವಿಮಾನವನ್ನೂ ಕಾಯ್ದಿರಿಸಲಾಗಿತ್ತು. ಆದರೆ ರಾಜ್ಯಪಾಲರಿಗೆ ಅನುಮತಿ ಸಿಗದ ಕಾರಣ ವಾಣಿಜ್ಯ ಪ್ರಯಾಣಿಕರ ವಿಮಾನವನ್ನೇ ಬಳಸಿ ಪ್ರಯಾಣ ಮಾಡಿದ್ದಾರೆ. ಬಿಜೆಪಿ ಈ … Continued

ಕೆಂಪುಕೋಟೆ ಹಿಂಸಾಚಾರ:ಎಫ್ಐಆ‌ರ್‌ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲು ಕೋರ್ಟ್‌ ಸೂಚನೆ

ದೆಹಲಿ: ದೆಹಲಿಯಲ್ಲಿ ಜನವರಿ ೨೬ರಂದು ನಡೆದ ಹಿಂಸಾಚಾರ ಘಟನೆಗಾಗಿ ಬಂಧಿತ ಆರೋಪಿಗಳು ಪೊಲೀಸ್‌ ಠಾಣೆಗೆ ಅಲೆದಾಡುವುದನ್ನು ತಪ್ಪಿಸಲು ಅಂದಿನ ಎಲ್ಲ ಎಫ್‌ಐಆರ್‌ಗಳನ್ನು ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡುವಂತೆ ದೆಹಲಿ ನ್ಯಾಯಾಲಯ ಆದೇಶಿಸಿದೆ. ಬಂದಿತರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ನಂಗ್ಲೊಯಿ ಪೊಲೀಸ್‌ ಠಾಣೆ ಜನವರಿ ೨೬ರ ಹಿಂಸಾಚಾರದ ಕುರಿತ ಆರೋಪಿಗಳ ಎಫ್‌ಐಆರ್‌ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಬೇಕು. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ … Continued

ಮುಂಬೈ ಲೋಕಲ್‌ ಟ್ರೇನ್‌ ಆರಂಭದ ನಂತರ ಹೆಚ್ಚಿದ ಕೊರೋನಾ

ಮುಂಬೈ: ಸ್ಥಳೀಯ ರೈಲು ಸೇವೆ ಆರಂಭಗೊಂಡ ನಂತರ ಮೂಂಬೈನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಂಡು ಬಂದಿದೆ. ಇತ್ತೀಚಿಗೆ ನಗರದಲ್ಲಿ ಧಿಡೀರನೇ ಕೊವಿಡ್‌-೧೯ ಪ್ರಕರಣಗಳ ಸಂಖ್ಯೆ ಹೆಚ್ಚಳಗೊಂಡಿರುವುದಕ್ಕೆ ಸ್ಥಳಿಯ ರೈಲು ಸೇವೆ ಆರಂಭಿಸಿರುವುದೇ ಕಾರಣ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಫೆ.೧೦ರಂದು ನಗರದಲ್ಲಿ ೫೫೮ ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ೫೩೬೯ಕ್ಕೇರಿದೆ. … Continued

ಎಸ್‌ಟಿಗೆ ಸೇರ್ಪಡೆ : ಕುರುಬರ ಹೋರಾಟದ ಹಿಂದೆ ಆರೆಸ್ಸೆಸ್‌ ಇದೆ

ಹುಬ್ಬಳ್ಳಿ: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರ್ಪಡೆ ಮಾಡಬೇಕೆಂಬ ಹೋರಾಟದ ಹಿಂದೆ ಆರ್‌ಎಸ್‌ಎಸ್ ಇದೆ ಎಂದು ಪುನರುಚ್ಚರಿಸಿರುವ ವಿಧಾನಸಭೆಯ ಪ್ರತಿಪಕ್ಷದ ಪಕ್ಷದ ನಾಯಕ ಸಿದ್ದರಾಮಯ್ಯ ಸಚಿವ ಈಶ್ವರಪ್ಪ ಅವರನ್ನು ಎತ್ತಿಕಟ್ಟಿ ಮಾಡಿದ ಆರ್‌ಎಸ್‌ಎಸ್ ಪ್ರೇರಿತ ಹೋರಾಟ ಇದಾಗಿದೆ ಎಂದು ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕುಲಶಾಸ್ತ್ರ ಅಧ್ಯಯನದ ವರದಿ ಇನ್ನೂ ಬಂದಿಲ್ಲ. ಈ ವರದಿ … Continued

ಮಹಾರಾಷ್ಟ್ರಕ್ಕೆ ತೆರಳುವ ಕೇರಳದವರಿಗೆ ಕೊರೋನಾ ಪರೀಕ್ಷೆ ಕಡ್ಡಾಯ

ಮುಂಬೈ: ಕೇರಳದಿಂದ ಮಹಾರಾಷ್ಟ್ರಕ್ಕೆ ಬರುವ ಎಲ್ಲ ಪ್ರಯಾಣಿಕರು ಕೊರೊನಾ ಪರೀಕ್ಷೆ ನೆಗೆಟಿವ್‌ ವರದಿ ಹೊಂದಿರುವುದು ಕಡ್ಡಾಯ ಎಂದು ಮಹಾರಾಷ್ಟ್ರ ಸರಕಾರ ಸೂಚನೆ ನೀಡಿದೆ. ಸರಕಾರ ಹೊರಡಿಸಿದ ನೂತನ ಸ್ಟಾಂಡರ್ಡ್‌ ಆಪರೇಟಿಂಗ್‌ ಪ್ರಾಸಿಜರ್ಸ್‌ ಪ್ರಕಾರ ಕೇರಳದಿಂದ ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ಕೋವಿಡ್‌-೧೯ ಪರೀಕ್ಷೆಯ ನೆಗೆಟಿವ್‌ ವರದಿ ಹೊಂದಿರಬೇಕು. ಇದಕ್ಕೂ ಮೊದಲು ಮಹಾರಾಷ್ಟ್ರ ಸರ್ಕಾರ ದೆಹಲಿ, ರಾಜಸ್ಥಾನ, ಗುಜರಾತ್ … Continued

೬೪ ಲಕ್ಷ ರೂ.ದೋಚಿದ್ದ ವಾಹನ ಚಾಲಕ ಕೊನೆಗೂ ಸೆರೆಸಿಕ್ಕ

ಬೆಂಗಳೂರು: ಎಟಿಎಂಗೆ ಸೇರಿದ 64 ಲಕ್ಷ ರೂ. ಹಣದೊಂದಿಗೆ ಪರಾರಿಯಾಗಿದ್ದ ವಾಹನ ಚಾಲಕ ಎಚ್‍ಡಿ ಕೋಟೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಈತ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲ್ಲೂಕಿನ ದೊಡ್ಡಯಾಚನಹಳ್ಳಿ ಗ್ರಾಮದವ.   ಈತನಿಂದ 36 ಲಕ್ಷ ಹಣವನ್ನು ಉತ್ತರ ವಿಭಾಗದ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು,  ಉಳಿದ ಹಣವನ್ನು ಎಲ್ಲಿಟ್ಟಿದ್ದಾನೆ ಎಮಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಟಿಎಂಗಳಿಗೆ … Continued