ಭೂ ವ್ಯವಹಾರ ಪ್ರಕರಣ ; ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯದಿಂದ ಆರೋಪಪಟ್ಟಿ ಸಲ್ಲಿಕೆ

ನವದೆಹಲಿ: 2008 ರಲ್ಲಿ ಹರಿಯಾಣದ ಗುರುಗ್ರಾಮದ ಶಿಕೋಹಪುರ ಗ್ರಾಮದಲ್ಲಿ ನಡೆದ 3.53 ಎಕರೆ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ED) ಗುರುವಾರ (ಜುಲೈ 17) ಆರೋಪಪಟ್ಟಿ ಸಲ್ಲಿಸಿದೆ. ಹಣ ವರ್ಗಾವಣೆ ತಡೆ ಕಾಯ್ದೆ … Continued

ವೀಡಿಯೊ | ಮಹಾರಾಷ್ಟ್ರ ವಿಧಾನಸಭೆ ಲಾಬಿಯಲ್ಲಿ ಹೊಡೆದಾಡಿಕೊಂಡ ಬಿಜೆಪಿ ಶಾಸಕ-ಎನ್‌ಸಿಪಿ ಶಾಸಕರ ಬೆಂಬಲಿಗರು

ಮುಂಬೈ: ಗುರುವಾರ ಮಹಾರಾಷ್ಟ್ರ ವಿಧಾನಸೌಧದ ಆವರಣದಲ್ಲಿ ಬಿಜೆಪಿ ಶಾಸಕ ಗೋಪಿಚಂದ ಪದಾಲ್ಕರ್ ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ಶಾಸಕ ಜಿತೇಂದ್ರ ಅವ್ಹಾದ್ ಅವರ ಬೆಂಬಲಿಗರ ನಡುವೆ ಹಿಂಸಾತ್ಮಕ ಘರ್ಷಣೆ ಸಂಭವಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ಘಟನೆಯ ವಿಡಿಯೋದಲ್ಲಿ, ಮುಖ್ಯ ದ್ವಾರದ ಬಳಿಯ ಲಾಬಿಯಲ್ಲಿ ಎರಡು ಗುಂಪುಗಳು ಪರಸ್ಪರ ಹೊಡೆದಾಡುತ್ತಿರುವುದನ್ನು, ಭದ್ರತಾ ಸಿಬ್ಬಂದಿ … Continued

ಜುಲೈ 20ರಂದು ಹುಬ್ಬಳ್ಳಿಯಲ್ಲಿ 12ನೇ ಹವ್ಯಕ ಹಬ್ಬ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಹವ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಹಾಗೂ ಹುಬ್ಬಳ್ಳಿ-ಧಾರವಾಡದ ಹವ್ಯಕ ಮಹಿಳಾ ಮಂಡಳದ ವತಿಯಿಂದ 12ನೇ ಹವ್ಯಕ ಹಬ್ಬ ಹುಬ್ಬಳ್ಳಿಯ ಹವ್ಯಕ ಭವನದಲ್ಲಿ ಜುಲೈ 20ರಂದು ನಡೆಯಲಿದೆ. ಹವ್ಯಕ ಹಬ್ಬ ವೈಶಿಷ್ಟ್ಯಪೂರ್ಣವಾಗಿದ್ದು ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮೊದಲಾದ ಕಡೆಗಳ ಹವ್ಯಕರ ವಿಶಿಷ್ಟ ಪರಂಪರೆ, ಸಂಸ್ಕೃತಿ ಹಾಗೂ ಭಾಷೆಗಳನ್ನು … Continued

ಬೆಳ್ತಂಗಡಿ: ಕಾಡಾನೆ ದಾಳಿಗೆ ವ್ಯಕ್ತಿ ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಹಿಂಡಿನ ದಾಳಿಗೆ 60 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗುರುವಾರ (ಜುಲೈ 17) ಬೆಳಿಗ್ಗೆ 11 ಗಂಟೆ ಸುಮಾರಿಗೆ ಗ್ರಾಮದ ಗೇರು ಪ್ಲಾಂಟೇಶನ್‌ಗೆ ಎರಡು ಆನೆಗಳು ಬಂದಿದ್ದನ್ನು ತಿಳಿದು ಅವುಗಳನ್ನು ಓಡಿಸಲು … Continued

ಸಿಎಂರಿಂದ ಅವಮಾನಕ್ಕೊಳಗಾಗಿ ರಾಜೀನಾಮೆಗೆ ಮುಂದಾಗಿದ್ದ ಭರಮನಿಗೆ ಬಡ್ತಿ ನೀಡಿದ ರಾಜ್ಯ ಸರ್ಕಾರ

ಬೆಳಗಾವಿ: ಕೆಲ ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಂದ ಅವಮಾನಕ್ಕೀಡಾಗಿ ರಾಜೀನಾಮೆಗೆ ಮುಂದಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ವಿ. ಭರಮನಿ ಅವರಿಗೆ ರಾಜ್ಯ ಸರ್ಕಾರ ಪದೋನ್ನತಿ ನೀಡಿದೆ. ಈಗ ಅವರನ್ನು ಬೆಳಗಾವಿ ಮಹಾನಗರ ಕಾನೂನು ಮತ್ತು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ನೇಮಕ ಮಾಡಿದೆ. ಬೆಳಗಾವಿಯಲ್ಲಿ ಸಬ್ ಇನ್ಸ್ಪೆಕ್ಟರ್, … Continued

ಪೆರೋಲ್ ಮೇಲೆ ಆಸ್ಪತ್ರೆ ಐಸಿಯುಗೆ ದಾಖಲಾಗಿದ್ದ ಕುಖ್ಯಾತ ಆರೋಪಿಗೆ ಗುಂಡಿಕ್ಕಿ ಹತ್ಯೆ ಮಾಡಿ ಪರಾರಿ : ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಪಾಟ್ನಾ: ಐವರು ಶಸ್ತ್ರಸಜ್ಜಿತ ವ್ಯಕ್ತಿಗಳು ಆಸ್ಪತ್ರೆಗೆ ನುಗ್ಗಿ, ರೋಗಿಯೊಬ್ಬರ ಕೋಣೆಗೆ ನಡೆದುಕೊಂಡು ಹೋಗಿ ಕುಖ್ಯಾತ ಆರೋಪಿಯ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಇದು ಸಿನಿಮಾ ಅಲ್ಲ. ಇದು ಬಿಹಾರದ ಭಯಾನಕ ವಾಸ್ತವ. ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಐವರು ಶೂಟರ್‌ಗಳು ಆಸ್ಪತ್ರೆಯ ಕಾರಿಡಾರ್‌ನಲ್ಲಿ ತಮ್ಮ ಬಂದೂಕುಗಳನ್ನು ಹೊರತೆಗೆದು, ಕ್ಯಾಬಿನ್‌ನ ಬಾಗಿಲು ತೆರೆದು ಒಳಹೊಕ್ಕಿರುವುದು ಹಾಗೂ ನಂತರ ಪರಾರಿಯಾಗಿರುವುದು … Continued

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ: ಸಂಚಾರ ಬಂದ್

ಮಂಗಳೂರು: ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡದ ಕಡಬ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ಲಾರಿ, ಬಸ್, ಟ್ರಕ್​ಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ. ಭೂ ಕುಸಿತದಿಂದ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚಾರಕ್ಕೆ ಯಾವುದೇ ಅಡಚಣೆಗಳು ಎದುರಾಗಿಲ್ಲ. ಆದರೆ, ಮಂಗಳೂರಿನಿಂದ ಬೆಂಗಳೂರಿಗೆ … Continued

ಗರ್ಭದಲ್ಲೇ ಮಗು ಸತ್ತಿದೆ ಎಂದ ಒಂದು ಆಸ್ಪತ್ರೆ….ಕೆಲವೇ ಗಂಟೆಗಳಲ್ಲಿ ಮತ್ತೊಂದು ಆಸ್ಪತ್ರೆಯಲ್ಲಿ ಆರೋಗ್ಯವಂತ ಮಗುವಿಗೆ ಜನ್ಮ ನೀಡಿದ ಮಹಿಳೆ…!

ಸತ್ನಾ : ಸರ್ಕಾರಿ ಆಸ್ಪತ್ರೆಯ ವೈದ್ಯರು ಭ್ರೂಣ ಮೃತಪಟ್ಟಿದೆ ಎಂದು ಹೇಳಿದ ಕೆಲವೇ ಗಂಟೆಗಳಲ್ಲಿ ಮಹಿಳೆಯೊಬ್ಬರು ಖಾಸಗಿ ನರ್ಸಿಂಗ್ ಹೋಂನಲ್ಲಿ ಆರೋಗ್ಯವಂತ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ನಡೆದಿದೆ. ಹೆರಿಗೆ ನೋವು ಆರಂಭವಾದ ನಂತರ ರಾಂಪುರ ಬಾಗೇಲನ್‌ನ ಚಕೇಹ್ರಾ ಗ್ರಾಮದ ನಿವಾಸಿಯಾದ ದುರ್ಗಾ ದ್ವಿವೇದಿ ಅವರನ್ನು ಸೋಮವಾರ ತಡರಾತ್ರಿ ಅಮತಪಟನ್ … Continued

ಬಿಹಾರ ಚುನಾವಣೆಗೂ ಮುನ್ನ 125 ಯೂನಿಟ್ ಫ್ರೀ ವಿದ್ಯುತ್ ಘೋಷಿಸಿದ ಸಿಎಂ ನಿತೀಶಕುಮಾರ

ಪಾಟ್ನಾ: ಬಿಹಾರ ಚುನಾವಣೆಗೂ ಮುನ್ನ ಗುರುವಾರ (ಜುಲೈ 17) ಮುಖ್ಯಮಂತ್ರಿ ನಿತೀಶಕುಮಾರ ಅರ್ಹ ಮನೆಗಳಿಗೆ 125 ಯೂನಿಟ್ ವಿದ್ಯುತ್ ಅನ್ನು ಉಚಿತ(free)ವಾಗಿ ನೀಡುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯು ರಾಜ್ಯಾದ್ಯಂತ ಸುಮಾರು 1.67 ಕೋಟಿ ಕುಟುಂಬಗಳಿಗೆ ಅನುಕೂಲ ನೀಡುವ ನಿರೀಕ್ಷೆಯಿದೆ. ಆಗಸ್ಟ್ 1ರಿಂದ ರಾಜ್ಯದ ಗೃಹಬಳಕೆದಾರರು 125 ಯೂನಿಟ್‌ಗಳವರೆಗೆ ಉಚಿತವಾಗಿ ವಿದ್ಯುತ್ ಪಡೆಯಲಿದ್ದಾರೆ. ಪ್ರಸ್ತುತ ಕುಟೀರ ಜ್ಯೋತಿ … Continued

ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಇದ್ದ ಬಾಹ್ಯಾಕಾಶ ನೌಕೆ ಭೂಮಿಯತ್ತ ಬರುತ್ತಿರುವ ಅದ್ಭುತ ದೃಶ್ಯದ ವೀಡಿಯೊ ವೈರಲ್‌-ವೀಕ್ಷಿಸಿ

ನವದೆಹಲಿ: ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಡ್ರ್ಯಾಗನ್ ಕ್ಯಾಪ್ಸುಲ್ ಕ್ಯಾಲಿಫೋರ್ನಿಯಾದ ಕರಾವಳಿಯಲ್ಲಿ ಭೂಮಿಗೆ ಬಂದು ಇಳಿಯುವ ಮೊದಲಿನ ಅದ್ಭುತ ವೀಡಿಯೊವನ್ನು ಸೆರೆಹಿಡಿಯಲಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಕ್ಯಾಲಿಫೋರ್ನಿಯಾದ ಮರಿನ್ ಕೌಂಟಿಯಿಂದ ಚಿತ್ರೀಕರಿಸಲಾದ ಈ ಕ್ಲಿಪ್, ಸ್ಪೇಸ್‌ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯು ಪೆಸಿಫಿಕ್ ಮಹಾಸಾಗರಕ್ಕೆ ಚಿಮ್ಮುವ ಮೊದಲು ಹೊಳೆಯುವ ಧೂಮಕೇತುವಿನಂತೆ ಮುಸ್ಸಂಜೆಯ ಆಕಾಶದಲ್ಲಿ ಹೊಳೆಯುತ್ತ … Continued