ಅಥಣಿ | ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತ ; ವಿದ್ಯಾರ್ಥಿನಿ ಸಾವು

ಬೆಳಗಾವಿ : ಶಾಲೆಯಲ್ಲಿ ಆಟವಾಡುವ ವೇಳೆ ಹೃದಯಾಘಾತ ಸಂಭವಿಸಿ ಹೈಸ್ಕೂಲ್‌ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಥಣಿ ತಾಲೂಕಿನ ಬೇಡರಹಟ್ಟಿ ಗ್ರಾಮದ ವಿದ್ಯಾರ್ಥಿನಿಗೆ ರೇಣುಕಾ ಸಂಜಯ ಬಂಡಗಾರ (15) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ‌ಚಮಕೇರಿ ಗ್ರಾಮದ ಖಾಸಗಿ ಶಾಲೆಯಲ್ಲಿ 9 ನೇ ತರಗತಿಯಲ್ಲಿ … Continued

ಮಾದಕ ವಸ್ತು ಪ್ರಕರಣ : ನಟ ಶ್ರೀಕಾಂತ ಬಂಧನ

ಚೆನ್ನೈ: ಕೊಕೇನ್ ಸಂಬಂಧಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರಿಯ ತಮಿಳು ಮತ್ತು ತೆಲುಗು ಚಲನಚಿತ್ರ ನಟ ಶ್ರೀಕಾಂತ ಅವರನ್ನು ಪೊಲೀಸರು ಬಂಧಿಸಿದ್ದು, ಚೆನ್ನೈ ನ್ಯಾಯಾಲಯವು ಜುಲೈ 7 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ನುಂಗಂಬಾಕ್ಕಂ ಪೊಲೀಸ್ ಠಾಣೆಯಲ್ಲಿ ನಟನನ್ನು ಹಲವಾರು ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಲಾಯಿತು ಮತ್ತು ಅಧಿಕೃತವಾಗಿ ಬಂಧಿಸಲಾಯಿತು. ಸೋಮವಾರ ಮಧ್ಯಾಹ್ನ ನಟ ಶ್ರೀಕಾಂತ ಅವರನ್ನು … Continued

ತನ್ನ ಬಿಟ್ಟು ಬೇರೊಬ್ಬಳನ್ನು ಮದುವೆಯಾದ ವ್ಯಕ್ತಿ ಸಿಲುಕಿಸಲು 21 ಸಲ ಬಾಂಬ್ ಬೆದರಿಕೆ ಹಾಕಿದ್ದ ಮಹಿಳಾ ರೊಬೊಟಿಕ್ಸ್ ಎಂಜಿನಿಯರ್ ಬಂಧನ…!

ಅಹಮದಾಬಾದ್ : 30 ವರ್ಷದ ರೊಬೊಟಿಕ್ಸ್ ಎಂಜಿನಿಯರ್ ಒಬ್ಬಳ ಏಕಪಕ್ಷೀಯ ಪ್ರೀತಿ ಅಪಾಯಕಾರಿ ತಿರುವು ಪಡೆದುಕೊಂಡಿದೆ, ಏಕೆಂದರೆ ಅವಳು ಪ್ರೀತಿಸಿದ ವ್ಯಕ್ತಿಯ ಮೇಲೆ ಸುಳ್ಳು ಪ್ರಕರಣ ದಾಖಲಾಗುವಂತೆ ಮಾಡಲು ಆಕೆ ದೇಶಾದ್ಯಂತ ಹಲವಾರು ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಹಾಕಿದ್ದಾಳೆ…! ಚೆನ್ನೈನ ಉನ್ನತ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಹಿರಿಯ ಸಲಹೆಗಾರ್ತಿಯಾಗಿರುವ ರೆನೆ ಜೋಶಿಲ್ಡಾ ಎಂಬ ಮಹಿಳೆಯನ್ನು ಅಹಮದಾಬಾದ್ … Continued

ಏರ್ ಇಂಡಿಯಾ ವಿಮಾನದಲ್ಲಿ 7 ಮಂದಿ ಅಸ್ವಸ್ಥ

ಮುಂಬೈ: ಲಂಡನ್‌ನಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-130 ರ ವಿವಿಧ ಹಂತಗಳಲ್ಲಿ ಕನಿಷ್ಠ ಇಬ್ಬರು ಸಿಬ್ಬಂದಿ ಮತ್ತು ಐದು ಪ್ರಯಾಣಿಕರು ತಲೆತಿರುಗುವಿಕೆ ಮತ್ತು ವಾಕರಿಕೆ ಕಂಡುಬಂದಿದೆ ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಇದರ ಹೊರತಾಗಿಯೂ, ಬೋಯಿಂಗ್ 777 ವಿಮಾನವು ತನ್ನ ಪ್ರಯಾಣವನ್ನು ಮುಂದುವರೆಸಿತು ಮತ್ತು ಮುಂಬೈನಲ್ಲಿ ಸುರಕ್ಷಿತವಾಗಿ ಇಳಿಯಿತು, ಅಲ್ಲಿ ವೈದ್ಯಕೀಯ … Continued

ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ಬೆಂಗಳೂರು : ಪದ್ಮಶ್ರೀ ಪುರಸ್ಕೃತ ಕವಿ, ವಿಧಾನ ಪರಿಷತ್‌ ಮಾಜಿ ಸದಸ್ಯ ದೊಡ್ಡರಂಗೇ ಗೌಡ ಅವರು ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಂಗೇರಿಯ ಬಿಜಿಎಸ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರನ್ನು ಭಾನುವಾರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.ಮನುಜ ಕಾವ್ಯನಾಮದ ಮೂಲಕ ಪರಿಚಿತರಾಗಿರುವ ದೊಡ್ಡರಂಗೇಗೌಡ ಅವರು, ತುಮಕೂರು ಜಿಲ್ಲೆ … Continued

ವೀಡಿಯೊ…| ಹಾಸಿಗೆ, ಶೌಚಾಲಯ, ಮೈಕ್ರೋವೇವ್ ಒಲೆ, ಆಹಾರ ತಯಾರಿಕೆ…: ಅಮೆರಿಕದ ಬಿ-2 ಬಾಂಬರ್ ಯುದ್ಧ ವಿಮಾನ ಹಾರುವ ಹೋಟೆಲ್ ಕೂಡ ಹೌದು..!

ಅಮೆರಿಕದ ವಾಯು ಪ್ರಾಬಲ್ಯದ ಸಂಕೇತವಾದ B-2 ಬಾಂಬರ್, ಇರಾನಿನ ಪರಮಾಣು ತಾಣಗಳನ್ನು ನಾಶಮಾಡಲು ಮತ್ತೊಮ್ಮೆ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ಇವುಗಳು ಅಮೆರಿಕದ ಮಿಸೌರಿಯಲ್ಲಿರುವ ವೈಟ್‌ಮ್ಯಾನ್ ವಾಯುಪಡೆಯ ನೆಲೆಯಿಂದ ಹಾರಿದವು, ಆಕಾಶದಲ್ಲಿ ಹಲವಾರು ಬಾರಿ ಇಂಧನ ತುಂಬಿಸಿಕೊಂಡವು, ಪತ್ತೆಯಾಗದ ಗುರುಗಳ ಮೇಲೆ ನಿಖರವಾಗಿ ದಾಳಿ ನಡೆಸಿದವು. ಆಪರೇಷನ್ ಮಿಡ್‌ನೈಟ್ ಹ್ಯಾಮರ್ B-2 ಸ್ಪಿರಿಟ್‌ 2001 ರಿಂದ ಹಾರಿದ … Continued

ನೀಟ್ ಅಣಕು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ 17 ವರ್ಷದ ಮಗಳನ್ನು ಹೊಡೆದು ಕೊಂದ ಶಿಕ್ಷಕ…!

ಸಾಂಗ್ಲಿ : ವಿದ್ಯಾರ್ಥಿನಿ ತನ್ನ 10 ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಶೇ. 92.60 ಅಂಕಗಳನ್ನು ಗಳಿಸಿದ್ದಾಳೆ. ಆದರೆ ಒಂದು ವರ್ಷದ ನಂತರ,  ಅಣಕು ಪರೀಕ್ಷೆ(mock test)ಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ ಕಾರಣಕ್ಕೆ ಅವಳ ತಂದೆ ಅವಳನ್ನು ಹೊಡೆದು ಕೊಂದ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ವರದಿಯಾಗಿದೆ. ಮಹಾರಾಷ್ಟ್ರದ ಸಾಂಗ್ಲಿಯ ಸಾಧನಾ ಭೋಂಸ್ಲೆ – ಪೂರ್ವ ವೈದ್ಯಕೀಯ … Continued

ನೆಲಮಂಗಲ ಬಳಿ ರಸ್ತೆ ಜಗಳ-ಹಲ್ಲೆ ಆರೋಪ: ಮಾಜಿ ಸಂಸದ ಅನಂತಕುಮಾರ ಹೆಗಡೆ ಸೇರಿ ಮೂವರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಬೆಂಗಳೂರಿನ ಹೊರವಲಯದ ಹಳೆ ನಿಜಗಲ್ ಬಳಿ ನಡೆದ ರಸ್ತೆ ಜಗಳದ ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಮಾಜಿ ಸಚಿವ ಹಾಗೂ ಮಾಜಿ ಸಂಸದ ಅನಂತಕುಮಾರ್ ಹೆಗಡೆ, ಅವರ ಗನ್‌ಮ್ಯಾನ್ ಮತ್ತು ಚಾಲಕನ ವಿರುದ್ಧ ದಾಬಸ್‌ಪೇಟೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಹಳೆ ನಿಜಗಲ್ ಬಳಿ ಅನಂತಕುಮಾರ ಹೆಗಡೆ ಅವರು ಕಾರಿನಲ್ಲಿ … Continued

ಅಮೆರಿಕ ವಾಯು ನೆಲೆ ಮೇಲೆ ಇರಾನ್‌ ಕ್ಷಿಪಣಿ ದಾಳಿ ; ವಾಯ ಪ್ರದೇಶ ಮುಚ್ಚಿದ ಕತಾರ್, ಯುಎಇ, ಬಹ್ರೇನ್

ಇರಾನ್‌ ಪ್ರತೀಕಾರದ ದಾಳಿಯಲ್ಲಿ ಕತಾರ್‌ ಹಾಗೂ ಇರಾಕಿನಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ದಾಳಿ ಮಾಡಿದ ನಂತರ ಕತಾರ್, ಯುಎಇ ಮತ್ತು ಬಹ್ರೇನ್ ಮೇಲಿನ ವಾಯುಪ್ರದೇಶವನ್ನು ಹಠಾತ್ತನೆ ಮುಚ್ಚಲಾಗಿದೆ. ಹೀಗಾಗಿ ಸೋಮವಾರ ರಾತ್ರಿ ಹಲವಾರು ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವು ವ್ಯತ್ಯಯಗೊಂಡವು. ಇರಾನ್ ತನ್ನ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ನಡೆಸಿದ ದಾಳಿಗೆ ಪ್ರತೀಕಾರವಾಗಿ … Continued

ವೀಡಿಯೊಗಳು..| ಇರಾನಿನ 6 ವಾಯುನೆಲೆಗಳ ಮೇಲೆ ಇಸ್ರೇಲ್‌ ದಾಳಿ ; 15 ವಿಮಾನಗಳು ನಾಶ

ಇಸ್ರೇಲ್ ರಕ್ಷಣಾ ಪಡೆಗಳು (IDF) ಇರಾನಿನ ಪಶ್ಚಿಮ, ಪೂರ್ವ ಮತ್ತು ಮಧ್ಯ ಭಾಗದಲ್ಲಿರುವ ಆರು ವಿಮಾನ ನಿಲ್ದಾಣಗಳ ಮೇಲೆ ಸಂಘಟಿತ ವಾಯುದಾಳಿ ನಡೆಸಿದ್ದು, 15 ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳನ್ನು ನಾಶಪಡಿಸಲಾಗಿದೆ ಎಂದು ಹೇಳಿದೆ. ದೂರದಿಂದಲೇ ಮಾನವಸಹಿತ ವಿಮಾನಗಳು, ರನ್‌ವೇಗಳು, ಭೂಗತ ಬಂಕರ್‌ಗಳು ಮತ್ತು F-14s, F-5s, AH-1 ಹೆಲಿಕಾಪ್ಟರ್‌ಗಳು ಮತ್ತು ಇಂಧನ ತುಂಬುವ ವಿಮಾನ ಸೇರಿದಂತೆ … Continued