ಮನೆಯಲ್ಲಿ ಕಿರುಕುಳದ ಆರೋಪ : ಸಹಾಯ ಕೋರಿ ಕಣ್ಣೀರು ಹಾಕಿದ ಬಾಲಿವುಡ್‌ ನಟಿ ತನುಶ್ರೀ ದತ್ತಾ ವೀಡಿಯೊ ವೈರಲ್‌

ನವದೆಹಲಿ: ಬಾಲಿವುಡ್ ನಟಿ ತನುಶ್ರೀ ದತ್ತಾ ಬಹಳ ದಿನಗಳಿಂದ ಚಿತ್ರರಂಗದಿಂದ ದೂರವಿದ್ದರು, ಆದರೆ ಈಗ ಅವರ ತಮ್ಮ ಒಂದು ಭಾವನಾತ್ಮಕ ವೀಡಿಯೊ ಈಗ ಚರ್ಚೆಗೆ ಕಾರಣವಾಗಿದೆ. ಮಂಗಳವಾರ, ತನುಶ್ರೀ ದತ್ತಾ ಇನ್ಸ್ಟಾಗ್ರಾಂನಲ್ಲಿ ತಮ್ಮ ಭಾವನಾತ್ಮಕ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವೀಡಿಯೊ ಕ್ಲಿಪ್‌ನಲ್ಲಿ, ನಟಿ ಅಳುತ್ತಾ ಸಹಾಯಕ್ಕಾಗಿ ಮೊರೆ ಇಡುತ್ತಿರುವುದು ಕಂಡುಬಂದಿದೆ, ಅವರು ತನ್ನ ಸ್ವಂತ ಮನೆಯಲ್ಲೇ ತಾನು … Continued

ವೀಡಿಯೊ..| ಮುಂಬೈ ಭೂ ಕುಸಿತ : ಭಾರಿ ಮಳೆಯಿಂದ ಹಲವಾರು ಮನೆಗಳು ಕೆಲವೇ ಸೆಕೆಂಡುಗಳಲ್ಲಿ ನೆಲಸಮ

ಮುಂಬೈ : ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಇಳಿಜಾರಿನಲ್ಲಿದ್ದ ಹಲವಾರು ಮನೆಗಳು ಕೆಲವೇ ಸೆಕೆಂಡುಗಳಲ್ಲಿ ಕುಸಿದು ಬಿದ್ದಿದ್ದನ್ನು ತೋರಿಸುವ ವೀಡಿಯೊ ಮಂಗಳವಾರ ವೈರಲ್ ಆಗಿದೆ. ಜನರು ಆಘಾತದಿಂದ ಕಿರುಚುತ್ತಿದ್ದಂತೆ ಕೇವಲ 10 ಸೆಕೆಂಡುಗಳಲ್ಲಿ ಹಲವಾರು ಮನೆಗಳು ಅವಶೇಷಗಳಾಗಿ ಮಾರ್ಪಟ್ಟಿವೆ ಎಂದು ವೀಡಿಯೊ ತೋರಿಸುತ್ತದೆ. ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಾರಿ ಮಳೆ ಹಿನ್ನೆಲೆಯಲ್ಲಿ ಅದೃಷ್ಟವಶಾತ್, ಅಪಾಯವಾಗುವ … Continued

ಬುದ್ಧಿವಾದ ಹೇಳಿದ್ದಕ್ಕೆ 3 ವರ್ಷದ ಅಣ್ಣನ ಮಗನನ್ನೇ ಕೊಲೆ ಮಾಡಿದ ತಮ್ಮ

ಬಾಗಲಕೋಟೆ: ಅಣ್ಣ ಬುದ್ಧಿವಾದ ಹೇಳಿದ್ದಕ್ಕೆ ಕೋಪಗೊಂಡು ಈತ 3 ವರ್ಷದ ಅಣ್ಣನ ಮಗುವಿಗೆ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಬೆನಕನವಾಡಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ಬಾಲಕನನ್ನು ಬೆನಕನವಾಡಿ ಗ್ರಾಮದ ಮಾರುತಿ ವಾಲಿಕಾರ ಎಂಬವರ 3 ವರ್ಷದ ಮಗ ಮಧುಕುಮಾರ ಎಂದು ಗುರುತಿಸಲಾಗಿದೆ. ಈ ಮಗುವಿನ … Continued

ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ ಆಹ್ವಾನಿಸಿದ ಮಾಲ್ಡೀವ್ಸ್ ಅಧ್ಯಕ್ಷ…: ಚೀನಾ ಪರವಿದ್ದ ಮುಯಿಝು ಏಕಾಏಕಿ ಬದಲಾಗಿದ್ದು ಏಕೆ..?

ನವದೆಹಲಿ: ಜುಲೈ 25 ಮತ್ತು 26 ರಂದು ನಡೆಯಲಿರುವ ಮಾಲ್ಡೀವ್ಸ್ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ದೃಢಪಡಿಸಿದೆ. ಇದು ಪ್ರಧಾನಿಯವರ ದ್ವೀಪಕ್ಕೆ ಮೂರನೇ ಭೇಟಿಯಾಗಿದೆ. ಆದರೆ ಮೊಹಮ್ಮದ್ ಮುಯಿಝು ಮಾಲ್ಡೀವ್ಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಇದು ಮೊದಲ ಭೇಟಿಯಾಗಿದೆ. ಜುಲೈ 23 ಮತ್ತು 24 … Continued

ವೀಡಿಯೊ…| ಜನರ ಎದುರೇ ಅಪ್ರಾಪ್ತ ವಿದ್ಯಾರ್ಥಿನಿ ಕುತ್ತಿಗೆಗೆ ಚಾಕು ಹಿಡಿದು ಬೆದರಿಕೆ ಹಾಕಿದ ಪಾಗಲ್‌ ಪ್ರೇಮಿ; ಆದ್ರೆ ಮುಂದಾಗಿದ್ದೇನೆಂದರೆ….

ಮುಂಬೈ: ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಗೆ ಚಾಕು ತೋರಿಸಿ ತನ್ನನ್ನು ಪ್ರೀತಿಸುವಂತೆ ಬೆದರಿಕೆ ಹಾಕಿರುವ ಘಟನೆ ಮಹಾರಾಷ್ಟ್ರದ (Maharstra) ಸತಾರ ನಗರದಲ್ಲಿ ನಡೆದಿದೆ. ಬಾಲಕಿಯನ್ನು ಪ್ರೀತಿಸುವುದಾಗಿ ಹೇಳಿ ಆತ ಬಾಲಕಿಯ ಕುತ್ತಿಗೆಗೆ ಚಾಕು ಹಿಡಿದು ಬೆದರಿಕೆ ಹಾಕಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ತಕ್ಷಣವೇ ಸೇರಿದ ಜನ ಸಮೂಹ ಯುವಕನ ಹೈಡ್ರಾಮಾ ನಂತರ ಆತನ ಕೈಯಿಂದ ಬಾಲಕಿಯನ್ನು ಬಿಡಿಸುವಲ್ಲಿ ಯಶಸ್ವಿಯಾಗಿದ್ದಾರೆ. … Continued

ಜೀವನಾಂಶಕ್ಕೆ 12 ಕೋಟಿ ರೂ., ಬಿಎಂಡಬ್ಲ್ಯು ಕಾರ್‌, ಮುಂಬೈನಲ್ಲಿ ಮನೆ ಬೇಕೆಂದು ಬೇಡಿಕೆ ಇಟ್ಟ ಮಹಿಳೆಗೆ ನೀವೇಕೆ ಸಂಪಾದಿಸಬಾರದು ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: “ಆಪ್ ಇತನಿ ಪಡಿ ಲಿಖಿ ಹೈ. ಆಪಕೋ ಖುದ್ ಮಾಂಗನಾ ನಹಿ ಚಾಹಿಯೇ, ಆಪಕೋ ಖುದ್ ಕಾಮ ಕೆ ಖಾನಾ ಚಾಹಿಯೇ” (ನೀವು ಉತ್ತಮ ವಿದ್ಯಾವಂತರು; ನೀವು ವಸ್ತುಗಳನ್ನು ಕೇಳಬಾರದು, ಬದಲಿಗೆ ನಿಮ್ಮ ಜೀವನೋಪಾಯಕ್ಕೆ ಸಂಪಾದಿಸಿಕೊಳ್ಳಬೇಕು) ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ವೈವಾಹಿಕ ವಿಚ್ಛೇದನ ಪ್ರಕರಣದಲ್ಲಿ ತನ್ನ ಪರಿತ್ಯಕ್ತ ಪತಿಯಿಂದ ಭಾರಿ ಮೊತ್ತದ … Continued

ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಯೂ ಟ್ಯೂಬ್ ಚಾನೆಲ್‌

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಾಲಯ ಹಾಗೂ ಸಂಸ್ಥೆಗಳ ಕಾರ್ಯದರ್ಶಿಯಾಗಿರುವ ಡಿ.ಹರ್ಷೇಂದ್ರಕುಮಾರ ಅವರ ವಿರುದ್ಧ ಯಾವುದೇ ಅವಹೇಳನಕಾರಿ ವಿಷಯ ಪ್ರಕಟಿಸದಂತೆ ಹಾಗೂ ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳು ಮತ್ತು ಯೂಟ್ಯೂಬ್‌ ಚಾನೆಲ್‌ಗಳಿಗೆ ನಿರ್ಬಂಧ ವಿಧಿಸಿದ್ದ ಬೆಂಗಳೂರು ನಗರ ಸಿವಿಲ್ ಮತ್ತು … Continued

199 ಕೋಟಿ ರೂ. ಆದಾಯದ ಮೇಲಿನ ತೆರಿಗೆ ; ಕಾಂಗ್ರೆಸ್ ಮೇಲ್ಮನವಿ ತಿರಸ್ಕರಿಸಿದ ಐಟಿಎಟಿ

ನವದೆಹಲಿ: ಬೃಹತ್ ಮೊತ್ತದ ದೇಣಿಗೆಗಳ ಮೇಲಿನ ಆದಾಯ ತೆರಿಗೆ ವಿನಾಯಿತಿ ಕೋರಿದ್ದ ಕಾಂಗ್ರೆಸ್ ಮನವಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ITAT) ತಿರಸ್ಕರಿಸಿದೆ. ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ITAT) ₹199 ಕೋಟಿ ಮೌಲ್ಯದ ದೇಣಿಗೆಗಳ ಮೇಲಿನ ಆದಾಯ ತೆರಿಗೆ ವಿನಾಯಿತಿ ನೀಡಲು ನಿರಾಕರಿಸಿದೆ. 2017-18ನೇ ಸಾಲಿನ ತೆರಿಗೆಗೆ ವಿನಾಯಿತಿ ನೀಡಬೇಕೆಂದು ಕಾಂಗ್ರೆಸ್ ಮನವಿ ಸಲ್ಲಿಸಿತ್ತು. … Continued

ಸವದತ್ತಿ : ಕೋರ್ಟ್ ಆವರಣದಲ್ಲಿ ಪತ್ನಿ ಮೇಲೆ ಮಚ್ಚಿನಿಂದ ದಾಳಿ ಮಾಡಿದ ಪತಿ…!

ಬೆಳಗಾವಿ : ವಿವಾಹ ವಿಚ್ಛೇದನಕ್ಕೆ ಕೌಟುಂಬಿಕ ನ್ಯಾಯಾಲಯಕ್ಕೆ ಬಂದಿದ್ದ ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಸವದತ್ತಿ ನ್ಯಾಯಾಲಯ ಸಂಕಿರ್ಣದಲ್ಲಿ ಮಂಗಳವಾರ ಸಂಭವಿಸಿದೆ. ಬೈಲಹೊಂಗಲ ತಾಲೂಕಿನ ಸವಟಗಿ ಗ್ರಾಮದ ಮುತ್ತಪ್ಪ ಗಣಾಚಾರಿ ಎಂಬಾತ ಸವದತ್ತಿ ತಾಲ್ಲೂಕಿನ ಕರೀಕಟ್ಟಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದ, ಕೌಟುಂಬಿಕ ಕಲಹದಿಂದ ದೂರವಾಗಿದ್ದ ಇವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, … Continued

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಂಖ್ಯೆಗಳ ಲೆಕ್ಕಾಚಾರ ಎನ್‌ಡಿಎಗೆ ಹೇಗೆ ಅನುಕೂಲಕರ..?

ನವದೆಹಲಿ: ಸೋಮವಾರ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧನಕರ ಅವರ ಅನಿರೀಕ್ಷಿತ ರಾಜೀನಾಮೆಯಿಂದ ಅನಿವಾರ್ಯವಾದ ಮುಂದಿನ ಉಪರಾಷ್ಟ್ರಪತಿಗಳ ಹುದ್ದೆಗೆ ನಡೆವ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟವು ಸಂಖ್ಯಾಬಲವನ್ನು ಹೊಂದಿದೆ. ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಉಪರಾಷ್ಟ್ರಪತಿಗಳನ್ನು ಆಯ್ಕೆ ಮಾಡುತ್ತಾರೆ. ಅಲ್ಲಿ ಮೇಲ್ಮನೆಯ ನಾಮನಿರ್ದೇಶಿತ ಸದಸ್ಯರು ಸಹ ತಮ್ಮ ಮತ ಚಲಾಯಿಸಲು ಅರ್ಹರಾಗಿರುತ್ತಾರೆ. 543 ಸದಸ್ಯರ ಲೋಕಸಭೆಯಲ್ಲಿ ಒಂದು … Continued