ಜೂನ್‌ 17ರ ವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಗಾಳಿಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನ ಜೋರಾದ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್‌ 14ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ … Continued

ಪೈಲಟ್‌ ಗೆ ಸೆಲ್ಯೂಟ್….ಇಲ್ದಿದ್ರೆ ಸುಮಾರು 1500 ಜನರು ಸಾಯುತ್ತಿದ್ದರೇನೋ..? ಅಹಮದಾಬಾದ್‌ ವಿಮಾನ ಅಪಘಾತದ ಬಗ್ಗೆ ಪ್ರತ್ಯಕ್ಷದರ್ಶಿ ಹೇಳಿಕೆ

ಅಹಮದಾಬಾದ್‌ : ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಏರ್ ಇಂಡಿಯಾ ವಿಮಾನ AI 171 ಅಪಘಾತಕ್ಕೀಡಾದ ದೃಶ್ಯವನ್ನು ವೀಕ್ಷಿಸಿದ ಸ್ಥಳೀಯ ನಿವಾಸಿಯೊಬ್ಬರು, ವಿಮಾನವೇನಾದರೂ ವಸತಿ ಪ್ರದೇಶಕ್ಕೆ ಡಿಕ್ಕಿ ಹೊಡೆದಿದ್ದರೆ 1,500 ರಿಂದ 2,000 ಜನರು ಸಾಯಬಹದಿತ್ತು ಎಂದು ಹೇಳಿದ್ದಾರೆ. ದೊಡ್ಡ ದುರಂತವನ್ನು ಸ್ವಲ್ಪದರಲ್ಲೇ ತಪ್ಪಿಸಲಾಯಿತು … Continued

ಅಪಘಾತಕ್ಕೀಡಾದ ವಿಮಾನದ ಸೀಟ್ 11A ನಿಗೂಢತೆ : ವಿಮಾನ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಸಾವನ್ನೇ ಗೆದ್ದಿದ್ದು ಹೇಗೆ..?

ಅಹಮದಾಬಾದ್‌ : ಅಪಘಾತಕ್ಕೀಡಾದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದಲ್ಲಿದ್ದ ಕೇವಲ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾರೆ. ಅಹಮದಾಬಾದ್‌ನ ಸರ್ದಾರ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನ AI-171 ರಲ್ಲಿ 11A ಸೀಟಿನಲ್ಲಿ ಕುಳಿತಿದ್ದ ಭಾರತೀಯ ಮೂಲದ ಬ್ರಿಟೀಷ್‌ ಪ್ರಜೆ ವಿಶ್ವಾಸಕುಮಾರ ರಮೇಶ ಎಂಬವರು … Continued

ಅಹಮದಾಬಾದ್‌ ವಿಮಾನ ಅಪಘಾತ : ಪತನಗೊಂಡ ವಿಮಾನದ ಬ್ಲ್ಯಾಕ್‌ ಬಾಕ್ಸ್‌ ಪತ್ತೆ

ಅಹಮದಾಬಾದ್‌: ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ಪತನಗೊಂಡ ವಿಮಾನದ ಬ್ಲ್ಯಾಕ್‌ ಬಾಕ್ಸ್‌ (Black Box) ಮತ್ತು ಡಿವಿಆರ್​ ಪತ್ತೆಯಾಗಿವೆ. ಗುಜರಾತ್ ಸರ್ಕಾರದ 40 ಸಿಬ್ಬಂದಿಯ ಸಹಾಯದಿಂದ ವಿಮಾನ ಅಪಘಾತ ತನಿಖಾ ಬ್ಯೂರೋ(AAIB)ದ ದೊಡ್ಡ ತಂಡವು ಬ್ಲ್ಯಾಕ್‌ ಬಾಕ್ಸ್‌ ಎಂದು ಕರೆಯಲಾಗುವ ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್ (DFDR)ಪತ್ತೆ ಮಾಡಿದೆ. ಈ ಬ್ಲ್ಯಾಕ್‌ಬಾಕ್ಸ್‌ನಲ್ಲಿನ ಡಾಟಾದ ಸಹಾಯದಿಂದ ವಿಮಾನ ಅಪಘಾತಕ್ಕೆ ನಿಖರ … Continued

ವಿಮಾನ ಅಪಘಾತ | ಮೃತ ಪತ್ನಿ ಚಿತಾಭಸ್ಮ ವಿಸರ್ಜನೆಗೆ ಬಂದಿದ್ದ ಲಂಡನ್ ವ್ಯಕ್ತಿ ಸಾವು ; ಅಲ್ಲಿ ತಂದೆಗಾಗಿ ಕಾಯುತ್ತಿದ್ದಾರೆ ಇಬ್ಬರು ಕಂದಮ್ಮಗಳು

ಅಹಮದಾಬಾದ್: ಅಹಮದಾಬಾದ್‌ನಲ್ಲಿ ನಡೆದ ವಿನಾಶಕಾರಿ ಏರ್ ಇಂಡಿಯಾ ವಿಮಾನ ಅಪಘಾತದ ನಂತರ ದುಃಖಕರವಾದ ವೈಯಕ್ತಿಕ ಕಥೆಗಳು ಹೊರಬರುತ್ತಿವೆ. ಪ್ರತಿಯೊಂದೂ ಹೃದಯವಿದ್ರಾವಕವಾಗಿದೆ. ಅವುಗಳಲ್ಲಿ ಒಂದು ದುರಂತವು ವಿಧಿಯ ಕ್ರೂರ ತಿರುವುಗಳಂತೆ ಕಂಡುಬರುತ್ತಿದೆ; ಮೃತಪಟ್ಟ ಪತ್ನಿಯ ಕೊನೆಯ ಆಸೆಯನ್ನು ಪೂರೈಸಲು ಲಂಡನ್‌ನಿಂದ ಅಹಮದಾಬಾದ್‌ಗೆ ಬಂದಿದ್ದ ವ್ಯಕ್ತಿಯೊಬ್ಬರು ಆಕೆಯ ಚಿತಾ ಭಸ್ಮವನ್ನು ವಿಸಜರ್ಜಿಸಿ ಲಂಡನ್‌ಗೆ ಹಿಂದಿರುಗುವಾಗ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ … Continued

ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ

ಬೆಂಗಳೂರು : ಧಾರಾಡದ ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌‍ ಶಾಸಕ ವಿನಯ … Continued

ಇರಾನಿನ ಪರಮಾಣು, ಕ್ಷಿಪಣಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ; ದಾಳಿಯಲ್ಲಿ ಇರಾನಿನ ಇಬ್ಬರು ಉನ್ನತ ಮಿಲಿಟರಿ ಮುಖ್ಯಸ್ಥರ ಸಾವು

ಇಸ್ರೇಲ್ ಶುಕ್ರವಾರ ಮುಂಜಾನೆ ಇರಾನ್ ವಿರುದ್ಧ ಆಪರೇಷನ್ ಲಯನ್ ಎಂದು ಹೆಸರಿಸಲಾದ ದೊಡ್ಡ ಪ್ರಮಾಣದ ಮಿಲಿಟರಿ ದಾಳಿ ನಡೆಸಿತು. ಇದು ಇರಾನಿನ ನಿರ್ಣಾಯಕ ಪರಮಾಣು ಶಸ್ತ್ರಾಗಾರ ಮತ್ತು ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇರಾನಿನ ನಗರಗಳಲ್ಲಿ ಬಹು ಸ್ಫೋಟಗಳು ವರದಿಯಾಗಿವೆ. ಇರಾನಿನ ಪರಮಾಣು ಶಸ್ತ್ರಾಗಾರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ನ 12ಕ್ಕೂ ಅಧಿಕ ಜೆಟ್ ಗಳು ಶುಕ್ರವಾರ … Continued

ಅಹಮದಾಬಾದ್ ವಿಮಾನ ಅಪಘಾತ : ಭಾರತದ 10 ಅತಿ ದೊಡ್ಡ ವಿಮಾನ ದುರಂತಗಳು

ಗುರುವಾರ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನವು ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು. ವಿಮಾನದಲ್ಲಿದ್ದ ಒಟ್ಟು ೨೪೨ ಜನರಲ್ಲಿ ಓರ್ವ ಮಾತ್ರ ಬದುಕಿದ್ದಾನೆ. ಉಳಿದ ೨೪೧ ಜನರು ಸಾವಿಗೀಡಾಗಿದ್ದಾರೆ. ವಿಮಾನದಲ್ಲಿ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 242 ಜನರನ್ನು ಹೊತ್ತು ಲಂಡನ್ … Continued

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 265 ಸಾವು

ಅಹಮದಾಬಾದ್‌ : ಗುರುವಾರ ಭಾರತದಲ್ಲಿ ತನ್ನ ಭೀಕರ ವಿಮಾನ ದುರಂತ ಸಂಭವಿಸಿ ಅದರಲ್ಲಿದ್ದ 241 ಜನರು ಸಾವಿಗೀಡಾಗಿದ್ದಾರೆ. ಪವಾಡಸದೃಶರೀತಿಯಲ್ಲಿ ಓರ್ವ ಪ್ರಯಾಣಿಕ ಮಾತ್ರ ಬದುಕಿದ್ದಾನೆ. ಒಟ್ಟು 230 ಪ್ರಯಾಣಿಕರು, 10 ಸಿಬ್ಬಂದಿ ಮತ್ತು ಇಬ್ಬರು ಪೈಲಟ್‌ಗಳೊಂದಿಗೆ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ … Continued

ಭಾರಿ ಮಳೆ ; ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ಇಂದು (ಜೂನ್ 13) ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ, ಅದರಲ್ಲಿಯೂ ವಿಶೇಷವಾಗಿ ಕರಾವಳಿ ತಾಲೂಕುಗಳಲ್ಲಿ ಶುಕ್ರವಾರ (ಜೂನ್ 13) ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ (ಜೂನ್ 13) ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ … Continued