ಮತ್ತೊಂದು ಜಿಲೆಟಿನ್‌ ಸ್ಫೋಟ

ತುಮಕೂರು: ಶಿವಮೊಗ್ಗದ ಸ್ಫೋಟ ಪ್ರಕರಣ ಬೆನ್ನಲ್ಲೇ ರಾಜ್ಯದ ತುಮಕೂರು ಜಿಲ್ಲೆಯಲ್ಲಿ ಜಿಲೆಟಿನ್ ಸ್ಫೋಟಗೊಂಡಿದೆ. ತುಮಕೂರು ಜಿಲ್ಲೆ ಮಸ್ಕಲ್ ಗ್ರಾಮದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಜಿಲೆಟಿನ್ ಸ್ಫೊಟಗೊಂಡಿದೆ. ಜಿಲೆಟಿನ್‌ ಇಟ್ಟಿದ್ದ ಮನೆ ಸಂಪೂರ್ಣ ಧ್ವಂಸಗೊಂಡಿದೆ. ಮನೆಯಲ್ಲಿದ್ದ ಸುವರ್ಣಮ್ಮ ಎಂಬುವವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದು ಲಕ್ಷ್ಮಿಕಾಂತ್ ಎಂಬುವವರಿಗೆ ಸೇರಿದ ಮನೆಯಾಗಿದ್ದು, ಲಕ್ಷ್ಮಿಕಾಂತ್ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ … Continued

ಮೀಸಲು ಚರ್ಚೆಗೆ ಅವಕಾಶಕ್ಕೆ ಒತ್ತಾಯಿಸಿ ಸದನದಲ್ಲಿ ಧರಣಿ

ಬೆಂಗಳೂರು: ರಾಜ್ಯದಲ್ಲಿ ಬೇರೆ ಬೇರೆ ಸಮುದಾಯವರು ಮೀಸಲಾತಿಗಾಗಿ ನಡೆಸುತ್ತಿರುವ ಪಾದಯಾತ್ರೆ ಕುರತು ಚರ್ಚೆಗೆ ಅವಕಾಶ ನೀಡುವಂತೆ ಹಾಗೂ ಅವರ ಬೇಡಿಕೆಗಳನ್ನು ಕಾಲಮಿತಿಯಲ್ಲಿ ಈಡೇರಿಸುವಂತೆ ಒತ್ತಾಯಿಸಿ ಆಡಳಿತ ಪಕ್ಷದವರು  ಪ್ರತಿಪಕ್ಷ ಸದಸ್ಯರ ಜತೆಗೆ ಧರಣಿಗೆ ನಡೆಸಿರುವುದಕ್ಕೆ ಮಂಗಳವಾರ ಸಾಕ್ಷಿಯಾಯಿತು. ಶೂನ್ಯವೇಳೆಯಲ್ಲಿ ಬಿಜೆಪಿಯ ರೆಬೆಲ್‌ ಶಾಸಕ ಎಂದೇ ಗುರುತಿಸಿಕೊಂಡಿರುವ  ಬಸನಗೌಡ ಪಾಟೀಲ್ ಯತ್ನಾಳ್ ವಿಷಯ ಪ್ರಸ್ತಾಪಿಸಿದರು. ಪಂಚಮಸಾಲಿಗರನ್ನು 2ಎಗೆ ಸೇರಿಸಬೇಕು … Continued

ಪೆಟ್ರೋಲ್‌ ಬೆಲೆ ಏರಿಕೆ: ತಮ್ಮದೇ ಸರ್ಕಾರದ ವಿರುದ್ಧ ಸ್ವಾಮಿ ಕಿಡಿ

ನವ ದೆಹಲಿ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಈಗ ಮತ್ತೊಮ್ಮೆ ಕೇಂದ್ರದ ತಮ್ಮದೇ ರ್ಕಾರದ ವಿರುದ್ಧ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಿಡಿಕಾರಿದ್ದಾರೆ. ಪೆಟ್ರೋಲ್ ಬೆಲೆ ವಿಷಯಕ್ಕಾಗಿ ಕೇಂದ್ರದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಸುಬ್ರಹ್ಮಣಿಯನ್ ಸ್ವಾಮಿ, ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.ಭಾರತ ಹಾಗೂ ನೆರೆ ರಾಷ್ಟ್ರಗಳಲ್ಲಿನ ಪೆಟ್ರೋಲ್ ಬೆಲೆಯನ್ನು ಹೋಲಿಕೆ ಮಾಡಿರುವ … Continued

ನಾಸಾ ಉನ್ನತ ಹುದ್ದೆಗೇರಿದ ಭಾರತೀಯ ಮೂಲದ ಭವ್ಯಾ ಲಾಲ್‌

ನ್ಯೂಯಾರ್ಕ: ಭಾರತೀಯ ಮೂಲದ ಭವ್ಯಾ ಲಾಲ್‌ ಅವರು ಅಮೆರಿಕದ ಸ್ಪೇಸ್‌ ಏಜೆನ್ಸಿ ನಾಸಾದ ಕಾರ್ಯಕಾರಿ ಸಿಬ್ಬಂದಿ ಮುಖ್ಯಸ್ಥೆಯಾಗಿ ನೇಮಕವಾಗಿದ್ದಾರೆ. ನ್ಯೂಕ್ಲಿಯರ್‌‌ ಎಂಜಿನೀಯರಿಂಗ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿರುವ ಭವ್ಯಾ, ಹಂಗಾಮಿ ಕಾರ್ಯಕಾರಿ ಮುಖ್ಯಸ್ಥೆಯಾಗಿ ನೇಮಕಗೊಂಡಿದ್ದಾರೆ. ಎಂಐಟಿಯಿಂದ ತಂತ್ರಜ್ಞಾನ ಮತ್ತು ಕಾರ್ಯನೀತಿಯಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿರುವ ಅವರು ಜಾರ್ಜ ವಾಷಿಂಗ್ಟನ್‌ ವಿಶ್ವವಿದ್ಯಾಲಯದಿಂದ ಸಾರ್ವಜನಿಕ ಆಡಳಿತ ಹಾಗೂ ಸಾರ್ವಜನಿಕ … Continued

ಉಪ ಸ್ಪೀಕರ್ ವಿರುದ್ಧ ಹೇಳಿಕೆ ನೀಡಲ್ಲ:ಉದಯನಿಧಿ

ಚೆನ್ನೈ: ತಮಿಳುನಾಡು ವಿಧಾನಸಭೆ ಉಪ ಸ್ಪೀಕರ್ ಪೊಲ್ಲಾಚಿ ವಿ ಜಯರಾಮನ್ ಅವರು ಸಲ್ಲಿಸಿರುವ ಮಾನಹಾನಿ ಪ್ರಕರಣವನ್ನು ಎದುರಿಸುತ್ತಿರುವ ಉದಯನಿಧಿ ಸ್ಟಾಲಿನ್  ಮದ್ರಾಸ್ ಹೈಕೋರ್ಟ್‌ಗೆ ಉಪ ಸ್ಪೀಕರ್  ವಿರುದ್ಧ ಯಾವುದೇ ಮಾನಹಾನಿ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಕಳೆದ ತಿಂಗಳು ತಿರುಚ್ಚಿಯಲ್ಲಿ ನಡೆದ ಪ್ರಚಾರದ ಸಭೆಯಲ್ಲಿ  ತಮಿಳುನಾಡಿನಲ್ಲಿ ನಡೆದ ಪೊಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂದಿಸಿದಂತೆ ತಮ್ಮ … Continued

ರಾಜ್ಯಸಭೆ: ರೈತ ಹೋರಾಟದ ಚರ್ಚೆಗೆ ವಿಪಕ್ಷಗಳ ಪಟ್ಟು

ನವ ದೆಹಲಿ: ಮೂರು ಹೊಸ ಕೃಷಿ ಮಸೂದೆಗಳ ಬಗ್ಗೆ ರೈತರು ನಡೆಸುತ್ತಿರುವ  ಪ್ರತಿಭಟನೆ ಕುರಿತು ಚರ್ಚೆ ಕೈಗೊಳ್ಳುವಂತೆ  ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಮಂಗಳವಾರ  ರಾಜ್ಯಸಭೆಯಲ್ಲಿ ತೀವ್ರವಾಗಿ ಒತ್ತಾಯಿಸಿದ್ದರಿಂದ    ರಾಜ್ಯಸಭಾ ಕಲಾಪ  ಮುಂದೂಡಲಾಗಿದೆ. ಬೆಳಿಗ್ಗೆ 10: 30 ರ ವರೆಗೆ ಸದನವನ್ನು ಮೊದಲು ಸುಮಾರು 10 ನಿಮಿಷಗಳ ಕಾಲ ಮುಂದೂಡಲಾಯಿತು. ಸದನವು ಮತ್ತೆ … Continued

ಆಂಧ್ರ: ಟಿಡಿಪಿ ರಾಜ್ಯಾಧ್ಯಕ್ಷರ ಬಂಧನ

ಹೈದರಾಬಾದ್: ಬೆದರಿಕೆ ಪ್ರಕರಣದಲ್ಲಿ ಪೊಲೀಸರು ಟಿಡಿಪಿ ರಾಜ್ಯಾಧ್ಯಕ್ಷ ಹಾಗೂ  ಶಾಸಕ ಕೆ ಅಚನ್ನೈದು ಅವರನ್ನು ಬಂಧಿಸಿದ್ದು, ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ನಿಮ್ಮಡಾ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ   ಟಿಡಿಪಿ ರಾಜ್ಯಾಧ್ಯಕ್ಷರನ್ನು ಬಂಧಿಸಲಾಗಿದೆ. ತಮ್ಮ ಸರ್ಪಂಚ್ ಅಭ್ಯರ್ಥಿಗೆ ಬೆದರಿಕೆ ಹಾಕಿದ್ದಾರೆ ಎಂದು ವೈಎಸ್‌ಆರ್‌ಸಿಪಿ ಆರೋಪಿಸಿದೆ. ಅಚನ್ನೈದು ಅವರನ್ನು ಮಂಗಳವಾರ ಬೆಳಿಗ್ಗೆ ಅವರ ನಿಮ್ಮಡಾ … Continued

೧೩೦.೫೭ ಕೋಟಿ ರೂ.ಆಸ್ತಿ ಅಟ್ಯಾಚ್‌ ಮಾಡಿದ ಇಡಿ

ಹೈದರಾಬಾದ್‌ : ಜಾರಿ ನಿರ್ದೇಶನಾಲಯವು 130.57 ಕೋಟಿ ರೂ.ಮೌಲ್ಯದ ಆಸ್ತಿ  ಲಗತ್ತಿಸಿದೆ. ಇದರಲ್ಲಿ 41 ಸ್ಥಿರ ಆಸ್ತಿಗಳಾದ ಮುಸದ್ದಿಲಾಲ್ ಜೆಮ್ಸ್ ಮತ್ತು ಜ್ಯುವೆಲ್ಸ್ ಪ್ರೈವೇಟ್ ಲಿಮಿಟೆಡ್  ಹಗರಣದಲ್ಲಿ ಭಾಗಿಯಾಗಿದೆ. 18.69 ಕೋಟಿ ರೂ.ಗಳ ವಹಿವಾಟಿನಲ್ಲಿ ಷೇರು ರೂಪದಲ್ಲಿ ಚಲಿಸಬಲ್ಲ ಆಸ್ತಿಗಳು ಮತ್ತು ಷೇರು ಮಾರುಕಟ್ಟೆಯಲ್ಲಿ   0.63 ಕೋಟಿ  ರೂ.ಗಳ ರೂಪದಲ್ಲಿ ಹೂಡಿಕೆ ಮಾಡಲಾಗಿದೆ ಎಂದು ಅಧಿಕಾರಿಗಳು … Continued

೭ ಅಧಿಕಾರಿಗಳ ಗುರಿಯಾಗಿಸಿ ೩೦ ಕಡೆ ಎಸಿಬಿ ದಾಳಿ

  ಬೆಂಗಳೂರು/ಹುಬ್ಬಳ್ಳಿ/ಧಾರವಾಡ/ಚಿತ್ರದುರ್ಗ/ಮಂಗಳೂರು/ಕೋಲಾರ: ಭ್ರಷ್ಟರ  ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಏಕಕಾಲದಲ್ಲಿ ರಾಜ್ಯದ  ಏಳು ಅಧಿಕಾರಿಗಳು ಹಾಗೂ ಅವರ ಸಂಬಂಧಿಕರಿಗೆ ಸೇರಿದ ೩೦ ಕಡೆ  ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ, ಬಳ್ಳಾರಿ, ಕೋಲಾರ, ಧಾರವಾಡ, ದಕ್ಷಿಣ ಕನ್ನಡ, ಚಿತ್ರದುರ್ಗ ಹಾಗೂ ಬೀದರ್‌ನಲ್ಲಿ ಈ ಅಧಿಕಾರಿಗಳ ಕಚೇರಿ ನಿವಾಸ ಇನ್ನಿತರ ಸ್ಥಳಗಳು ಸೇರಿದಂತೆ  ೩೦ … Continued

ರೈತರ ಆಂದೋಳನ:ಇಂದು ಸರ್ವಪಕ್ಷಗಳ ಸಭೆ ಕರೆದ ಪಂಜಾಬ್‌ ಸಿಎಂ

ಚಂಡಿಗಡ: ಕೃಷಿ ಕಾನೂನುಗಳ ಕುರಿತಂತೆ ದೇಶದ  ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಆಂದೋಳನ ಹಾಗೂ ಬೆಳವಣಿಗೆಗಳ ಹಿನ್ನೆಲೆಯಲ್ಲಿ  ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮಂಗಳವಾರ ಸರ್ವಪಕ್ಷ ಸಭೆ ಕರೆದಿದ್ದಾರೆ. ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರದ ನಂತರ ಪೊಲೀಸರು ಪ್ರಕರಣ ದಾಖಲಿಸಿರುವ  ರೈತರ ಪರವಾಗಿ ವಾದ ಮಂಡಿಸಲು ಪಂಜಾಬ್‌ ಸರ್ಕಾರ  70 ವಕೀಲರ ತಂಡವನ್ನು ನಿಯೋಜಿಸಿದೆ ಎಂದು … Continued