ಮನೆಯಲ್ಲೇ ಟೆನಿಸ್ ಆಟಗಾರ್ತಿ ರಾಧಿಕಾ ಯಾದವಗೆ ಗುಂಡಿಕ್ಕಿ ಕೊಂದ ತಂದೆ….!

ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ 25 ವರ್ಷದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರನ್ನು ಗುರುವಾರ ಗುರುಗ್ರಾಮದ ಸೆಕ್ಟರ್ 57 ರಲ್ಲಿರುವ ಅವರ ಮನೆಯಲ್ಲಿ ಆಕೆಯ ತಂದೆಯೇ ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ. ಸುಶಾಂತ್ ಲೋಕ್ ಫೇಸ್ -2ರಲ್ಲಿರುವ ಅವರ ನಿವಾಸದಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಪೊಲೀಸರ ಪ್ರಕಾರ, … Continued

ಹೇರ್‌ ಕಟ್‌ ಮಾಡಿಸಿಕೊಳ್ಳಲು ಹೇಳಿದ್ದಕ್ಕೆ ಗುರು ಪೂರ್ಣಿಮೆ ದಿನವೇ ಪ್ರಾಂಶುಪಾಲರನ್ನು ಇರಿದು ಕೊಂದ ಇಬ್ಬರು ವಿದ್ಯಾರ್ಥಿಗಳು…!

ಚಂಡೀಗಢ: ಆಘಾತಕಾರಿ ಘಟನೆಯೊಂದರಲ್ಲಿ ಹರಿಯಾಣದ ಹಿಸಾರ್‌ನಲ್ಲಿರುವ ಶಾಲೆಯೊಂದರ ಪ್ರಾಂಶುಪಾಲರನ್ನು 12 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಚಾಕುವಿನಿಂದ ಇರಿದು ಕೊಂದಿದ್ದಾರೆ ಎಂದು ವರದಿಯಾಗಿದೆ. ಕಾಕತಾಳೀಯವಾಗಿ, ಶಿಕ್ಷಕರು ಮತ್ತು ಮಾರ್ಗದರ್ಶಕರಿಗೆ ಗೌರವ ತೋರಿಸಲು ಆಚರಿಸುವ ಗುರು ಪೂರ್ಣಿಮೆಯ ದಿನವಾದ ಇಂದು ಗುರುವಾರ ಈ ದುರಂತದ ಘಟನೆ ನಡೆದಿದೆ. ಪ್ರಾಂಶುಪಾಲರು ಕ್ಷೌರ ಮಾಡಿಸಿಕೊಳ್ಳಲು ಮತ್ತು ಶಿಸ್ತನ್ನು ಪಾಲಿಸಲು ಸೂಚಿಸಿದ … Continued

ಶಾಲೆಯ ಟಾಯ್ಲೆಟ್ಟಿನಲ್ಲಿ ರಕ್ತದ ಕಲೆ ಕಂಡುಬಂದಿದ್ದಕ್ಕೆ ಮುಟ್ಟಾದ ಹುಡುಗಿಯ ಪತ್ತೆಗೆ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದರು…!!

ಥಾಣೆ : ಋತುಮತಿಯಾದ (Periods) ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚುವ ಸಲುವಾಗಿ ಶಿಕ್ಷಕರು 5ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರ ಬಟ್ಟೆ, ಒಳಉಡುಪುಗಳನ್ನು ಬಿಚ್ಚಿಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ (Maharastra) ಥಾಣೆಯ ಶಹಪೂರದ ಶಾಲೆಯೊಂದರಲ್ಲಿ ನಡೆದಿದೆ. ಈ ಸಂಬಂಧ ಥಾಣೆಯಲ್ಲಿರುವ ಖಾಸಗಿ ಶಾಲೆಯ ಪ್ರಾಂಶುಪಾಲರು ಮತ್ತು ಇನ್ನೊಬ್ಬ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ (ಜುಲೈ 10) … Continued

ಅಫ್ಘಾನಿಸ್ತಾನದಲ್ಲಿ 45 ವರ್ಷದ ವ್ಯಕ್ತಿ ಜೊತೆ 6 ವರ್ಷದ ಬಾಲಕಿಯ ವಿವಾಹ…! ಮನೆಗೆ ಬಾಲಕಿಯನ್ನು ಕರೆದೊಯ್ಯದಂತೆ ತಡೆದ ತಾಲಿಬಾನ್‌

ದಕ್ಷಿಣ ಅಫ್ಘಾನಿಸ್ತಾನದಲ್ಲಿ ಆರು ವರ್ಷದ ಬಾಲಕಿಯನ್ನು 45 ವರ್ಷದ ವ್ಯಕ್ತಿಯೊಂದಿಗೆ ಬಲವಂತವಾಗಿ ಮದುವೆ ಮಾಡಲಾಗಿದೆ ಎಂದು ವರದಿಯಾಗಿದೆ. ಅಮೆರಿಕ ಮೂಲದ ಅಫಘಾನ್ ಮಾಧ್ಯಮ Amu.tv ಪ್ರಕಾರ, ಈ ಮದುವೆ ಮಾರ್ಜಾ ಜಿಲ್ಲೆಯಲ್ಲಿ ನಡೆದಿದ್ದು, ಇಬ್ಬರು ಪತ್ನಿಯರನ್ನು ಹೊಂದಿರುವ ಆ ವ್ಯಕ್ತಿ ಮದುವೆಗೆ ಪ್ರತಿಯಾಗಿ ಹುಡುಗಿಯ ಕುಟುಂಬಕ್ಕೆ ಹಣ ನೀಡಿದ್ದಾನೆ ಎನ್ನಲಾಗಿದೆ. ತಾಲಿಬಾನ್ ಆಡಳಿತವು ಮಗುವನ್ನು ಒಂಬತ್ತು … Continued

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಇಡಿ ಶಾಕ್‌; ಹಲವು ಕಡೆ ದಾಳಿ

ಬೆಂಗಳೂರು: ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾ ರೆಡ್ಡಿ ಮನೆ ಹಾಗೂ ಕಚೇರಿಯ ಮೇಲೆ ಗುರುವಾರ ಜಾರಿ ನಿರ್ದೇಶನಾಲಯ( ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾ ರೆಡ್ಡಿಗೆ ಸೇರಿದ 5 ಸ್ಥಳಗಳ ಮೇಲೆ ಇ.ಡಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ದೇಶದ ವಿವಿಧ ಕಡೆಗಳಲ್ಲಿ ಇದೇ ರೀತಿಯಲ್ಲಿ ಇತರರ ಮೇಲೆ ದಾಳಿ … Continued

ರೈಲ್ವೆ ಹಳಿಯ ಸಮೀಪವೇ ಮರಿಗೆ ಜನ್ಮ ನೀಡಿದ ಕಾಡಾನೆ ; 2 ತಾಸು ನಿಂತ ರೈಲು | ಹೃದಯಸ್ಪರ್ಶಿ ವೀಡಿಯೊ ವೀಕ್ಷಿಸಿ

ಒಂದು ಹೃದಯಸ್ಪರ್ಶಿ ವಿದ್ಯಮಾನದಲ್ಲಿ ಜಾರ್ಖಂಡ್‌ನಲ್ಲಿ ಕಾಡಾನೆಯೊಂದು ಹಳಿಗೆ ಸಮೀಪದಲ್ಲಿಯೇ ಮರಿಗೆ ಜನ್ಮ ನೀಡುತ್ತಿರುವಾಗ ರೈಲು ಸುಮಾರು ಎರಡು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಳಿಸಿದ ಅಪರೂಪದ ಘಟನೆ ನಡೆದಿದೆ. ರೈಲು ಎರಡು ಗಂಟೆಗಳಿಗೂ ಹೆಚ್ಚು ಕಾಲ ನಿಂತಿದ್ದರಿಂದ ಆನೆ ಸುರಕ್ಷಿತವಾಗಿ ಹೆರಿಗೆ ಮಾಡಲು ಅವಕಾಶ ಮಾಡಿಕೊಟ್ಟಿತು. ಕ್ಯಾಮೆರಾದಲ್ಲಿ ಸೆರೆಯಾದ ಈ ಘಟನೆಯಲ್ಲಿ ಆನೆ ಮತ್ತು ಅದರ … Continued

ರಾಜಕಾರಣಿಗಳ ಹೆಸರು ಬಳಸಿ 30 ಕೋಟಿ ರೂ. ವಂಚನೆ ಆರೋಪ ; ಮಹಿಳೆ ಬಂಧನ

ಬೆಂಗಳೂರು: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ  ಸೇರಿದಂತೆ ರಾಜಕೀಯ ನಾಯಕರ ಹೆಸರು ಹೇಳಿಕೊಂಡು ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇರೆಗೆ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ. ಕಿಟ್ಟಿ ಪಾರ್ಟಿ ಹೆಸರಲ್ಲಿ ಶ್ರೀಮಂತ ಮಹಿಳೆಯರನ್ನು ಪರಿಚಯ ಮಾಡಿಕೊಂಡಿದ್ದ ಸವಿತಾ ತನಗೆ ಹಲವು ರಾಜಕೀಯ ನಾಯಕರು ಗೊತ್ತು ಎಂದು ಹೇಳಿ ಪರಿಚಿತರೆಂದು ಹೇಳಿಕೊಂಡು ವಂಚಿಸುತ್ತಿದ್ದ ಆರೋಪದ … Continued

ಬಾಹ್ಯಾಕಾಶ ರೈತನಾದ ಶುಭಾಂಶು ಶುಕ್ಲಾ ; ಬಾಹ್ಯಾಕಾಶ ನಿಲ್ದಾಣದಲ್ಲಿ ಮೆಂತೆ, ಹೆಸರುಕಾಳು ಗಿಡ ಬೆಳೆಸುತ್ತಿರುವ ಭಾರತದ ಗಗನಯಾತ್ರಿ

ನವದೆಹಲಿ: ತಮ್ಮ ಬಾಹ್ಯಾಕಾಶ ಯಾನದ ಕೊನೆಯ ಹಂತದಲ್ಲಿ, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ರೈತನಾಗಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣದಲ್ಲಿ ‘ಹೆಸರುಕಾಳು’ ಮತ್ತು ‘ಮೆಂತ್ಯ’ ಬೀಜಗಳ ಮೊಳಕೆಯೊಡೆಯುವಿಕೆಯನ್ನು ಅವರು ದಾಖಲಿಸುತ್ತಿದ್ದಾರೆ. ಸೂಕ್ಷ್ಮ ಗುರುತ್ವಾಕರ್ಷಣೆಯು ಮೊಳಕೆಯೊಡೆಯುವಿಕೆ ಮತ್ತು ಸಸ್ಯಗಳ ಆರಂಭಿಕ ಬೆಳವಣಿಗೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಉದ್ದೇಶಿಸಿರುವ ಅಧ್ಯಯನದ ಭಾಗವಾಗಿ ಗಗನಯಾತ್ರಿ ಶುಕ್ಲಾ … Continued

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ ; ಪರಿಷತ್‌ ಸದಸ್ಯ ರವಿಕುಮಾರಗೆ ನಿರೀಕ್ಷಣಾ ಜಾಮೀನು

ಬೆಂಗಳೂರು : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ತಿನ ವಿಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಬಿಜೆಪಿ ವಿಧಾನ ಪರಿಷತ್‌ ಸದಸ್ಯರಾದ ರವಿಕುಮಾರ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯದ … Continued