ಮೀಸಲಾತಿ : ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ

ಬೆಂಗಳೂರು: ವಿವಿಧ ಸಮುದಾಯಗಳು ಮೀಸಲಾತಿ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇಟ್ಟಿರುವ ಕುರಿತು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಸಚಿವರು ಸಮುದಾಯಗಳ ಬೇಡಿಕೆ ಕುರಿತಾಗಿ ಅಭಿಪ್ರಾಯಗಳನ್ನು ನನ್ನ ಬಳಿ ಹಂಚಿಕೊಂಡಿದ್ದಾರೆ. ಸೂಕ್ತ ಸಂದರ್ಭದಲ್ಲಿ ಸರಿಯಾದ ನಿರ್ಣಯಗಳನ್ನು ಕೈಗೊಳ್ಳುವೆ ಎಂದರು. ವಿವಿಧ ಸಮುದಾಯಗಳಿಗೆ … Continued

ಪಿಎಫ್‌ಐ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಬೊಮ್ಮಾಯಿ ಸೂಚನೆ

ಬೆಂಗಳೂರು : ದೇಶ ವಿರೋಧಿ ಮತ್ತು ಅಸಂವಿಧಾನಿಕ ಹೇಳಿಕೆ ನೀಡಿರುವ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಸಂಸ್ಥೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ , ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಳ್ಳಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿಎಫ್‌ಐ ನಾಯಕರು … Continued

ಎಸ್‌ಬಿಐನಿಂದ ಗೃಹ ಸಾಲ ಸಂಸ್ಕರಣಾ ಶುಲ್ಕ ಮನ್ನಾ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಒಳ್ಳೆಯ ಸುದ್ದಿ ನೀಡಿದೆ. ಗೃಹ ನಿರ್ಮಾಣಕ್ಕಾಗಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವುದ್ರ ಜೊತೆಗೆ ಸಾಲದ ಮೇಲಿನ ಸಂಸ್ಕರಣಾ ಶುಲ್ಕ ಕೂಡ ಮನ್ನಾ ಮಾಡುತ್ತಿದೆ. ಎಸ್‌ಬಿಐ ಗೃಹ ನಿರ್ಮಾಣದ ಸಾಲದ ಮೇಲಿನ ಸಂಸ್ಕರಣಾ ಶುಲ್ಕವನ್ನ ಮನ್ನಾ ಮಾಡುವುದಾಗಿ ಪ್ರಕಟಿಸಿದೆ. ಇದು ಸಾಲಗಾರರಿಗೆ ಸ್ವಲ್ಪ ನಿರಅಳ ನೀಡಿದಂತಾಗಿದೆ. ಆದರೆ ಗೃಹ … Continued

ಜಾಮೀನು ಅರ್ಜಿ ತಿರಸ್ಕಾರ: ಲಾಲುಗೆ ಸಿಗದ ರಿಲೀಫ್‌

ಡುಮ್ಕಾ ಖಜಾನೆ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದ್ದರಿಂದ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಪ್ರಸಾದ್ ಜೈಲಿನಲ್ಲಿದ್ದಾರೆ. ಈ ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥರು ತಮ್ಮ ಒಟ್ಟು ಶಿಕ್ಷೆಯ ಅರ್ಧದಷ್ಟು ಅವಧಿಯನ್ನು ಪೂರ್ಣಗೊಳಿಸಲು ಇನ್ನೂ ಎರಡು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗಿರುವುದರಿಂದ, ಜಾಮೀನು ಅರ್ಜಿಯನ್ನು ಮಂಜೂರು ಮಾಡಲಾಗಿಲ್ಲ ಮತ್ತು … Continued

ಯುವಕರು “ದೇಶ ಮೊದಲುʼ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು: ಪ್ರಧಾನಿ ಮೋದಿ

ಯುವಕರು “ದೇಶ ಮೊದಲುʼ ಎಂಬ ಮನೋಭಾವ ಅಳವಡಿಸಿಕೊಂಡರೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಪ್ರಪಂಚಿನಾದ್ಯಂತ ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಹರಡುತ್ತಿರುವ ಅನೇಕ ವಿದ್ಯಾವಂತರಿದ್ದಾರೆ, ಇನ್ನೊಂದೆಡೆ ಕೊರೊನಾದಂಥ ಸಾಂಕ್ರಾಮಿಕ ರೋಗಗಳಿಂದ ಜನರನ್ನು ರಕ್ಷಿಸಲು ಆಸ್ಪತ್ರೆಗಳು ಹಾಗೂ ಪ್ರಯೋಗಾಲಯಗಳಲ್ಲಿ ತಮ್ಮ ಪ್ರಾಣವನ್ನೇ ಪಣಕ್ಕಿಡುವ ಜನರೂ ಇದ್ದಾರೆ. ಎಲ್ಲವೂ ನಮ್ಮ ಮನಸ್ಥಿತಿಯನ್ನು ಅವಲಂಬಿಸಿದೆ. … Continued

ಮೊದಲು ನನ್ನ ಸೋದರಳಿಯನ ವಿರುದ್ಧ ಸೆಣಸಿ: ಅಮಿತ್‌ ಶಾಗೆ ದೀದಿ ಸವಾಲು

ಮೊದಲು ನನ್ನ ಸೋದರಳಿಯ ಅಭಿಷೇಕ ಬ್ಯಾನರ್ಜಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿ ನಂತರ ನನ್ನ ವಿರುದ್ಧ ಹೋರಾಟ ನಡೆಸಿ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಸವಾಲು ಹಾಕಿದ್ದಾರೆ. ಅಭಿಷೇಕ್‌ ರಾಜ್ಯಸಭಾ ಸದಸ್ಯರಾಗಿ ಸಂಸದರಾಗಬಹುದಿತ್ತು, ಆದರೆ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಜನಾದೇಶ ಪಡೆದಿದ್ದಾರೆ. ಕೆಲವರು ದೀದಿ ಸಂಬಂಧಿಗಳ … Continued

ಅಯೋಧ್ಯಾ ಶ್ರೀರಾಮ ಮಂದಿರ ಲೆಕ್ಕ ಕೇಳಲು ಸಿದ್ದರಾಮಯ್ಯ ಯಾರು?: ಸಚಿವ ಈಶ್ವರಪ್ಪ

ಅಯೋಧ್ಯೆಯಲ್ಲಿ ನಿರ್ಮಿಸುತ್ತಿರುವ ಶ್ರೀರಾಮ ಮಂದಿರದ ಲೆಕ್ಕ ಕೇಳಲು ಸಿದ್ದರಾಮಯ್ಯ ಯಾರು ಎಂದು ಪ್ರಶ್ನಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ, ಬೇಕಾದರೆ ಕೂಲಿ ಮಾಡುವ ವ್ಯಕ್ತಿ ಲೆಕ್ಕ ಕೇಳಲಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಗೌರವವಿಲ್ಲದೇ ರಾಮಮಂದಿರ ನಿರ್ಮಾಣದ ಸ್ಥಳವನ್ನು ವಿವಾದಿತ ಸ್ಥಳ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಪ್ರಧಾನಿ ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡುವುದು … Continued

ಕೇರಳದಲ್ಲಿ ಕೊರೊನಾ ಕೇಕೆ: ಕೊಡಗು ಜಿಲ್ಲೆಯಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ವಿಪರೀತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇರಳಕ್ಕೆ ಹೋಗಿ ಬರುವವರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. ಕೇರಳದಲ್ಲಿ ಬುಧವಾರ ಫೆ.17 ರಂದು ಒಂದೇ ದಿನ 4,892 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಅಲ್ಲಿ ಈಗ 60,803ಕ್ಕೆ ಏರಿದಂತಾಗಿದೆ. 746 … Continued

ಶ್ರೀನಗರ ಉಗ್ರರ ದಾಳಿ: ಇಬ್ಬರು ಪೊಲೀಸರು ಹತ

ಶ್ರೀನಗರದ ಹೆಚ್ಚಿನ ಭದ್ರತೆಯ ವಿಮಾನ ನಿಲ್ದಾಣ ರಸ್ತೆಯ ಬಾಗಟ್‌ ಪ್ರದೇಶದಲ್ಲಿ ಉಗ್ರರು ಇಬ್ಬರು ಪೊಲೀಸರನ್ನು ಹತ್ಯೆ ಮಾಡಿದ್ದಾರೆ. ಉಗ್ರರು ಸಮೀಪದಿಂದ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮರಣ ಹೊಂದಿದ್ದರು. ಹತ್ಯೆಗೀಡಾದ ಪೊಲೀಸರನ್ನು ಕಾನ್‌ಸ್ಟೆಬಲ್‌ಗಳಾದ ಸೊಹೈಲ್ ಮತ್ತು ಮೊಹಮ್ಮದ್ ಯೂಸುಫ್ ಎಂದು ಗುರುತಿಸಲಾಗಿದೆ. ದಾಳಿ ನಡೆದಾಗ ಅವರು ನಗರದ … Continued

ನಾಸಾ ರೋವರ್‌ ಮಂಗಳಯಾತ್ರೆ ಹಿಂದೆ ಭಾರತೀಯ ಮೂಲದ ಡಾ. ಸ್ವಾತಿ ಮೋಹನ್‌

ವಾಷಿಂಗ್ಟನ್‌: ನಾಸಾದ ಉಪಗ್ರಹ ಯಶಸ್ವಿಯಾಗಿ ಮಂಗಳನ ಮೇಲ್ಮೈ ತಲುಪಿದ ಯಶಸ್ಸಿನಲ್ಲಿ ಭಾರತೀಯ ಮೂಲದ ಯುವತಿಯೊಬ್ಬರ ಪಾತ್ರ ಪ್ರಮುಖವಾಗಿದೆ. ಉಪಗ್ರಹ ಏಳು ತಿಂಗಳ ಬಾಹ್ಯಾಕಾಶ ಯಾನದ ನಂತರ ರೋವರ್‌ ಯಶಸ್ವಿಯಾಗಿ ಮಂಗಳವನ್ನು ತಲುಪುವಲ್ಲಿ ಭಾರತೀಯ ಮೂಲದ ಡಾ. ಸ್ವಾತಿ ಮೋಹನರ ಶ್ರಮ ಕೂಡ ಇದೆ. ರೋವರ್‌ ಮೊದಲು ಮಂಗಳನ ಅಂಗಳಕ್ಕೆ ಇಳಿದಿದ್ದನ್ನು ದೃಢಪಡಿಸಿದ್ದೇ ಡಾ. ಸ್ವಾತಿ. ಕ್ಯಾಲಿಫೋರ್ನಿಯಾದ … Continued