ಕಾಂಗ್ರೆಸ್‌ ಹೆಗಲ ಮೇಲೆ ಬಂದೂಕಿಟ್ಟು ಸ್ವಪಕ್ಷೀಯರಿಗೆ ಗುರಿ ಇಟ್ಟ ಬಿಎಸ್‌ವೈ

ಕಾಂಗ್ರೆಸ್‌ ಅನ್ನು ರಾಜ್ಯದಲ್ಲಿ ಶಾಶ್ವತವಾಗಿ ಪ್ರತಿಪಕ್ಷದಲ್ಲಿರುವಂತೆ ಮಾಡುತ್ತೇನೆ… ಮುಂದಿನ ಚುನಾವಣೆಯಲ್ಲಿ ೧೫೦ ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಅಧಿಕಾರಕ್ಕೆ ತರುತ್ತೇನೆ. ನಾನು ಅನೇಕ ಸವಾಲುಗಳನ್ನು ಎದುರಿಸಿ, ಮೆಟ್ಟಿನಿಂತು ಮುಖ್ಯಮಂತ್ರಿಯಾಗಿದ್ದೇನೆ…ಕಳೆದ ೬ ತಿಂಗಳಿನಿಂದ ಪ್ರತಿಪಕ್ಷದ ನಾಯಕರು ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ಈಗ ರಾಜೀನಾಮೆ ಕೊಡ್ತಾರೆ, ಆಗ ರಾಜೀನಾಮೆ ಕೊಡ್ತಾರೆ ಎಂದು ಹೇಳುತ್ತಲೇ ಬಂದಿದ್ದಾರೆ… ಆದರೆ ಪ್ರಧಾನಿ ಮೋದಿ ಹಾಗೂ … Continued

ಸೀರಮ್ ಇನ್‌ಸ್ಟಿಟ್ಯೂಟ್ ಬೆಂಕಿ ಅವಘಡ:ಮಧ್ಯಂತರ ವರದಿ ಸಲ್ಲಿಕೆ

ಪುಣೆ: ಜನವರಿ 21 ರಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ಆವರಣದಲ್ಲಿ ನಡೆದ ಅಗ್ನಿಶಾಮಕ ಘಟನೆ ಕುರಿತು ನಡೆಸಿದ ತನಿಖೆಯ ಪ್ರಗತಿಯ ಬಗ್ಗೆ ಹಡಪ್ಸರ್ ಪೊಲೀಸ್ ಠಾಣೆ ಪುಣೆ ಪೊಲೀಸ್ ಆಯುಕ್ತ ಅಮಿತಾಬ್ ಗುಪ್ತಾ ಅವರಿಗೆ ಮಧ್ಯಂತರ ವರದಿ ಸಲ್ಲಿಸಿದ್ದು, ಈ ಘಟನೆಯಲ್ಲಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ. ಲಸಿಕೆ ತಯಾರಕ ಎಸ್‌ಐಐನ ಕ್ಯಾಂಪಸ್‌ಗಳಲ್ಲಿ ಒಂದರೊಳಗೆ … Continued

ಇಗ್ನೊದಿಂದ ಪರಿಸರ ಪ್ರಮಾಣಪತ್ರ ಕೋರ್ಸ್ ಆರಂಭ

ನವ ದೆಹಲಿ: ಇಂದಿರಾ ಗಾಂಧಿ ನ್ಯಾಷನಲ್ ಓಪನ್ ಯೂನಿವರ್ಸಿಟಿ (ಇಗ್ನೊ) ಪರಿಸರ ಪ್ರಮಾಣಪತ್ರ ಕೋರ್ಸ್ ಪ್ರಾರಂಭಿಸಿತು, ಇದು ಸ್ವಯಮ್ ಪ್ಲಾಟ್‌ಫಾರ್ಮ್ ಮೂಲಕ ಲಭ್ಯವಿರುತ್ತದೆ. 12 ವಾರಗಳ ಕೋರ್ಸ್ ಫೆಬ್ರವರಿ 15 ರಿಂದ ಪ್ರಾರಂಭವಾಗಲಿದೆ. ಇದು ಜೈವಿಕ ವಿಜ್ಞಾನ ಮತ್ತು ಜೈವಿಕ ಎಂಜಿನಿಯರಿಂಗ್ ವಿಭಾಗದಲ್ಲಿ ಪ್ರಮಾಣಪತ್ರ ಮಟ್ಟದ ಕೋರ್ಸ್ ಆಗಿದೆ. ನೈಸರ್ಗಿಕ ಅಪಾಯಗಳು ಮತ್ತು ವಿಪತ್ತುಗಳು ಮತ್ತು … Continued

ನೌಕಾಪಡೆ ಅಧಿಕಾರಿಯ ಜೀವಂತ ದಹಿಸಿದ ದುಷ್ಕರ್ಮಿಗಳು

ಮುಂಬೈ: ನೌಕಾಪಡೆ ಅಧಿಕಾರಿಯೊಬ್ಬರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಹಣ ನೀಡದ ಕಾರಣಕ್ಕೆ ಬೆಂಕಿಹಚ್ಚಿ ಸಜೀವ ದಹನ ಮಾಡಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ಪಾಲ್ಗಾರ್ ನಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ಸೂರಜ್ ಕುಮಾರ್ ದುಬೆ ಎಂದು ಗುರುತಿಸಲಾಗಿದೆ. ರಾಂಜಿ ನಿವಾಸಿಯಾಗಿದ್ದ ದುಬೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಅಲ್ಲಿಯೇ ಕಾಯುತ್ತಿದ್ದ ದುಷ್ಕರ್ಮಿಗಳು ವಿಮಾನ ನಿಲ್ದಾಣದಿಂದಲೇ ಅವರನ್ನು … Continued

ಫೆ.೭ರಂದು ಪ್ರಧಾನಿ ಮೋದಿ ಅಸ್ಸಾಂ, ಬಂಗಾಲ ಪ್ರವಾಸ

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಸ್ಸಾಂ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಎರಡು ಮತದಾನದ ರಾಜ್ಯಗಳಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಫೆ.7 ರಂದು ಅಸ್ಸಾಂನ ಬಿಸ್ವಾನಾಥ್ ಮತ್ತು ಚರೈಡಿಯೊದಲ್ಲಿನ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಿಗೆ ಪ್ರಧಾನಿ ಮೋದಿ ಅಡಿಪಾಯ ಹಾಕಲಿದ್ದಾರೆ. “ಇದು ಅಸ್ಸಾಂನ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸುತ್ತದೆ. ಕಳೆದ ಕೆಲವು … Continued

ಸಭಾಪತಿ ಸ್ಥಾನಕ್ಕೆ ಸೋಮವಾರ ಹೊರಟ್ಟಿ ನಾಮಪತ್ರ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಸೋಮವಾರ ಬೆಳಗ್ಗೆ ನಾಮಪತ್ರ ಸಲ್ಲಿಸಲು ಸಮಯ ನಿಗದಿಪಡಿಸಲಾಗಿದೆ ಎಂದು ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸ್ವತಃ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಮುಹೂರ್ತ ನಿಗದಿ … Continued

ಫೆ.13ರಿಂದ ೨ನೇ ಹಂತದ ಕೊರೋನಾ ಲಸಿಕೆ ಆರಂಭ

ನವದೆಹಲಿ:ದೇಶದಲ್ಲಿ ಕೊರೋನಾ ಸೋಂಕಿಗೆ ಮೊದಲ ಹಂತದಲ್ಲಿ ಲಸಿಕೆ ಪಡೆದವರಿಗೆ ಫೆ.13ರಿಂದ ೨ನೇ ಹಂತದ ಲಸಿಕೆ ಹಾಕಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮುಂದಾಗಿದೆ ಜನವರಿ 16 ರಂದು ಆರಂಭವಾದ ಮೊದಲ ಹಂತದ ಲಸಿಕಾ ಕಾರ್ಯಕ್ರಮಕ್ಕೆ ದೇಶದಲ್ಲಿಯೇ ಅಭೂತಪೂರ್ವ ಯಶಸ್ಸು ಸಿಕ್ಕಿದೆ.ಈ ಹಿನ್ನೆಲೆಯಲ್ಲಿ ಎರಡನೇ ಡೋಸ್ ಲಸಿಕೆ ಹಾಕುವ ಕಾರ್ಯ ಫೆ.13ರಿಂದ ಆರಂಭವಾಗಲಿದೆ ಎಂದು … Continued

ದೆಹಲಿಯಲ್ಲಿ ೫೦ ರೈತರ ಬಂಧನ

ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ರಾಜಧಾನಿಯ ಹಲವೆಡೆ ನಡೆಸಿದ ಚಕ್ಕಾ ಬಂದ್ ವೇಳೆ ಶಾಹೀದ್ ಪಾರ್ಕ್ ನಲ್ಲಿ 50 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ತಿಂಗಳಿಗೂ ಹೆಚ್ಚು ಕಾಲದಿಂದ ಕಾಯ್ದೆ ವಾಪಸ್ಸಿಗೆ ಬಿಗಿಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿರುವ ರೈತರು ಶನಿವಾರ ದೇಶವ್ಯಾಪಿ ಕರೆ ನೀಡಿದ್ದ ರಸ್ತೆ ತಡೆಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಯಿತು. ದೆಹಲಿಯ ಶಾಹಿದ್ … Continued

ಜನರಲ್ ತಿಮ್ಮಯ್ಯ ವಸ್ತುಸಂಗ್ರಹಾಲಯ ಲೋಕಾರ್ಪಣೆ

ಮಡಿಕೇರಿ :ಜನರಲ್ ಕೆ.ಎಸ್ ತಿಮಯ್ಯ ವಸ್ತುಸಂಗ್ರಹಾಲಯ ಸೇನಾಪಡೆಯ ಅತ್ಯುತ್ತಮ ವೀರ ಸೇನಾನಿಯ ಸೇವೆ ಮತ್ತು ಕೊಡುಗೆಯನ್ನು ಸಂರಕ್ಷಿಸುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದರು. ಶನಿವಾರ ಮಡಿಕೇರಿಯಲ್ಲಿ ಜನರಲ್ ಕೆ.ಎಸ್ ತಿಮ್ಮಯ್ಯ ವಸ್ತುಸಂಗ್ರಹಾಲಯ ‘ಸನ್ನಿಸೈಡ್’ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, .ಜನರಲ್ ತಿಮಯ್ಯ ಅವರ ನಿವಾಸ ‘ಸನ್ನಿ ಸೈಡ್’ನಲ್ಲಿರುವ ಸ್ಮರಣಿಕೆಗಳು ನಮ್ಮ ಕೆಚ್ಚೆದೆಯ ಸೇನಾಪಡೆಗಳ ವೈಶಿಷ್ಟ್ಯಗಳನ್ನು … Continued

ಫೆ.20ರ ವರೆಗೆ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ದಾಖಲಾತಿಗೆ ಸೂಚನೆ

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ಕಾಲೇಜುಗಳು ತಡವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ತರಗತಿಗಳ ದಾಖಲಾತಿಯನ್ನು ಫೆ.20ರ ವರೆಗೆ ವಿಸ್ತರಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲಾ-ಕಾಲೇಜುಗಳು ಫೆ. 1ರಿಂದ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಂಡಿವೆ. 9ರಿಂದ 12ನೇ ತರಗತಿವರೆಗೆ ಭೌತಿಕ ತರಗತಿಗಳು ಆರಂಭವಾಗಿದ್ದರೆ, ಉಳಿದ … Continued