ಜುಲೈ 7ರ ವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಆರು ದಿನಗಳ ಕಾಲ ಕರ್ನಾಟಕದಲ್ಲಿ ಮಳೆಯಾಗಲಿದ್ದು, ರಾಜ್ಯದ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.ಜೂನ್‌ 30ರಿಂದ ದಕ್ಷಿಣ ಕನ್ನಡ, … Continued

ವೀಡಿಯೊ..| ಭಾಷಣ ಮಾಡುತ್ತಿದ್ದಾಗ ಪೋಡಿಯಂಗೆ ಅಪ್ಪಳಿಸಿದ ಡ್ರೋನ್ ; ಸ್ವಲ್ಪದರಲ್ಲೇ ಪಾರಾದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್

ಪಾಟ್ನಾ : ಬಿಹಾರದ ಪಾಟ್ನಾದ ಗಾಂಧಿ ಮೈದಾನದಲ್ಲಿ ಭಾನುವಾರ ನಡೆದ ರ್ಯಾಲಿಯ ಸಂದರ್ಭದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ವೇದಿಕೆಯ ಮೇಲೆ ಡ್ರೋನ್ ಅಪ್ಪಳಿಸಿದ ಪರಿಣಾಮ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ‘ವಕ್ಫ್ ಬಚಾವೋ, ಸಂವಿಧಾನ್ ಬಚಾವೋ ಸಮ್ಮೇಳನ’ (ವಕ್ಫ್ ಉಳಿಸಿ, ಸಂವಿಧಾನವನ್ನು ಉಳಿಸಿ) ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದೆ. … Continued

ಕುಟುಂಬ ಇಲ್ಲ, ಇಂಗ್ಲಿಷ್ ಗೊತ್ತಿಲ್ಲ : ಅಮೆರಿಕಕ್ಕೆ ಹೋದ ಭಾರತೀಯ ಯುವತಿ ನಾಪತ್ತೆ

ನವದೆಹಲಿ: ಅರೇಂಜ್ಡ್‌ ಮದುವೆಗಾಗಿ ಅಮೆರಿಕಕ್ಕೆ ಆಗಮಿಸಿದ್ದ 24 ವರ್ಷದ ಭಾರತೀಯ ಮಹಿಳೆ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆ ಪ್ರಾರಂಭಿಸಿ ಹತ್ತಿರದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ, ಸ್ಥಳೀಯ ಪೊಲೀಸರು ಸಿಮ್ರಾನ್ ಸಿಮ್ರಾನ್ ಎಂದು ಗುರುತಿಸಲಾದ ಮಹಿಳೆ ತನ್ನ ಫೋನ್ ಪರಿಶೀಲಿಸುತ್ತಾ ಸುತ್ತಲೂ ನೋಡುತ್ತಿರುವುದು ಕಂಡುಬಂದಿದೆ. ಬುಧವಾರ ಕಾಣೆಯಾಗುವ ಮೊದಲು ಅವರು ಯಾರಿಗೋ ಕಾಯುತ್ತಿರುವಂತೆ ತೋರುತ್ತಿದೆ … Continued

ಭಿನ್ನಮತ, ಸಂಪುಟ ಪುನರ್ರಚನೆ ಚರ್ಚೆಯ ಮಧ್ಯೆ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲಿರುವ ರಾಜ್ಯ ಉಸ್ತುವಾರಿ ಸುರ್ಜೇವಾಲಾ

ಬೆಂಗಳೂರು: ಕರ್ನಾಟಕದ ಆಡಳಿತ ಪಕ್ಷವಾದ ಕಾಂಗ್ರೆಸ್‌ನ ಆಂತರಿಕ ಅಸಮಾಧಾನದ ನಡುವೆ ಕರ್ನಾಟಕದ ಉಸ್ತುವಾರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಸೋಮವಾರ ಪಕ್ಷದ ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಪಕ್ಷದೊಳಗಿನ ಆಂತರಿಕ ಗೊಂದಲ ಹಾಗೂ ಅಸಮಾಧಾನ ಪರಿಹರಿಸುವ ಉದ್ದೇಶದಿಂದ ಎರಡು ದಿನಗಳ ಭೇಟಿಗಾಗಿ ಸೋಮವಾರ (ಜೂನ್‌ ೩೦) … Continued

ಬೆಂಗಳೂರು : ಮಹಿಳೆ ಶವವನ್ನು ಮೂಟೆಕಟ್ಟಿ ತುಂಬಿ ಕಸದ ಲಾರಿಯಲ್ಲಿ ಎಸೆದು ಪರಾರಿ

ಬೆಂಗಳೂರು: ಮಹಿಳೆಯ ಮೃತದೇಹವನ್ನು ಚೀಲದೊಳಗೆ ತುಂಬಿಸಿ, ಕುತ್ತಿಗೆಗೆ ಕಾಲುಗಳನ್ನು ಕಟ್ಟಿ, ಪುರಸಭೆಯ ಕಸದ ಲಾರಿಯಲ್ಲಿ ಎಸೆದ ಘಟನೆ ಬೆಂಗಳೂರಿನಲ್ಲಿ ಶನಿವಾರ ತಡರಾತ್ರಿ ಬೆಳಕಿಗೆ ಬಂದಿದೆ. ಚನ್ನಮ್ಮನಕೆರೆ ಸ್ಕೇಟಿಂಗ್ ಮೈದಾನದ ಬಳಿಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿಯ ಹಿಂಭಾಗದ ಲಿಫ್ಟ್‌ನಲ್ಲಿ ಶವ ಪತ್ತೆಯಾಗಿದೆ. ಮಹಿಳೆ ಸುಮಾರು 25-30 ವರ್ಷ ವಯಸ್ಸಿನವರು ಎಂದು ನಂಬಲಾಗಿದೆ. … Continued

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಸಾಹಿತಿ ಬಾನು ಮುಷ್ತಾಕ್‌ ಆಯ್ಕೆ

ಬಳ್ಳಾರಿ: ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್‌ (Banu Mushtaq) ಆಯ್ಕೆಯಾಗಿದ್ದಾರೆ. ಬಳ್ಳಾರಿ ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷ … Continued

ಕ್ರಿಕೆಟ್‌ ಪಂದ್ಯ | ಸಿಕ್ಸರ್‌ ಹೊಡೆದ ತಕ್ಷಣ ಪಿಚ್‌ ಮೇಲೆ ಕುಸಿದುಬಿದ್ದು ಬ್ಯಾಟರ್‌ ಸಾವು : ದೃಶ್ಯ ವೀಡಿಯೊದಲ್ಲಿ ಸೆರೆ

ಕ್ರಿಕೆಟ್ ಪಂದ್ಯವೊಂದರಲ್ಲಿ ಸಿಕ್ಸರ್ ಹೊಡೆದ ತಕ್ಷಣ ಬ್ಯಾಟ್ಸ್‌ಮನ್ ಸಾವಿಗೀಡಾದ ಹೃದಯವಿದ್ರಾವಕ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಪಂಜಾಬಿನ ಫಿರೋಜ್‌ಪುರದಲ್ಲಿ ನಡೆದ ಕ್ರಿಕೆಟ್ ಪಂದ್ಯದ ಸಮಯದಲ್ಲಿ, ಬ್ಯಾಟರ್‌ ಸಿಕ್ಸರ್‌ ಹೊಡೆದ ನಂತರ ಇದ್ದಕ್ಕಿದ್ದಂತೆ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಫಿರೋಜ್‌ಪುರದ ಡಿಎವಿ (DAV) ಶಾಲಾ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ಆಡುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು … Continued

ಎದೆ ಝಲ್‌ ಎನ್ನುವ ವೀಡಿಯೊ…| ಪಾಕಿಸ್ತಾನದ ಪ್ರವಾಹದಲ್ಲಿ ಕೊಚ್ಚಿಹೋದ ಒಂದೇ ಕುಟುಂಬದ 9 ಜನ ; ದುರಂತವಾದ ಪಿಕ್ನಿಕ್‌

ಪಾಕಿಸ್ತಾನದಲ್ಲಿ ಸ್ವಾತ್ ನದಿಯ ಹಠಾತ್ ಪ್ರವಾಹದಲ್ಲಿ ಕುಟುಂಬದ 18 ಜನರಲ್ಲಿ ಒಂಬತ್ತು ಮಂದಿ ಕೊಚ್ಚಿಹೋಗಿ ಸಾವಿಗೀಡಾದ ನಂತರ, ಕುಟುಂಬಕ್ಕೆ ಪಿಕ್ನಿಕ್ ಪ್ರವಾಸವು ದುರಂತವಾಗಿ ಪರಿಣಮಿಸಿತು. ಶುಕ್ರವಾರ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಈ ಘಟನೆ ಸಂಭವಿಸಿದೆ. ಮೈ ಜುಂ ಎನ್ನುವ ವೀಡಿಯೊದಲ್ಲಿ, ಬಲವಾದ ಪ್ರವಾಹದ ಮಧ್ಯೆ ನದಿ ಉಕ್ಕಿ ಹರಿಯುತ್ತಿದ್ದು, ಅದರ ಮಧ್ಯದಲ್ಲಿ ದಿನ್ನೆಯಂತೆ ಕಾಣುವ ಸ್ಥಳದಲ್ಲಿ … Continued

ಅಕ್ರಮ ಸಂಬಂಧಕ್ಕೆ ಅಡ್ಡಿ : ಕಣ್ಣಿಗೆ ಖಾರದ ಪುಡಿ ಎರಚಿ, ಕುತ್ತಿಗೆ ಮೇಲೆ ಕಾಲಿಟ್ಟು ಗಂಡನ ಕೊಂದ ಪತ್ನಿ..!

ತುಮಕೂರು : ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿ ಹಾಗೂ ಆಕೆಯ ಪ್ರಿಯಕರನ ಸೇರಿ ಬರ್ಬರವಾಗಿ ಹತ್ಯೆಗೈದ ಘಟನೆ ತಿಪಟೂರು (Tiptur) ತಾಲೂಕಿನ ಕಾಡುಶೆಟ್ಟಿಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪ್ರಿಯಕರನೊಂದಿಗೆ ಸೇರಿ ತನ್ನ ಗಂಡನನ್ನು ಕೊಂದು ಆತನ ಶವವನ್ನು ಸುಮಾರು 30 ಕಿಲೋಮೀಟರ್ ದೂರದಲ್ಲಿ ಎಸೆದಿದ್ದಾಳೆ ಎಂದು ಆರೋಪಿಸಲಾಗಿದೆ. ಜೂನ್ 24 ರಂದು ತುಮಕೂರು … Continued

“ಅವಳು ಅಲ್ಲಿಗೆ ಹೋಗಿದ್ಯಾಕೆ ?”: ಭಾರಿ ವಿವಾದ ಸೃಷ್ಟಿಸಿದ ಕೋಲ್ಕತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರದ ಬಗ್ಗೆ ಟಿಎಂಸಿ ಶಾಸಕನ ಹೇಳಿಕೆ

ಕೋಲ್ಕತಾ : ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನಲ್ಲಿ ಪ್ರಥಮ ವರ್ಷದ ಕಾನೂನು ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ತೃಣಮೂಲ ಕಾಂಗ್ರೆಸ್‌ ಶಾಸಕ ಮದನ್ ಮಿತ್ರಾ ಹೇಳಿಕೆ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. “ಆ ಹುಡುಗಿ ಅಪರಾಧ ನಡೆದ ಸ್ಥಳಕ್ಕೆ ಹೋಗದಿದ್ದರೆ ಇದು ಸಂಭವಿಸುತ್ತಿರಲಿಲ್ಲ. ಅವಳು ಯಾರಿಗಾದರೂ ಮಾಹಿತಿ ನೀಡಿದ್ದರೆ ಅಥವಾ ಇಬ್ಬರು ಸ್ನೇಹಿತರನ್ನು … Continued