ಪಾಕ್‌ಗೆ ಮುಖಭಂಗ : ಪಹಾಲ್ಗಾಮ್ ದಾಳಿ ನಡೆಸಿದ್ದ ʼಟಿಆರ್‌ಎಫ್‌ʼ ಗೊತ್ತುಪಡಿಸಿದ ವಿದೇಶಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಅಮೆರಿಕ

ನವದೆಹಲಿ: ಪಹಾಲ್ಗಾಂ ದಾಳಿಯ ಹೊಣೆ ಹೊತ್ತುಕೊಂಡಿದ್ದ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಉಗ್ರ ಸಂಘಟನೆ ಎಂದು ಅಮೆರಿಕ ಘೋಷಣೆ ಮಾಡಿದೆ. ಉಗ್ರ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದ್ದ ಪಾಕಿಸ್ತಾನಕ್ಕೆ ಮತ್ತೊಂದು ಮುಖಭಂಗವಾಗಿದೆ. ಲಷ್ಕರ್ ಉಗ್ರ ಸಂಘಟನೆಯ ಜೊತೆಗೆ ನಂಟು ಹೊಂದಿರುವ ‘ದಿ ರೆಸಿಸ್ಟೆನ್ಸ್ ಫ್ರಂಟ್’ ಉಗ್ರರ ಪಟ್ಟಿಗೆ ಸೇರಿಸಿರುವ ಬಗ್ಗೆ ವಿಶ್ವಸಂಸ್ಥೆಯಲ್ಲಿ ಅಮೆರಿಕ ಘೋಷಣೆ ಮಾಡಿದೆ. ಏಪ್ರಿಲ್ 22 … Continued

ವಿಶ್ವದ ಟಾಪ್ 10 ಶ್ರೀಮಂತರು | ಜೆಫ್ ಬೆಜೋಸ್, ಮಾರ್ಕ್ ಜುಕರ್‌ ಬರ್ಗ್‌ ಹಿಂದಿಕ್ಕಿ 2ನೇ ಸ್ಥಾನಕ್ಕೆ ಜಿಗಿದ ಲ್ಯಾರಿ ಎಲಿಸನ್ ; ನಂ.1 ಯಾರೆಂದರೆ…

ನವದೆಹಲಿ: 2025ರ ಜುಲೈ ತಿಂಗಳ ಪ್ರಕಾರ ಫೋರ್ಬ್ಸ್‌ನ ವಿಶ್ವದ ಬಿಲಿಯನೇರ್‌ಗಳ ಪಟ್ಟಿ 3,028 ಕ್ಕೆ ಏರಿದೆ. ಮತ್ತು 2025 ರಲ್ಲಿ ಜಾಗತಿಕ ವ್ಯಾಪಾರ ಪ್ರಮುಖರು ಮತ್ತು ಉದ್ಯಮಿಗಳು ತಮ್ಮ ಸಂಪತ್ತಿನಲ್ಲಿ ಏರಿಕೆ ಕಂಡಿದ್ದಾರೆ. $393.1 ಬಿಲಿಯನ್ ಅಂದಾಜು ನಿವ್ವಳ ಮೌಲ್ಯವನ್ನು ಹೊಂದಿರುವ ಎಲೋನ್ ಮಸ್ಕ್, 2025ರ ಜುಲೈ ತಿಂಗಳಲ್ಲೂ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಮುಂದುವರಿದಿದ್ದಾರೆ; … Continued

ಟ್ರಂಪ್ ಪಾಕಿಸ್ತಾನಕ್ಕೆ ಭೇಟಿ ನೀಡಲ್ಲ ಎಂದು ಶ್ವೇತಭವನ ಸ್ಪಷ್ಟನೆ ; ಸುಳ್ಳು ಸುದ್ದಿ ಪ್ರಸಾರ ಮಾಡಿ ಕ್ಷಮೆಯಾಚಿಸಿದ ಪಾಕ್‌ ಸುದ್ದಿ ವಾಹಿನಿಗಳು…!

ನವದೆಹಲಿ: ಸೆಪ್ಟೆಂಬರ್‌ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನಕ್ಕೆ ಭೇಟಿ ನೀಡುತ್ತಾರೆ ಎಂಬ ಸುಳ್ಳು ಸುದ್ದಿಯನ್ನು ಹರಡಿದ್ದಕ್ಕಾಗಿ ಪಾಕಿಸ್ತಾನದ ಟಿವಿ ಮಾಧ್ಯಮಗಳು ಜಾಗತಿಕವಾಗಿ ಮುಜುಗರ ಎದುರಿಸಬೇಕಾಯಿತು. ನಂತರ ಪಾಕಿಸ್ತಾನದ ಎರಡು ಪ್ರಮುಖ ಟಿವಿ ಸುದ್ದಿ ವಾಹಿನಿಗಳು ವರದಿಗಳನ್ನು ಹಿಂತೆಗೆದುಕೊಂಡವು, ಅವುಗಳಲ್ಲಿ ಒಂದು ಟಿವಿ ಸುದ್ದಿವಾಹಿನಿ ಕ್ಷಮೆಯಾಚಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಸಮಾ ಟಿವಿ, ಜಿಯೋ … Continued

ಭೂ ವ್ಯವಹಾರ ಪ್ರಕರಣ ; ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯದಿಂದ ಆರೋಪಪಟ್ಟಿ ಸಲ್ಲಿಕೆ

ನವದೆಹಲಿ: 2008 ರಲ್ಲಿ ಹರಿಯಾಣದ ಗುರುಗ್ರಾಮದ ಶಿಕೋಹಪುರ ಗ್ರಾಮದಲ್ಲಿ ನಡೆದ 3.53 ಎಕರೆ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ED) ಗುರುವಾರ (ಜುಲೈ 17) ಆರೋಪಪಟ್ಟಿ ಸಲ್ಲಿಸಿದೆ. ಹಣ ವರ್ಗಾವಣೆ ತಡೆ ಕಾಯ್ದೆ … Continued

ವೀಡಿಯೊ | ಮಹಾರಾಷ್ಟ್ರ ವಿಧಾನಸಭೆ ಲಾಬಿಯಲ್ಲಿ ಹೊಡೆದಾಡಿಕೊಂಡ ಬಿಜೆಪಿ ಶಾಸಕ-ಎನ್‌ಸಿಪಿ ಶಾಸಕರ ಬೆಂಬಲಿಗರು

ಮುಂಬೈ: ಗುರುವಾರ ಮಹಾರಾಷ್ಟ್ರ ವಿಧಾನಸೌಧದ ಆವರಣದಲ್ಲಿ ಬಿಜೆಪಿ ಶಾಸಕ ಗೋಪಿಚಂದ ಪದಾಲ್ಕರ್ ಮತ್ತು ಎನ್‌ಸಿಪಿ (ಶರದ್ ಪವಾರ್ ಬಣ) ಶಾಸಕ ಜಿತೇಂದ್ರ ಅವ್ಹಾದ್ ಅವರ ಬೆಂಬಲಿಗರ ನಡುವೆ ಹಿಂಸಾತ್ಮಕ ಘರ್ಷಣೆ ಸಂಭವಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ಘಟನೆಯ ವಿಡಿಯೋದಲ್ಲಿ, ಮುಖ್ಯ ದ್ವಾರದ ಬಳಿಯ ಲಾಬಿಯಲ್ಲಿ ಎರಡು ಗುಂಪುಗಳು ಪರಸ್ಪರ ಹೊಡೆದಾಡುತ್ತಿರುವುದನ್ನು, ಭದ್ರತಾ ಸಿಬ್ಬಂದಿ … Continued

ಜುಲೈ 20ರಂದು ಹುಬ್ಬಳ್ಳಿಯಲ್ಲಿ 12ನೇ ಹವ್ಯಕ ಹಬ್ಬ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಹವ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಹಾಗೂ ಹುಬ್ಬಳ್ಳಿ-ಧಾರವಾಡದ ಹವ್ಯಕ ಮಹಿಳಾ ಮಂಡಳದ ವತಿಯಿಂದ 12ನೇ ಹವ್ಯಕ ಹಬ್ಬ ಹುಬ್ಬಳ್ಳಿಯ ಹವ್ಯಕ ಭವನದಲ್ಲಿ ಜುಲೈ 20ರಂದು ನಡೆಯಲಿದೆ. ಹವ್ಯಕ ಹಬ್ಬ ವೈಶಿಷ್ಟ್ಯಪೂರ್ಣವಾಗಿದ್ದು ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮೊದಲಾದ ಕಡೆಗಳ ಹವ್ಯಕರ ವಿಶಿಷ್ಟ ಪರಂಪರೆ, ಸಂಸ್ಕೃತಿ ಹಾಗೂ ಭಾಷೆಗಳನ್ನು … Continued

ಬೆಳ್ತಂಗಡಿ: ಕಾಡಾನೆ ದಾಳಿಗೆ ವ್ಯಕ್ತಿ ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಗುಂಡಿ ಅರಣ್ಯ ಪ್ರದೇಶದಲ್ಲಿ ಕಾಡಾನೆಗಳ ಹಿಂಡಿನ ದಾಳಿಗೆ 60 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗುರುವಾರ (ಜುಲೈ 17) ಬೆಳಿಗ್ಗೆ 11 ಗಂಟೆ ಸುಮಾರಿಗೆ ಗ್ರಾಮದ ಗೇರು ಪ್ಲಾಂಟೇಶನ್‌ಗೆ ಎರಡು ಆನೆಗಳು ಬಂದಿದ್ದನ್ನು ತಿಳಿದು ಅವುಗಳನ್ನು ಓಡಿಸಲು … Continued

ಸಿಎಂರಿಂದ ಅವಮಾನಕ್ಕೊಳಗಾಗಿ ರಾಜೀನಾಮೆಗೆ ಮುಂದಾಗಿದ್ದ ಭರಮನಿಗೆ ಬಡ್ತಿ ನೀಡಿದ ರಾಜ್ಯ ಸರ್ಕಾರ

ಬೆಳಗಾವಿ: ಕೆಲ ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಂದ ಅವಮಾನಕ್ಕೀಡಾಗಿ ರಾಜೀನಾಮೆಗೆ ಮುಂದಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ವಿ. ಭರಮನಿ ಅವರಿಗೆ ರಾಜ್ಯ ಸರ್ಕಾರ ಪದೋನ್ನತಿ ನೀಡಿದೆ. ಈಗ ಅವರನ್ನು ಬೆಳಗಾವಿ ಮಹಾನಗರ ಕಾನೂನು ಮತ್ತು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ನೇಮಕ ಮಾಡಿದೆ. ಬೆಳಗಾವಿಯಲ್ಲಿ ಸಬ್ ಇನ್ಸ್ಪೆಕ್ಟರ್, … Continued

ಪೆರೋಲ್ ಮೇಲೆ ಆಸ್ಪತ್ರೆ ಐಸಿಯುಗೆ ದಾಖಲಾಗಿದ್ದ ಕುಖ್ಯಾತ ಆರೋಪಿಗೆ ಗುಂಡಿಕ್ಕಿ ಹತ್ಯೆ ಮಾಡಿ ಪರಾರಿ : ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಪಾಟ್ನಾ: ಐವರು ಶಸ್ತ್ರಸಜ್ಜಿತ ವ್ಯಕ್ತಿಗಳು ಆಸ್ಪತ್ರೆಗೆ ನುಗ್ಗಿ, ರೋಗಿಯೊಬ್ಬರ ಕೋಣೆಗೆ ನಡೆದುಕೊಂಡು ಹೋಗಿ ಕುಖ್ಯಾತ ಆರೋಪಿಯ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಇದು ಸಿನಿಮಾ ಅಲ್ಲ. ಇದು ಬಿಹಾರದ ಭಯಾನಕ ವಾಸ್ತವ. ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಐವರು ಶೂಟರ್‌ಗಳು ಆಸ್ಪತ್ರೆಯ ಕಾರಿಡಾರ್‌ನಲ್ಲಿ ತಮ್ಮ ಬಂದೂಕುಗಳನ್ನು ಹೊರತೆಗೆದು, ಕ್ಯಾಬಿನ್‌ನ ಬಾಗಿಲು ತೆರೆದು ಒಳಹೊಕ್ಕಿರುವುದು ಹಾಗೂ ನಂತರ ಪರಾರಿಯಾಗಿರುವುದು … Continued

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ: ಸಂಚಾರ ಬಂದ್

ಮಂಗಳೂರು: ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡದ ಕಡಬ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ಲಾರಿ, ಬಸ್, ಟ್ರಕ್​ಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ. ಭೂ ಕುಸಿತದಿಂದ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚಾರಕ್ಕೆ ಯಾವುದೇ ಅಡಚಣೆಗಳು ಎದುರಾಗಿಲ್ಲ. ಆದರೆ, ಮಂಗಳೂರಿನಿಂದ ಬೆಂಗಳೂರಿಗೆ … Continued