ಬಂಟ್ವಾಳ | ಯುವತಿಗೆ ಇರಿದು ನಂತ್ರ ಆತ್ಮಹತ್ಯೆಗೆ ಶರಣಾದ ಯುವಕ

ಮಂಗಳೂರು : ಯುವಕನೊಬ್ಬ ಪ್ರೇಯಸಿಗೆ ಚಾಕುವಿನಿಂದ ಇರಿದು, ನಂತರ  ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಎಂಬಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಫರಂಗಿಪೇಟೆ ನಿವಾಸಿ ದಿವ್ಯಾ ಅಲಿಯಾಸ್ ದೀಕ್ಷಿತಾ (26) ಹಾಗೂ ಕೋಡ್ಮನ್ ಗ್ರಾಮದ ನಿವಾಸಿ ಸುಧೀರ (30) ಎಂಬಾತ ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. … Continued

ವೀಡಿಯೊ…| ಬೆಂಗಳೂರು : ತಡೆಗೋಡೆಗೆ ಟೆಂಪೋ ಡಿಕ್ಕಿ ; ವಾಹನವೇ ಅರ್ಧಕ್ಕೆ ತುಂಡು. ; ಸೇತುವೆಯಿಂದ ಕೆಳಕ್ಕೆ ಬಿದ್ದ ಕ್ಯಾಬಿನ್…!

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಗೂಡ್ಸ್‌ ಟೆಂಪೊವೊಂದು ತಡೆಗೋಡೆಗೆ ಡಿಕ್ಕಿಯಾದ ನಂತರ ಪೀಸ್‌ ಪೀಸ್‌ ಆದ ಘಟನೆ ನಡೆದಿದೆ. ಬೆಂಗಳೂರಿನ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ನೈಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಅಪಘಾತದ ಭೀಕರ ವೀಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜ್ಞಾನಭಾರತಿ ಬಳಿಯ ನೈಸ್‌ ರಸ್ತೆಯ ರಾಮಸಂದ್ರ ಸೇತುವೆ ಬಳಿ … Continued

ಹುಡುಗಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ; ಯುವಕನ ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗಾ ಥಳಿತ

 ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿ ಯುವಕನನ್ನು ಅಪಹರಿಸಿ, ವಿವಸ್ತ್ರಗೊಳಿಸಿ, ಕ್ರೂರವಾಗಿ ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಆಕ್ರೋಶಕ್ಕೆ ಕಾರಣವಾದ ಈ ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದೆ. ಜೂನ್ 30 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಈ ಘಟನೆ ನಡೆದಿದೆ … Continued

ವೀಡಿಯೊ | ಹತ್ತಿರ ಬಂದು, ಕಾರಿನ ಕೆಳಕ್ಕೆ ತೂರಿ ಕಾರನ್ನು ಸ್ವಯಂ ಎತ್ತಿ-ಒಯ್ದು, ಪರ್ಫೆಕ್ಟ್‌ ಪಾರ್ಕ್ ಮಾಡುವ ರೋಬೋಟ್ ವ್ಯಾಲೆಟ್ | ವೀಕ್ಷಿಸಿ

ಕಾರುಗಳನ್ನು ಮೇಲಕ್ಕೆತ್ತಿ ನಂತರ ಒಯ್ದು ಪಾರ್ಕಿಂಗ್ ಸ್ಥಳಗಳ ಕ್ಲಿಷ್ಟಕರ ಜಾಗದಲ್ಲಿ ಅಚ್ಚುಕಟ್ಟಾಗಿ ಹಾಗೂ ಕರಾರುವಕ್ಕಾಗಿ ಇರಿಸುವ ಸಂಪೂರ್ಣ ತಾನೇ ಸ್ವಯಂ ಕಾರ್ಯನಿರ್ವಹಿಸುವ ರೋಬೋಟ್ ವ್ಯಾಲೆಟ್ ತಂತ್ರಜ್ಞಾನದ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದು, ಬೆರಗುಗೊಳಿಸಿದೆ. ತಾನೇ ಸ್ವಯಂ ಆಗಿ ಕಾರ್ಯನಿರ್ವಹಿಸುವ ರೋಬೋಟ್ ವ್ಯಾಲೆಟ್‌ ವಾಹನಗಳ ಕೆಳಗೆ ತೂರಿಕೊಳ್ಳುತ್ತದೆ, ಚಕ್ರಗಳ ಮೂಲಕ ವಾಹನವನ್ನು ಮೇಲಕ್ಕೆ ಎತ್ತುತ್ತದೆ ಮತ್ತು ನಿಗದಿತ ಸ್ಥಳಕ್ಕೆ … Continued

ಉದ್ಯಮಿ, ಬಿಜೆಪಿ ನಾಯಕ ಗೋಪಾಲ ಖೇಮ್ಕಾ ಹತ್ಯೆ ಪ್ರಕರಣ ; ಅವರ ಅಂತ್ಯಕ್ರಿಯೆಗೆ ಹಾರ ಹಿಡಿದುಕೊಂಡು ಬಂದ ಆರೋಪಿ…!

ಪಾಟ್ನಾ; ಬಿಹಾರದಲ್ಲಿ ನಡೆದ ಉದ್ಯಮಿ ಹಾಗೂ ಹಾಗೂ ಬಿಜೆಪಿ ನಾಯಕ ಗೋಪಾಲ ಖೇಮ್ಕಾ ಹತ್ಯೆಗೆ ಸಂಬಂಧಿಸಿದಂತೆ ಪಾಟ್ನಾ ಪೊಲೀಸರು ಭಾನುವಾರ ಒಂದು ಡಜನ್‌ಗೂ ಹೆಚ್ಚು ಶಂಕಿತರನ್ನು ಬಂಧಿಸಿದ್ದಾರೆ. ಹಾರ ಹಿಡಿದುಕೊಂಡು ಉದ್ಯಮಿ ಗೋಪಾಲ ಖೇಮ್ಕಾ ಅವರ ಅಂತ್ಯಕ್ರಿಯೆಗೆ ಆಗಮಿಸಿದ್ದ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಜುಲೈ 6 ರಂದು ಖೇಮ್ಕಾ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾಗ ಪಾಟ್ನಾದ ಪುನ್‌ಪುನ್ … Continued

10 ವರ್ಷಗಳಿಗೂ ಹೆಚ್ಚು ಕಾಲ ವೈದ್ಯರಿಗೇ ತಿಳಿಯದ ನಿಗೂಢ ಕಾಯಿಲೆಯ ಮೂಲ ಕಾರಣ ಪತ್ತೆಹಚ್ಚಿದ ಚಾಟ್‌ ಜಿಪಿಟಿ…!

ದಶಕಗಳ ಕಾಲದ ನಿಗೂಢವಾಗಿದ್ದ ಅನಾರೋಗ್ಯದ ಮೂಲ ಕಾರಣವನ್ನು ಕಂಡುಹಿಡಿಯಲು ಚಾಟ್‌ ಜಿಪಿಟಿ (ChatGPT) ಹೇಗೆ ಸಹಾಯ ಮಾಡಿತು ಎಂದು ಬಳಕೆದಾರರೊಬ್ಬರು ಹೇಳಿಕೊಂಡ ನಂತರ ರೆಡ್ಡಿಟ್ ಪೋಸ್ಟ್ ಗಮನ ಸೆಳೆಯುತ್ತಿದೆ. ಈ ನಿಗೂಢ ಆರೋಗ್ಯ ಸಮಸ್ಯೆಗೆ ಕಾರಣ ಏನೆಂದು ಒಂದು ದಶಕಕ್ಕೂ ಹೆಚ್ಚು ಕಾಲ ಪತ್ತೆ ಮಾಡಲು ಸಾಧ್ಯವಾಗದೆ ಹಲವಾರು ವೈದ್ಯರು, ತಜ್ಞರು ಮತ್ತು ನರವಿಜ್ಞಾನಿಗಳನ್ನು ಸಹ … Continued

ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕವಾಗಿಲ್ಲ : ಸಿಎಂ ಕಚೇರಿ ಸ್ಪಷ್ಟನೆ

ಬೆಂಗಳೂರು :ಎಐಸಿಸಿಯ ಹಿಂದುಳಿದ ವರ್ಗಗಳ (ಒಬಿಸಿ) ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.‌ ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ … Continued

ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ; ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ಆರ್‌ಜೆಡಿ

ಪಾಟ್ನಾ: ಈ ವರ್ಷದ ಕೊನೆಯಲ್ಲಿ ಚುನಾವಣೆಗೆ ಸಜ್ಜಾಗಲಿರುವ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಪ್ರಕರಣದಲ್ಲಿ ಆರ್‌ಜೆಡಿ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದಿಸಲಿದ್ದು, ಸೋಮವಾರ ವಿಚಾರಣೆ ನಡೆಸುವಂತೆ ಕೋರಿದ್ದಾರೆ. ಜೂನ್ … Continued

ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ಕೊಪ್ಪಳ: ”ಗ್ರಾಮೀಣ ಭಾಗದಲ್ಲಿ ರಸ್ತೆ ನಿರ್ಮಿಸಬೇಕೆಂದರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಸೇರಿ ಎಲ್ಲ ಬಂದ್‌ ಆಗುತ್ತವೆ,” ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಕುಕನೂರು ತಾಲೂಕಿನ ಗ್ರಾಮವೊಂದರಲ್ಲಿ ಶನಿವಾರ ನಡೆದ ಸರಕಾರಿ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ರೈತರೊಬ್ಬರು, ” ಮಹಿಳೆಯರಿಗೆ ಹಣ ಕೊಡ್ತೀರಿ, ಸೌಲಭ್ಯ ಕೊಡ್ತೀರಿ. … Continued

ವೀಡಿಯೊ..| ಬಾಲಕರ ಹುಚ್ಚಾಟ : ರೀಲ್‌ ಸ್ಟಂಟ್‌ ಮಾಡಲು ವೇಗವಾಗಿ ಚಲಿಸುತ್ತಿದ್ದ ರೈಲಿನ ಕೆಳಗೆ ಮಲಗಿದ ಬಾಲಕ : ಮೂವರು ಅಪ್ರಾಪ್ತರ ಬಂಧನ

ಭುವನೇಶ್ವರ: ಸಾಮಾಜಿಕ ಮಾಧ್ಯಮದಲ್ಲಿ ಪ್ರಭಾವಿಗಳಾಗಲು ನಡೆಸುವ ರೀಲ್ ಉನ್ಮಾದವು ಅನೇಕ ಸಂದರ್ಭಗಳಲ್ಲಿ ಅವರ ಜೀವಕ್ಕೇ ಅಪಾಯವನ್ನುಂಟು ಮಾಡುತ್ತಿವೆ. ಇಂಥದ್ದೇ ಅಪಾಯಕಾರಿಯಾದ ರೀಲ್‌ ಮಾಡಲು ಹೋದ ಮೂವರು ಅಪ್ರಾಪ್ತ ಬಾಲಕರನ್ನು ಒಡಿಶಾದ ಬೌಧ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ, ಈ ಸಾಹಸದಲ್ಲಿ ಒಬ್ಬ ಬಾಲಕ ರೈಲು ಹಳಿಗಳ ಮೇಲೆ ಮಲಗಿದ್ದಾಗ ರೈಲು ಅತಿ ವೇಗದಲ್ಲಿ ಆತನ ಮೇಲಿಂದಲೇ ಹಾದುಹೋಗಿದೆ. ಪುರುನಪಾಣಿ … Continued