ಭಾರಿ ಮಳೆ ಮುನ್ಸೂಚನೆ ; ಮೂರು ಜಿಲ್ಲೆಗಳ ಶಾಲೆಗಳಿಗೆ ಜುಲೈ 17ರಂದು ರಜೆ ಘೋಷಣೆ

 ಮಂಗಳೂರು/ಉಡುಪಿ/ಮಡಿಕೇರಿ: ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಶಾಲೆಗಳಿಗೆ ಜುಲೈ 17ರಂದು ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 17ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರಿ ಗಾಳಿ ಮಳೆ ಸಾಧ್ಯತೆ ; ಮುನ್ಸೂಚನೆ

ಬೆಂಗಳೂರು: ಮುಂದಿನ ಐದಾರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದ ಮೇಲಿನ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಲ್ಲಿ ಮುಂದಿನ ಎರಡ್ಮೂರು ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಮಳೆ ಹೆಚ್ಚಾಗಲಿದ್ದು, ಒಟ್ಟು … Continued

ಮುಜರಾಯಿ ಇಲಾಖೆ ವಶಕ್ಕೆ ಗಾಳಿ ಆಂಜನೇಯಸ್ವಾಮಿ ದೇವಾಲಯ ; ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು : ಬೆಂಗಳೂರು ಮಹಾನಗರದ ನಗರದ ಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಸುಪರ್ದಿಗೆ ಪಡೆದು ರಾಜ್ಯ ಮುಜರಾಯಿ ಇಲಾಖೆ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದ್ದ ಮನವಿಯನ್ನು ಬುಧವಾರ ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ. ಸರ್ಕಾರದ ಆದೇಶ ರದ್ದು ಕೋರಿ ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಆಡಳಿ ಮಂಡಳಿ ಸಲ್ಲಿಸಿದ್ದ ಅರ್ಜಿಯ ಮಧ್ಯಂತರ ಕೋರಿಕೆಯನ್ನು ನ್ಯಾಯಮೂರ್ತಿ … Continued

ನಿಮಿಷಾ ಪ್ರಿಯಾಗೆ ಕ್ಷಮಾದಾನ ಇಲ್ಲ: ಯೆಮನ್‌ನಲ್ಲಿ ಕೇರಳದ ನರ್ಸ್‌ನಿಂದ ಹತ್ಯೆಗೀಡಾದ ವ್ಯಕ್ತಿಯ ಸಹೋದರ

ನವದೆಹಲಿ: 2017 ರಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವಳಿಂದ ಕೊಲೆಯಾದ ತಲಾಲ್ ಅಬ್ದೋ ಮೆಹದಿ ಸಹೋದರ ಅಬ್ದೆಲ್ಫತ್ತಾ ಮೆಹದಿ ಹಾಗೂ ಅವರ ಕುಟುಂಬದವರು ಯಾವುದೇ ಕ್ಷಮಾದಾನ ಅಥವಾ ಪರಿಹಾರದ ಪ್ರಸ್ತಾಪವನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜುಲೈ 14 ರಂದು ಬಿಬಿಸಿ ಅರೇಬಿಕ್‌ಗೆ ನೀಡಿದ ಸಂದರ್ಶನದಲ್ಲಿ, ಮೆಹದಿ ಕುಟುಂಬದ ‘ಕಿಸಾಸ್’ – ಷರಿಯಾ ಕಾನೂನಿನ ಪ್ರಕಾರ … Continued

ಶಿರಸಿ : ನಗರಸಭೆ ಸದಸ್ಯ, ಅಧಿಕಾರಿ ಲೋಕಾಯುಕ್ತ ಬಲೆಗೆ

ಶಿರಸಿ : ಜಾಗದ ವಿಷಯವೊಂದಕ್ಕೆ ಸಂಬಂಧಿಸಿದಂತೆ ₹3 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ, ಶಿರಸಿ ನಗರಸಭೆಯ ಹಾಲಿ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಗಣಪತಿ ನಾಯ್ಕ ಮತ್ತು ನಗರಸಭೆಯ ಕಂದಾಯ ಅಧಿಕಾರಿ ಆರ್. ಎಂ. ವರ್ಣೇಕರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರಸಭೆಯ ಕಂದಾಯ ಅಧಿಕಾರಿ ಆರ್ ಎಂ.ವೆರ್ಣೇಕರ ಹಾಗೂ ಸದಸ್ಯ ಗಣಪತಿ ನಾಯ್ಕ ದೂರುದಾರರಾದ ರಮೇಶ … Continued

ಬೆಂಗಳೂರು | ರೌಡಿಶೀಟರ್​ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ ಸೇರಿ ಐವರ ವಿರುದ್ಧ ಎಫ್​ಐಆರ್​

ಬೆಂಗಳೂರು: ರೌಡಿಶೀಟರ್​​ ಶಿವಪ್ರಕಾಶ ಅಲಿಯಾಸ್​ ಬಿಕ್ಲು ಶಿವ ಎಂಬಾತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ತಾಯಿ ನೀಡಿದ ದೂರಿನ ಮೇರೆಗೆ ಮಾಜಿ ಸಚಿವ ಹಾಗೂ ಕೆ.ಆರ್.ಪುರಂ. ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಸೇರಿ ಐವರ ವಿರುದ್ಧ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ. ಬೆಂಗಳೂರಿನ ಭಾರತೀ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ರೌಡಿಶೀಟರ್ ಶಿವಕುಮಾರ ಅಲಿಯಾಸ್ … Continued

ಗೋಕರ್ಣ ಗುಹೆಯಲ್ಲಿದ್ದ ರಷ್ಯಾ ಮಹಿಳೆ ಗೋವಾ ಗುಹೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಳು ! ತಾನೇ ಹೆರಿಗೆ ಮಾಡಿಕೊಂಡಿದ್ದಳು..!! ಮಕ್ಕಳ ತಂದೆ ಇಸ್ರೇಲಿ ಉದ್ಯಮಿ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಗುಹೆಯೊಳಗೆ ವಾಸಿಸುತ್ತಿದ್ದ ರಷ್ಯಾದ ಮಹಿಳೆ ನೀನಾ ಕುಟಿನಾ, ಗೋವಾದ ಗುಹೆಯಲ್ಲಿದ್ದಾಗ ಒಬ್ಬ ಮಗಳಿಗೆ ಜನ್ಮ ನೀಡಿರುವುದಾಗಿ ಹೇಳಿಕೊಂಡಿದ್ದು, ಇಸ್ರೇಲಿ ಉದ್ಯಮಿಯೊಬ್ಬರು ಈ ಇಬ್ಬರು ಮಕ್ಕಳ ತಂದೆ ಹೇಳಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ನೀನಾ ಕುಟಿನಾ (40) ಮತ್ತು ಆರು ಮತ್ತು ನಾಲ್ಕು ವರ್ಷ ವಯಸ್ಸಿನ … Continued

ಆಘಾತಕಾರಿ | ಚಲಿಸುತ್ತಿದ್ದ ಬಸ್ಸಿನಲ್ಲೇ ಮಗುವಿಗೆ ಜನ್ಮನೀಡಿದ ಯುವತಿ ; ನಂತರ ಕರುಳಕುಡಿಯನ್ನೇ ಬಸ್ಸಿನಿಂದ ಹೊರಕ್ಕೆ ಎಸೆದ ಈಕೆ…!

ಮುಂಬೈ: ಮಹಾರಾಷ್ಟ್ರದ ಪರ್ಭಾನಿಯಲ್ಲಿ 19 ವರ್ಷದ ಯುವತಿಯೊಬ್ಬಳು ಚಲಿಸುತ್ತಿರುವ ಬಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ್ದು, ನಂತರ ತನ್ನ ಪತಿ ಎಂದು ಹೇಳಿಕೊಂಡ ವ್ಯಕ್ತಿಯ ಸಹಾಯದಿಂದ ನವಜಾತ ಗಂಡು ಮಗುವನ್ನು ಬಸ್‌ ಕಿಟಕಿಯಿಂದ ಹೊರಗೆ ಎಸೆದಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಸ್‌ನಿಂದ ರಸ್ತೆಗೆ ಎಸೆದ ನಂತರ ಮಗು ಮೃತಪಟ್ಟಿದೆ. ಮಂಗಳವಾರ ಬೆಳಿಗ್ಗೆ 6:30 ರ ಸುಮಾರಿಗೆ ಪತ್ರಿ-ಸೇಲು … Continued

ಲೋಕಮಾನ್ಯ ಬಾಲಗಂಗಾಧರ ತಿಲಕರ ಮರಿಮೊಮ್ಮಗ- ಮರಾಠಿ ಪತ್ರಿಕೆ ಕೇಸರಿ ಸಂಪಾದಕ ದೀಪಕ ತಿಲಕ್ ನಿಧನ

ಪುಣೆ : ಲೋಕಮಾನ್ಯ ಬಾಲಗಂಗಾಧರ ತಿಲಕ್ ಅವರ ಮರಿಮೊಮ್ಮಗ ಮತ್ತು ಮರಾಠಿ ಪತ್ರಿಕೆ ಕೇಸರಿ ಟ್ರಸ್ಟಿ ಸಂಪಾದಕ ದೀಪಕ ತಿಲಕ್ ಅವರು ಬುಧವಾರ ಮುಂಜಾನೆ ಪುಣೆಯ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಅವರು ವಯೋಸಹಜ ಕಾಯಿಲೆಗಳಿಂದ ನಿಧನರಾದರು ಎಂದು ಅವರು ಹೇಳಿದರು. ತಿಲಕ್ ಅವರಿಗೆ ಒಬ್ಬ … Continued

ಕರ್ನಾಟಕ ಸರ್ಕಾರ ಭೂಸ್ವಾಧೀನ ಕೈಬಿಟ್ಟ ಬೆನ್ನಲ್ಲೇ ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದ ಆಂಧ್ರ ಸರ್ಕಾರ

ಅಮರಾವತಿ: ಮೂರು ವರ್ಷಗಳಿಂದ ನಡೆಯುತ್ತಿದ್ದ ದೇವನಹಳ್ಳಿಯ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ ಬೆನ್ನಲ್ಲೇ, ಆಂಧ್ರಪ್ರದೇಶ ಸರ್ಕಾರ ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದೆ. ಆಂಧ್ರ (Andhra Pradesh) ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪುತ್ರ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ನಾರಾ ಲೋಕೇಶ್ (Nara Lokesh) ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ. … Continued