ಡಿಜಿಪಿ ರಾಜೇಶ ದಾಸ ವಿರುದ್ಧ ಲೈಂಗಿಕ ಕಿರುಕುಳ ದೂರಿಗೆ ವಿಚಾರಣೆ ಸಮಿತಿ ರಚನೆ

ಚೆನ್ನೈ; ತಮಿಳುನಾಡು ವಿಶೇಷ ಪೊಲೀಸ್ ಮಹಾನಿರ್ದೇಶಕರು (ಕಾನೂನು ಸುವ್ಯವಸ್ಥೆ) ರಾಜೇಶ್ ದಾಸ್ ಅವರ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ನೀಡಿದ ದೂರಿನ ತನಿಖೆಗಾಗಿ ತಮಿಳುನಾಡು ಗೃಹ ಇಲಾಖೆ ಬುಧವಾರ ಆರು ಸದಸ್ಯರ ವಿಚಾರಣಾ ಸಮಿತಿ ರಚಿಸಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಯೋಜನೆ ಮತ್ತು ಅಭಿವೃದ್ಧಿ) ಜಯಶ್ರೀ ರಘುನಂದನ್ ಸಮಿತಿಯ ಅಧ್ಯಕ್ಷರಾಗಿರುತ್ತಾರೆ … Continued

ಹೊಸ ತಂತ್ರಜ್ಞಾನದ ಮೂಲಕ ಖನಿಜ ಸಂಪತ್ತು ಸಮೀಕ್ಷೆ :ನಿರಾಣಿ

ಮಂಗಳೂರು: ಹೊಸ ತಂತ್ರಜ್ಞಾನದ ಮೂಲಕ ರಾಜ್ಯದಲ್ಲಿರುವ ಖನಿಜ ಸಂಪತ್ತನ್ನು ಸಮೀಕ್ಷೆ ನಡೆಸಿ ಸಂರಕ್ಷಣೆ ಮಾಡುವ  ಚಿಂತನೆಯಿದೆ ಎಂದು ಗಣಿ ಮತ್ತು  ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಬುಧವಾರ ಇಲ್ಲಿನ ಪ್ರವಾಸ ಮಂದಿರದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಖನಿಜ ಸಂಪತ್ತನ್ನು … Continued

ಹಿರೇನಾಗವಲ್ಲಿ ಸ್ಫೋಟ ಪ್ರಕರಣ: ಪಿಎಸ್‌ಐ ಅಮಾನತು

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಜಿಲೆಟಿನ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್  ಗೋಪಾಲ ರೆಡ್ಡಿ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ. ಸ್ಫೋಟ ಪ್ರಕರಣದ ತನಿಖೆ ಮತ್ತು ಆರೋಪಿಗಳನ್ನು ಪತ್ತೆ ಮಾಡುವಲ್ಲಿ ತೋರಿದ ಅತೀವ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದಿಂದಾಗಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶ … Continued

ಯತ್ನಾಳ ಪರ ವಿಶ್ವನಾಥ ಬ್ಯಾಟಿಂಗ್‌

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧ ಶಾಸಕ ಬಸವರಾಜ ಪಾಟೀಲ್ ಯತ್ನಾಳ್ ಮಾಡಿರುವ ಆರೋಪದಲ್ಲಿ ನ್ಯಾಯವಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ. ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ ಯತ್ನಾಳ ಅವರು ಪಕ್ಷ, ಸರ್ಕಾರದ ವಿರುದ್ಧ ಹೇಳಿಕೆ ನೀಡಿಲ್ಲ ಅಲ್ಲದೆ ಜನ ವಿರೋಧಿ ಭಾಷಣಗಳನ್ನೂ ಮಾಡಿಲ್ಲ, ಸರ್ಕಾರದ … Continued

ಯತ್ನಾಳ ದಿಢೀರ್‌ ದೆಹಲಿ ಭೇಟಿ ಕಾರಣ ಬಹಿರಂಗ

ಶಾಸಕ ಬಸನಗೌಡ ಪಾಟೀಲ ಯತ್ನಾಳ ದೆಹಲಿಗೆ ಭೇಟಿ ನೀಡಿದ ಕಾರಣ ಬಹಿರಂಗಗೊಂಡಿದೆ. ವಿಜಯಪುರದ ಶ್ರೀ ಸಿದ್ದೆಶ್ವರ ಸಂಸ್ಥೆಯ ಅಡಿಯಲ್ಲಿ ನಿರ್ಮಿಸಲಾದ ಭಾರತ ರತ್ಬ ಅಟಲ್‌ ಬಿಹಾರಿ ವಾಜಪೇಯಿ ಶಿಶು ನಿಕೇತನ ಶಾಲೆಯ ಸಿಬಿಎಸ್‌ಇ ನೋಂದಣಿ ಕಾರ್ಯಕ್ಕಾಗಿ ಯತ್ನಾಳ ದೆಹಲಿಗೆ ಹೋಗಿದ್ದಾರೆ. ಪಕ್ಷದ ಹೈಕಮಾಂಡ್‌ನಿಂದ ಯಾವುದೇ ಬುಲಾವ್‌ ಬಂದಿಲ್ಲ. ಯಾವುದೇ ಮುಖಂಡರನ್ನು ಭೇಟಿ ಮಾಡಲು ಹೋಗಿಲ್ಲ ಎಂದು ಯತ್ನಾಳ … Continued

ಬೀದಿ ವ್ಯಾಪಾರಿಗಳ ಸಾಲ ನೀಡಿಕೆ ಪ್ರಕ್ರಿಯೆ ಚುರುಕಿಗೆ ಬ್ಯಾಂಕ್‌ಗಳಿಗೆ ಸಲಹೆ

ಕಳೆದ ವರ್ಷ ಕೋವಿಡ್ -19 ಲಾಕ್‌ಡೌನ್ ಸಮಯದಲ್ಲಿ ಆರಂಭಿಸಿದ ಯೋಜನೆಯ ಭಾಗವಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲವನ್ನು ವಿತರಣೆ ಪ್ರಕ್ರಿಯೆ ನಿಧಾನಗೊಂಡಿದೆ ಎಂದು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಬರೆದ ಪತ್ರದಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ತಿಳಿಸಿದೆ. ಆರಂಭಿಕ ತಿಂಗಳುಗಳ ಅದ್ಭುತ ಯಶಸ್ಸಿನ ನಂತರ, ಬ್ಯಾಂಕುಗಳ ವಿಲೀನ, ಡಿಸೆಂಬರ್ ಅಂತ್ಯದ ತ್ರೈಮಾಸಿಕದ ಅಂತ್ಯದ ಕಾರಣ ಬ್ಯಾಂಕುಗಳು … Continued

ಅಮೆರಿಕ: ಮತ್ತೊಬ್ಬ ಭಾರತೀಯ-ಅಮೆರಿಕನ್‌ಗೆ ಉನ್ನತ ಹುದ್ದೆ

ಅಮೆರಿಕದ ಫೆಡರಲ್‌ ಏಜೆನ್ಸಿಯ ಆಫೀಸ್‌ ಆಫ್‌ ಫೆಡರಲ್‌ ಏಜೆನ್ಸಿಯ ಆಫೀಸ್‌ ಆಫ್‌ ಪರ್ಸನಲ್‌ ಮ್ಯಾನೇಜ್‌ಮೆಂಟ್‌ ಮುಖ್ಯಸ್ಥರನ್ನಾಗಿ ಭಾರತೀಯ-ಅಮೆರಿಕನ್‌ ನ್ಯಾಯವಾದಿ ಕಿರಣ್‌ ಅಹುಜಾ ಅವರನ್ನು ನೇಮಕ ಮಾಡಲಾಗಿದೆ. ಅಮೆರಿಕ ಅಧ್ಯಕ್ಷ ಜೋ ಬಿಡೆನ್‌ ಅಮೆರಿಕದ ೨ ದಶಲಕ್ಷಕ್ಕೂ ಹೆಚ್ಚು ನಾಗರಿಕ ಸೇವಕರನ್ನು ನಿರ್ವಹಿಸುವ ಫೆಡರಲ್‌ ಏಜೆನ್ಸಿಗೆ ಮಾನವ ಹಕ್ಕುಗಳ ಕಾರ್ಯಕರ್ತ ಅಹುಜಾರನ್ನು ನೇಮಕ ಮಾಡಿದ್ದಾರೆ. ಅಹುಜಾ 2015 … Continued

ಪುಣೆ: ಕೊವಿಡ್‌ ಸೋಂಕಿತರಿಗೆ ೨೦೦೦ ಹಾಸಿಗೆ ಕಾಯ್ದಿರಿಸಲು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ

ಪುಣೆ: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರಿಗಾಗಿ ೨೦೦೦ದಿಂದ ೩೦೦೦ ಹಾಸಿಗೆಗಳನ್ನು ಕಾಯ್ದಿರಿಸುವಂತೆ ಪುಣೆಯ ಖಾಸಗಿ ಆಸ್ಪತ್ರೆಗಳಿಗೆ ಮಹಾನಗರ ಪಾಲಿಕೆ ನಿರ್ದೇಶನ ನೀಡಿದೆ. ಪಿಎಂಸಿ ಆಯುಕ್ತ ವಿಕ್ರಮ್ ಕುಮಾರ್, ಕೊರೊನಾ ರೋಗಿಗಳಿಗೆ ಹಾಸಿಗೆಗಳನ್ನು ಕಾಯ್ದಿರಿಸುವಂತೆ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿದರು ಖಾಸಗಿ ಆಸ್ಪತ್ರೆಗಳು ತಾವು ಕಾಯ್ದಿರಿಸಿದ ಹಾಸಿಗೆಗಳ ಬಗ್ಗೆ ನಮಗೆ ತಿಳಿಸಲಿದ್ದು, ಅದರ ಪ್ರಕಾರ ಡ್ಯಾಶ್‌ಬೋರ್ಡ್ … Continued

ಸೌದಿ ಅರೇಬಿಯಾ ಪೆಟ್ರೋಲ್‌ ಕಿಂಗ್‌ ಮಾಡಿದ್ದ ‌ ಅಹ್ಮದ್‌ ಝಾಕಿ ಯಮಾನಿ ನಿಧನ

ಸೌದಿ ಅರೇಬಿಯಾವನ್ನು ಪೆಟ್ರೋಲ್‌ ಮಾರುಕಟ್ಟೆಯಲ್ಲಿ ಸೂಪರ್‌ ಪವರ್‌ ಮಾಡಿದ್ದ ಮಾಜಿ ಪೆಟ್ರೋಲಿಯಂ ಸಚಿವ ಶೇಖ್‌ ಅಹ್ಮದ್‌ ಝಾಕಿ ಯಮಾನಿ (೯೧) ನಿಧರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಲಂಡನ್‌ನಲ್ಲಿ ನಿಧನರಾಗಿದ್ದಾರೆ. 1962ರಲ್ಲಿ ಸೌದಿಯ ಇಂಧನ ಸಚಿವಾಗಿದ್ದ ಅವರು, ಪೆಟ್ರೋಲಿಯಂ ಮಾರುಕಟ್ಟೆಯಲ್ಲಿ ಸೌದಿಯನ್ನು ಸೂಪರ್‌ ಪವರ್‌ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಗಲ್ಫ್‌ನ ಇತರೆ ರಾಷ್ಟ್ರಗಳಿಗೆ ಹೋಲಿಕೆ … Continued

ದೀರ್ಘ ಬಾಳಿಕೆ ಕುನ್ಬಾ ಟೆಂಟ್‌ಗಳ ನಿರ್ಮಾಣಕ್ಕೆ ಪ್ರತಿಭಟನಾಕಾರರ ಸಿದ್ಧತೆ

ದೆಹಲಿ ಗಡಿಗಳಲ್ಲಿ ಬೇಡಿಕೆ ಈಡೇರಿಕೆಗಾಗಿ ಹೋರಾಟ ನಡೆಸುತ್ತಿರುವ ರೈತರು ಸದ್ಯಕ್ಕೆ ಹೋರಾಟವನ್ನು ಕೈಬಿಡುವ ಲಕ್ಷಣಗಳು ಕಾಣುತ್ತಿಲ್ಲ. ದೀರ್ಘ ಬಾಳಿಕೆಯ ಕುನ್ಬಾ ಟೆಂಟ್ಗಳನ್ನು ನಿರ್ಮಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇನ್ನಷ್ಟು ತಿಂಗಳುಗಳ ಕಾಲ ಪ್ರತಿಭಟನೆಯನ್ನು ಮುಂದುವರೆಸುವ ಉದ್ದೇಶದಿಂದ ಶಾಶ್ವತವೆನ್ನಬಹುದಾದ ಕುನ್ಬಾ ಡೇರೆಗಳನ್ನು ನಿರ್ಮಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಪ್ರತಿಯೊಂದು ಕುಟುಂಬಗಳಿಂದ ೨೦೦ ರೂ.ಗಳಿಂದ ೫೦೦ರೂ.ವರೆಗೆ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ … Continued