ಇಂದು (ಜುಲೈ 9) ಭಾರತ ಬಂದ್ : 25 ಕೋಟಿ ಕಾರ್ಮಿಕರ ಮುಷ್ಕರ ; ಯಾವೆಲ್ಲ ಸೇವೆಗಳಿಗೆ ತೊಂದರೆಯಾಗಬಹುದು..?

ನವದೆಹಲಿ: ಕೃಷಿ ಮತ್ತು ಗ್ರಾಮೀಣ ಕಾರ್ಮಿಕ ಸಂಘಟನೆಗಳ ಸಹಯೋಗದೊಂದಿಗೆ 10 ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟವು ಬುಧವಾರ ಜುಲೈ 9ರಂದು ರಾಷ್ಟ್ರವ್ಯಾಪಿ ಮುಷ್ಕರ ಘೋಷಿಸಿದೆ ಬ್ಯಾಂಕಿಂಗ್, ಅಂಚೆ ಸೇವೆಗಳು, ಗಣಿಗಾರಿಕೆ, ನಿರ್ಮಾಣ ವಲಯ ಮತ್ತು ಸಾರಿಗೆ ಮುಂತಾದ ವಲಯಗಳ 25 ಕೋಟಿಗೂ ಹೆಚ್ಚು ಕಾರ್ಮಿಕರು ಜುಲೈ 9 ರ ಬುಧವಾರ ಭಾರತ ಬಂದ್‌ ನಲ್ಲಿ ಪಾಲ್ಗೊಳ್ಳಲಿದ್ದಾರೆ. … Continued

ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಕೇರಳ ನರ್ಸ್‌ ಗೆ ಜುಲೈ 16ರಂದು ಗಲ್ಲು

ನವದೆಹಲಿ: ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ 37 ವರ್ಷದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜುಲೈ 16 ರಂದು ದೇಶದಲ್ಲಿ ಗಲ್ಲಿಗೇರಿಸಲಾಗುತ್ತದೆ ಎಂದು ಮಾಧ್ಯಮ ವರದಿಗಳು ಮಂಗಳವಾರ ತಿಳಿಸಿವೆ. ಯೆಮನ್ ಪ್ರಜೆ ತಲಾಲ್ ಅಬ್ದೋ ಮೆಹದಿ ಎಂಬವರನ್ನು ಕೊಲೆ ಮಾಡಿದ ಆರೋಪದ ಮೇಲೆ ಪ್ರಿಯಾಗೆ ಮರಣದಂಡನೆ ವಿಧಿಸಲಾಗಿದೆ. ಯೆಮನ್‌ನಲ್ಲಿ ವಿದೇಶಿ ಪ್ರಜೆಗಳಿಗೆ ಕಾನೂನುಬದ್ಧ ಅವಶ್ಯಕತೆಯಾಗಿರುವ … Continued

ರಾಜ್ಯ ಸರ್ಕಾರದ ಎಲ್ಲ ಉದ್ಯೋಗಗಳಲ್ಲಿ ಮಹಿಳೆಯರಿಗೆ 35%ರಷ್ಟು ಮೀಸಲಾತಿ : ಚುನಾವಣೆ ಸನಿಹದಲ್ಲಿ ಬಿಹಾರದ ನಿತೀಶ್‌ ಸರ್ಕಾರದ ಮಹತ್ವದ ನಿರ್ಧಾರ

ಪಾಟ್ನಾ : ಮಹತ್ವದ ಕ್ರಮದಲ್ಲಿ ಮುಖ್ಯಮಂತ್ರಿ ನಿತೀಶಕುಮಾರ ನೇತೃತ್ವದ ಬಿಹಾರ ಸರ್ಕಾರ ಮಂಗಳವಾರ ಬಿಹಾರದ ಕಾಯಂ ನಿವಾಸಿ ಮಹಿಳೆಯರಿಗೆ ರಾಜ್ಯ ಸರ್ಕಾರದ ಎಲ್ಲ ಉದ್ಯೋಗಗಳಲ್ಲಿ ಶೇಕಡಾ 35 ರಷ್ಟು ಮೀಸಲಾತಿ ನೀಡಲು ಒಪ್ಪಿಗೆ ನೀಡಿದೆ. ಬಿಹಾರ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಮುಖ್ಯಮಂತ್ರಿ ನಿತೀಶಕುಮಾರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ … Continued

ಭೂ ಕುಸಿತದಿಂದ ಗ್ರಾಮವೇ ನಾಶವಾದ್ರೂ ಅಪಾಯದ ಬಗ್ಗೆ ಮಧ್ಯರಾತ್ರಿ ಎಚ್ಚರಿಸಿ 67 ಜನರ ಜೀವ ಉಳಿಸಿದ ನಾಯಿ..!

ನವದೆಹಲಿ: ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ, ಭಾರತದ ವಿವಿಧ ಭಾಗಗಳಲ್ಲಿ ಭೂ ಕುಸಿತ, ಹಠಾತ್ ಪ್ರವಾಹ ಮತ್ತು ಮೇಘಸ್ಫೋಟಗಳು ಸಂಭವಿಸುತ್ತಿವೆ. ಇದರ ಮಧ್ಯೆ ಹಿಮಾಚಲ ಪ್ರದೇಶದ ನಾಯಿಯೊಂದು ಅನೇಕರ ಜೀವ ಉಳಿಸುವ ಕೆಲಸ ಮಾಡುವ ಮೂಲಕ ಸುದ್ದಿಯಲ್ಲಿದೆ. ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಸಿಯಾಥಿ ಗ್ರಾಮದಲ್ಲಿ ಭೀಕರ ಭೂಕುಸಿತ ಸಂಭವಿಸುವ ಕೆಲವೇ ಕ್ಷಣಗಳ ಮೊದಲು, ಹಳ್ಳಿಯ ನಾಯಿಯೊಂದು … Continued

ಇದೆಂಥ ವಿಚಿತ್ರ | ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಜೀವಂತ-ಓಡಾಡುತ್ತಿದ್ದ 1 ಅಡಿ ಉದ್ದದ ಹಾವುಮೀನು..!

ವಿಚಿತ್ರ ಮತ್ತು ಆಘಾತಕಾರಿ ಘಟನೆಗಳು ಪ್ರತಿದಿನ ವಿಶ್ವದಾದ್ಯಂತ ಸುದ್ದಿಯಾಗುತ್ತವೆ, ಆದರೆ ಇತ್ತೀಚೆಗೆ ಚೀನಾದಲ್ಲಿ ನಡೆದ ವಿದ್ಯಮಾನವೊಂದು ಮಾತ್ರ ವೈದ್ಯಕೀಯ ತಜ್ಞರನ್ನೂ ದಿಗ್ಭ್ರಮೆಗೊಳಿಸಿದೆ. ಜನಸಾಮಾನ್ಯರು ಇದನ್ನು ಕೇಳಿ ನಿಬ್ಬೆರಗಾಗಿದ್ದಾರೆ. ಚೀನಾದ ಹುನಾನ್ ಪ್ರಾಂತ್ಯದಲ್ಲಿ ಅತ್ಯಂತ ಅಪರೂಪದ ಮತ್ತು ವಿಲಕ್ಷಣ ಪ್ರಕರಣ ಬೆಳಕಿಗೆ ಬಂದಿದ್ದು, ವ್ಯಕ್ತಿಯೊಬ್ಬನ ಹೊಟ್ಟೆಯೊಳಗೆ ಒಂದು ಅಡಿ ಉದ್ದದ ಈಲ್ ತರಹದ ಜೀವಿ ಜೀವಂತವಾಗಿ ಪತ್ತೆಯಾಗಿದೆ…! … Continued

ಉದ್ಯಮಿ ಗೋಪಾಲ ಖೇಮ್ಕಾ ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರಿನಲ್ಲಿ ಹತ

ಪಾಟ್ನಾ : ಉದ್ಯಮಿ ಗೋಪಾಲ ಖೇಮ್ಕಾ ಅವರ ಹತ್ಯೆಗೆ ಸಂಬಂಧಿಸಿದ ಪ್ರಮುಖ ಆರೋಪಿ ಮಂಗಳವಾರ ಬೆಳಿಗ್ಗೆ ಪೊಲೀಸರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ವರದಿಯಾಗಿದೆ. ಪಾಟ್ನಾ ನಗರದ ಮಾಲ್ ಸಲಾಮಿ ಪ್ರದೇಶದಲ್ಲಿ ಪೊಲೀಸರು ಶಂಕಿತನನ್ನು ಬಂಧಿಸಲು ಪ್ರಯತ್ನಿಸಿದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಪೊಲೀಸರ ಪ್ರಕಾರ, ಖೇಮ್ಕಾ ಅವರನ್ನು ಕೊಲ್ಲಲು ಬಳಸಿದ ಆಯುಧವನ್ನು ಮೃತ … Continued

ಮೈಯಲ್ಲಿ ಹೊಕ್ಕಿದ್ದ ದೆವ್ವ ಬಿಡಿಸಲು ಥಳಿತ ; ಮಹಿಳೆ ಸಾವು

ಶಿವಮೊಗ್ಗ: ಮಹಿಳೆಯ ಮೈಯಲ್ಲಿ ದೆವ್ವ (devil) ಹೊಕ್ಕಿದೆ ಎಂದು ಭಾವಿಸಿ ಮನಸೋ ಇಚ್ಛೆ ಥಳಿಸಿದ್ದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ಗೀತಮ್ಮ(53) ಎಂದು ಗುರುತಿಸಲಾಗಿದೆ. ಮೈಯಲ್ಲಿ ದೆವ್ವವಿದೆ ಎಂದು ಬಿಡಿಸುವ ನೆಪದಲ್ಲಿ ಗೀತಮ್ಮ ಅವರಿಗೆ ಥಳಿಸಿದ ಆಶಾ ಳನ್ನು … Continued

ರಾಜಕೀಯದಿಂದ ಮತ್ತೆ ನಟನೆಗೆ ; ‘ಕ್ಯುಂಕಿ ಸಾಸ್ ಭಿ ಕಭಿ ಬಹು ಥಿ 2ʼ ಮೂಲಕ ಮತ್ತೆ ಕಿರುತೆರೆಗೆ ಬಂದ ಸ್ಮೃತಿ ಇರಾನಿ

ಬಣ್ಣದ ಲೋಕದಲ್ಲಿ ಮಿಂಚಿ ಅಪಾರ ಹೆಸರು ಮಾಡಿದ್ದ ನಟಿ ಸ್ಮೃತಿ ಇರಾನಿ (Smriti Irani) ರಾಜಕೀಯದಲ್ಲೂ ಯಶಸ್ಸು ಕಂಡ ಅವರು ಕೇಂದ್ರ ಸಚಿವೆಯಾಗಿಯೂ ಕೆಲಸ ಮಾಡಿದರು. ನೆಹರು-ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ರಾಹುಲ್‌ ಗಾಂಧಿಯವರನ್ನು ಸೋಲಿಸಿ ರಾಜಕೀಯದಲ್ಲಿ ಬಹುದೊಡ್ಡ ಸುದ್ದಿ ಮಾಡಿದ್ದರು. ಇದೀಗ ಸುಮಾರು 25 ವರ್ಷಗಳ ನಂತರ, ಸ್ಮೃತಿ ಇರಾನಿ ಕ್ಯೂಂಕಿ ಸಾಸ್ ಭಿ … Continued

ವೀಡಿಯೊ..| ಬರಿ ಕೈಯಲ್ಲಿ 15 ಅಡಿ ಉದ್ದದ ದೈತ್ಯ ಹೆಬ್ಬಾವು ಹಿಡಿದು ಆಟದ ಗೊಂಬೆಯಂತೆ ಹೊತ್ತುಕೊಂಡು ಹೋದ ಮಕ್ಕಳು…!

ಉತ್ತರ ಪ್ರದೇಶದ ಬುಲಂದಶಹರದ ಜಹಾಂಗೀರಾಬಾದ್ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಗ್ರಾಮಸ್ಥರು ಮತ್ತು ಮಕ್ಕಳು ತಮ್ಮ ಬರಿ ಕೈಗಳಿಂದ 15 ಅಡಿ ಉದ್ದದ ದೈತ್ಯ ಹೆಬ್ಬಾವನ್ನು ಹಿಡಿದಿದ್ದಾರೆ. ಬುಲಂದಶಹರ-ಅನುಪಶಹರ ರಸ್ತೆಯಲ್ಲಿ ಸುಮಾರು 3 ಕಿ.ಮೀ ದೂರದಲ್ಲಿ ಮಕ್ಕಳು ಹೆಬ್ಬಾವನ್ನು ಕೈಯಲ್ಲಿ ಹಿಡಿದುಕೊಂಡು ಹೋದಾಗ ಎಲ್ಲರೂ ಬೆರಗಾದರು. ಅರಣ್ಯ ಇಲಾಖೆ ಅಥವಾ ಯಾವುದೇ ಅಧಿಕಾರಿಗಳಿ ಬಳಿ ಯಾವುದೇ … Continued

ವೀಡಿಯೊ…| ಶ್ರೀರಂಗಪಟ್ಟಣ : ಫೋಟೊಕ್ಕೆ ಪೋಸ್ ನೀಡುವಾಗ ಸೇತುವೆಯಿಂದ ನದಿಗೆ ಬಿದ್ದು ಕೊಚ್ಚಿ ಹೋದ ವ್ಯಕ್ತಿ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಪಿಕ್ನಿಕ್ ವೇಳೆ ಕಾವೇರಿ ನದಿ ಬಳಿ ಫೋಟೋ ತೆಗೆದುಕೊಳ್ಳಲು ಹೋಗಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಶ್ರೀರಂಗಪಟ್ಟಣದಲ್ಲಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ದುರಂತದ ವೀಡಿಯೊ ವೈರಲ್ ಆಗಿದ್ದು, ಆಯತಪ್ಪಿ ಬಿದ್ದ ನಂತರ ವ್ಯಕ್ತಿ ಕಾವೇರಿ ನದಿಯ ಬಲವಾದ ಪ್ರವಾಹದಲ್ಲಿ … Continued