ಶಾಸಕರಿಗೆ ಬಂಪರ್ : ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ. ಅನುದಾನ ಬಿಡುಗಡೆ ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಕೊಡುತ್ತಿಲ್ಲ ಎಂದು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ, ಅದರಲ್ಲಿಯೂ ಕಾಂಗ್ರೆಸ್‌ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖುಷಿ ಸುದ್ದಿ ನೀಡಿದ್ದಾರೆ. ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡುವುದಾಗಿ ಪ್ರಕಟಿಸಿದ್ದಾರೆ. ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 50 ಕೋಟಿ ರೂ. … Continued

ʼಇಂಡಿಯಾʼ ಮೈತ್ರಿಕೂಟದಿಂದ ಅಧಿಕೃತವಾಗಿ ಹೊರಬಂದ ಆಮ್‌ ಆದ್ಮಿ ಪಾರ್ಟಿ

ನವದೆಹಲಿ: ಆಮ್ ಆದ್ಮಿ ಪಕ್ಷ (ಎಎಪಿ) ಶುಕ್ರವಾರ ಇಂಡಿಯಾ ಮೈತ್ರಿಕೂಟದಿಂದ ಹೊರಬಂದಿರುವುದಾಗಿ ಹೇಳಿದ್ದು, ವಿಪಕ್ಷಗಳ ಮೈತ್ರಿಕೂಟದ ಭಾಗವಾಗಿ ಉಳಿದಿಲ್ಲ ಎಂದು ಹೇಳಿದೆ. ಅಲ್ಲದೆ ಇಂಡಿಯಾ ಬ್ಲಾಕ್‌ ನೇತೃತ್ವ ವಹಿಸಿರುವ ಕಾಂಗ್ರೆಸ್ ಪಕ್ಷದ ಪಾತ್ರವನ್ನು ಅದು ಪ್ರಶ್ನಿಸಿದೆ. ದೇಶದಲ್ಲಿನ ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಚರ್ಚಿಸಲು ಶನಿವಾರ (ಜುಲೈ ೧೯) ಸಂಜೆ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಾಯಕರ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಜುಲೈ 19ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ, ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ಏಳು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ ದಾವಣಗೆರೆ ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ … Continued

ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಜೀವ ಬೆದರಿಕೆ : ದೂರು ದಾಖಲು

ಶಿರಸಿ: ಉತ್ತರಕನ್ನಡದ ಮಾಜಿ ಸಂಸದ ಅನಂತಕುಮಾರ ಹೆಗಡೆಗೆ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಿದ್ದು, ಈ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ದೂರು ದಾಖಲಾಗಿದೆ. ಮಾಜಿ ಸಂಸದ ಅನಂತಕುಮಾರ ಹೆಗಡೆ ಅವರ ಆಪ್ತ ಕಾರ್ಯದರ್ಶಿ ಸುರೇಶ ಶೆಟ್ಟಿ ಅವರು ಬೆದರಿಕೆಯ ಇ ಮೇಲ್‌ ಬಂದಿದ್ದರ ಬಗ್ಗೆ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ … Continued

ಸಾಲ ಕೊಡಿಸುವುದಾಗಿ ಉದ್ಯಮಿಗಳಿಗೆ ಕೋಟ್ಯಂತರ ರೂ. ವಂಚನೆ ; ಮಂಗಳೂರಿನ ವಂಚಕ ಅರೆಸ್ಟ್‌ ; ತಪ್ಪಿಸಿಕೊಳ್ಳಲು ಮನೆಯಲ್ಲೇ ನಿಗೂಢ ಕೋಣೆ ಪತ್ತೆ…!

ಮಂಗಳೂರು : ಮಂಗಳೂರು ನಗರ ಪೊಲೀಸರು ಮಧ್ಯರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಜೆಪಿನಮೊಗರು ಪ್ರದೇಶದ ವಂಚಕ ರೋಹನ್ ಸಲ್ಡಾನಾ ಎಂಬಾತನನ್ನು ಬಂಧಿಸಿದ್ದಾರೆ. ಈತ ನಕಲಿ ಸಾಲ ಮತ್ತು ಭೂ ವ್ಯವಹಾರಗಳ ಮೂಲಕ ಶ್ರೀಮಂತ ಉದ್ಯಮಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಹೊತ್ತಿದ್ದಾನೆ. ಪೊಲೀಸ್ ಆಯುಕ್ತ ಸುಧೀರಕುಮಾರ ರೆಡ್ಡಿ ಮತ್ತು ಸಹಾಯಕ ಪೊಲೀಸ್ ಆಯುಕ್ತ ರವೀಶ ನಾಯಕ ನೇತೃತ್ವದ … Continued

ಸಿಎಂ ಸಿದ್ದರಾಮಯ್ಯ ಫೇಸ್‌ಬುಕ್‌ ಪೋಸ್ಟ್‌ ತಪ್ಪು ಅನುವಾದ ; ಕ್ಷಮೆಯಾಚಿಸಿದ ಮೆಟಾ

ಬೆಂಗಳೂರು: ನಟಿ ಬಿ. ಸರೋಜಾದೇವಿ ಅವರಿಗೆ ಕನ್ನಡದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದ ಫೇಸ್‌ಬುಕ್ ಪೋಸ್ಟ್‌ನ ಆಟೋ ಟ್ರಾನ್ಸ್‌ಲೇಷನ್‌ ಅವಾಂತರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಮೆಟಾದವರು ತಮ್ಮ ತಪ್ಪಿಗೆ ಕ್ಷಮೆ ಕೇಳಿ, ದೋಷವನ್ನು ಸರಿಪಡಿಸುವುದಾಗಿ ಇ-ಮೇಲ್‌ ಮೂಲಕ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. … Continued

ಗೋಕರ್ಣದ ಗುಹೆಯಲ್ಲಿ ವಾಸಿಸುತ್ತಿದ್ದ ರಷ್ಯಾ ಮಹಿಳೆ-ಮಕ್ಕಳನ್ನು ನೋಡಲು ತುಮಕೂರಿಗೆ ಬಂದ ಪತಿಗೆ ನಿರಾಸೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಅರಣ್ಯ ಗುಹೆಯಿಂದ ರಷ್ಯಾದ ಮಹಿಳೆ ಮತ್ತು ಆಕೆಯ ಇಬ್ಬರು ಚಿಕ್ಕ ಹೆಣ್ಣುಮಕ್ಕಳನ್ನು ಪೊಲೀಸರು ರಕ್ಷಿಸಿದ ಕೆಲವು ದಿನಗಳ ನಂತರ, ತುಮಕೂರಿನ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರುವ ಅವರನ್ನು ಭೇಟಿ ಮಾಡಲು ಬಂದ ಆಕೆಯ ಪತಿಗೆ ಅನುಮತಿ ನಿರಾಕರಿಸಲಾಗಿದೆ. ಮೇಲಧಿಕಾರಿಗಳ ಅನುಮತಿ ಪಡೆದು ಬರುವಂತೆ ಸೂಚನೆ ನೀಡಲಾಗಿದೆ ಎಂದು … Continued

ಪಾಕ್‌ಗೆ ಮುಖಭಂಗ : ಪಹಾಲ್ಗಾಮ್ ದಾಳಿ ನಡೆಸಿದ್ದ ʼಟಿಆರ್‌ಎಫ್‌ʼ ಗೊತ್ತುಪಡಿಸಿದ ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಅಮೆರಿಕ

ನವದೆಹಲಿ: ಪಹಾಲ್ಗಾಂ ದಾಳಿಯ ಹೊಣೆ ಹೊತ್ತುಕೊಂಡಿದ್ದ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಉಗ್ರ ಸಂಘಟನೆ ಎಂದು ಅಮೆರಿಕ ಘೋಷಣೆ ಮಾಡಿದೆ. ಉಗ್ರ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದ್ದ ಪಾಕಿಸ್ತಾನಕ್ಕೆ ಮತ್ತೊಂದು ಮುಖಭಂಗವಾಗಿದೆ. ಲಷ್ಕರ್ ಉಗ್ರ ಸಂಘಟನೆಯ ಜೊತೆಗೆ ನಂಟು ಹೊಂದಿರುವ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಉಗ್ರರ ಪಟ್ಟಿಗೆ ಸೇರಿಸಿರುವ ಬಗ್ಗೆ ವಿಶ್ವಸಂಸ್ಥೆಯಲ್ಲಿ ಅಮೆರಿಕ ಘೋಷಣೆ ಮಾಡಿದೆ. ಏಪ್ರಿಲ್ 22 … Continued

ವಿಶ್ವದ ಟಾಪ್ 10 ಶ್ರೀಮಂತರು | ಜೆಫ್ ಬೆಜೋಸ್, ಮಾರ್ಕ್ ಜುಕರ್‌ ಬರ್ಗ್‌ ಹಿಂದಿಕ್ಕಿ 2ನೇ ಸ್ಥಾನಕ್ಕೆ ಜಿಗಿದ ಲ್ಯಾರಿ ಎಲಿಸನ್ ; ನಂ.1 ಯಾರೆಂದರೆ…

ನವದೆಹಲಿ: 2025ರ ಜುಲೈ ತಿಂಗಳ ಪ್ರಕಾರ ಫೋರ್ಬ್ಸ್‌ನ ವಿಶ್ವದ ಬಿಲಿಯನೇರ್‌ಗಳ ಪಟ್ಟಿ 3,028 ಕ್ಕೆ ಏರಿದೆ. ಮತ್ತು 2025 ರಲ್ಲಿ ಜಾಗತಿಕ ವ್ಯಾಪಾರ ಪ್ರಮುಖರು ಮತ್ತು ಉದ್ಯಮಿಗಳು ತಮ್ಮ ಸಂಪತ್ತಿನಲ್ಲಿ ಏರಿಕೆ ಕಂಡಿದ್ದಾರೆ. $393.1 ಬಿಲಿಯನ್ ಅಂದಾಜು ನಿವ್ವಳ ಮೌಲ್ಯವನ್ನು ಹೊಂದಿರುವ ಎಲೋನ್ ಮಸ್ಕ್, 2025ರ ಜುಲೈ ತಿಂಗಳಲ್ಲೂ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಮುಂದುವರಿದಿದ್ದಾರೆ; … Continued

ಟ್ರಂಪ್ ಪಾಕಿಸ್ತಾನಕ್ಕೆ ಭೇಟಿ ನೀಡಲ್ಲ ಎಂದು ಶ್ವೇತಭವನ ಸ್ಪಷ್ಟನೆ ; ಸುಳ್ಳು ಸುದ್ದಿ ಪ್ರಸಾರ ಮಾಡಿ ಕ್ಷಮೆಯಾಚಿಸಿದ ಪಾಕ್‌ ಸುದ್ದಿ ವಾಹಿನಿಗಳು…!

ನವದೆಹಲಿ: ಸೆಪ್ಟೆಂಬರ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಾರೆ ಎಂಬ ಸುಳ್ಳು ಸುದ್ದಿಯನ್ನು ಹರಡಿದ್ದಕ್ಕಾಗಿ ಪಾಕಿಸ್ತಾನದ ಟಿವಿ ಮಾಧ್ಯಮಗಳು ಜಾಗತಿಕವಾಗಿ ಮುಜುಗರ ಎದುರಿಸಬೇಕಾಯಿತು. ನಂತರ ಪಾಕಿಸ್ತಾನದ ಎರಡು ಪ್ರಮುಖ ಟಿವಿ ಸುದ್ದಿ ವಾಹಿನಿಗಳು ವರದಿಗಳನ್ನು ಹಿಂತೆಗೆದುಕೊಂಡವು, ಅವುಗಳಲ್ಲಿ ಒಂದು ಟಿವಿ ಸುದ್ದಿವಾಹಿನಿ ಕ್ಷಮೆಯಾಚಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಸಮಾ ಟಿವಿ, ಜಿಯೋ … Continued