ಎಸ್‌ಟಿಗೆ ಸೇರಿಸಲು ಒತ್ತಾಯಿಸಿ ಕುರುಬರ ಬಲಪ್ರದರ್ಶನ

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿಸುವಂತೆ ಆಗ್ರಹಿಸಿ ಕಾಗಿನೆಲೆ ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ರಾಜಧಾನಿಯಲ್ಲಿ ಕುರುಬ ಸಮುದಾಯದವರ ಬಲಪ್ರದರ್ಶನ ನಡೆಯಿತು. ಬೆಂಗಳೂರು ಹೊರವಲಯದ ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆದ ಸಮಾವೇಶದಲ್ಲಿ ಸಚಿವರಾದ ಕೆಎಸ್ ಈಶ್ವರಪ್ಪ, ಬೈರತಿ ಬಸವರಾಜ, ಎಂ ಟಿ ಬಿ ನಾಗರಾಜ್, ಆರ್. ಶಂಕರ್ ಸೇರಿದಂತೆ ಕಾಂಗ್ರೆಸ್ ಬಿಜೆಪಿ … Continued

ಭಾರತ್ ಮಾತಾ ಕೀ ಜೈ ಎಂದು ಕೂಗಿದರೆ ಮಮತಾಗೆ ಕೋಪ:ಪ್ರಧಾನಿ ವಾಗ್ದಾಳಿ

ನವದೆಹಲಿ:ಯಾರಾದರೂ ಭಾರತ್ ಮಾತಾ ಕೀ ಜೈ ಎಂದು ಕೂಗಿದರೆ ಮಮತಾ ಬ್ಯಾನರ್ಜಿ ಅವರಿಗೆ ಕೋಪ ಬರುತ್ತದೆ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ‌ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶದ ವಿರುದ್ಧವಾಗಿ ಮಾತನಾಡಿದಾಗಲೂ ಸುಮ್ಮನಿರುತ್ತಾರೆ ಆದರೆ ಭಾರತ್ ಮಾತಾ ಕೀ ಜೈ ಅಂದರೆ ಅವರಿಗೆ ಕೋಪ ಬರುತ್ತದೆ ಎಂದು … Continued

ಪಾಕಿಸ್ಥಾನ ಸೇನೆಗೆ ಚೀನಾದಿಂದ ೫ ಲಕ್ಷ ಕೊವಿಡ್‌ ಲಸಿಕೆ

ಇಸ್ಲಾಮಾಬಾದ್: ಚೀನಾದಿಂದ 5,00,000 ಡೋಸ್ ಕೊರೋನಾ ಲಸಿಕೆಯನ್ನು ಪಾಕಿಸ್ಥಾನ ಸೈನಿಕರಿಗೆ ನೀಡಲಾಗಿದೆ. ಚೀನಾ ಸೈನ್ಯದಿಂದ ಕೋವಿಡ್ -19 ಲಸಿಕೆ ನೆರವು ಪಡೆದ ಮೊದಲ ವಿದೇಶಿ ಸೈನ್ಯ ಎಂಬ ಹೆಗ್ಗಳಿಕೆಗೆ ಪಾಕಿಸ್ತಾನ ಸೇನೆಯು ಪಾತ್ರವಾಗಿದೆ ಎಂದು ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಹೇಳಿಕೆಯಲ್ಲಿ ತಿಳಿಸಿದೆ. ಆದಾಗ್ಯೂ, ಪಾಕಿಸ್ತಾನ ಸೇನೆಗೆ ಎಷ್ಟು ಲಸಿಕೆಗಳನ್ನು ಸರಬರಾಜು ಮಾಡಲಾಗಿದೆ ಎಂದು ಹೇಳಿಕೆಯಲ್ಲಿ … Continued

ರೈತರ ಬೇಡಿಕೆ ಈಡೇರುವ ವರೆಗೂ ಮನೆಗೆ ಮರಳುವುದಿಲ್ಲ:ಟಿಕಾಯತ

ಫೆಬ್ರವರಿ: ರೈತರ ಬೇಡಿಕೆಗಳನ್ನು ಈಡೇರಿಸುವವರೆಗೆ ಯಾವುದೇ ಮನೆಗೆ ಮರಳುವ ಪ್ರಶ್ನಯೇ ಇಲ್ಲ ಎಂದು ರೈತ ಮುಖಂಡ ರಾಕೇಶ ಟಿಕಾಯತ್‌ ಹೇಳಿದ್ದಾರೆ. ಅವರು ಭಾನುವಾರ ಹರ್ಯಾಣದಲ್ಲಿ ಕಿಸಾನ್‌ ಪಂಚಾಯತ ಉದ್ದೇಶಿಸಿ ಮಾತನಾಡಿದರು. ಕೃಷಿ ಕಾನೂನುಗಳ ವಿರುದ್ಧದ ಅಭಿಯಾನವು ಪ್ರಬಲವಾಗುತ್ತಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ವಕ್ತಾರರು ಹೇಳಿದ್ದಾರೆ. ನಾನು ನನ್ನನ್ನು ಕೊಲ್ಲುತ್ತೇನೆಯೇ ಹೊರತು ಪ್ರತಿಭಟನೆ ಕೊನೆಗೊಳಿಸುವುದಿಲ್ಲ” … Continued

ಮುಂಬೈ ವಿಮಾನ ನಿಲ್ದಾಣದ ಶೇ.೨೩.೫ರಷ್ಟು ಶೇರು ಪಡೆದ ಅದಾನಿ ಕಂಪನಿ

ಮುಂಬೈ: ಅದಾನಿ ಎಂಟರ್‌ಪ್ರೈಸಸ್‌ನ ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆ ಅದಾನಿ ಏರ್‌ಪೋರ್ಟ್‌ ಹೋಲ್ಡಿಂಗ್ಸ್‌ (ಎಎಎಚ್‌ಎಲ್‌) ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಮಿಯಾಲ್‌) ಶೇ 23.5ರಷ್ಟು ಪಾಲನ್ನು ಎಸಿಎಸ್‌ಎ ಗ್ಲೋಬಲ್‌ ಲಿಮಿಟೆಡ್‌ (ಎಸಿಎಸ್‌ಎ) ಮತ್ತು ಬಿಡ್‌ ಸರ್ವೀಸಸ್‌ ವಿಭಾಗ (ಮಾರಿಷಸ್‌) ಲಿಮಿಟೆಡ್‌ ನಿಂದ (ಬಿಡ್‌ವೆಸ್ಟ್‌) 1,685.25 ರೂ. ಕೋಟಿ ರೂ.ಗಳಿಗೆ ಪಡೆದುಕೊಂಡಿದೆ. ರೆಗ್ಯುಲೇಟರಿ ಫೈಲಿಂಗ್ ಪ್ರಕಾರ ಎಎಎಚ್‌ಎಲ್ … Continued

ರಷ್ಯಾದ ಸ್ಪುಟ್ನಿಕ್‌-ವಿ ಕೊವಿಡ್‌ ಔಷಧ ಈಗ ಜಾಗತಿಕ ಫೇವರಿಟ್‌

ಮಾಸ್ಕೊ: ಸುರಕ್ಷತಾ ಪ್ರಯೋಗಗಳನ್ನು ಪೂರ್ಣಗೊಳಿಸುವ ಮೊದಲು ರಷ್ಯಾ ವಿಶ್ವದ ಮೊದಲ ಕೋವಿಡ್ -19 ಲಸಿಕೆಯನ್ನು ಬಳಕೆಗಾಗಿ ತೆರವುಗೊಳಿಸಿದೆ ಎಂದು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಗಸ್ಟ್‌ನಲ್ಲಿ ಪ್ರಕಟಿಸಿದ ನಂತರ ಇದು ವಿಶ್ವಾದ್ಯಂತ ಸಂಶಯಕ್ಕೆ ಕಾರಣವಾಯಿತು. ಆದರೆ ಈಗ ಅದೇ ಸ್ಪುಟ್ನಿಕ್‌ ಔಷಧವು ಸೋವಿಯತ್ ಯುಗದ ನಂತರ ರಷ್ಯಾ ತನ್ನ ಅತಿದೊಡ್ಡ ವೈಜ್ಞಾನಿಕ ಪ್ರಗತಿ ಸಾಧಿಸುತ್ತಿರುವುದರಿಂದ ಈಗ ಅವರು … Continued

ಸಾಹಿತ್ಯ ಕ್ಷೇತ್ರ ಸಮಾಜ ಪರಿವರ್ತನೆಗೆ ಪೂರಕ: ಕಾಗೇರಿ

ಸಿದ್ದಾಪುರ:ಸಾಹಿತ್ಯ ಕ್ಷೇತ್ರ ಸಮಾಜದ ಪರಿವರ್ತನೆಗೆ ಹಾಗೂ ಮೌಲ್ಯಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಬಹುದೊಡ್ಡ ಕೊಡುಗೆ ನೀಡಿದೆ. ಈ ಕ್ಷೇತ್ರದಲ್ಲಿ ಕೆಲಸ ಮಾಡುವವರ ಬಗ್ಗೆ ಯಾವತ್ತೂ ಗೌರವವಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಅವರು ಪಟ್ಟಣದ ಬಾಲಭವನದಲ್ಲಿ ನಡೆದ ಗಂಗಾಧರ ಕೊಳಗಿಯವರ ಯಾನ- ಅಲೆಮಾರಿಯ ಅನುಭವ ಕಥನ ಕೃತಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಹಿತ್ಯ … Continued

ಒಬಾಮಾಗೆ ನೀಡಿದಂತೆ ಪ್ರಧಾನಿ ಮೋದಿ ರೈತರಿಗೂ ಆತಿಥ್ಯ ನೀಡಲಿ

ಭರೂಚ್: ಅಮೆರಿಕದ ಹಿಂದಿನ ಅಧ್ಯಕ್ಷ ಬರಾಕ್ ಒಬಾಮಾಗೆ ೨೦೧೫ರಲ್ಲಿ ಆತಿಥ್ಯ ನೀಡಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಭಟನಾ ನಿರತ ರೈತರನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಬೇಕು ಹಾಗೂ ನೂತನ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ಹೇಳಿದ್ದಾರೆ. ಭಾನುವಾರ ಗುಜರಾತ್‌ನ ಸ್ಥಳೀಯ ಸಂಸ್ಥೆಗಳಿಗೆ ಮುಂಬರುವ ಚುನಾವಣೆಗಾಗಿ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಎರಡು … Continued

ಟ್ವಿಟರ್ ಇಂಡಿಯಾ ಪಾಲಿಸಿ ಮುಖ್ಯಸ್ಥೆ ಮಹಿಮಾ ಕೌಲ್‌ ರಾಜೀನಾಮೆ

  ನವ ದೆಹಲಿ: ಟ್ವಿಟರ್ ಇಂಡಿಯಾದ ಸಾರ್ವಜನಿಕ ನೀತಿ ಮುಖ್ಯಸ್ಥರಾದ ಮಹಿಮಾ ಕೌಲ್ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಾರ್ಚ್ ಅಂತ್ಯದವರೆಗೆ ಕೌಲ್ ತನ್ನ ಸ್ಥಾನದಲ್ಲಿ ಮುಂದುವರಿಲಿದ್ದಾರೆ ಎಂದು ಟ್ವಿಟರ್ ಹೇಳಿಕೆಯಲ್ಲಿ ತಿಳಿಸಿದೆ. ಒಂದು ವರ್ಷದೊಳಗೆ ಇದು ಇಂತಹ ಎರಡನೆಯ ರಾಜೀನಾಮೆಯಾಗಿದ್ದು, 2020ರ ಅಕ್ಟೋಬರ್‌ನಲ್ಲಿ ಫೇಸ್‌ಬುಕ್‌ನ ಭಾರತ ನೀತಿ ಮುಖ್ಯಸ್ಥರಾಗಿ ಅಂಕಿ … Continued

ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕ್ರೈಸ್ತರಿಂದ ೧ ಕೋಟಿ ರೂ.ದೇಣಿಗೆ

ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯ ಕೈಜೋಡಿಸಿದ್ದು, ಒಂದು ಕೋಟಿ ರೂ.ಗಳಿಗೂ  ಹೆಚ್ಚು ದೇಣಿಗೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ   ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ  ಶಿಕ್ಷಣ ತಜ್ಞರು, ಉದ್ಯಮಿಗಳು,ಅನಿವಾಸಿ ಭಾರತೀಯರು, ಸಿಇಒಗಳು, ಮಾರ್ಕೆಟಿಂಗ್ ತಜ್ಞರು, ಸಮಾಜ ಸೇವಕರು, ಸಮುದಾಯದ ಮುಖಂಡರು ಭಾಗಿಯಾಗಿ ರಾಮ ಮಂದಿರ ನಿರ್ಮಾಣಕ್ಕೆ ತಮ್ಮ … Continued