ಇಂದಿರಾ ಗಾಂಧಿ ದಾಖಲೆ ಮುರಿದ ನರೇಂದ್ರ ಮೋದಿ ; ಅತಿ ಹೆಚ್ಚು ಕಾಲ ಕಾರ್ಯನಿರ್ವಹಿಸಿದ ಪ್ರಧಾನಿಗಳ ಪಟ್ಟಿಯಲ್ಲಿ ಈಗ 2ನೇ ಸ್ಥಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿ ಹುದ್ದೆಯಲ್ಲಿ ಶುಕ್ರವಾರ(ಜುಲೈ 25)ಕ್ಕೆ ನಿರಂತರವಾಗಿ 4,078 ದಿನಗಳನ್ನು ಪೂರೈಸುವ ಮೂಲಕ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಸತತ 4,077 ದಿನಗಳ ಕಾಲ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದ ದಾಖಲೆಯನ್ನು ಮುರಿದಿದ್ದಾರೆ. ದಿವಂಗತ ಇಂದಿರಾ ಗಾಂಧಿ ಅವರು ಜನವರಿ 24, 1966 ರಿಂದ ಮಾರ್ಚ್ 24, 1977 ರವರೆಗೆ ಸತತ … Continued

ವಿಪರೀತ ಮಳೆ ಮುನ್ನೆಚ್ಚರಿಕೆ : ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

ಮಂಗಳೂರು/ಮಡಿಕೇರಿ : ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೊಡಗು ಜಿಲ್ಲೆಗಳ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಶುಕ್ರವಾರ, ಜುಲೈ 25 ರಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಎಚ್ಚರಿಕೆ ನೀಡಿರುವ … Continued

ರಾಜ್ಯದಲ್ಲಿ ಹೊಸದಾಗಿ ನಿರ್ಮಿಸುವ ಬಹುಮಹಡಿ ಕಟ್ಟಡಗಳಿಗೆ 1%ರಷ್ಟು ಫೈರ್ ಸೆಸ್ : ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ರಾಜ್ಯಾದ್ಯಂತ ಹೊಸದಾಗಿ ನಿರ್ಮಾಣವಾಗುತ್ತಿರುವ ಬಹುಮಹಡಿ ಕಟ್ಟಡಗಳಿಗೆ ಶೇ1ರಷ್ಟು ಫೈರ್ ಸೆಸ್ ವಿಧಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.‌ ಈ ಸಂಬಂಧ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ದಿ ಕರ್ನಾಟಕ ಫೈರ್‌ ಫೋರ್ಸ್‌ ಆಕ್ಟ್‌ (The Karnataka Fire Force Act) 1964ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ … Continued

ಬೆಂಗಳೂರು | ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಬೆಂಗಳೂರು: ನಗರದ ಹಲಸೂರು ಕೆರೆ ಬಳಿ ಹತ್ಯೆಯಾದ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮೀ ನೀಡಿದ ದೂರಿನ ಮೇರೆಗೆ ಶಾಸಕ ಬೈರತಿ ಬಸವರಾಜ್ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದ ಭಾರತೀನಗರ ಪೊಲೀಸರು ಈವರೆಗೆ 14 ಮಂದಿ ಆರೋಪಿಗಳನ್ನು ಬಂಧಿಸಿದ್ದು, … Continued

ವೀಡಿಯೊ..| ʼಕಾಳುಮೆಣಸಿನ ರಾಣಿʼಗೆ ಗೌರವ; ರಾಷ್ಟ್ರಪತಿಗಳಿಂದ ಗೇರುಸೊಪ್ಪೆಯ ರಾಣಿ ಚೆನ್ನಭೈರಾದೇವಿ ಅಂಚೆಚೀಟಿ ಬಿಡುಗಡೆ

ನವದೆಹಲಿ : ಯೋಧರನ್ನು, ಐತಿಹಾಸಿಕ ಗೌರವಿಸುವ ಐತಿಹಾಸಿಕ ಕ್ರಮದಲ್ಲಿ, ಭಾರತ ಸರ್ಕಾರದ ಅಂಚೆ ಇಲಾಖೆಯು 16 ನೇ ಶತಮಾನದ ಕರಾವಳಿ ಕರ್ನಾಟಕದ ನಿರ್ಭೀತ ರಾಣಿ ಎಂದೇ ಖ್ಯಾತಿ ಪಡೆದಿದ್ದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದ ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದೆ. ‘ಕಾಳು ಮೆಣಸಿನ ರಾಣಿ’ ಖ್ಯಾತರಾಗಿದ್ದ ರಾಣಿ … Continued

ಧಾರವಾಡ | ಹಲ್ಲೆ ನಡೆಸಿ ಪರಾರಿಯಾಗಲು ಯತ್ನ ; ಇಬ್ಬರು ಕಳ್ಳತನದ ಆರೋಪಿಗಳಿಗೆ ಪೊಲೀಸರ ಗುಂಡೇಟು

ಧಾರವಾಡ: ನಗರದಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಇಬ್ಬರ ಕಳ್ಳರ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಧಾರವಾಡದ ವಿದ್ಯಾಗಿರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮುಜಾಮಿಲ್ ಸೌದಾಗಾರ​, ವಿಜಯ ಅಣ್ಣಿಗೇರಿ​ ಎಂಬವರು ಪೊಲೀಸರಿಂದ ಗುಂಡೇಟಿನಿಂದ ಗಾಯಗೊಂಡ ಆರೋಪಿಗಳಾಗಿದ್ದಾರೆ. ಇವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧಾರವಾಡದ ಗಿರಿನಗರದ ಬಡಾವಣೆಯಲ್ಲಿ … Continued

ಬೆಂಗಳೂರು ಕಾಲ್ತುಳಿತದ ಪ್ರಕರಣ: ಆರ್​ಸಿಬಿ, ಡಿಎನ್​ಎ ವಿರುದ್ಧ ಕ್ರಿಮಿನಲ್‌ ಪ್ರಕರಣ, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಂಪುಟ ನಿರ್ಧಾರ

ಬೆಂಗಳೂರು: ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾಗಿ, ಅನೇಕರು ಗಾಯಗೊಂಡ ಘಟನೆಯ ಕುರಿತು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ನೇತೃತ್ವದ ವರದಿಯನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಮತ್ತು ಡಿಎನ್‌ಎ (DNA) ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್‌ ಸಂಸ್ಥೆಗಳ … Continued

ರಷ್ಯಾದ ವಿಮಾನ ಪತನ ; ವಿಮಾನದಲ್ಲಿದ್ದ ಎಲ್ಲಾ 49 ಮಂದಿ ಸಾವು

ಮಾಸ್ಕೋ: ಐದು ಮಕ್ಕಳು ಮತ್ತು ಆರು ಸಿಬ್ಬಂದಿ ಸೇರಿದಂತೆ 49 ಜನರನ್ನು ಹೊತ್ತೊಯ್ಯುತ್ತಿದ್ದ ರಷ್ಯಾದ ಆನ್ -24 ವಿಮಾನವು ಗುರುವಾರ ಸೈಬಿರಿಯಾದ ಪರ್ವತ ಅಮುರ್ ಪ್ರದೇಶದಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ ಎಲ್ಲರೂ ಸತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ಸೈಬೀರಿಯಾ ಮೂಲದ ಅಂಗಾರ ಏರ್ಲೈನ್ಸ್ ನಿರ್ವಹಿಸುತ್ತಿದ್ದ ಈ ದುರದೃಷ್ಟಕರ ವಿಮಾನವು ಬ್ಲಾಗೊವೆಶ್ಚೆನ್ಸ್ಕ್ ನಿಂದ ಹೊರಟು ರಷ್ಯಾ-ಚೀನಾ … Continued

ಅನಿಲ ಅಂಬಾನಿ ಗ್ರೂಪ್ ಕಂಪನಿಗಳ ಮೇಲೆ ಇ.ಡಿ. ದಾಳಿ ; 35ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ

ನವದೆಹಲಿ: ಅನಿಲ ಅಂಬಾನಿ ಚೇರ್ಮನ್‌ ಆಗಿರುವ ರಿಲಯನ್ಸ್ ಗ್ರೂಪ್ ಕಂಪನಿಗಳ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ 35 ಕ್ಕೂ ಹೆಚ್ಚು ಸ್ಥಳಗಳು, 50 ಕಂಪನಿಗಳು ಮತ್ತು 25 ಕ್ಕೂ ಹೆಚ್ಚು ವ್ಯಕ್ತಿಗಳ ಮೇಲೆ ಜಾರಿ ನಿರ್ದೇಶನಾಲಯ ಗುರುವಾರ (ಜುಲೈ 24) ದಾಳಿ ನಡೆಸಿದೆ ಎಂದು ಏಜೆನ್ಸಿ ಮೂಲಗಳು ತಿಳಿಸಿವೆ. ಇ.ಡಿ. (ED) ತನಿಖೆಯು ಸಿಬಿಐನಿಂದ ನೋಂದಾಯಿಸಲ್ಪಟ್ಟ ಎರಡು … Continued

ಭಾರತ-ಬ್ರಿಟನ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ಕೊಲ್ಲಾಪುರಿ ಚಪ್ಪಲಿಯಿಂದ ಬನಾರಸಿ ಸೀರೆ ವರೆಗೆ…ಆಭರಣಗಳಿಂದ ಐಟಿ ವರೆಗೆ ಜಾಗತಿಕ ನಕ್ಷೆಗೆ ʼಬ್ರಾಂಡ್ ಇಂಡಿಯಾʼ

ನವದೆಹಲಿ: ಕೊಲ್ಲಾಪುರಿ ಚಪ್ಪಲ್‌ಗಳಿಂದ ಹಿಡಿದು ಬನಾರಸಿ ಮತ್ತು ಚಂದೇರಿ ಸೀರೆಗಳ ವರೆಗೆ “ಬ್ರಾಂಡ್ ಇಂಡಿಯಾ” ರಕ್ಷಿಸುವುದು ಮತ್ತು ಉತ್ತೇಜಿಸುವುದು ಭಾರತ-ಯುನೈಟೆಡ್‌ ಕಿಂಗ್ಡಂ ಗುರುವಾರ ಲಂಡನ್‌ನಲ್ಲಿ ಸಹಿ ಹಾಕಲಾದ ಮುಕ್ತ ವ್ಯಾಪಾರ ಒಪ್ಪಂದದಲ್ಲಿ ಒಂದು ಪ್ರಮುಖ ಆದ್ಯತೆಯಾಗಿದೆ. ಈ ಒಪ್ಪಂದವು ಚರ್ಮ, ಪಾದರಕ್ಷೆಗಳು ಮತ್ತು ಬಟ್ಟೆಗಳಂತಹ ಹೆಚ್ಚಾಗಿ ಮಹಿಳೆಯರು ತಯಾರಿಸುವ ಭಾರತೀಯ ಉತ್ಪನ್ನಗಳನ್ನು – ಬ್ರಿಟಿಷ್ ಮಾರುಕಟ್ಟೆಗಳಿಗೆ … Continued