ದೆಹಲಿ ಪೊಲೀಸರ ಎಚ್ಚರಿಕೆ ಫಲಕದಿಂದ ಪ್ರತಿಭಟನಾನಿರತರಿಗೆ ಅಸಮಾಧಾನ

ದೆಹಲಿ: ರೈತರು ಒಂದೆಡೆ ಸೇರಿರುವುದು ಕಾನೂನು ಬಾಹಿರ ಎಂದು ದೆಹಲಿ ಪೊಲೀಸರು ಟಕ್ರಿ ಗಡಿಯಲ್ಲಿ ಫಲಕ ಹಾಕಿರುವುದು ಹೋರಾಟ ನಿರತ ರೈತರ ಅಸಮಾಧಾನಕ್ಕೆ ಕಾರಣವಾಗಿದೆ. “ಒಂದೆಡೆ ಸೇರಿ ಸಭೆ ನಡೆಸುವುದು ಕಾನೂನುಬಾಹಿರ ಎಂದು ಪರಿಗಣಿಸಲಾಗಿದೆ. ಇಲ್ಲಿಂದ ತೆರಳುವಂತೆ ಎಚ್ಚರಿಕೆ ನೀಡಲಾಗುವುದು. ಇಲ್ಲದಿದ್ದರೆ ನಿಮ್ಮ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದುʼ ಎಂದು ಹಿಂದಿ ಹಾಗೂ ಪಂಜಾಬಿ ಭಾಷೆಯಲ್ಲಿ … Continued

ಆಮ್‌ ಆದ್ಮಿ ಪಕ್ಷದಿಂದ ಬಿಜೆಪಿಗೆ ಸವಾಲಿಲ್ಲ: ಗುಜರಾತ್‌ ಸಿಎಂ ರೂಪಾನಿ

ಆಮ್ ಆದ್ಮಿ ಪಕ್ಷ (ಎಎಪಿ) ಗುಜರಾತ್‌ನಲ್ಲಿರುವ ಬಿಜೆಪಿಗೆ ಸವಾಲಾಗಿಲ್ಲ, ಆದರೆ ಸೂರತ್‌ನಲ್ಲಿ ಕಾಂಗ್ರೆಸ್‌ಗೆ ಪರ್ಯಾಯ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದ್ದಾರೆ. ಈ ವಾರದ ಕೊನೆಯಲ್ಲಿ ಪಂಚಾಯಿತಿಗಳು ಮತ್ತು ನಾಗರಪಾಲಿಕರಿಗೆ ನಡೆಯುವ ಚುನಾವಣೆಯಲ್ಲಿ ಎಎಪಿ ಯಾವುದೇ ಸ್ಥಾನವನ್ನು ಗೆಲ್ಲುವುದಿಲ್ಲ. ನಾವು ಎಎಪಿಯಿಂದ ಯಾವುದೇ ಸವಾಲನ್ನು ಎದುರಿಸುವುದಿಲ್ಲ ಎಂದು ನಾನು ನಂಬುತ್ತೇನೆ. ಕಳೆದ ಬಾರಿ … Continued

ಬಸವಕಲ್ಯಾಣ ಉಪಚುನಾವಣೆ ಗೆಲ್ಲಲು ಬಿಜೆಪಿ ರಣತಂತ್ರ

ಬೆಂಗಳೂರು: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿಯವರಾದ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಬಿಜೆಪಿ ಟಿಕೇಟ್‌ ಆಕಾಂಕ್ಷಿಗಳ ಹಾಗೂ ಮುಖಂಡರ ಸಭೆ ನಡೆಯಿತು. ಈ ಸಭೆಯಲ್ಲಿ ಸಚಿವರಾದ ಪ್ರಭು ಚೌವ್ಹಾಣ, ವಿ. ಸೋಮಣ್ಣ, ಬೀದರ್ ಕ್ಷೇತ್ರದ ಸಂಸದ ಭಗವಂತ ಖೂಬಾ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಮಾಲೀಕಯ್ಯ ಗುತ್ತೇದಾರ್, ಶಾಸಕರಾದ … Continued

ಪಶ್ಚಿಮ ಬಂಗಾಳಕ್ಕೆ ಕೊರೊನಾ ಲಸಿಕೆ ನೀಡುವಂತೆ ಪ್ರಧಾನಿಗೆ ಸಿಎಂ ಮಮತಾ ಮನವಿ

ವಿಧಾನಸಭೆ ಚುನಾವಣೆಗೆ ಮುಂಚೆ ಪಶ್ಚಿಮ ಬಂಗಾಳದಲ್ಲಿ ಕೊರೊನಾ ಲಸಿಕೆ ಒದಗಿಸಬೇಕೆಂದು ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಎಪ್ರಿಲ್‌-ಮೇ ತಿಂಗಳಿನಲ್ಲಿ ನಡೆಯುವ ಚುನಾವಣೆಯಲ್ಲಿ ಜನರು ಲಸಿಕೆಯಿಲ್ಲದೇ ಮತದಾನ ಕೇಂದ್ರಗಳಿಗೆ ಹೋಗಬೇಕಾಗುತ್ತದೆ. ಜನರ ಆರೋಗ್ಯ ಮತ್ತು ಯೋಗಕ್ಷೇಮದ ಹಿತದೃಷ್ಟಿಯಿಂದ ತಕ್ಷಣವೇ ಜನರಿಗೆ ಲಸಿಕೆ ಒದಗಿಸಬೇಕೆಂದು ಮನವಿ ಮಾಡಿದ್ದಾರೆ. ಆರೋಗ್ಯ ಕಾರ್ಯಕರ್ತರು ಮತ್ತು ಇತರ … Continued

ಮಾ.೧ರಿಂದ ೨ನೇ ಹಂತದ ಲಸಿಕೆ ಆರಂಭ:೬೦ರ ಮೇಲ್ಪಟ್ಟವರಿಗೆ ಉಚಿತ

  ನವ ದೆಹಲಿ: ದೇಶದಲ್ಲಿ ಮಾರ್ಚ್ ೧ರಿಂದ ಎರಡನೇ ಹಂತದ ಕೊವಿಡ್‌ ಲಸಿಕೆ ಹಾಕುವ ಅಭಿಯಾನ ಕೈಗೆತ್ತಿಕೊಳ್ಳಲು ಕೇಂದ್ರ ಸಚಿವ ಸಂಪುಟ ಸಮ್ಮತಿ ನೀಡಿದೆ. 45 ವರ್ಷ ದಾಟಿದ ಅನಾರೋಗ್ಯಪೀಡಿತರು ಮತ್ತು 60 ವರ್ಷ ದಾಟಿದ ಎಲ್ಲಾ ನಾಗರಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ಹಾಕಲು ನಿರ್ಧರಿಸಲಾಗಿದೆ.ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ … Continued

ಪ್ರತ್ಯೇಕ ಜಿಲ್ಲೆಗೆ ಒತ್ತಾಯಿಸಿ ಶಿರಸಿ ಬಂದ್‌

ಶಿರಸಿ: ಉತ್ತರ ಕನ್ನಡದ ಕರಾವಳಿಯಿಂದ ಪ್ರತ್ಯೇಕಿಸಿ ಪ್ರತ್ಯೇಕ ಶಿರಸಿ ಜಿಲ್ಲೆ ಮಾಡುವಂತೆ ಆಗ್ರಹಿಸಿ ಬುಧವಾರ ಶಿರಸಿ ತಾಲೂಕು ಬಂದ್ ಮಾಡಲಾಯಿತು. ಶಿರಸಿ ಜಿಲ್ಲಾ ಹೋರಾಟ ಸಮಿತಿ ಪ್ರತಿಭಟನೆಯನ್ನೂ ನಡೆಸಿತು. ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳಾದ ಶಿರಸಿ,ಸಿದ್ದಾಪುರ,ಮುಂಡಗೋಡು,ಯಲ್ಲಾಪುರ,ಜೋಯಿಡಾ,ಹಳಿಯಾಳ ಸೇರಿಸಿ ಶಿರಸಿ ಜಿಲ್ಲೆಯನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಲಾಯಿತು. ಶಿವಾಜಿ ಸರ್ಕಲ್ ನಿಂದ ಪ್ರತಿಭಟನೆ ಆರಂಭಿಸಿದ ಪ್ರದರ್ಶನಕಾರರು … Continued

೧೫೦೦ ಸಮಾವೇಶಗಳು, ೧೫,೦೦೦ ವಾಟ್ಸಾಪ್‌ ಗ್ರುಪ್‌ಗಳು: ಪಶ್ಚಿಮ ಬಂಗಾಳ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ…!

ನವ ದೆಹಲಿ: ಮುಂಬರುವ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ 1,500 ಕ್ಕೂ ಹೆಚ್ಚು ಬೃಹತ್‌ ಸಮಾವೇಶಗಳು, 15,000 ವಾಟ್ಸಾಪ್ ಗುಂಪುಗಳು ಮತ್ತು ಪಕ್ಷದ ಪ್ರಮುಖ ಮುಖಂಡರು ಶಿಬಿರ ನಡೆಸಲು ಬಿಜೆಪಿ ತಯಾರಿ ನಡೆಸುತ್ತಿದೆ. ಪಶ್ಚಿಮ ಬಂಗಾಳದ ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರ ಪ್ರಕಾರ, ಮತದಾರರನ್ನು ತಲುಪಲು ಕನಿಷ್ಠ 1,500 ದೊಡ್ಡ ಮತ್ತು ಸಣ್ಣ ಸಮಾವೇಶಗಳನ್ನು ನಡೆಸುವಂತೆ ಬಿಜೆಪಿ ಕೇಂದ್ರ … Continued

ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

ಪುದುಚೆರಿ: ಪುದುಚೇರಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಾಧ್ಯವಾಗದೆ ಅಲ್ಲಿನ ಮುಖ್ಯಮಂತ್ರಿ ಸ್ಥಾನಕ್ಕೆ ,ವಿ ನಾರಾಯಣಸ್ವಾಮಿ ನೇತೃತ್ವದ ಸರ್ಕಾರ ಪತನವಾದ ಒಂದು ದಿನದ ಬಳಿಕ ಕೇಂದ್ರ ಸರ್ಕಾರ ವಿಧಾನಸಭೆಯನ್ನು ವಿಸರ್ಜಿಸಿ, ರಾಷ್ಟ್ರಪತಿ ಆಡಳಿತ ಜಾರಿ ಮಾಡಿದೆ. ಮುಖ್ಯಮಂತ್ರಿ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಬಹುಮತ ಕಳೆದುಕೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಯಾವುದೇ ಪಕ್ಷ ಸರ್ಕಾರ … Continued

ಮ್ಯಾನ್‌ಹೋಲ್‌ನಲ್ಲಿ ಒತ್ತಾಯ ಪೂರ್ವಕವಾಗಿ ಇಳಿಸಿದ್ದಕ್ಕೆ ಪೌರ ಕಾರ್ಮಿಕ ಆತ್ಮಹತ್ಯೆ

ಕರ್ನಾಟಕ ಮಂಡ್ಯ ಜಿಲ್ಲೆಯ ಮದ್ದೂರ ಪಟ್ಟಣದ ಪುರಸಭೆಯಲ್ಲಿ ಕೆಲಸ ಮಾಡುತ್ತಿದ್ದ ಪೌರ ಕಾರ್ಮಿಕ ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಂತೆ ಪುರಸಭೆ ಅಧಿಕಾರಿಗಳು ಒತ್ತಡ ಹೇರಿದ್ದನ್ನು ಖಂಡಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾರಾಯಣ (೩೪) ಮೃತ ವ್ಯಕ್ತಿ. ಪುರಸಭೆಯ ಅಧಿಕಾರಿಗಳು ೨೦೨೦ರ ನವಂಬರ್‌ಲ್ಲಿ ಮ್ಯಾನ್‌ಹೋಲ್‌ನಲ್ಲಿ ಇಳಿಯುವಂತೆ ಒತ್ತಡ ಹೇರಿದ್ದರು. ನಾರಾಯಣ ನಿರಾಕರಿಸಿದ್ದಕ್ಕೆ ಅವನ ಸಂಬಳವನ್ನು ೬೦೦೦ರೂ.ಗಳಿಗೆ ಕಡಿತಗೊಳಿಸಲಾಗಿತ್ತು. ಇದನ್ನು ಖಂಡಿಸಿ ನಾರಾಯಣ … Continued

ಶಬರಿಮಲೆ ಆಂದೋಲನಕ್ಕೆ ಸಂಬಂಧಿಸಿದ ಪ್ರಕರಣ ಹಿಂತೆಗೆಯಲು ಕೇರಳ ಸರ್ಕಾರ ನಿರ್ಧಾರ: ಚುನಾವಣಾ ಸ್ಟಂಟ್‌ ಎಂದ ಬಿಜೆಪಿ

ರಾಜ್ಯದ ವಿಧಾನಸಭೆ ಚುನಾವಣೆ ಸನಿಹದಲ್ಲಿರುವ ಕೇರಳದಲ್ಲಿ ಎಡರಂಗ ಸರ್ಕಾರವು ಶಬರಿಮಲೆ ಆಂದೋಲನ ಹಾಗೂ ನಾಗರಿಕ ತಿದ್ದುಪಡಿ ಕಾಯ್ದೆ ವಿರುದ್ಧದ ಹೋರಾಟದಲ್ಲಿ ಅಪರಾಧ ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಎಲ್ಲ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವುದಾಗಿ ಹೇಳಿದೆ. ಬಿಜೆಪಿಯು ಎಡರಂಗದ ಸರ್ಕಾರದ ಈ ನಿರ್ಧಾರ ಚುನಾವಣಾ ಸ್ಟಂಟ್‌ ಎಂದು ಹೇಳಿದೆ. ಶಬರಿಮಲೆ ಆಂದೋಲನಕ್ಕೆ ಸಂಬಂಧಿಸಿದಂತೆ 50,000 ಕ್ಕೂ ಹೆಚ್ಚು ಜನರ ವಿರುದ್ಧ … Continued