ಮೀಸಲಾತಿ‌ ಬೇಡಿಕೆ ಪರಿಶೀಲನೆಗೆ ತ್ರಿಸದಸ್ಯ ಸಮಿತಿ ರಚನೆ

ಬೆಂಗಳೂರು: ವಿವಿಧ ಸಮುದಾಯಗಳು ಮೀಸಲಾತಿ‌ ಬೇಡಿಕೆ ಪರಿಶೀಲನೆಗೆ ತ್ರಿಸದಸ್ಯ ಸಮಿತಿ ರಚನೆ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಪಂಚಮಸಾಲಿ ಸಮುದಾಯ ಪ್ರವರ್ಗ 2 ಎ ಮೀಸಲಾತಿ, ಕುರುಬ … Continued

ಹಾಲಕ್ಕಿ ಸಮುದಾಯ ಭವನ ಲೋಕಾರ್ಪಣೆ

ಕುಮಟಾ : ತಾಲ್ಲೂಕಿನ ದೀವಗಿಯಲ್ಲಿ ಹಾಲಕ್ಕಿ ಒಕ್ಕಲಿಗರ ಸಂಘ ವತಿಯಿಂದ ಆಯೋಜಿಸಲಾಗಿದ್ದ ಹಾಲಕ್ಕಿ ಒಕ್ಕಲಿಗರ ಸಮುದಾಯ ಭವನದ ಲೋಕಾರ್ಪಣೆ ಮತ್ತು ಗುರುವಂದನಾ ಸಮಾರಂಭದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ , ಸಚಿವರಾದ ಶಿವರಾಮ್ ಹೆಬ್ಬಾರ್ … Continued

ಬೆಳಗಾವಿ: ರಮೇಶ ಜಾರಕಿಹೊಳಿ ರಾಜೀನಾಮೆ ಅಂಗೀಕಾರದ ಬೆನ್ನಲ್ಲೇ ಬೆಂಬಲಿಗರಿಂದ ಬಸ್‌ಗಳಿಗೆ ಕಲ್ಲು ತೂರಾಟ

ಬೆಳಗಾವಿ: ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಅವರ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದೆ. ಅವರು ಯಾವುದೇ ಕಾರಣಕ್ಕೂ ರಮೇಶ ಜಾರಕಿಹೊಳಿ ರಾಜೀನಾಮೆ ಅಂಗೀಕಾರ ಮಾಡಬಾರದು ಹಾಗೂ ಅವರು ರಾಜೀನಾಮೆ ಹಿಂಪಡೆಯಬೇಕೆಂದು ಪ್ರತಿಭಟನೆ ನಡೆಸಿ ಒತ್ತಾಯಿಸುತ್ತಿದ್ದಾರೆ. ಬೆಳಗಾವಿ, ಗೋಕಾಕಿನ ಕೆಲವೆಡೆ ಮಾರ್ಕೆಟ್ ಬಂದ್ ಮಾಡಿಸುತ್ತಿದ್ದರೆ, ಇನ್ನು ಹಲವಡೆ ಬಸ್ ಗಳ ಮೇಲೆ … Continued

ಸ್ಫೋಟಕ ವಸ್ತುಗಳ ಬಳಕೆ ಪರವಾನಿಗೆ ಪಡೆಯಲು ಇನ್ನಷ್ಟು ಕಾಲಾವಕಾಶ ಕೊಡಿ

ಬೆಂಗಳೂರು; ಕಲ್ಲು ಕ್ವಾರಿಯಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಸ್ಫೋಟಕ ವಸ್ತುಗಳ ಪರವಾನಿಗೆ ಪಡೆಯಲು ಗಣಿ ಸುರಕ್ಷತಾ ಮಹಾ ನಿದೇರ್ಶಕರು( ಡಿಜಿಎಂಎಸ್) ನೀಡಿರುವ ಸಮಯಾವಕಾಶವನ್ನು  ಇನ್ನಷ್ಟು ‌ ವಿಸ್ತರಣೆ ಮಾಡುವಂತೆ ಕೋರಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಮನವಿ ಮಾಡಿದೆ. ಬುಧವಾರ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ … Continued

ತಮಿಳುನಾಡು ಚುನಾವಣೆ: ಕಳೆದ ಸಲದಷ್ಟುಸೀಟು ಕೊಡಲೊಪ್ಪದ ಡಿಎಂಕೆ, ಕಾಂಗ್ರೆಸ್‌ಗೆ ಆರಂಭದಲ್ಲೇ ಹಿನ್ನಡೆ?

ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ಗೆ ಮತ್ತೆ ಹಿನ್ನಡೆಯಾದ ಲಕ್ಷಣಗಳು ಗೋಚರಿಸುತ್ತಿವೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟದ ಭಾಗವಾಗಿರುವ ಕಾಂಗ್ರೆಸ್‌ಗೆ ಈ ಸಲ ಕಳೆದ ಸಲದಷ್ಟು ಸೀಟುಗಳನ್ನು ನಿಡಲು ಡಿಎಂಕೆ ಸಿದ್ಧವಿಲ್ಲ ಎನ್ನಲಾಗಿದೆ. ಆದರೂ ಕಾಂಗ್ರೆಸ್‌ ಪ್ರಯತ್ನ ಮುಂದುವರಿಸಿದೆ. ರಾಷ್ಟ್ರೀಯ ಪಕ್ಷಕ್ಕೆ ನೀಡುತ್ತಿರುವ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಲು ಡಿಎಂಕೆ ಸಿದ್ಧವಿಲ್ಲ. ೨೦೧೬ರ ವಿದಾನಸಭೆ ಚುನಾವಣೆಯಲ್ಲಿ … Continued

ರಮೇಶ ಜಾರಕಿಹೊಳಿ ರಾಜೀನಾಮೆ ಅಂಗೀಕಾರ

ಬೆಂಗಳೂರು: ರಮೇಶ ಜಾರಕಿಹೊಳಿಯವರದ್ದು ಎನ್ನಲಾದ ರಾಸಲೀಲೆ ಸಿಡಿ ಹೊರಬಿದ್ದ ಮಾರನೇ ದಿನ ಬುಧವಾರ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಂಗೀಕರಿಸಿದ್ದಾರೆ. ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳಿಗೂ ತನಗೂ ಸಮಬಂಧವಿಲ್ಲ, ಅದು ಸತ್ಯಕ್ಕೆ ದೂರವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಈ ವಿಯದಲ್ಲಿ ನಾನು ನಿರ್ದೋಷಿಯಾಗುವ ಭರವಸೆಯಿದ್ದರೂ ನೈತಿಕ ಹೊಣೆ … Continued

ರಮೇಶ ಜಾರಕಿಹೊಳಿ ರಾಜೀನಾಮೆ: ಮೂವರು ಬೆಂಬಲಿಗರಿಂದ ಆತ್ಮಾಹುತಿಗೆ ಯತ್ನ

ಬೆಳಗಾವಿ: ರಾಸಲೀಲೆ ಸಿಡಿ ಹೊರಬಿದ್ದ ನಂತರ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಆತ್ಮಾಹುತಿಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆ ಗೋಕಾಕದಲ್ಲಿ ನಡೆದಿದೆ. ಮೂವರು ಆತ್ಮಾಹುತಿಗೆ ಯತ್ನಿಸಿದ್ದು, ಪೊಲೀಸರು ತಡೆದಿದ್ದಾರೆ. ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಷಯ ಗೊತ್ತಾಗುತ್ತಿದ್ದಂತೆ … Continued

ರಾಸಲೀಲೆ ಸಿಡಿ ವಿಚಾರ: ಸಿಎಂ, ಬಿಜೆಪಿ ನಾಯಕರ ಬಳಿಯೇ ಪ್ರತಿಕ್ರಿಯೆ ಕೇಳಿ: ಎಚ್‌ಡಿಕೆ

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ವಿಚಾರದ ಆರೋಪ ಕುರಿತು ತಾನು ರಾಜಕೀಯ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಸಲೀಲೆ ಸಿಡಿ ಆರೋಪದ ವಿಚಾರದ ಬಗ್ಗೆ ಚರ್ಚೆ ಮಾಡುವುದು ಶೋಭೆ ತರುವುದಿಲ್ಲ. ರಾಜಕೀಯ ಮಾಡಲು ಬೇರೆ ಮಾರ್ಗಗಳಿವೆ ಎಂದರು. ಆದರೆ ರಾಜಕೀಯ ವ್ಯಕ್ತಿಗಳ ಈ ರೀತಿಯ … Continued

ಕೋವಾಕ್ಸಿನ್ ಫೇಸ್ 3 ಫಲಿತಾಂಶ ಪ್ರಕಟ : ಶೇ.81 ಪರಿಣಾಮಕಾರಿ ಎಂದ ಭಾರತ್ ಬಯೋಟೆಕ್

ನವ ದೆಹಲಿ : ಭಾರತೀಯ ಲಸಿಕೆ ತಯಾರಕ ಭಾರತ್ ಬಯೋಟೆಕ್ ಬುಧವಾರ ತನ್ನ ಕೋವಿಡ್-19 ಲಸಿಕೆ ಕೋವಾಕ್ಸಿನ್ ಫೇಸ್ 3 ವೈದ್ಯಕೀಯ ಫಲಿತಾಂಶ ಪ್ರಕಟಿಸಿದೆ. ಲಸಿಕೆಯು ಶೇ.81ರಷ್ಟು ಮಧ್ಯಂತರ ವೈದ್ಯಕೀಯ ಪರಿಣಾಮಕಾರಿತನವನ್ನು ಹೊಂದಿದೆ ಎಂದು ಅದು ತಿಳಿಸಿದೆ. ಕೋವಾಕ್ಸಿನ್ 3ನೇ ಹಂತದ ವೈದ್ಯಕೀಯ ಪ್ರಯೋಗಗಳಲ್ಲಿ 25,800 ಸ್ವಯಂಸೇವಕರು ಭಾಗಿಯಾಗಿದ್ದರು, ಇದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ … Continued

ಕರ್ನಾಟಕವೂ ಸೇರಿದಂತೆ ೬ ರಾಜ್ಯಗಳ ಕೊರೊನಾ ಸೋಂಕು ಹೆಚ್ಚಳ: ಕೇಂದ್ರ

ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಪಂಜಾಬ್, ಗುಜರಾತ್ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ ದೃಢಪಟ್ಟ ಹೊಸ ಪ್ರಕರಣಗಳ ಪೈಕಿ ಶೇ 85.95 ಈ ರಾಜ್ಯಗಳಿಂದ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ದೇಶದಲ್ಲಿ 24 ತಾಸುಗಳ ಅವಧಿಯಲ್ಲಿ 14,989 ಕೊರೊನಾ ಸೋಕುಗಳ ವರದಿಯಾಗಿದ್ದು, ಇದರಲ್ಲಿ ಮಹಾರಾಷ್ಟ್ರದಲ್ಲಿ ಗರಿಷ್ಠ, 7,863 … Continued