ಪಾಂಗೊಂಗ್‌ ಲೇಕ್‌ನಿಂದ ಭಾರತ-ಚೀನಾ ಸೇನಾ ಹಿಂತೆಗೆತ ಆರಂಭ: ಚೀನಾ

ಚೀನಾ ಮತ್ತು ಭಾರತದ ಸಶಸ್ತ್ರ ಪಡೆಗಳ ಮುಂಚೂಣಿ ಘಟಕಗಳಾದ ಚೀನಾ ಮತ್ತು ಭಾರತದ ನಡುವಿನ ಕಮಾಂಡರ್ ಮಟ್ಟದ ಮಾತುಕತೆಯ ಒಂಬತ್ತನೇ ಸುತ್ತಿನ ಒಮ್ಮತದ ಪ್ರಕಾರ ಪೂರ್ವ ಲಡಾಕ್‌ ಭಾರತಿ-ಚೀನಾ ಗಡಿಯಲ್ಲಿ ಸೈನ್ಯವನ್ನು ನಿಷ್ಕ್ರಿಯಗೊಳಿಸುವ ಪ್ರಕ್ರಿಯೆಯು ನಡೆಯುತ್ತಿದೆ ಎಂದು ಚೀನಾ ರಕ್ಷಣಾ ಸಚಿವಾಲಯ ತಿಳಿಸಿದೆ. ಪೂರ್ವ ಲಡಾಖ್‌ನ ಪಾಂಗೊಂಗ್ ಸರೋವರದ ದಕ್ಷಿಣ ಮತ್ತು ಉತ್ತರ ದಂಡೆಯಲ್ಲಿರುವ ಚೀನಾ … Continued

ಕೃಷಿ ಕಾಯ್ದೆಯಲ್ಲಿ ತೊಡಕಿದ್ದರೆ ಬದಲಾವಣೆಗೆ ಸಿದ್ಧ: ರೈತರಿಗೆ ಪ್ರಧಾನಿ ಅಭಯ

ನವದೆಹಲಿ: ಇತ್ತೀಚೆಗೆ ಜಾರಿಗೆ ಬಂದ ಕೃಷಿ ಕಾನೂನುಗಳು ಬಲವಂತವಾಗಿಲ್ಲ ಮತ್ತು ಆಯ್ಕೆಗಳನ್ನು ಮಾತ್ರ ನೀಡುತ್ತವೆ. ಒಂದೊಮ್ಮೆ ರೈತರು ಮನವರಿಕೆಯಾಗುವ ಸಮರ್ಥ ಸಲಹೆಯೊಂದಿಗೆ ಬಂದರೆ ಕಾನೂನಿನಲ್ಲಿ ಬದಲಾವಣೆ ಮಾಡಲು ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ, ಕೃಷಿ ಮಾರುಕಟ್ಟೆಗಳ ಹಳೆಯ ವ್ಯವಸ್ಥೆ ಮತ್ತು ಎಂಎಸ್‌ಪಿ ಮುಂದುವರಿಯುತ್ತದೆ ಎಂದು ಪುನರುಚ್ಚರಿಸಿದ ಅವರು, … Continued

ಸೆಬಿ ನಿಯಮ ಉಲ್ಲಂಘನೆ: ಹಣ ಪಾವತಿಸಿ ಸಮಸ್ಯೆ ಬಗೆಹರಿಸಿಕೊಂಡ ಇಂಡಿಗೋ

ನವದೆಹಲಿ: ಸೆಬಿಯ ನಿಯಮ ಉಲ್ಲಂಘನೆಗಾಗಿ ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ನಡೆಸುತ್ತಿರುವ ಇಂಟರ್‌ಗ್ಲೋಬ್‌ ಏವಿಯೇಶನ್‌ ಲಿಮಿಟೆಡ್‌ ೨.೧೦ ಕೋಟಿ ರೂ. ಭರಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸಿಕೊಂಡಿದೆ. ಸೆಬಿಯ ಒಪ್ಪಿಗೆಯ ಕಾರ್ಯವಿಧಾನದ ಅಡಿಯಲ್ಲಿ, ತಪ್ಪನ್ನು ಒಪ್ಪಿಕೊಳ್ಳದೇ ಅಥವಾ ಅದನ್ನು ತಪ್ಪನ್ನು ನಿರಾಕರಿಸದೆ ದಂಡವನ್ನು ಪಾವತಿಸುವ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಂಡಿದೆ. ತನ್ನ ಪಾಲುದಾರ ರಾಹುಲ್ ಭಾಟಿಯಾ ಮತ್ತು ಇಂಟರ್ … Continued

ಮೇಲ್ಛಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ

ಮೈಸೂರು: ನಗರದ ಮಹಾರಾಜ ಪದವಿ ಕಾಲೇಜಿನ ಮೇಲ್ಛಾವಣಿ ಕುಸಿದು ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಕಾಲೇಜಿನ ಅಪರಾಧಶಾಸ್ತ್ರ ವಿಭಾಗದಲ್ಲಿ ಉಪನ್ಯಾಸ ನಡೆಯುತ್ತಿರುವ ಸಂದರ್ಭದಲ್ಲಿ ಛಾವಣಿಯ ಭಾಗವೊಂದು ಕುಸಿದು ದುರ್ಘಟನೆ ಸಂಭವಿಸಿದೆ. ವಿದ್ಯಾರ್ಥಿಗಳಾದ ವಿಶಾಲ್‌, ಯಶವಂತ ಹಾಗೂ ಸಲೀಮ್‌ ಪಾಶಾ ಗಾಯಗೊಂಡಿದ್ದಾರೆ. ವಿಶಾಲ್‌ ತಲೆಗೆ ಗಂಭೀರ ಗಾಯವಾಗಿದ್ದು, ಉಳಿದ ಇಬ್ಬರು ವಿದ್ಯಾರ್ಥಿಗಳ ಕೈಗೆ ತರುಚಿದ … Continued

ಐಎನ್‌ಎಸ್‌ ವಿರಾಟ ಒಡೆಯಲು ಸುಪ್ರೀಂಕೋರ್ಟ್‌ ತಡೆ

ವಿಮಾನವಾಹಕ ನೌಕೆ ಐಎನ್‌ಎಸ್‌ ವಿರಾಟ್ ‌ಅನ್ನು ಒಡೆಯುವ ಪ್ರಕ್ರಿಯೆಗೆ ಸರ್ವೋಚ್ಚ ನ್ಯಾಯಾಲಯ ತಡೆಯೊಡ್ಡಿದ್ದು, ವಿಶಾಲವಾದ ಹಡಗನ್ನು ವಸ್ತುಸಂಗ್ರಹಾಲಯ ಮಾಡುವಂತೆ ಆದೇಶ ನೀಡಿದೆ. ವಿಮಾನವಾಹನ ನೌಕೆಯನ್ನು ವಸ್ತುಸಂಗ್ರಹಾಲಯವಾಗಿ ರೂಪಿಸಬೇಕೆಂಬ ಎನ್ವಿಟೆಕ್‌ ಮೆರೈನ್‌ ಕನ್ಸಲ್ಟಂಟ್‌ ಲಿಮಿಟೆಡ್‌ನ ಮನವಿಯನ್ನು ರಕ್ಷಣಾ ಸಚಿವಾಲಯ ತಿರಸ್ಕರಿಸಿದ ನಂತರ ಸಂಸ್ಥೆ ಸರ್ವೋಚ್ಚ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು. ಐಎನ್‌ಎಸ್‌ ವಿರಾಟನ್ನು ಒಡೆಯದೇ ಯಥಾಸ್ಥಿತಿ ಉಳಿಸಿಕೊಳ್ಳುವಂತೆ ನ್ಯಾಯಾಲಯ … Continued

ಸಂವಿಧಾನ-ಕಾನೂನು ಚೌಕಟ್ಟಿನೊಳಗೆ ಮೀಸಲಾತಿ ಬೇಡಿಕೆ ಬಗ್ಗೆ ತೀರ್ಮಾನ: ಬಿಎಸ್‌ವೈ

ಬೆಂಗಳೂರು: ಸಂವಿಧಾನ ಹಾಗೂ ಕಾನೂನು ಚೌಕಟ್ಟಿನಡಿಯಲ್ಲಿ ವಿವಿಧ ಜಾತಿ, ಸಮುದಾಯಗಳ ಮೀಸಲಾತಿ ಬೇಡಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯನವರ ೧೧೩ನೇ ಜಯಂತಿ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಕೆಂಗಲ್ ಹನುಮಂತಯ್ಯನವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಜಾತಿ-ಸಮುದಾಯಗಳಿಗೆ ಸಂವಿಧಾನದ ಪ್ರಕಾರವೇ … Continued

ಮೋದಿಗೆ ಜೈ, ರೈತರ ಮೇಲೆ ಕ್ರಮಕ್ಕೆ ಭಾರತೀಯ ಅಮೆರಿಕನ್ನರ ವಿರೋಧ

ವಾಷಿಂಗ್ಟನ್: ಅಮೆರಿಕದಲ್ಲಿ ವಾಸವಾಗಿರುವ ಭಾರತೀಯ ಮೂಲದವರಲ್ಲಿ ಶೇ.೫೦ರಷ್ಟು ಜನರು ಭಾರತದ ಕೇಂದ್ರ ಸರಕಾರದ ನೀತಿಗಳನ್ನು ಒಪ್ಪಿಕೊಂಡಿದ್ದಾರೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಕಾರ್ನೆಗಿ ಎಂಡೋಮೆಂಟ್‌ ಫಾರ್‌ ಇಂಟರ್‌ನ್ಯಾಷನಲ್‌ ಪೀಸ್‌, ಜಾನ್ಸ್‌ ಹಾಪ್ಕಿನ್ಸ್‌-ಎಸ್‌ಎಐಎಸ್‌ ಹಾಗೂ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯ ಸಹಯೋಗದಲ್ಲಿ ನಡೆದ “ಭಾರತೀಯ ಅಮೆರಿಕನ್ನರ ದೃಷ್ಟಿಯಲ್ಲಿ ಭಾರತʼ ವಿಷಯದ ಸಮೀಕ್ಷೆ ನಡೆದಿದೆ. ವಲಸೆಗಾರರ ಬಗ್ಗೆ ಪ್ರಧಾನಿ ಮೋದಿ ಹೆಚ್ಚು ಉದಾರತೆ … Continued

ಬೋಧನಾ ಶುಲ್ಕ ಕಡಿತ:ಖಾಸಗಿ ಆಡಳಿತ ಮಂಡಳಿಗಳ ಪ್ರತಿಭಟನೆ

ಬೆಂಗಳೂರು: ಬೋಧನಾ ಶುಲ್ಕದಲ್ಲಿ ಶೇ.೩೦ರಷ್ಟು ಕಡಿತ ಹಾಗೂ ಅಭಿವೃದ್ಧಿ ಶುಲ್ಕ ಹಾಗೂ ಇತರ ಹೆಚ್ಚುವರಿ ಪಾವತಿ ಸ್ಥಗಿತಗೊಳಿಸಿದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ೬ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ. ಫೆ.೨೩ರೊಳಗೆ ಸರಕಾರ ತನ್ನ ನಿರ್ಧಾರವನ್ನು ರದ್ದುಗೊಳಿಸದಿದ್ದರೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿ ನಿರ್ಧರಿಸಲಾಗಿದೆ. ಶುಲ್ಕ ಕಡಿತವನ್ನು ರದ್ದುಗೊಳಿಸುವಂತೆ ಸರ್ಕಾರವನ್ನು ಕೇಳುವುದರೊಂದಿಗೆ … Continued

ರೈತರ ಹೋರಾಟ ಪ್ರತಿಷ್ಠೆ ಪ್ರಶ್ನೆ ಆಗುವುದು ಬೇಡ

ರಾಯಚೂರು: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಪ್ರತಿಷ್ಠೆ ಪ್ರಶ್ನೆ ಆಗಬಾರದು. ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ನೋವು ಹೇಳಿಕೊಳ್ಳುವ ಸ್ವಾತಂತ್ರ್ಯವಿದೆ. ಚಳಿ ಲೆಕ್ಕಿಸದೆ ಹೋರಾಟ ಮಾಡಿಕೊಂಡು ಬಂದಿದ್ದಾರೆ. .ಕೇಂದ್ರ ಸರ್ಕಾರ ಅವಸರದಲ್ಲಿ ವಿಧೇಯಕ ಪಾಸು ಮಾಡಬಾರದಿತ್ತು. ಕೃಷಿ ಮಸೂದೆಗೆ ಎರಡ್ಮೂರು ತಿಂಗಳ ಕಾಲಾವಕಾಶ … Continued

ಉಪಚುನಾವಣೆಯಲ್ಲಿ ಜೆಡಿಎಸ್‌ ಸ್ಪರ್ಧಿಸಲ್ಲ, ನಮ್ಮ ಬಳಿ ಹಣವಿಲ್ಲ

ರಾಯಚೂರು: ರಾಜ್ಯದ ಲೋಕಸಭೆ ಹಾಗೂ ವಿಧಾನಸಭೆ ಉಪ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭೆ, ಮಸ್ಕಿ, ಸಿಂಧಗಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಮ್ಮ ಬಳಿ ಹಣವಿಲ್ಲ ಎಂದರು. 2023ರ ವಿಧಾನಸಭೆ … Continued